Homeಮುಖಪುಟಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

ಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

- Advertisement -
- Advertisement -

ಛತ್ತೀಸ್‌ಗಢದ ಬಿಜೆಪಿ ಸರಕಾರ ಮತಾಂತರದ ಬಗ್ಗೆ ಕಠಿಣ ಕ್ರಮಕ್ಕೆ ಮಸೂದೆಯನ್ನು ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದೆ. ಇನ್ನೊಂದು ಧರ್ಮಕ್ಕೆ ಮತಾಂತರಗೊಳ್ಳಲು ಇಚ್ಛಿಸುವ ವ್ಯಕ್ತಿಯು ಕನಿಷ್ಠ 60 ದಿನಗಳ ಮುಂಚಿತವಾಗಿ ವೈಯಕ್ತಿಕ ವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸಬೇಕು, ನಂತರ ಅವರು ಮತಾಂತರದ ನೈಜ ಉದ್ದೇಶ, ಕಾರಣದ ಕುರಿತು ತನಿಖೆಗೆ ಪೊಲೀಸರಿಗೆ ಸೂಚಿಸುತ್ತಾರೆ. ಕಾನೂನು ಬಾಹಿರ ಎಂದು ಕಂಡು ಬಂದರೆ 10 ವರ್ಷಗಳವರೆಗೆ ಶಿಕ್ಷೆ ವಿಧಿಸಲು ಅವಕಾಶವನ್ನು ಮಸೂದೆಯಲ್ಲಿ ಕಲ್ಪಿಸಲಾಗಿದೆ.

ಹೊಸ ಮಸೂದೆಯ ಕರಡು ಸಿದ್ಧವಾಗಿದ್ದು, ಅಂತಿಮವಾಗಿ ವಿಧಾನಸೌಧದಲ್ಲಿ ಮಂಡಿಸುವ ಮುನ್ನ ಕೆಲವು ತಿದ್ದುಪಡಿಗಳನ್ನು ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಮತಾಂತರವಾಗುವ ವ್ಯಕ್ತಿಯು ಕನಿಷ್ಠ ಒಂದು ತಿಂಗಳುಗಳಿಗೆ ಮುಂಚಿತವಾಗಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆ. ಅಧಿಕಾರದ ದುರುಪಯೋಗ, ಬಲವಂತ, ಅನಗತ್ಯ ಪ್ರಭಾವ, ಬಲಾತ್ಕಾರ, ಪ್ರಚೋದನೆ ಅಥವಾ ಯಾವುದೇ ಮೋಸದ ವಿಧಾನದಿಂದ ಅಥವಾ ಮದುವೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಕ್ಕೆ ಮಸೂದೆಯು ಬ್ರೇಕ್‌ ಹಾಕುತ್ತದೆ ಎಂದು ಕರಡು ಹೇಳುತ್ತದೆ. ತನಿಖೆಯ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಇದೊಂದು ಕಾನೂನು ಬಾಹಿರ ಪ್ರಕರಣವೆಂದು ಮನಗಂಡರೆ, ಮತಾಂತರವನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ.

‘ಛತ್ತೀಸ್‌ಗಢದ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಮಸೂದೆ”ಯು ಒಬ್ಬ ವ್ಯಕ್ತಿಯು 60 ದಿನಗಳೊಳಗೆ ಪರಿಶೀಲನೆಗಾಗಿ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರಾಗಬೇಕು ಎಂದು ಹೇಳುತ್ತದೆ. ಇದನ್ನು ಮಾಡದಿದ್ದರೆ, ಮತಾಂತರವನ್ನು ಕಾನೂನುಬಾಹಿರವೆಂದು ಪರಿಗಣಿಸಬಹುದಾಗಿದೆ. ಇದಲ್ಲದೆ ದೃಢೀಕರಣದ ದಿನಾಂಕದವರೆಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ತನ್ನ ಕಚೇರಿಯ ಸೂಚನಾ ಫಲಕದಲ್ಲಿ ಘೋಷಣೆಯ ಪ್ರತಿಯನ್ನು ಪ್ರದರ್ಶಿಸಲಿದ್ದಾರೆ. ಮತಾಂತರಗೊಳ್ಳುವ ಪ್ರತಿಯೊಬ್ಬರ ದಾಖಲೆಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟರ್‌  ನಿರ್ವಹಿಸಲಿದ್ದಾರೆ.

ಈ ಬಗ್ಗೆ ಆಕ್ಷೇಪಣೆಯಿದ್ದಲ್ಲಿ ಮತಾಂತರಗೊಳ್ಳುವ ವ್ಯಕ್ತಿಯ ರಕ್ತ ಸಂಬಂಧಿಗಳು ಅಥವಾ ದತ್ತು ಪಡೆದ ವ್ಯಕ್ತಿ ಎಫ್‌ಐಆರ್ ದಾಖಲಿಸಬಹುದು. ಪ್ರಕರಣವು ಜಾಮೀನು ರಹಿತವಾಗಿರುತ್ತದೆ ಮತ್ತು ಸೆಷನ್ಸ್ ನ್ಯಾಯಾಲಯದಿಂದ ವಿಚಾರಣೆಗೆ ಒಳಪಡುತ್ತದೆ ಎಂದು ಮಸೂದೆಯು ಉಲ್ಲೇಖಿಸಿದೆ. ಅಪ್ರಾಪ್ತ ವಯಸ್ಕರು, ಮಹಿಳೆಯರು ಅಥವಾ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಜನರನ್ನು  ಅಕ್ರಮವಾಗಿ ಮತಾಂತರ ಮಾಡುವುದು ಕಂಡು ಬಂದರೆ ಕನಿಷ್ಠ ಎರಡು ವರ್ಷ ಮತ್ತು ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 25,000 ರೂ.ದಂಡ ವಿಧಿಸಲಾಗುತ್ತದೆ. ಸಾಮೂಹಿಕ ಮತಾಂತರಕ್ಕೆ ಕನಿಷ್ಠ ಮೂರು ವರ್ಷ ಮತ್ತು ಗರಿಷ್ಠ 10 ವರ್ಷ ಶಿಕ್ಷೆ ಹಾಗೂ 50,000ರೂ. ದಂಡ ವಿಧಿಸಲಾಗುತ್ತದೆ. ಇದಲ್ಲದೆ ಧಾರ್ಮಿಕ ಮತಾಂತರದ ಸಂತ್ರಸ್ತರಿಗೆ 5 ಲಕ್ಷ ರೂಪಾಯಿಗಳವರೆಗೆ ಪರಿಹಾರವನ್ನು ನ್ಯಾಯಾಲಯವು ಅನುಮೋದಿಸಬಹುದು. ಆದರೆ ಹಿಂದಿನ ಧರ್ಮಕ್ಕೆ ಮರು ಮತಾಂತರಗೊಳ್ಳಲು ಬಯಸುವವರಿಗೆ ಕಾನೂನು ಅನ್ವಯಿಸುವುದಿಲ್ಲ.

ಕಳೆದ ಕೆಲವು ವರ್ಷಗಳಿಂದ ಛತ್ತೀಸ್‌ಗಢದ ಕೊಂಡಗಾಂವ್ ಮತ್ತು ನಾರಾಯಣಪುರದಂತಹ ಜಿಲ್ಲೆಗಳಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಬುಡಕಟ್ಟು ಜನಾಂಗದವರ ಮೇಲೆ ಹಲ್ಲೆ ನಡೆಸಿರುವ ಹಲವಾರು ನಿದರ್ಶನಗಳನ್ನು ರಾಜ್ಯ ಕಂಡಿದೆ. ಇದಲ್ಲದೆ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಮತಾಂತರವನ್ನು ಚುನಾವಣಾ ವಿಷಯವನ್ನಾಗಿ ಮಾಡಿಕೊಂಡಿತ್ತು. ಜಶ್ಪುರ್‌ನ ಹಿಂದಿನ ರಾಜಮನೆತನದ ದಿವಂಗತ ಕೇಂದ್ರ ಸಚಿವ ದಿಲೀಪ್ ಸಿಂಗ್ ಜೂಡಿಯೊ ಅವರು ತಮ್ಮ ಜಿಲ್ಲೆಯಲ್ಲಿ “ಘರ್ ವಾಪ್ಸಿ” ಅಭಿಯಾನಕ್ಕೆ ಮೊದಲು ಚಾಲನೆ ನೀಡಿದ್ದರು.

ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಈ ಕುರಿತು ಪ್ರತಿಕ್ರಿಯಿಸಿದ್ದು, ಕಳೆದ ಐದು ವರ್ಷಗಳಲ್ಲಿ ಧಾರ್ಮಿಕ ಮತಾಂತರ ಹೆಚ್ಚಾಗಿದೆ. ಕಳೆದ ತಿಂಗಳು ಜಶ್‌ಪುರದಲ್ಲಿ ಘರ್ ವಾಪ್ಸಿ ಅಭಿಯಾನವನ್ನು ಜೂಡೋ ಜಿ ಪ್ರಾರಂಭಿಸಿದರು, ಇದರಿಂದಾಗಿ ನಮ್ಮ ಜಿಲ್ಲೆಯನ್ನು ರಕ್ಷಿಸಲಾಗಿದೆ. ಇಲ್ಲವಾದರೆ ಏಷ್ಯಾದ ಎರಡನೇ ದೊಡ್ಡ ಚರ್ಚ್ ನಮ್ಮ ಜಿಲ್ಲೆಯಲ್ಲಿದೆ ಮತ್ತು ಮತಾಂತರವು ವೇಗವಾಗಿ ನಡೆಯುತ್ತಿತ್ತು. ರಾಜನಾಗಿದ್ದರೂ ಮತಾಂತರಗೊಂಡ ಜನರ ಪಾದಗಳನ್ನು ತೊಳೆದು ಮತ್ತೆ ಹಿಂದೂ ಧರ್ಮಕ್ಕೆ ಕರೆತಂದರು, ಇಂದು ಈ ಕಾರ್ಯ ಮುನ್ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರಗೈದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...