Homeಮುಖಪುಟಛತ್ತೀಸ್‌ಗಢ - ಕೈದಿಗಳ 'ಸುಧಾರಣೆ'ಗಾಗಿ ಜೈಲುಗಳಲ್ಲಿ ಆರೆಸ್ಸೆಸ್‌ ಮುಖವಾಣಿ!

ಛತ್ತೀಸ್‌ಗಢ – ಕೈದಿಗಳ ‘ಸುಧಾರಣೆ’ಗಾಗಿ ಜೈಲುಗಳಲ್ಲಿ ಆರೆಸ್ಸೆಸ್‌ ಮುಖವಾಣಿ!

- Advertisement -
- Advertisement -

ಬಿಜೆಪಿ ಆಡಳಿತದ ಛತ್ತೀಸ್‌ಗಢದ ಜೈಲು ಇಲಾಖೆಯು ಆರೆಸ್ಸೆಸ್‌ ಮುಖವಾಣಿ ಪಾಂಚಜನ್ಯ (ಹಿಂದಿ ಭಾಷೆ) ಮತ್ತು ಆರ್ಗನೈಸರ್ (ಇಂಗ್ಲಿಷ್‌ ಭಾಷೆ) ಪತ್ರಿಕೆಗಳನ್ನು ಕೈದಿಗಳಿಗಾಗಿ ಗ್ರಂಥಾಲಯಗಳಿಗೆ ಸೇರಿಸಲು ನಿರ್ಧರಿಸಿದೆ. ರಾಜ್ಯದ ಜೈಲು ಗ್ರಂಥಾಲಯಗಳು ವೈವಿಧ್ಯಮಯ ವಿಷಯಗಳ ಕುರಿತು ಪುಸ್ತಕಗಳು ಮತ್ತು ಪ್ರಕಟಣೆಗಳ ಸಂಗ್ರಹಗಳನ್ನು ಹೊಂದಿವೆ ಎಂದು ಹೇಳಲಾಗಿದೆ. ಛತ್ತೀಸ್‌ಗಢ – ಕೈದಿಗಳ

ರಾಜ್ಯ ಮಹಾನಿರ್ದೇಶಕ (ಜೈಲು) ಹಿಮಾಂಶು ಗುಪ್ತಾ ಅವರು ಇತ್ತೀಚೆಗೆ ನಡೆಸಿದ ತಪಾಸಣೆಯ ಸಮಯದಲ್ಲಿ ಜೈಲುಗಳಲ್ಲಿರುವ ಗ್ರಂಥಾಲಯಗಳಲ್ಲಿ ಪಾಂಚಜನ್ಯ ಮತ್ತು ಆರ್ಗನೈಸರ್ ಇಲ್ಲ ಎಂದು ಕಂಡುಕೊಂಡಿದ್ದರು. ಹಾಗಾಗಿ ಎಲ್ಲಾ 33 ರಾಜ್ಯ ಕಾರಾಗೃಹಗಳಲ್ಲಿ ಈ ನಿಯತಕಾಲಿಕೆಗಳು ಲಭ್ಯವಾಗುವಂತೆ ಮಾಡಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಐದು ಕೇಂದ್ರ, 20 ಜಿಲ್ಲಾ ಜೈಲುಗಳು ಮತ್ತು ಎಂಟು ಉಪ ಜೈಲುಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಖೈದಿಗಳನ್ನು ಸುಧಾರಿಸುವ, ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವ, ಅವರ ಕಲಿಕೆಯನ್ನು ಸುಧಾರಿಸುವ ಮತ್ತು ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುವಲ್ಲಿ ಆರೆಸ್ಸೆಸ್‌ ಮುಖವಾಣಿ ಸಹಾಯ ಮಾಡಲಿದೆ ಎಂದು ಡಿಜಿ ಹೇಳಿದ್ದಾರೆ. ಬಿಡುಗಡೆಯಾದ ನಂತರ ಮುಖ್ಯವಾಹಿನಿಯ ಸಮಾಜದಲ್ಲಿ ತಮ್ಮನ್ನು ತಾವು ಪುನರ್ವಸತಿ ಮಾಡಿಕೊಳ್ಳಲು ಇದು ಕೈದಿಗಳನ್ನು ಪ್ರೋತ್ಸಾಹಿಸುತ್ತದೆ ಎಂದು ಅವರು ಹೇಳಿದ್ದಾರೆ.

ಈ ಕ್ರಮವು ಕೈದಿಗಳಲ್ಲಿ ‘ಸನಾತನ ಭಾರತೀಯ ಸಂಸ್ಕೃತಿ ಮತ್ತು ದೇಶಭಕ್ತಿ’ಯ ಬಗ್ಗೆ ಜಾಗೃತಿ ಮೂಡಿಸುತ್ತದೆ ಎಂದು ಜೈಲು ಆಡಳಿತ ಹೇಳಿಕೊಂಡಿವೆ. ಛತ್ತೀಸ್‌ಗಢ – ಕೈದಿಗಳ

ಜೈಲಿನ ಗ್ರಂಥಾಲಯವು ಸಾಮಾನ್ಯವಾಗಿ ಪ್ರತಿ ತಿಂಗಳು ಪತ್ರಿಕೆಗಳು, ನಿಯತಕಾಲಿಕೆಗಳು ಮತ್ತು ಪುಸ್ತಕಗಳನ್ನು ಖರೀದಿಸುತ್ತದೆ. ಜೈಲಿನ ಗ್ರಂಥಾಲಯದಲ್ಲಿ ಸರಾಸರಿ ಪ್ರತಿ 50 ಕೈದಿಗಳಿಗೆ ಒಂದು ಪತ್ರಿಕೆ ಮತ್ತು ಒಂದು ನಿಯತಕಾಲಿಕೆ ಲಭ್ಯವಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆದಾಗ್ಯೂ, ಈ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ದೇಶದ ಜನರು ಆರೆಸ್ಸೆಸ್‌ ಸಂಬಂಧಿತ ಪ್ರಕಟಣೆಗಳಾದ ಪಾಂಚಜನ್ಯ ಮತ್ತು ಆರ್ಗನೈಸರ್‌ನಿಂದ ಪ್ರಚಾರ ಮಾಡಲ್ಪಟ್ಟ ವಿಭಜಕ ಆಲೋಚನೆಗಳು ಮತ್ತು ದ್ವೇಷಪೂರಿತ ಕಾರ್ಯಸೂಚಿಯನ್ನು ಓದಲು ಬಯಸುವುದಿಲ್ಲ ಎಂದು ಹೇಳಿದೆ.

“ಆರ್‌ಎಸ್‌ಎಸ್ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಸಂಘಟನೆಯಾಗದ್ದು, ಛತ್ತೀಸ್‌ಗಢದಲ್ಲಿ ಆಡಳಿತಾರೂಢ ಬಿಜೆಪಿ ಪ್ರತಿ ಜೈಲಿನಲ್ಲಿ ಎರಡು ವಾರಪತ್ರಿಕೆಗಳನ್ನು ಜೋಡಿಸುವ ಹೆಸರಿನಲ್ಲಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತದೆ” ಎಂದು ಕಾಂಗ್ರೆಸ್‌ನ ಸುಶೀಲ್ ಆನಂದ್ ಶುಕ್ಲಾ ಹೇಳಿದ್ದಾರೆ.

1948 ರಲ್ಲಿ ಪ್ರಾರಂಭವಾದ ಪಾಂಚಜನ್ಯ ಮತ್ತು 1947 ರಲ್ಲಿ ಸ್ಥಾಪಿಸಲಾದ ಆರ್ಗನೈಸರ್ ಅನ್ನು ರಮಣ್ ಸಿಂಗ್ ಅವರ ಹಿಂದಿನ 15 ವರ್ಷಗಳ ಬಿಜೆಪಿ ಆಡಳಿತದಲ್ಲಿ ಛತ್ತೀಸ್‌ಗಢ ಜೈಲು ಗ್ರಂಥಾಲಯಗಳಿಗೆ ಪರಿಗಣಿಸಲಾಗಿರಲಿಲ್ಲ.

ಇದನ್ನೂಓದಿ:  ಅಯೋಧ್ಯೆಯಲ್ಲಿ ದಲಿತ ಯುವತಿಯ ಅತ್ಯಾಚಾರ- ಕಣ್ಣುಗುಡ್ಡೆ ಕಿತ್ತು ಹತ್ಯೆ; ರಾಮ, ಸೀತೆ ಎಲ್ಲಿ ಇರುವಿರಿ? – ಗಳಗಳನೆ ಅತ್ತ ಸಂಸದ!

ಅಯೋಧ್ಯೆಯಲ್ಲಿ ದಲಿತ ಯುವತಿಯ ಅತ್ಯಾಚಾರ- ಕಣ್ಣುಗುಡ್ಡೆ ಕಿತ್ತು ಹತ್ಯೆ; ರಾಮ, ಸೀತೆ ಎಲ್ಲಿ ಇರುವಿರಿ? – ಗಳಗಳನೆ ಅತ್ತ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...