Homeಮುಖಪುಟಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

”ಮೂಲವಾಸಿ ಬಚಾವೋ ಮಂಚ್” ಎಂಬ ಆದಿವಾಸಿ ಸಮುದಾಯದ ಸಂಘಟನೆಯನ್ನು ಛತ್ತೀಸ್‌ಗಢದ ಬಿಜೆಪಿ ಸರ್ಕಾರ ಒಂದು ವರ್ಷದವರೆಗೆ ನಿಷೇಧಿಸಿದೆ. ಅಕ್ಟೋಬರ್ 30 ರಂದು ಛತ್ತೀಸ್‌ಗಢ ವಿಶೇಷ ಸಾರ್ವಜನಿಕ ಭದ್ರತಾ ಕಾಯಿದೆ, 2005 ರ ಅಡಿಯಲ್ಲಿ ನಿಷೇಧವನ್ನು ವಿಧಿಸಲಾಗಿದ್ದು, ಸಂಘಟನೆಯು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಡೆಸಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು “ನಿರಂತರವಾಗಿ ವಿರೋಧಿಸುತ್ತಿದ್ದು, ಸಾರ್ವಜನಿಕರನ್ನು ಪ್ರಚೋದಿಸುತ್ತಿದೆ” ಎಂದು ಸರ್ಕಾರ ಆರೋಪಿಸಿದೆ. ಈ ಬಗ್ಗೆ ಹೋರಾಟಗಾರರು ಮತ್ತು ಜನಪರ ಸಂಘಟನೆಗಳು ತೀವ್ರ ಆಕ್ರೊಶ ವ್ಯಕ್ತಪಡಿಸಿವೆ.

ಅಭಿವೃದ್ಧಿ ಯೋಜನೆಗಳಿಗಾಗಿ ನಿರ್ಮಿಸಲಾದ ಭದ್ರತಾ ಶಿಬಿರಗಳ ವಿರುದ್ಧ ಸಂಘಟನೆಯು ಜನರನ್ನು ಪ್ರಚೋದಿಸುತ್ತಿದೆ ಎಂದು ಸರ್ಕಾರ ಆರೋಪಿಸಿದೆ. ಸಂಘಟನೆಯು ಕಾನೂನು ಜಾರಿಯಲ್ಲಿ ಮಧ್ಯಪ್ರವೇಶಿಸುತ್ತಿದ್ದು, ಜೊತೆಗೆ ಕಾನೂನಿನಿಂದ ಸ್ಥಾಪಿಸಲಾದ ಸಂಸ್ಥೆಗಳಿಗೆ ಅಸಹಕಾರವನ್ನು ಉತ್ತೇಜಿಸುತ್ತಿದೆ ಎಂದು ಸರ್ಕಾರ ಹೇಳಿದೆ. “ಈ ಮೂಲಕ ಸಂಘಟನೆಯು ಸಾರ್ವಜನಿಕ ಸುವ್ಯವಸ್ಥೆ, ಶಾಂತಿ ಮತ್ತು ನಾಗರಿಕರ ಸುರಕ್ಷತೆಗೆ ಧಕ್ಕೆಯುಂಟುಮಾಡುತ್ತದೆ. ಇದು ರಾಜ್ಯದ ಭದ್ರತೆಗೆ ಹಾನಿಕರವಾಗಿದೆ” ಎಂದು ಸರ್ಕಾರ ಹೇಳಿದೆ. ಛತ್ತೀಸ್‌ಗಢ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಹೋರಾಟಗಾರರು ಮತ್ತು ಜನಪರ ಸಂಘಟನೆಗಳು, ಮೂಲವಾಸಿ ಬಚಾವೋ ಮಂಚ್ ಮೇಲಿನ ನಿಷೇಧವನ್ನು ಸರ್ವಾಧಿಕಾರ ಎಂದು ಬಣ್ಣಿಸಿದ್ದಾರೆ. ರಾಜ್ಯ ಸರ್ಕಾರವನ್ನು ವಿಮರ್ಶೆ ಮಾಡುವ ಧ್ವನಿಗಳನ್ನು ಮೌನಗೊಳಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ಮೂಲವಾಸಿ ಬಚಾವೋ ಮಂಚ್ ಅನ್ನು ನಿಷೇಧಿಸುವುದಕ್ಕೆ ಆಧಾರವೇನಿದೆ? ಬಸ್ತಾರ್‌ನ ಆದಿವಾಸಿಗಳು ಈ ಸಂಘಟನೆಯನ್ನು ರೂಪಿಸಲು ಮಾಡುವಂತೆ ಮಾಡಿದವರು ಯಾರು? ಸರ್ಕಾರ ಆದಿವಾಸಿಗಳ ಬೇಡಿಕೆಗಳನ್ನು ಆಲಿಸಿದ್ದರೆ, ಗಣಿಗಾರಿಕೆ ನಿಲ್ಲಿಸಿದ್ದರೆ, ಕ್ಯಾಂಪ್‌ಗಳನ್ನು ನಿರ್ಮಿಸುವುದನ್ನು ನಿಲ್ಲಿಸಿ ಸಿಲ್ಗರ್‌ನಲ್ಲಿ ನಾಲ್ವರನ್ನು ಕೊಲ್ಲದೆ ಇದ್ದರೆ, ಮೂಲವಾಸಿ ಬಚಾವೊ ಮಂಚ್‌ನ ಅಗತ್ಯವೆ ಇರಲಿಲ್ಲ” ಎಂದು ಸಂಘಟನೆಯ ಕಾರ್ಯಕರ್ತೆ ಸೋನಿ ಸೋರಿ ಹೇಳಿದ್ದಾರೆ.

2021ರ ಮೇ ತಿಂಗಳಲ್ಲಿ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳ ಗಡಿಯಲ್ಲಿರುವ ಸಿಲ್ಗರ್ ಗ್ರಾಮದ ಬಳಿ ಪೋಲಿಸ್ ಗುಂಡಿನ ದಾಳಿಯಲ್ಲಿ ನಾಲ್ವರು ಕೊಲ್ಲಲ್ಪಟ್ಟಿದ್ದರು. ಈ ಪ್ರದೇಶದಲ್ಲಿ ಭದ್ರತಾ ಶಿಬಿರವನ್ನು ಸ್ಥಾಪಿಸುವುದನ್ನು ಆದಿವಾಸಿಗಳ ಗುಂಪು ಪ್ರತಿಭಟಿಸಿದ ನಂತರ ಈ ಗುಂಡಿನ ದಾಳಿ ನಡೆದಿತ್ತು.

ಕಾರ್ಪೊರೇಟೀಕರಣ ಮತ್ತು ಮಿಲಿಟರೀಕರಣದ ವಿರುದ್ಧದ ವೇದಿಕೆಯು ಮೂಲವಾಸಿ ಬಚಾವೋ ಮಂಚ್‌ನ ಕಾರ್ಯಕರ್ತರಾದ ಸುನೀತಾ ಪೊಟ್ಟಂ ಮತ್ತು ಸುರ್ಜು ಟೇಕಂ ಸೇರಿದಂತೆ ಹಲವಾರು ಸದಸ್ಯರನ್ನು ಕಟ್ಟುಕಥೆ ಕಟ್ಟಿ ಬಂಧಿಸಲಾಗಿದೆ ಎಂದು ಆರೋಪಿಸಿದೆ.

ಜೂನ್‌ನಲ್ಲಿ, ಮಾವೋವಾದಿ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾರೆ ಎಂದು ಆರೋಪಿಸಿ ಸುನೀತಾ ಪೊಟ್ಟಮ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ, ಕೊಲೆ ಯತ್ನ ಮತ್ತು ಶಸ್ತ್ರಾಸ್ತ್ರ ಕಾಯಿದೆಯಡಿ ಅಪರಾಧಗಳ 12 ಪ್ರಕರಣಗಳಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದರು. ಏಪ್ರಿಲ್‌ನಲ್ಲಿ ಪೊಲೀಸರು ಸುರ್ಜು ಟೇಕಮ್‌ನನ್ನು ಕೂಡಾ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ ಬಂಧಿಸಿದ್ದರು.

ಸಿಲ್ಗರ್ ಹತ್ಯೆಯ ನಂತರ ಮೂಲವಾಸಿ ಬಚಾವೋ ಮಂಚ್ ಸಿಲ್ಗರ್‌ನಲ್ಲಿ ಧರಣಿ ಪ್ರತಿಭಟನೆ ನಡೆಸುತ್ತಿದೆ ಮತ್ತು ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಅರೆಸೈನಿಕ ಶಿಬಿರಗಳ ವಿರುದ್ಧ 30 ಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಆಯೋಜಿಸಿತ್ತು.

“ತಮ್ಮ ಹಳ್ಳಿಗಳಲ್ಲಿ ಪ್ರತಿಭಟನೆಗೆ ಕುಳಿತಿರುವ ಜನರ ನಡೆಯನ್ನು ಕಾನೂನುಬಾಹಿರವೆಂದು ಹೇಗೆ ಘೋಷಿಸಲು ಸಾಧ್ಯ” ಎಂದು ಸಮಾಜಶಾಸ್ತ್ರಜ್ಞೆ ಮತ್ತು ಹೋರಾಟಗಾರ್ತಿ ನಂದಿನಿ ಸುಂದರ್ ಸೋಮವಾರ ಪ್ರಶ್ನಿಸಿದ್ದಾರೆ. ಸಂಘಟನೆಯು ಅಭಿವೃದ್ಧಿಯನ್ನು ತಡೆಯುತ್ತಿದೆ ಎಂಬ ಸರ್ಕಾರದ ಆರೋಪ ಸುಳ್ಳಾಗಿದ್ದು, ಸಂಘಟನೆಯು ಭದ್ರತಾ ಶಿಬಿರಗಳ ಬದಲಿಗೆ ಶಾಲೆಗಳು ಮತ್ತು ಆರೋಗ್ಯ ಸೇವೆಗಳಿಗೆ ಒತ್ತಾಯಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...