Homeಮುಖಪುಟಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

”ಮೂಲವಾಸಿ ಬಚಾವೋ ಮಂಚ್” ಎಂಬ ಆದಿವಾಸಿ ಸಮುದಾಯದ ಸಂಘಟನೆಯನ್ನು ಛತ್ತೀಸ್‌ಗಢದ ಬಿಜೆಪಿ ಸರ್ಕಾರ ಒಂದು ವರ್ಷದವರೆಗೆ ನಿಷೇಧಿಸಿದೆ. ಅಕ್ಟೋಬರ್ 30 ರಂದು ಛತ್ತೀಸ್‌ಗಢ ವಿಶೇಷ ಸಾರ್ವಜನಿಕ ಭದ್ರತಾ ಕಾಯಿದೆ, 2005 ರ ಅಡಿಯಲ್ಲಿ ನಿಷೇಧವನ್ನು ವಿಧಿಸಲಾಗಿದ್ದು, ಸಂಘಟನೆಯು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಡೆಸಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು “ನಿರಂತರವಾಗಿ ವಿರೋಧಿಸುತ್ತಿದ್ದು, ಸಾರ್ವಜನಿಕರನ್ನು ಪ್ರಚೋದಿಸುತ್ತಿದೆ” ಎಂದು ಸರ್ಕಾರ ಆರೋಪಿಸಿದೆ. ಈ ಬಗ್ಗೆ ಹೋರಾಟಗಾರರು ಮತ್ತು ಜನಪರ ಸಂಘಟನೆಗಳು ತೀವ್ರ ಆಕ್ರೊಶ ವ್ಯಕ್ತಪಡಿಸಿವೆ.

ಅಭಿವೃದ್ಧಿ ಯೋಜನೆಗಳಿಗಾಗಿ ನಿರ್ಮಿಸಲಾದ ಭದ್ರತಾ ಶಿಬಿರಗಳ ವಿರುದ್ಧ ಸಂಘಟನೆಯು ಜನರನ್ನು ಪ್ರಚೋದಿಸುತ್ತಿದೆ ಎಂದು ಸರ್ಕಾರ ಆರೋಪಿಸಿದೆ. ಸಂಘಟನೆಯು ಕಾನೂನು ಜಾರಿಯಲ್ಲಿ ಮಧ್ಯಪ್ರವೇಶಿಸುತ್ತಿದ್ದು, ಜೊತೆಗೆ ಕಾನೂನಿನಿಂದ ಸ್ಥಾಪಿಸಲಾದ ಸಂಸ್ಥೆಗಳಿಗೆ ಅಸಹಕಾರವನ್ನು ಉತ್ತೇಜಿಸುತ್ತಿದೆ ಎಂದು ಸರ್ಕಾರ ಹೇಳಿದೆ. “ಈ ಮೂಲಕ ಸಂಘಟನೆಯು ಸಾರ್ವಜನಿಕ ಸುವ್ಯವಸ್ಥೆ, ಶಾಂತಿ ಮತ್ತು ನಾಗರಿಕರ ಸುರಕ್ಷತೆಗೆ ಧಕ್ಕೆಯುಂಟುಮಾಡುತ್ತದೆ. ಇದು ರಾಜ್ಯದ ಭದ್ರತೆಗೆ ಹಾನಿಕರವಾಗಿದೆ” ಎಂದು ಸರ್ಕಾರ ಹೇಳಿದೆ. ಛತ್ತೀಸ್‌ಗಢ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಹೋರಾಟಗಾರರು ಮತ್ತು ಜನಪರ ಸಂಘಟನೆಗಳು, ಮೂಲವಾಸಿ ಬಚಾವೋ ಮಂಚ್ ಮೇಲಿನ ನಿಷೇಧವನ್ನು ಸರ್ವಾಧಿಕಾರ ಎಂದು ಬಣ್ಣಿಸಿದ್ದಾರೆ. ರಾಜ್ಯ ಸರ್ಕಾರವನ್ನು ವಿಮರ್ಶೆ ಮಾಡುವ ಧ್ವನಿಗಳನ್ನು ಮೌನಗೊಳಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ಮೂಲವಾಸಿ ಬಚಾವೋ ಮಂಚ್ ಅನ್ನು ನಿಷೇಧಿಸುವುದಕ್ಕೆ ಆಧಾರವೇನಿದೆ? ಬಸ್ತಾರ್‌ನ ಆದಿವಾಸಿಗಳು ಈ ಸಂಘಟನೆಯನ್ನು ರೂಪಿಸಲು ಮಾಡುವಂತೆ ಮಾಡಿದವರು ಯಾರು? ಸರ್ಕಾರ ಆದಿವಾಸಿಗಳ ಬೇಡಿಕೆಗಳನ್ನು ಆಲಿಸಿದ್ದರೆ, ಗಣಿಗಾರಿಕೆ ನಿಲ್ಲಿಸಿದ್ದರೆ, ಕ್ಯಾಂಪ್‌ಗಳನ್ನು ನಿರ್ಮಿಸುವುದನ್ನು ನಿಲ್ಲಿಸಿ ಸಿಲ್ಗರ್‌ನಲ್ಲಿ ನಾಲ್ವರನ್ನು ಕೊಲ್ಲದೆ ಇದ್ದರೆ, ಮೂಲವಾಸಿ ಬಚಾವೊ ಮಂಚ್‌ನ ಅಗತ್ಯವೆ ಇರಲಿಲ್ಲ” ಎಂದು ಸಂಘಟನೆಯ ಕಾರ್ಯಕರ್ತೆ ಸೋನಿ ಸೋರಿ ಹೇಳಿದ್ದಾರೆ.

2021ರ ಮೇ ತಿಂಗಳಲ್ಲಿ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳ ಗಡಿಯಲ್ಲಿರುವ ಸಿಲ್ಗರ್ ಗ್ರಾಮದ ಬಳಿ ಪೋಲಿಸ್ ಗುಂಡಿನ ದಾಳಿಯಲ್ಲಿ ನಾಲ್ವರು ಕೊಲ್ಲಲ್ಪಟ್ಟಿದ್ದರು. ಈ ಪ್ರದೇಶದಲ್ಲಿ ಭದ್ರತಾ ಶಿಬಿರವನ್ನು ಸ್ಥಾಪಿಸುವುದನ್ನು ಆದಿವಾಸಿಗಳ ಗುಂಪು ಪ್ರತಿಭಟಿಸಿದ ನಂತರ ಈ ಗುಂಡಿನ ದಾಳಿ ನಡೆದಿತ್ತು.

ಕಾರ್ಪೊರೇಟೀಕರಣ ಮತ್ತು ಮಿಲಿಟರೀಕರಣದ ವಿರುದ್ಧದ ವೇದಿಕೆಯು ಮೂಲವಾಸಿ ಬಚಾವೋ ಮಂಚ್‌ನ ಕಾರ್ಯಕರ್ತರಾದ ಸುನೀತಾ ಪೊಟ್ಟಂ ಮತ್ತು ಸುರ್ಜು ಟೇಕಂ ಸೇರಿದಂತೆ ಹಲವಾರು ಸದಸ್ಯರನ್ನು ಕಟ್ಟುಕಥೆ ಕಟ್ಟಿ ಬಂಧಿಸಲಾಗಿದೆ ಎಂದು ಆರೋಪಿಸಿದೆ.

ಜೂನ್‌ನಲ್ಲಿ, ಮಾವೋವಾದಿ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾರೆ ಎಂದು ಆರೋಪಿಸಿ ಸುನೀತಾ ಪೊಟ್ಟಮ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ, ಕೊಲೆ ಯತ್ನ ಮತ್ತು ಶಸ್ತ್ರಾಸ್ತ್ರ ಕಾಯಿದೆಯಡಿ ಅಪರಾಧಗಳ 12 ಪ್ರಕರಣಗಳಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದರು. ಏಪ್ರಿಲ್‌ನಲ್ಲಿ ಪೊಲೀಸರು ಸುರ್ಜು ಟೇಕಮ್‌ನನ್ನು ಕೂಡಾ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ ಬಂಧಿಸಿದ್ದರು.

ಸಿಲ್ಗರ್ ಹತ್ಯೆಯ ನಂತರ ಮೂಲವಾಸಿ ಬಚಾವೋ ಮಂಚ್ ಸಿಲ್ಗರ್‌ನಲ್ಲಿ ಧರಣಿ ಪ್ರತಿಭಟನೆ ನಡೆಸುತ್ತಿದೆ ಮತ್ತು ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಅರೆಸೈನಿಕ ಶಿಬಿರಗಳ ವಿರುದ್ಧ 30 ಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಆಯೋಜಿಸಿತ್ತು.

“ತಮ್ಮ ಹಳ್ಳಿಗಳಲ್ಲಿ ಪ್ರತಿಭಟನೆಗೆ ಕುಳಿತಿರುವ ಜನರ ನಡೆಯನ್ನು ಕಾನೂನುಬಾಹಿರವೆಂದು ಹೇಗೆ ಘೋಷಿಸಲು ಸಾಧ್ಯ” ಎಂದು ಸಮಾಜಶಾಸ್ತ್ರಜ್ಞೆ ಮತ್ತು ಹೋರಾಟಗಾರ್ತಿ ನಂದಿನಿ ಸುಂದರ್ ಸೋಮವಾರ ಪ್ರಶ್ನಿಸಿದ್ದಾರೆ. ಸಂಘಟನೆಯು ಅಭಿವೃದ್ಧಿಯನ್ನು ತಡೆಯುತ್ತಿದೆ ಎಂಬ ಸರ್ಕಾರದ ಆರೋಪ ಸುಳ್ಳಾಗಿದ್ದು, ಸಂಘಟನೆಯು ಭದ್ರತಾ ಶಿಬಿರಗಳ ಬದಲಿಗೆ ಶಾಲೆಗಳು ಮತ್ತು ಆರೋಗ್ಯ ಸೇವೆಗಳಿಗೆ ಒತ್ತಾಯಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...