Homeಮುಖಪುಟಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

”ಮೂಲವಾಸಿ ಬಚಾವೋ ಮಂಚ್” ಎಂಬ ಆದಿವಾಸಿ ಸಮುದಾಯದ ಸಂಘಟನೆಯನ್ನು ಛತ್ತೀಸ್‌ಗಢದ ಬಿಜೆಪಿ ಸರ್ಕಾರ ಒಂದು ವರ್ಷದವರೆಗೆ ನಿಷೇಧಿಸಿದೆ. ಅಕ್ಟೋಬರ್ 30 ರಂದು ಛತ್ತೀಸ್‌ಗಢ ವಿಶೇಷ ಸಾರ್ವಜನಿಕ ಭದ್ರತಾ ಕಾಯಿದೆ, 2005 ರ ಅಡಿಯಲ್ಲಿ ನಿಷೇಧವನ್ನು ವಿಧಿಸಲಾಗಿದ್ದು, ಸಂಘಟನೆಯು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಡೆಸಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು “ನಿರಂತರವಾಗಿ ವಿರೋಧಿಸುತ್ತಿದ್ದು, ಸಾರ್ವಜನಿಕರನ್ನು ಪ್ರಚೋದಿಸುತ್ತಿದೆ” ಎಂದು ಸರ್ಕಾರ ಆರೋಪಿಸಿದೆ. ಈ ಬಗ್ಗೆ ಹೋರಾಟಗಾರರು ಮತ್ತು ಜನಪರ ಸಂಘಟನೆಗಳು ತೀವ್ರ ಆಕ್ರೊಶ ವ್ಯಕ್ತಪಡಿಸಿವೆ.

ಅಭಿವೃದ್ಧಿ ಯೋಜನೆಗಳಿಗಾಗಿ ನಿರ್ಮಿಸಲಾದ ಭದ್ರತಾ ಶಿಬಿರಗಳ ವಿರುದ್ಧ ಸಂಘಟನೆಯು ಜನರನ್ನು ಪ್ರಚೋದಿಸುತ್ತಿದೆ ಎಂದು ಸರ್ಕಾರ ಆರೋಪಿಸಿದೆ. ಸಂಘಟನೆಯು ಕಾನೂನು ಜಾರಿಯಲ್ಲಿ ಮಧ್ಯಪ್ರವೇಶಿಸುತ್ತಿದ್ದು, ಜೊತೆಗೆ ಕಾನೂನಿನಿಂದ ಸ್ಥಾಪಿಸಲಾದ ಸಂಸ್ಥೆಗಳಿಗೆ ಅಸಹಕಾರವನ್ನು ಉತ್ತೇಜಿಸುತ್ತಿದೆ ಎಂದು ಸರ್ಕಾರ ಹೇಳಿದೆ. “ಈ ಮೂಲಕ ಸಂಘಟನೆಯು ಸಾರ್ವಜನಿಕ ಸುವ್ಯವಸ್ಥೆ, ಶಾಂತಿ ಮತ್ತು ನಾಗರಿಕರ ಸುರಕ್ಷತೆಗೆ ಧಕ್ಕೆಯುಂಟುಮಾಡುತ್ತದೆ. ಇದು ರಾಜ್ಯದ ಭದ್ರತೆಗೆ ಹಾನಿಕರವಾಗಿದೆ” ಎಂದು ಸರ್ಕಾರ ಹೇಳಿದೆ. ಛತ್ತೀಸ್‌ಗಢ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಹೋರಾಟಗಾರರು ಮತ್ತು ಜನಪರ ಸಂಘಟನೆಗಳು, ಮೂಲವಾಸಿ ಬಚಾವೋ ಮಂಚ್ ಮೇಲಿನ ನಿಷೇಧವನ್ನು ಸರ್ವಾಧಿಕಾರ ಎಂದು ಬಣ್ಣಿಸಿದ್ದಾರೆ. ರಾಜ್ಯ ಸರ್ಕಾರವನ್ನು ವಿಮರ್ಶೆ ಮಾಡುವ ಧ್ವನಿಗಳನ್ನು ಮೌನಗೊಳಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ಮೂಲವಾಸಿ ಬಚಾವೋ ಮಂಚ್ ಅನ್ನು ನಿಷೇಧಿಸುವುದಕ್ಕೆ ಆಧಾರವೇನಿದೆ? ಬಸ್ತಾರ್‌ನ ಆದಿವಾಸಿಗಳು ಈ ಸಂಘಟನೆಯನ್ನು ರೂಪಿಸಲು ಮಾಡುವಂತೆ ಮಾಡಿದವರು ಯಾರು? ಸರ್ಕಾರ ಆದಿವಾಸಿಗಳ ಬೇಡಿಕೆಗಳನ್ನು ಆಲಿಸಿದ್ದರೆ, ಗಣಿಗಾರಿಕೆ ನಿಲ್ಲಿಸಿದ್ದರೆ, ಕ್ಯಾಂಪ್‌ಗಳನ್ನು ನಿರ್ಮಿಸುವುದನ್ನು ನಿಲ್ಲಿಸಿ ಸಿಲ್ಗರ್‌ನಲ್ಲಿ ನಾಲ್ವರನ್ನು ಕೊಲ್ಲದೆ ಇದ್ದರೆ, ಮೂಲವಾಸಿ ಬಚಾವೊ ಮಂಚ್‌ನ ಅಗತ್ಯವೆ ಇರಲಿಲ್ಲ” ಎಂದು ಸಂಘಟನೆಯ ಕಾರ್ಯಕರ್ತೆ ಸೋನಿ ಸೋರಿ ಹೇಳಿದ್ದಾರೆ.

2021ರ ಮೇ ತಿಂಗಳಲ್ಲಿ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳ ಗಡಿಯಲ್ಲಿರುವ ಸಿಲ್ಗರ್ ಗ್ರಾಮದ ಬಳಿ ಪೋಲಿಸ್ ಗುಂಡಿನ ದಾಳಿಯಲ್ಲಿ ನಾಲ್ವರು ಕೊಲ್ಲಲ್ಪಟ್ಟಿದ್ದರು. ಈ ಪ್ರದೇಶದಲ್ಲಿ ಭದ್ರತಾ ಶಿಬಿರವನ್ನು ಸ್ಥಾಪಿಸುವುದನ್ನು ಆದಿವಾಸಿಗಳ ಗುಂಪು ಪ್ರತಿಭಟಿಸಿದ ನಂತರ ಈ ಗುಂಡಿನ ದಾಳಿ ನಡೆದಿತ್ತು.

ಕಾರ್ಪೊರೇಟೀಕರಣ ಮತ್ತು ಮಿಲಿಟರೀಕರಣದ ವಿರುದ್ಧದ ವೇದಿಕೆಯು ಮೂಲವಾಸಿ ಬಚಾವೋ ಮಂಚ್‌ನ ಕಾರ್ಯಕರ್ತರಾದ ಸುನೀತಾ ಪೊಟ್ಟಂ ಮತ್ತು ಸುರ್ಜು ಟೇಕಂ ಸೇರಿದಂತೆ ಹಲವಾರು ಸದಸ್ಯರನ್ನು ಕಟ್ಟುಕಥೆ ಕಟ್ಟಿ ಬಂಧಿಸಲಾಗಿದೆ ಎಂದು ಆರೋಪಿಸಿದೆ.

ಜೂನ್‌ನಲ್ಲಿ, ಮಾವೋವಾದಿ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾರೆ ಎಂದು ಆರೋಪಿಸಿ ಸುನೀತಾ ಪೊಟ್ಟಮ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ, ಕೊಲೆ ಯತ್ನ ಮತ್ತು ಶಸ್ತ್ರಾಸ್ತ್ರ ಕಾಯಿದೆಯಡಿ ಅಪರಾಧಗಳ 12 ಪ್ರಕರಣಗಳಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದರು. ಏಪ್ರಿಲ್‌ನಲ್ಲಿ ಪೊಲೀಸರು ಸುರ್ಜು ಟೇಕಮ್‌ನನ್ನು ಕೂಡಾ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ ಬಂಧಿಸಿದ್ದರು.

ಸಿಲ್ಗರ್ ಹತ್ಯೆಯ ನಂತರ ಮೂಲವಾಸಿ ಬಚಾವೋ ಮಂಚ್ ಸಿಲ್ಗರ್‌ನಲ್ಲಿ ಧರಣಿ ಪ್ರತಿಭಟನೆ ನಡೆಸುತ್ತಿದೆ ಮತ್ತು ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಅರೆಸೈನಿಕ ಶಿಬಿರಗಳ ವಿರುದ್ಧ 30 ಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಆಯೋಜಿಸಿತ್ತು.

“ತಮ್ಮ ಹಳ್ಳಿಗಳಲ್ಲಿ ಪ್ರತಿಭಟನೆಗೆ ಕುಳಿತಿರುವ ಜನರ ನಡೆಯನ್ನು ಕಾನೂನುಬಾಹಿರವೆಂದು ಹೇಗೆ ಘೋಷಿಸಲು ಸಾಧ್ಯ” ಎಂದು ಸಮಾಜಶಾಸ್ತ್ರಜ್ಞೆ ಮತ್ತು ಹೋರಾಟಗಾರ್ತಿ ನಂದಿನಿ ಸುಂದರ್ ಸೋಮವಾರ ಪ್ರಶ್ನಿಸಿದ್ದಾರೆ. ಸಂಘಟನೆಯು ಅಭಿವೃದ್ಧಿಯನ್ನು ತಡೆಯುತ್ತಿದೆ ಎಂಬ ಸರ್ಕಾರದ ಆರೋಪ ಸುಳ್ಳಾಗಿದ್ದು, ಸಂಘಟನೆಯು ಭದ್ರತಾ ಶಿಬಿರಗಳ ಬದಲಿಗೆ ಶಾಲೆಗಳು ಮತ್ತು ಆರೋಗ್ಯ ಸೇವೆಗಳಿಗೆ ಒತ್ತಾಯಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...