Homeಮುಖಪುಟಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

”ಮೂಲವಾಸಿ ಬಚಾವೋ ಮಂಚ್” ಎಂಬ ಆದಿವಾಸಿ ಸಮುದಾಯದ ಸಂಘಟನೆಯನ್ನು ಛತ್ತೀಸ್‌ಗಢದ ಬಿಜೆಪಿ ಸರ್ಕಾರ ಒಂದು ವರ್ಷದವರೆಗೆ ನಿಷೇಧಿಸಿದೆ. ಅಕ್ಟೋಬರ್ 30 ರಂದು ಛತ್ತೀಸ್‌ಗಢ ವಿಶೇಷ ಸಾರ್ವಜನಿಕ ಭದ್ರತಾ ಕಾಯಿದೆ, 2005 ರ ಅಡಿಯಲ್ಲಿ ನಿಷೇಧವನ್ನು ವಿಧಿಸಲಾಗಿದ್ದು, ಸಂಘಟನೆಯು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಡೆಸಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು “ನಿರಂತರವಾಗಿ ವಿರೋಧಿಸುತ್ತಿದ್ದು, ಸಾರ್ವಜನಿಕರನ್ನು ಪ್ರಚೋದಿಸುತ್ತಿದೆ” ಎಂದು ಸರ್ಕಾರ ಆರೋಪಿಸಿದೆ. ಈ ಬಗ್ಗೆ ಹೋರಾಟಗಾರರು ಮತ್ತು ಜನಪರ ಸಂಘಟನೆಗಳು ತೀವ್ರ ಆಕ್ರೊಶ ವ್ಯಕ್ತಪಡಿಸಿವೆ.

ಅಭಿವೃದ್ಧಿ ಯೋಜನೆಗಳಿಗಾಗಿ ನಿರ್ಮಿಸಲಾದ ಭದ್ರತಾ ಶಿಬಿರಗಳ ವಿರುದ್ಧ ಸಂಘಟನೆಯು ಜನರನ್ನು ಪ್ರಚೋದಿಸುತ್ತಿದೆ ಎಂದು ಸರ್ಕಾರ ಆರೋಪಿಸಿದೆ. ಸಂಘಟನೆಯು ಕಾನೂನು ಜಾರಿಯಲ್ಲಿ ಮಧ್ಯಪ್ರವೇಶಿಸುತ್ತಿದ್ದು, ಜೊತೆಗೆ ಕಾನೂನಿನಿಂದ ಸ್ಥಾಪಿಸಲಾದ ಸಂಸ್ಥೆಗಳಿಗೆ ಅಸಹಕಾರವನ್ನು ಉತ್ತೇಜಿಸುತ್ತಿದೆ ಎಂದು ಸರ್ಕಾರ ಹೇಳಿದೆ. “ಈ ಮೂಲಕ ಸಂಘಟನೆಯು ಸಾರ್ವಜನಿಕ ಸುವ್ಯವಸ್ಥೆ, ಶಾಂತಿ ಮತ್ತು ನಾಗರಿಕರ ಸುರಕ್ಷತೆಗೆ ಧಕ್ಕೆಯುಂಟುಮಾಡುತ್ತದೆ. ಇದು ರಾಜ್ಯದ ಭದ್ರತೆಗೆ ಹಾನಿಕರವಾಗಿದೆ” ಎಂದು ಸರ್ಕಾರ ಹೇಳಿದೆ. ಛತ್ತೀಸ್‌ಗಢ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಹೋರಾಟಗಾರರು ಮತ್ತು ಜನಪರ ಸಂಘಟನೆಗಳು, ಮೂಲವಾಸಿ ಬಚಾವೋ ಮಂಚ್ ಮೇಲಿನ ನಿಷೇಧವನ್ನು ಸರ್ವಾಧಿಕಾರ ಎಂದು ಬಣ್ಣಿಸಿದ್ದಾರೆ. ರಾಜ್ಯ ಸರ್ಕಾರವನ್ನು ವಿಮರ್ಶೆ ಮಾಡುವ ಧ್ವನಿಗಳನ್ನು ಮೌನಗೊಳಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ಮೂಲವಾಸಿ ಬಚಾವೋ ಮಂಚ್ ಅನ್ನು ನಿಷೇಧಿಸುವುದಕ್ಕೆ ಆಧಾರವೇನಿದೆ? ಬಸ್ತಾರ್‌ನ ಆದಿವಾಸಿಗಳು ಈ ಸಂಘಟನೆಯನ್ನು ರೂಪಿಸಲು ಮಾಡುವಂತೆ ಮಾಡಿದವರು ಯಾರು? ಸರ್ಕಾರ ಆದಿವಾಸಿಗಳ ಬೇಡಿಕೆಗಳನ್ನು ಆಲಿಸಿದ್ದರೆ, ಗಣಿಗಾರಿಕೆ ನಿಲ್ಲಿಸಿದ್ದರೆ, ಕ್ಯಾಂಪ್‌ಗಳನ್ನು ನಿರ್ಮಿಸುವುದನ್ನು ನಿಲ್ಲಿಸಿ ಸಿಲ್ಗರ್‌ನಲ್ಲಿ ನಾಲ್ವರನ್ನು ಕೊಲ್ಲದೆ ಇದ್ದರೆ, ಮೂಲವಾಸಿ ಬಚಾವೊ ಮಂಚ್‌ನ ಅಗತ್ಯವೆ ಇರಲಿಲ್ಲ” ಎಂದು ಸಂಘಟನೆಯ ಕಾರ್ಯಕರ್ತೆ ಸೋನಿ ಸೋರಿ ಹೇಳಿದ್ದಾರೆ.

2021ರ ಮೇ ತಿಂಗಳಲ್ಲಿ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳ ಗಡಿಯಲ್ಲಿರುವ ಸಿಲ್ಗರ್ ಗ್ರಾಮದ ಬಳಿ ಪೋಲಿಸ್ ಗುಂಡಿನ ದಾಳಿಯಲ್ಲಿ ನಾಲ್ವರು ಕೊಲ್ಲಲ್ಪಟ್ಟಿದ್ದರು. ಈ ಪ್ರದೇಶದಲ್ಲಿ ಭದ್ರತಾ ಶಿಬಿರವನ್ನು ಸ್ಥಾಪಿಸುವುದನ್ನು ಆದಿವಾಸಿಗಳ ಗುಂಪು ಪ್ರತಿಭಟಿಸಿದ ನಂತರ ಈ ಗುಂಡಿನ ದಾಳಿ ನಡೆದಿತ್ತು.

ಕಾರ್ಪೊರೇಟೀಕರಣ ಮತ್ತು ಮಿಲಿಟರೀಕರಣದ ವಿರುದ್ಧದ ವೇದಿಕೆಯು ಮೂಲವಾಸಿ ಬಚಾವೋ ಮಂಚ್‌ನ ಕಾರ್ಯಕರ್ತರಾದ ಸುನೀತಾ ಪೊಟ್ಟಂ ಮತ್ತು ಸುರ್ಜು ಟೇಕಂ ಸೇರಿದಂತೆ ಹಲವಾರು ಸದಸ್ಯರನ್ನು ಕಟ್ಟುಕಥೆ ಕಟ್ಟಿ ಬಂಧಿಸಲಾಗಿದೆ ಎಂದು ಆರೋಪಿಸಿದೆ.

ಜೂನ್‌ನಲ್ಲಿ, ಮಾವೋವಾದಿ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾರೆ ಎಂದು ಆರೋಪಿಸಿ ಸುನೀತಾ ಪೊಟ್ಟಮ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ, ಕೊಲೆ ಯತ್ನ ಮತ್ತು ಶಸ್ತ್ರಾಸ್ತ್ರ ಕಾಯಿದೆಯಡಿ ಅಪರಾಧಗಳ 12 ಪ್ರಕರಣಗಳಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದರು. ಏಪ್ರಿಲ್‌ನಲ್ಲಿ ಪೊಲೀಸರು ಸುರ್ಜು ಟೇಕಮ್‌ನನ್ನು ಕೂಡಾ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ ಬಂಧಿಸಿದ್ದರು.

ಸಿಲ್ಗರ್ ಹತ್ಯೆಯ ನಂತರ ಮೂಲವಾಸಿ ಬಚಾವೋ ಮಂಚ್ ಸಿಲ್ಗರ್‌ನಲ್ಲಿ ಧರಣಿ ಪ್ರತಿಭಟನೆ ನಡೆಸುತ್ತಿದೆ ಮತ್ತು ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಅರೆಸೈನಿಕ ಶಿಬಿರಗಳ ವಿರುದ್ಧ 30 ಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಆಯೋಜಿಸಿತ್ತು.

“ತಮ್ಮ ಹಳ್ಳಿಗಳಲ್ಲಿ ಪ್ರತಿಭಟನೆಗೆ ಕುಳಿತಿರುವ ಜನರ ನಡೆಯನ್ನು ಕಾನೂನುಬಾಹಿರವೆಂದು ಹೇಗೆ ಘೋಷಿಸಲು ಸಾಧ್ಯ” ಎಂದು ಸಮಾಜಶಾಸ್ತ್ರಜ್ಞೆ ಮತ್ತು ಹೋರಾಟಗಾರ್ತಿ ನಂದಿನಿ ಸುಂದರ್ ಸೋಮವಾರ ಪ್ರಶ್ನಿಸಿದ್ದಾರೆ. ಸಂಘಟನೆಯು ಅಭಿವೃದ್ಧಿಯನ್ನು ತಡೆಯುತ್ತಿದೆ ಎಂಬ ಸರ್ಕಾರದ ಆರೋಪ ಸುಳ್ಳಾಗಿದ್ದು, ಸಂಘಟನೆಯು ಭದ್ರತಾ ಶಿಬಿರಗಳ ಬದಲಿಗೆ ಶಾಲೆಗಳು ಮತ್ತು ಆರೋಗ್ಯ ಸೇವೆಗಳಿಗೆ ಒತ್ತಾಯಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...