Homeಮುಖಪುಟಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

”ಮೂಲವಾಸಿ ಬಚಾವೋ ಮಂಚ್” ಎಂಬ ಆದಿವಾಸಿ ಸಮುದಾಯದ ಸಂಘಟನೆಯನ್ನು ಛತ್ತೀಸ್‌ಗಢದ ಬಿಜೆಪಿ ಸರ್ಕಾರ ಒಂದು ವರ್ಷದವರೆಗೆ ನಿಷೇಧಿಸಿದೆ. ಅಕ್ಟೋಬರ್ 30 ರಂದು ಛತ್ತೀಸ್‌ಗಢ ವಿಶೇಷ ಸಾರ್ವಜನಿಕ ಭದ್ರತಾ ಕಾಯಿದೆ, 2005 ರ ಅಡಿಯಲ್ಲಿ ನಿಷೇಧವನ್ನು ವಿಧಿಸಲಾಗಿದ್ದು, ಸಂಘಟನೆಯು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಡೆಸಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು “ನಿರಂತರವಾಗಿ ವಿರೋಧಿಸುತ್ತಿದ್ದು, ಸಾರ್ವಜನಿಕರನ್ನು ಪ್ರಚೋದಿಸುತ್ತಿದೆ” ಎಂದು ಸರ್ಕಾರ ಆರೋಪಿಸಿದೆ. ಈ ಬಗ್ಗೆ ಹೋರಾಟಗಾರರು ಮತ್ತು ಜನಪರ ಸಂಘಟನೆಗಳು ತೀವ್ರ ಆಕ್ರೊಶ ವ್ಯಕ್ತಪಡಿಸಿವೆ.

ಅಭಿವೃದ್ಧಿ ಯೋಜನೆಗಳಿಗಾಗಿ ನಿರ್ಮಿಸಲಾದ ಭದ್ರತಾ ಶಿಬಿರಗಳ ವಿರುದ್ಧ ಸಂಘಟನೆಯು ಜನರನ್ನು ಪ್ರಚೋದಿಸುತ್ತಿದೆ ಎಂದು ಸರ್ಕಾರ ಆರೋಪಿಸಿದೆ. ಸಂಘಟನೆಯು ಕಾನೂನು ಜಾರಿಯಲ್ಲಿ ಮಧ್ಯಪ್ರವೇಶಿಸುತ್ತಿದ್ದು, ಜೊತೆಗೆ ಕಾನೂನಿನಿಂದ ಸ್ಥಾಪಿಸಲಾದ ಸಂಸ್ಥೆಗಳಿಗೆ ಅಸಹಕಾರವನ್ನು ಉತ್ತೇಜಿಸುತ್ತಿದೆ ಎಂದು ಸರ್ಕಾರ ಹೇಳಿದೆ. “ಈ ಮೂಲಕ ಸಂಘಟನೆಯು ಸಾರ್ವಜನಿಕ ಸುವ್ಯವಸ್ಥೆ, ಶಾಂತಿ ಮತ್ತು ನಾಗರಿಕರ ಸುರಕ್ಷತೆಗೆ ಧಕ್ಕೆಯುಂಟುಮಾಡುತ್ತದೆ. ಇದು ರಾಜ್ಯದ ಭದ್ರತೆಗೆ ಹಾನಿಕರವಾಗಿದೆ” ಎಂದು ಸರ್ಕಾರ ಹೇಳಿದೆ. ಛತ್ತೀಸ್‌ಗಢ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಹೋರಾಟಗಾರರು ಮತ್ತು ಜನಪರ ಸಂಘಟನೆಗಳು, ಮೂಲವಾಸಿ ಬಚಾವೋ ಮಂಚ್ ಮೇಲಿನ ನಿಷೇಧವನ್ನು ಸರ್ವಾಧಿಕಾರ ಎಂದು ಬಣ್ಣಿಸಿದ್ದಾರೆ. ರಾಜ್ಯ ಸರ್ಕಾರವನ್ನು ವಿಮರ್ಶೆ ಮಾಡುವ ಧ್ವನಿಗಳನ್ನು ಮೌನಗೊಳಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ಮೂಲವಾಸಿ ಬಚಾವೋ ಮಂಚ್ ಅನ್ನು ನಿಷೇಧಿಸುವುದಕ್ಕೆ ಆಧಾರವೇನಿದೆ? ಬಸ್ತಾರ್‌ನ ಆದಿವಾಸಿಗಳು ಈ ಸಂಘಟನೆಯನ್ನು ರೂಪಿಸಲು ಮಾಡುವಂತೆ ಮಾಡಿದವರು ಯಾರು? ಸರ್ಕಾರ ಆದಿವಾಸಿಗಳ ಬೇಡಿಕೆಗಳನ್ನು ಆಲಿಸಿದ್ದರೆ, ಗಣಿಗಾರಿಕೆ ನಿಲ್ಲಿಸಿದ್ದರೆ, ಕ್ಯಾಂಪ್‌ಗಳನ್ನು ನಿರ್ಮಿಸುವುದನ್ನು ನಿಲ್ಲಿಸಿ ಸಿಲ್ಗರ್‌ನಲ್ಲಿ ನಾಲ್ವರನ್ನು ಕೊಲ್ಲದೆ ಇದ್ದರೆ, ಮೂಲವಾಸಿ ಬಚಾವೊ ಮಂಚ್‌ನ ಅಗತ್ಯವೆ ಇರಲಿಲ್ಲ” ಎಂದು ಸಂಘಟನೆಯ ಕಾರ್ಯಕರ್ತೆ ಸೋನಿ ಸೋರಿ ಹೇಳಿದ್ದಾರೆ.

2021ರ ಮೇ ತಿಂಗಳಲ್ಲಿ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳ ಗಡಿಯಲ್ಲಿರುವ ಸಿಲ್ಗರ್ ಗ್ರಾಮದ ಬಳಿ ಪೋಲಿಸ್ ಗುಂಡಿನ ದಾಳಿಯಲ್ಲಿ ನಾಲ್ವರು ಕೊಲ್ಲಲ್ಪಟ್ಟಿದ್ದರು. ಈ ಪ್ರದೇಶದಲ್ಲಿ ಭದ್ರತಾ ಶಿಬಿರವನ್ನು ಸ್ಥಾಪಿಸುವುದನ್ನು ಆದಿವಾಸಿಗಳ ಗುಂಪು ಪ್ರತಿಭಟಿಸಿದ ನಂತರ ಈ ಗುಂಡಿನ ದಾಳಿ ನಡೆದಿತ್ತು.

ಕಾರ್ಪೊರೇಟೀಕರಣ ಮತ್ತು ಮಿಲಿಟರೀಕರಣದ ವಿರುದ್ಧದ ವೇದಿಕೆಯು ಮೂಲವಾಸಿ ಬಚಾವೋ ಮಂಚ್‌ನ ಕಾರ್ಯಕರ್ತರಾದ ಸುನೀತಾ ಪೊಟ್ಟಂ ಮತ್ತು ಸುರ್ಜು ಟೇಕಂ ಸೇರಿದಂತೆ ಹಲವಾರು ಸದಸ್ಯರನ್ನು ಕಟ್ಟುಕಥೆ ಕಟ್ಟಿ ಬಂಧಿಸಲಾಗಿದೆ ಎಂದು ಆರೋಪಿಸಿದೆ.

ಜೂನ್‌ನಲ್ಲಿ, ಮಾವೋವಾದಿ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾರೆ ಎಂದು ಆರೋಪಿಸಿ ಸುನೀತಾ ಪೊಟ್ಟಮ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ, ಕೊಲೆ ಯತ್ನ ಮತ್ತು ಶಸ್ತ್ರಾಸ್ತ್ರ ಕಾಯಿದೆಯಡಿ ಅಪರಾಧಗಳ 12 ಪ್ರಕರಣಗಳಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದರು. ಏಪ್ರಿಲ್‌ನಲ್ಲಿ ಪೊಲೀಸರು ಸುರ್ಜು ಟೇಕಮ್‌ನನ್ನು ಕೂಡಾ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ ಬಂಧಿಸಿದ್ದರು.

ಸಿಲ್ಗರ್ ಹತ್ಯೆಯ ನಂತರ ಮೂಲವಾಸಿ ಬಚಾವೋ ಮಂಚ್ ಸಿಲ್ಗರ್‌ನಲ್ಲಿ ಧರಣಿ ಪ್ರತಿಭಟನೆ ನಡೆಸುತ್ತಿದೆ ಮತ್ತು ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಅರೆಸೈನಿಕ ಶಿಬಿರಗಳ ವಿರುದ್ಧ 30 ಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಆಯೋಜಿಸಿತ್ತು.

“ತಮ್ಮ ಹಳ್ಳಿಗಳಲ್ಲಿ ಪ್ರತಿಭಟನೆಗೆ ಕುಳಿತಿರುವ ಜನರ ನಡೆಯನ್ನು ಕಾನೂನುಬಾಹಿರವೆಂದು ಹೇಗೆ ಘೋಷಿಸಲು ಸಾಧ್ಯ” ಎಂದು ಸಮಾಜಶಾಸ್ತ್ರಜ್ಞೆ ಮತ್ತು ಹೋರಾಟಗಾರ್ತಿ ನಂದಿನಿ ಸುಂದರ್ ಸೋಮವಾರ ಪ್ರಶ್ನಿಸಿದ್ದಾರೆ. ಸಂಘಟನೆಯು ಅಭಿವೃದ್ಧಿಯನ್ನು ತಡೆಯುತ್ತಿದೆ ಎಂಬ ಸರ್ಕಾರದ ಆರೋಪ ಸುಳ್ಳಾಗಿದ್ದು, ಸಂಘಟನೆಯು ಭದ್ರತಾ ಶಿಬಿರಗಳ ಬದಲಿಗೆ ಶಾಲೆಗಳು ಮತ್ತು ಆರೋಗ್ಯ ಸೇವೆಗಳಿಗೆ ಒತ್ತಾಯಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...