Homeಮುಖಪುಟಛತ್ತೀಸ್‌ಗಡ: ಗ್ರಾಮಸ್ಥರಿಂದ ಮುಸ್ಲಿಮರನ್ನು ಬಹಿಷ್ಕರಿಸುವ ಪ್ರತಿಜ್ಞೆ ಮಾಡಿಸಿದ ದುಷ್ಕರ್ಮಿಗಳು; ತನಿಖೆಗೆ ಪೊಲೀಸ್‌ ಆದೇಶ

ಛತ್ತೀಸ್‌ಗಡ: ಗ್ರಾಮಸ್ಥರಿಂದ ಮುಸ್ಲಿಮರನ್ನು ಬಹಿಷ್ಕರಿಸುವ ಪ್ರತಿಜ್ಞೆ ಮಾಡಿಸಿದ ದುಷ್ಕರ್ಮಿಗಳು; ತನಿಖೆಗೆ ಪೊಲೀಸ್‌ ಆದೇಶ

- Advertisement -
- Advertisement -

ಛತ್ತೀಸ್‌ಗಡಾದ ಸುರ್ಗುಜಾ ಜಿಲ್ಲೆಯ ಹಳ್ಳಿಯೊಂದರ ನಿವಾಸಿಗಳು ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸುವ ಮತ್ತು ಮುಸ್ಲಿಮರೊಂದಿಗೆ ವಾಣಿಜ್ಯ ವಹಿವಾಟುಗಳನ್ನು ನಿಲ್ಲಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರತಿಜ್ಞೆ ಮಾಡಿಸಿದ ದುಷ್ಕರ್ಮಿಗಳ ಪತ್ತೆಗೆ ಮತ್ತು ಘಟನೆಯ ಬಗ್ಗೆ ತನಿಖೆಗೆ ರಾಜ್ಯ ಪೊಲೀಸ್‌ ಶುಕ್ರವಾರ ಆದೇಶಿಸಿದೆ.

ಹಳ್ಳಿಗೆ ತೆರಳಿ ಅಲ್ಲಿನ ನಿವಾಸಿಗಳನ್ನು ಒಗ್ಗೂಡಿಸಿ ಪ್ರತಿಜ್ಞೆ ಮಾಡಿಸಿದವರನ್ನು ಹುಡುಕುತ್ತಿದ್ದೇವೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಗುರುವಾರ ಗ್ರಾಮಕ್ಕೆ ಭೇಟಿ ನೀಡಿ ನಿವಾಸಿಗಳೊಂದಿಗೆ ಮಾತನಾಡಿದ್ದಾರೆ ಎಂದು ಸರ್ಗುಜಾ ಜಿಲ್ಲಾಧಿಕಾರಿ ಸಂಜೀವ್ ಝಾ ತಿಳಿಸಿದ್ದಾರೆ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ಈ ವಾರ ಇಲ್ಲಿ ಕೋಮು ಘರ್ಷಣೆ ನಡೆದ ನಂತರ ಈ ವೀಡಿಯೊ ಕಾಣಿಸಿಕೊಂಡಿದ್ದು, ಎರಡೂ ಕಡೆಯ ಆರೋಪಿಗಳ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ. “ಘರ್ಷಣೆಯು ಸ್ಥಳೀಯವಾಗಿ ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಪ್ರಾರಂಭವಾಯಿತು. ಘಟನೆಗೆ ಕೆಲವರು ಕೋಮು ಬಣ್ಣ ಬಳಿಯುತ್ತಿದ್ದಾರೆ. ಆದರೆ ಇದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಜನವರಿ 1 ರಂದು ಹೊಸ ವರ್ಷ ಆಚರಿಸಲು ಬಲರಾಂಪುರ ಜಿಲ್ಲೆಯ ಆರಾ ಗ್ರಾಮಸ್ಥರು ಕುಂದಿ ಕಲಾ ಗ್ರಾಮಕ್ಕೆ ಭೇಟಿ ನೀಡಿದ್ದಾಗ ಘರ್ಷಣೆ ನಡೆದಿತ್ತು ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಶುಕ್ಲಾ ತಿಳಿಸಿದ್ದಾರೆ.

“ಆರಾ ಗ್ರಾಮದ ಕೆಲವರು ಕುಂದಿ ಕಾಲ ಗ್ರಾಮದ ನಿವಾಸಿಗಳೊಂದಿಗೆ ಜಗಳವಾಡಿದರು. ಜಟಾಪಟಿ ಬಳಿಕ ಆರಾ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ತೆರಳಿ ಮತ್ತೆ ವಾಪಸಾಗಿ ವಾಗ್ವಾದ ನಡೆಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಗ್ರಾಮಸ್ಥರ ವಿರುದ್ಧ ಸೂಕ್ತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರುದಿನ, ಆರಾದಿಂದ ಆರು ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಯಿತು, ಆದರೆ ನಂತರ ಅದೇ ದಿನ ಜಾಮೀನು ಪಡೆದಿದ್ದರು. ಇದು ಕುಂದಿ ಕಲಾ ಗ್ರಾಮಸ್ಥರನ್ನು ಕೆರಳಿಸಿದೆ” ಎಂದು ವಿವೇಕ್‌ ಶುಕ್ಲಾ ಹೇಳಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

ಇದರ ನಂತರ ಹೊರಗಿನ ಗುಂಪೊಂದು ಗ್ರಾಮಸ್ಥರನ್ನು ಪ್ರಚೋದಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಎರಡು ಸಮುದಾಯಗಳ ನಡುವಿನ ಉದ್ವಿಗ್ನ ಪರಿಸ್ಥಿತಿಯ ಲಾಭವನ್ನು ಪಡೆದುಕೊಂಡು, ಹೊರಗಿನವರು ನಿರ್ದಿಷ್ಟ ಸಮುದಾಯದ ವಿರುದ್ಧ ಘೋಷಣೆಗಳನ್ನು ಎತ್ತಿದ್ದಾರೆ. ನಮಗೆ ದೂರು ಬಂದ ತಕ್ಷಣ, ಹಿರಿಯ ಅಧಿಕಾರಿಗಳು ಮತ್ತು ನಾನು ಗ್ರಾಮಕ್ಕೆ ಧಾವಿಸಿ, ಸಮಸ್ಯೆಗೆ ಕೋಮು ಬಣ್ಣ ನೀಡಲು ಕೆಲವರು ಪ್ರಯತ್ನಿಸುತ್ತಿದ್ದಾರೆ, ಗ್ರಾಮಸ್ಥರು ದಾರಿತಪ್ಪಿಸಬಾರದು ಎಂದು ವಿವರಿಸಿದ್ದೇವೆ” ಎಂದು ವಿವೇಕ್‌ ಶುಕ್ಲಾ ಹೇಳಿದ್ದಾರೆ.

ಪ್ರತಿಜ್ಞಾ ಸಭೆಯನ್ನು ಆಯೋಜಿಸಿದ ಮತ್ತು ಮುಸ್ಲಿಮರ ವಿರುದ್ಧ ಘೋಷಣೆ ಕೂಗಿದ ಆರೋಪಿಗಳನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ. ನಮಗೆ ದೂರು ಬಂದಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು. ಗ್ರಾಮಸ್ಥರು ತಾವು ಮಾಡಿದ್ದು ತಪ್ಪು ಎಂದು ಅರಿತುಕೊಂಡಿದ್ದಾರೆ, ಆದರೆ ಆರೋಪಿಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದ್ದಾರೆ.

ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ:ದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...