Homeಮುಖಪುಟಛತ್ತೀಸ್‌ಗಡ: ಗ್ರಾಮಸ್ಥರಿಂದ ಮುಸ್ಲಿಮರನ್ನು ಬಹಿಷ್ಕರಿಸುವ ಪ್ರತಿಜ್ಞೆ ಮಾಡಿಸಿದ ದುಷ್ಕರ್ಮಿಗಳು; ತನಿಖೆಗೆ ಪೊಲೀಸ್‌ ಆದೇಶ

ಛತ್ತೀಸ್‌ಗಡ: ಗ್ರಾಮಸ್ಥರಿಂದ ಮುಸ್ಲಿಮರನ್ನು ಬಹಿಷ್ಕರಿಸುವ ಪ್ರತಿಜ್ಞೆ ಮಾಡಿಸಿದ ದುಷ್ಕರ್ಮಿಗಳು; ತನಿಖೆಗೆ ಪೊಲೀಸ್‌ ಆದೇಶ

- Advertisement -
- Advertisement -

ಛತ್ತೀಸ್‌ಗಡಾದ ಸುರ್ಗುಜಾ ಜಿಲ್ಲೆಯ ಹಳ್ಳಿಯೊಂದರ ನಿವಾಸಿಗಳು ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸುವ ಮತ್ತು ಮುಸ್ಲಿಮರೊಂದಿಗೆ ವಾಣಿಜ್ಯ ವಹಿವಾಟುಗಳನ್ನು ನಿಲ್ಲಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರತಿಜ್ಞೆ ಮಾಡಿಸಿದ ದುಷ್ಕರ್ಮಿಗಳ ಪತ್ತೆಗೆ ಮತ್ತು ಘಟನೆಯ ಬಗ್ಗೆ ತನಿಖೆಗೆ ರಾಜ್ಯ ಪೊಲೀಸ್‌ ಶುಕ್ರವಾರ ಆದೇಶಿಸಿದೆ.

ಹಳ್ಳಿಗೆ ತೆರಳಿ ಅಲ್ಲಿನ ನಿವಾಸಿಗಳನ್ನು ಒಗ್ಗೂಡಿಸಿ ಪ್ರತಿಜ್ಞೆ ಮಾಡಿಸಿದವರನ್ನು ಹುಡುಕುತ್ತಿದ್ದೇವೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಗುರುವಾರ ಗ್ರಾಮಕ್ಕೆ ಭೇಟಿ ನೀಡಿ ನಿವಾಸಿಗಳೊಂದಿಗೆ ಮಾತನಾಡಿದ್ದಾರೆ ಎಂದು ಸರ್ಗುಜಾ ಜಿಲ್ಲಾಧಿಕಾರಿ ಸಂಜೀವ್ ಝಾ ತಿಳಿಸಿದ್ದಾರೆ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ಈ ವಾರ ಇಲ್ಲಿ ಕೋಮು ಘರ್ಷಣೆ ನಡೆದ ನಂತರ ಈ ವೀಡಿಯೊ ಕಾಣಿಸಿಕೊಂಡಿದ್ದು, ಎರಡೂ ಕಡೆಯ ಆರೋಪಿಗಳ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ. “ಘರ್ಷಣೆಯು ಸ್ಥಳೀಯವಾಗಿ ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಪ್ರಾರಂಭವಾಯಿತು. ಘಟನೆಗೆ ಕೆಲವರು ಕೋಮು ಬಣ್ಣ ಬಳಿಯುತ್ತಿದ್ದಾರೆ. ಆದರೆ ಇದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಜನವರಿ 1 ರಂದು ಹೊಸ ವರ್ಷ ಆಚರಿಸಲು ಬಲರಾಂಪುರ ಜಿಲ್ಲೆಯ ಆರಾ ಗ್ರಾಮಸ್ಥರು ಕುಂದಿ ಕಲಾ ಗ್ರಾಮಕ್ಕೆ ಭೇಟಿ ನೀಡಿದ್ದಾಗ ಘರ್ಷಣೆ ನಡೆದಿತ್ತು ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಶುಕ್ಲಾ ತಿಳಿಸಿದ್ದಾರೆ.

“ಆರಾ ಗ್ರಾಮದ ಕೆಲವರು ಕುಂದಿ ಕಾಲ ಗ್ರಾಮದ ನಿವಾಸಿಗಳೊಂದಿಗೆ ಜಗಳವಾಡಿದರು. ಜಟಾಪಟಿ ಬಳಿಕ ಆರಾ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ತೆರಳಿ ಮತ್ತೆ ವಾಪಸಾಗಿ ವಾಗ್ವಾದ ನಡೆಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಗ್ರಾಮಸ್ಥರ ವಿರುದ್ಧ ಸೂಕ್ತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರುದಿನ, ಆರಾದಿಂದ ಆರು ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಯಿತು, ಆದರೆ ನಂತರ ಅದೇ ದಿನ ಜಾಮೀನು ಪಡೆದಿದ್ದರು. ಇದು ಕುಂದಿ ಕಲಾ ಗ್ರಾಮಸ್ಥರನ್ನು ಕೆರಳಿಸಿದೆ” ಎಂದು ವಿವೇಕ್‌ ಶುಕ್ಲಾ ಹೇಳಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

ಇದರ ನಂತರ ಹೊರಗಿನ ಗುಂಪೊಂದು ಗ್ರಾಮಸ್ಥರನ್ನು ಪ್ರಚೋದಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಎರಡು ಸಮುದಾಯಗಳ ನಡುವಿನ ಉದ್ವಿಗ್ನ ಪರಿಸ್ಥಿತಿಯ ಲಾಭವನ್ನು ಪಡೆದುಕೊಂಡು, ಹೊರಗಿನವರು ನಿರ್ದಿಷ್ಟ ಸಮುದಾಯದ ವಿರುದ್ಧ ಘೋಷಣೆಗಳನ್ನು ಎತ್ತಿದ್ದಾರೆ. ನಮಗೆ ದೂರು ಬಂದ ತಕ್ಷಣ, ಹಿರಿಯ ಅಧಿಕಾರಿಗಳು ಮತ್ತು ನಾನು ಗ್ರಾಮಕ್ಕೆ ಧಾವಿಸಿ, ಸಮಸ್ಯೆಗೆ ಕೋಮು ಬಣ್ಣ ನೀಡಲು ಕೆಲವರು ಪ್ರಯತ್ನಿಸುತ್ತಿದ್ದಾರೆ, ಗ್ರಾಮಸ್ಥರು ದಾರಿತಪ್ಪಿಸಬಾರದು ಎಂದು ವಿವರಿಸಿದ್ದೇವೆ” ಎಂದು ವಿವೇಕ್‌ ಶುಕ್ಲಾ ಹೇಳಿದ್ದಾರೆ.

ಪ್ರತಿಜ್ಞಾ ಸಭೆಯನ್ನು ಆಯೋಜಿಸಿದ ಮತ್ತು ಮುಸ್ಲಿಮರ ವಿರುದ್ಧ ಘೋಷಣೆ ಕೂಗಿದ ಆರೋಪಿಗಳನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ. ನಮಗೆ ದೂರು ಬಂದಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು. ಗ್ರಾಮಸ್ಥರು ತಾವು ಮಾಡಿದ್ದು ತಪ್ಪು ಎಂದು ಅರಿತುಕೊಂಡಿದ್ದಾರೆ, ಆದರೆ ಆರೋಪಿಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದ್ದಾರೆ.

ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ:ದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...