Homeಮುಖಪುಟಕೋಳಿ ಕಳ್ಳತನದ ತನಿಖೆ ಮಾಡುವ ಸಿಬಿಐ, ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಬಿಜೆಪಿ ಕಾರಣಕ್ಕೆ ಸುಮ್ಮನಿರುತ್ತವೆ: ಹೇಮಂತ್...

ಕೋಳಿ ಕಳ್ಳತನದ ತನಿಖೆ ಮಾಡುವ ಸಿಬಿಐ, ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಬಿಜೆಪಿ ಕಾರಣಕ್ಕೆ ಸುಮ್ಮನಿರುತ್ತವೆ: ಹೇಮಂತ್ ಸೊರೆನ್

- Advertisement -
- Advertisement -

ಕೇಂದ್ರಿಯ ತನಿಖಾ ಸಂಸ್ಥೆಗಳು ‘ಕೋಳಿ ಕಳ್ಳತನ’ದಂತಹ ಘಟನೆಗಳ ತನಿಖೆ ಮಾಡುತ್ತದೆ ಆದರೆ, ಉತ್ತರ ಪ್ರದೇಶದ ಪರೀಕ್ಷಾ ಪತ್ರಿಕೆ ಸೋರಿಕೆಯಂತಹ ಪ್ರಕರಣಗಳನ್ನು ಬಿಜೆಪಿ ಆಜ್ಞೆಯ ಮೇರೆಗೆ ಅದನ್ನು ಮುಟ್ಟುವುದಿಲ್ಲ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಳಿ ಕಳ್ಳತನದ

ತನ್ನ ಆಳ್ವಿಕೆಯ ರಾಜ್ಯಗಳಲ್ಲಿ ಪೇಪರ್ ಸೋರಿಕೆಯ ಹಿಂದೆ ಬಿಜೆಪಿಯ ಕೈವಾಡವಿದೆ ಮತ್ತು ಅಲ್ಲಿಂದ ಗಳಿಸಿದ ಹಣವನ್ನು ತನ್ನ ಚುನಾವಣಾ ಪ್ರಚಾರಕ್ಕೆ ಬಳಸಲಾಗುತ್ತಿದೆ ಎಂದು ಸೋರೆನ್ ಆರೋಪಿಸಿದ್ದಾರೆ. ಜೊತೆಗೆ ಜಾರ್ಖಂಡ್ ಚುನಾವಣೆಯಲ್ಲಿ ಬಿಜೆಪಿ ಖರ್ಚು ಮಾಡುತ್ತಿರುವ ಹಣ ಈ ಮೂಲದ್ದೆ ಆಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜಾರ್ಖಂಡ್ ಚುನಾವಣೆಯಲ್ಲಿ ಬಿಜೆಪಿ ಮಾಡುತ್ತಿರುವ ಆಡಂಬರದ ಪ್ರದರ್ಶನಕ್ಕೆ ಪೇಪರ್ ಸೋರಿಕೆಯ ಹಣವೇ ಕಾರಣ. ಇತ್ತೀಚಿನ ದಿನಗಳಲ್ಲಿ ಕೋಳಿ ಕಳ್ಳತನ ಪ್ರಕರಣಗಳ ತನಿಖೆಯನ್ನು ಪ್ರಾರಂಭಿಸಿರುವ ಇಡಿ, ಸಿಬಿಐ, ಎನ್‌ಐಎ ಪೇಪರ್ ಸೋರಿಕೆಯನ್ನು ತನಿಖೆ ಮಾಡುವುದಿಲ್ಲ. ಏಕೆಂದರೆ ಅದರ ಹಿಂದೆ ಬಿಜೆಪಿಯಿದೆ. ಪತ್ರಿಕೆಗಳನ್ನು ಸೋರಿಕೆ ಮಾಡಿ ಬರುವ ಹಣದಿಂದ, ಚುನಾವಣೆಯ ನಂತರ ಶಾಸಕರು ಮತ್ತು ಸಂಸದರನ್ನು ಬಿಜೆಪಿ ಖರೀದಿಸುತ್ತದೆ” ಎಂದು ಸೋರೆನ್ ಎಕ್ಸ್‌ನಲ್ಲಿ ಆರೋಪಿಸಿದ್ದಾರೆ. ಕೋಳಿ ಕಳ್ಳತನದ

“ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ಪರೀಕ್ಷಾ ಪತ್ರಿಕೆಗಳು ಸೋರಿಕೆಯಾಗಿದೆ. ಮಧ್ಯಪ್ರದೇಶದ ವ್ಯಾಪಂ ಹಗರಣವು ಹಲವಾರು ಜೀವಗಳನ್ನು ಬಲಿ ಪಡೆದಿದೆ. ಜಾರ್ಖಂಡ್‌ನಲ್ಲಿ ನಾವು ಒಂದು ಪತ್ರಿಕೆ ಸೋರಿಕೆಯ ನಂತರ ಕಠಿಣ ಕಾನೂನು ಮಾಡಿದ್ದೇವೆ. ಆದರೆ ಬಿಜೆಪಿ ಇದನ್ನು ಕರಾಳ ಕಾನೂನು ಎಂದು ಬಣ್ಣಿಸಿ ರಾಜಭವನಕ್ಕೆ ಹೋಗಿದೆ” ಎಂದು ಅವರು ಆರೋಪಿಸಿದ್ದಾರೆ.

“ಸುಳ್ಳು” ಪ್ರಕರಣಗಳಲ್ಲಿ ಇಡಿ ಮತ್ತು ಸಿಬಿಐ ನನಗೆ “ಕಿರುಕುಳ” ನೀಡದಿದ್ದರೆ, ಸರ್ಕಾರದಲ್ಲಿ ಹಲವಾರು ಹೊಸ ಹುದ್ದೆಗಳನ್ನು ಸೃಷ್ಟಿಸಿ ದೊಡ್ಡ ಪ್ರಮಾಣದ ನೇಮಕಾತಿಗಳನ್ನು ಖಚಿತಪಡಿಸಿಕೊಳ್ಳುತ್ತಿದ್ದೆ ಎಂದು ಸೋರೆನ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : ‘ಮಹಾ’ ಚುನಾವಣೆಗೆ ಮುನ್ನ ರಹಸ್ಯ ಬಯಲು

₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : ‘ಮಹಾ’ ಚುನಾವಣೆಗೆ ಮುನ್ನ ರಹಸ್ಯ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...