Homeಮುಖಪುಟಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಮಸೂದೆ ಇನ್ನು ಕಾರ್ಯರೂಪಕ್ಕೆ ಬರಲಿದೆ.

ಡಿ.12ರಂದು ರಾಜ್ಯಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ-2023 ಅಂಗೀಕಾರಗೊಂಡಿತ್ತು. ಲೋಕಸಭೆಯಿಂದ ಬಹುಪಾಲು ಪ್ರತಿಪಕ್ಷಗಳ ಸದಸ್ಯರು ಅಮಾನತುಗೊಂಡ ಬಳಿಕ ಈ ಮಸೂದೆ ಅಂಗೀಕರಿಸಲಾಗಿತ್ತು.

ಏನಿದು ಮಸೂದೆ:

ಈ ಮಸೂದೆಯು ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ (EC)ಗಳ ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಜೊತೆಗೆ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಕಾರ್ಯವಿಧಾನವನ್ನು ಇದು ವಿವರಿಸುತ್ತದೆ.

ಆ.10 ರಂದು ಈ ಮಸೂದೆಯನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ರಾಜ್ಯ ಸಭೆಯಲ್ಲಿ ಮಂಡಿಸಿದ್ದರು. ಸಂಸತ್ತಿನ ಮೇಲ್ಮನೆಯಲ್ಲಿ ಚರ್ಚೆಯ ನಂತರ ಮಸೂದೆ ಅಂಗೀಕಾರಗೊಂಡಿತು. ಮಸೂದೆಯನ್ನು ವಿರೋಧಿಸಿ ಪ್ರತಿಪಕ್ಷಗಳು ಸದನತ್ಯಾಗ ಮಾಡಿದ್ದವು. ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ  ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಾಧೀಶರನ್ನು ಕೈಬಿಟ್ಟಿರುವುದನ್ನು ಪ್ರತಿಪಕ್ಷಗಳು ವಿರೋಧಿಸಿದ್ದವು.

ಮಸೂದೆಯ ಪ್ರಮುಖ ನಿಬಂಧನೆಗಳು ಚುನಾವಣಾ ಆಯೋಗದ (ಚುನಾವಣಾ ಆಯುಕ್ತರ ಸೇವಾ ನಿಯಮಗಳು ಮತ್ತು ವ್ಯವಹಾರದ ವಹಿವಾಟು) ಕಾಯಿದೆ, 1991ನ್ನು ಬದಲಿಸಲಿದೆ. ಹೊಸ ಮಸೂದೆ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ, ಸಂಬಳ ಮತ್ತು ವಜಾಗೊಳಿಸುವಿಕೆಯಂತಹ ಅಂಶಗಳನ್ನು ಒಳಗೊಂಡಿದೆ.

ಪ್ರಧಾನ ಮಂತ್ರಿ, ಕೇಂದ್ರ ಸಂಪುಟ ಸಚಿವರು, ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯ ಅತಿದೊಡ್ಡ ವಿರೋಧ ಪಕ್ಷದ ನಾಯಕರನ್ನು ಒಳಗೊಂಡಿರುವ ಆಯ್ಕೆ ಸಮಿತಿಯ ಶಿಫಾರಸಿನ ಆಧಾರದ ಮೇಲೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳನ್ನು ನೇಮಿಸಲಿದ್ದಾರೆ. ಪೂರ್ಣ ಸಮಿತಿಯ ಅನುಪಸ್ಥಿತಿಯಲ್ಲಿಯೂ ಈ ಸಮಿತಿಯ ಶಿಫಾರಸುಗಳು ಮಾನ್ಯವಾಗಿರುತ್ತವೆ. ಕಾನೂನು ಸಚಿವರ ನೇತೃತ್ವದ ಶೋಧನಾ ಸಮಿತಿಯು ಆಯ್ಕೆ ಸಮಿತಿಗೆ ಹೆಸರುಗಳನ್ನು ಪ್ರಸ್ತಾಪಿಸುತ್ತದೆ. ಅರ್ಹತಾ ಮಾನದಂಡಗಳೊಂದಿಗೆ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಕಾರ್ಯದರ್ಶಿಗೆ ಸಮಾನವಾದ ಸ್ಥಾನವನ್ನು ಹೊಂದಿರಬೇಕು. ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳಿಗೆ ವೇತನ ಮತ್ತು ಸೇವಾ ಷರತ್ತುಗಳನ್ನು ಸಂಪುಟ ಕಾರ್ಯದರ್ಶಿಗೆ ಸಮನಾಗಿ ಹೊಂದಿಸಲಾಗಿದೆ. ಇದು ಸುಪ್ರೀಂಕೋರ್ಟ್ ನ್ಯಾಯಾಧೀಶರ ವೇತನಕ್ಕೆ ಸಮಾನಾಗಿ ಇದ್ದ ನಿಯಮವನ್ನು ಬದಲಿಸಲಿದೆ.

ಪ್ರಸ್ತಾವಿತ ಬದಲಾವಣೆಗಳು ಚುನಾವಣಾ ಆಯೋಗದ ಸ್ಥಾನಮಾನವನ್ನು ಕೆಳಮಟ್ಟಕ್ಕಿಳಿಸಲಿದೆ ಎಂದು ಪ್ರತಿಪಾದಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತರಗಳು ವೇತನ ಅಸಮಾನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳ ವೇತನ ಮತ್ತು ಸವಲತ್ತುಗಳನ್ನು ಸುಪ್ರೀಂಕೋರ್ಟ್‌ ನ್ಯಾಯಾಧೀಶರ ಮಟ್ಟದಲ್ಲಿ ಮುಂದುವರೆಸಲು ಮಸೂದೆಯಲ್ಲಿ ತಿದ್ದುಪಡಿ ಮಾಡಿದೆ.

ಆಯ್ಕೆ ಸಮಿತಿಯ ಭಾರತದ ಮುಖ್ಯ ನ್ಯಾಯಮೂರ್ತಿ ಹೊರಕ್ಕೆ!  

ಹೊಸ ಮಸೂದೆಯು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಹೊರಗಿಡಲಿದೆ. ಈ ವರ್ಷದ ಮಾರ್ಚ್‌ನಲ್ಲಿ, ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಸಂಸತ್ತು ಕಾನೂನು ರೂಪಿಸುವವರೆಗೆ ಚುನಾವಣಾ ಆಯುಕ್ತರನ್ನು ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಆಯ್ಕೆ ಮಾಡುತ್ತದೆ ಎಂದು ತೀರ್ಪು ನೀಡಿತ್ತು. ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಪೀಠವು ಚುನಾವಣಾ ಆಯುಕ್ತರ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಮಸೂದೆ ಮಂಡನೆ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...