Homeರಾಷ್ಟ್ರೀಯಕೇಂದ್ರ ಕಾನೂನು ಮಂತ್ರಿಯ ಮುಂದೆಯೆ ‘ಕೊಲಿಜಿಯಂ’ ವ್ಯವಸ್ಥೆಯನ್ನು ಸಮರ್ಥಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

ಕೇಂದ್ರ ಕಾನೂನು ಮಂತ್ರಿಯ ಮುಂದೆಯೆ ‘ಕೊಲಿಜಿಯಂ’ ವ್ಯವಸ್ಥೆಯನ್ನು ಸಮರ್ಥಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

- Advertisement -
- Advertisement -

ನ್ಯಾಯಾಧೀಶರ ವರ್ಗಾವಣೆಯ ಬಗ್ಗೆ ಧರಣಿ ನಡೆಸುತ್ತಿರುವ ಗುಜರಾತ್ ಹೈಕೋರ್ಟ್‌ನ ವಕೀಲರನ್ನು ಭೇಟಿ ಮಾಡಲು ಒಪ್ಪಿಕೊಂಡಿರುವ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂದ್ ಅವರು “ನ್ಯಾಯ ಕೇಳಿಕೊಂಡು ಬರುವವರು ಬಳಲುತ್ತಿದ್ದಾರೆ” ಎಂದು ಶನಿವಾರ ಹೇಳಿದ್ದಾರೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಆಯೋಜಿಸಿದ್ದ ಸನ್ಮಾನ ಕಾರ್ಯದಲ್ಲಿ ಮಾತನಾಡಿದ ಚಂದ್ರಚೂಡ್‌‌, ನ್ಯಾಯಾಂಗ ನೇಮಕಾತಿ ಮಾಡುವ ಕೊಲಿಜಿಯಂ ವ್ಯವಸ್ಥೆಯನ್ನು ಒಕ್ಕೂಟ ಸರ್ಕಾರದ ಕಾನೂನು ಮಂತ್ರಿ ಕಿರಣ್ ರಿಜಿಜಿ ಮುಂದೆಯೆ ಸಮರ್ಥಿಸಿಕೊಂಡಿದ್ದಾರೆ. ಕೊಲೆಜಿಯಂ “ರಾಷ್ಟ್ರೀಯ ದೃಷ್ಟಿಕೋನ”ವನ್ನು ಗಮನದಲ್ಲಿಟ್ಟುಕೊಂಡು ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಒಕ್ಕೂಟ ಸರ್ಕಾರದ ಕಾನೂನು ಸಚಿವ ಕಿರಣ್‌ ರಿಜಿಜು ಮಾತನಾಡಿ, ವರ್ಗಾವಣೆ ಪ್ರಕರಣದ ವಿಚಾರದಲ್ಲಿ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನು ಭೇಟಿ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಪ್ರತಿಭಟನಾ ವಕೀಲರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಕೊಲಿಜಿಯಂ ವ್ಯವಸ್ಥೆ ಅತ್ಯಗತ್ಯ: ನಿವೃತ್ತ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್

“ಇದೊಂದು ವೈಯಕ್ತಿಕ ಸಮಸ್ಯೆಯಾಗಿರಬಹುದು, ಆದರೆ ಸರ್ಕಾರ ಬೆಂಬಲಿಸುವ ಕೊಲಿಜಿಯಂನ ಪ್ರತಿ ನಿರ್ಧಾರಕ್ಕೂ ಇದೇ ರೀತಿ ಪುನರಾವರ್ತನೆಯಾದರೆ, ಇದು ಎಲ್ಲಿಗೆ ಹೋಗಿ ಮುಗಿಯುತ್ತದೆ? ಇಡೀ ಆಯಾಮವು ಬದಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಪ್ರಕ್ರಿಯೆಯು ಬಹಳ ಹಿಂದಿನಿಂದಲೂ ಪ್ರಶ್ನಾರ್ಹವಾಗಿದೆ. ಈ ಕೊಲೆಜಿಯಂ ವ್ಯವಸ್ಥೆಯನ್ನು ಮರುಪರಿಶೀಲಿಸಬೇಕಾಗಿದೆ ಎಂದು ಕಾನೂನು ಸಚಿವ ಕಿರೆನ್ ರಿಜಿಜು ಈ ಹಿಂದೆ ಹೇಳಿದ್ದರು.

ನ್ಯಾಯಮೂರ್ತಿ ಪ್ರಕ್ರಿಯೆಯಲ್ಲಿ ಸರ್ಕಾರದ ಪಾತ್ರವು ಕನಿಷ್ಠವಾಗಿದೆ. ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರನ್ನು ನ್ಯಾಯಾಧೀಶರಾಗಿ ಉನ್ನತೀಕರಿಸಬೇಕಾದರೆ ಇಂಟೆಲಿಜೆನ್ಸ್ ಬ್ಯೂರೋ (ಐಬಿ) ನಡೆಸಿದ ವಿಚಾರಣೆಯನ್ನು ಪಡೆಯಲು ಮಾತ್ರ ಸರ್ಕಾರ ಸೀಮಿತವಾಗಿದೆ. ಈ ಪ್ರಕ್ರಿಯೆಯಲ್ಲಿ ಸರ್ಕಾರವು ಆಕ್ಷೇಪಣೆಗಳನ್ನು ಎತ್ತಬಹುದು ಮತ್ತು ಕೊಲೆಜಿಯಂನ ಆಯ್ಕೆಗಳ ಬಗ್ಗೆ ಸ್ಪಷ್ಟೀಕರಣಗಳನ್ನು ಪಡೆಯಬಹುದು. ಆದರೆ ಕೊಲೆಜಿಯಂ ಅದೇ ಹೆಸರುಗಳನ್ನು ಪುನರುಚ್ಚರಿಸಿದರೆ, ಸಂವಿಧಾನ ನ್ಯಾಯಪೀಠದ ತೀರ್ಪುಗಳ ಅಡಿಯಲ್ಲಿ, ಅವರನ್ನು ನ್ಯಾಯಾಧೀಶರನ್ನಾಗಿ ನೇಮಿಸಲು ಸರ್ಕಾರ ಬದ್ಧವಾಗಿರುತ್ತದೆ.

ಇದನ್ನೂ ಓದಿ: ಕೊಲಿಜಿಯಂ ಶಿಫಾರಸು: ಕೇಂದ್ರ ಸರ್ಕಾರ ನಿರ್ಲಕ್ಷ್ಯ

ಕೆಲವು ಶಿಫಾರಸುಗಳ ಬಗ್ಗೆ ಅಸಮಾಧಾನಗೊಂಡು ಸರ್ಕಾರವು ನೇಮಕಾತಿಗಳನ್ನು ವಿಳಂಬಗೊಳಿಸಿದ ಉದಾಹರಣೆಗಳಿವೆ. ಇದು ಒಕ್ಕೂಟ ಸರ್ಕಾರ ಮತ್ತು ನ್ಯಾಯಾಂಗದ ನಡುವಿನ ಸಂಘರ್ಷದ ಕೇಂದ್ರವಾಗಿದ್ದು, ಸುಪ್ರೀಂಕೋರ್ಟ್‌ನಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹೆಣಗಾಡುವಂತಾಗುತ್ತದೆ.

ನ್ಯಾಯಮೂರ್ತಿ ಚಂದ್ರಚೂಡ್‌ ಅವರನ್ನು ಕಳೆದ ವಾರ ಸುಪ್ರಿಂಕೋರ್ಟ್‌ನ ಉನ್ನತ ಹುದ್ದೆಗೆ ಏರಿಸಲಾಗಿತ್ತು. ನವೆಂಬರ್ 16 ರಂದು ಅವರ ಮೊದಲ ಕೊಲೆಜಿಯಂ ಸಭೆ ನಡೆಸಿದ್ದರು. ಅದರಲ್ಲಿ ಅವರು ಮೂರು ಹೈಕೋರ್ಟ್ ನ್ಯಾಯಾಧೀಶರನ್ನು – ಒಬ್ಬರು ಮದ್ರಾಸ್, ಗುಜರಾತ್ ಮತ್ತು ತೆಲಂಗಾಣ- ವರ್ಗಾಯಿಸಲು ನಿರ್ಧರಿಸಿದ್ದರು.

ಐವರು ಸದಸ್ಯರಿರುವ ಈ ಕೊಲೆಜಿಯಂ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ. ರಾಜಾ ಅವರನ್ನು ರಾಜಸ್ಥಾನ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿತು. ಜೊತೆಗೆ ನ್ಯಾಯಮೂರ್ತಿ ನಿಖಿಲ್ ಕರಿಯೆಲ್ ಮತ್ತು ನ್ಯಾಯಮೂರ್ತಿ ಎ. ಅಭಿಷೇಕ್ ರೆಡ್ಡಿ ಅವರನ್ನು ಪಾಟ್ನಾ ಹೈಕೋರ್ಟ್‌ಗೆ ವರ್ಗಾಯಿಸಲು ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: 12 ಹೈಕೋರ್ಟ್‌ಗಳಿಗೆ 68 ನ್ಯಾಯಮೂರ್ತಿಗಳ ಹೆಸರು ಶಿಫಾರಸು ಮಾಡಿದ ಕೊಲಿಜಿಯಂ

ನ್ಯಾಯಮೂರ್ತಿ ರಾಜಾ ಅವರನ್ನು ಮಾರ್ಚ್ 31, 2009 ರಂದು ಮದ್ರಾಸ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಿಸಲಾಯಿತು. ಸೆಪ್ಟೆಂಬರ್ 22, 2022 ರಿಂದ ಅವರು ಮುಖ್ಯ ನ್ಯಾಯಮೂರ್ತಿಯಾಗಿ ಭಡ್ತಿ ಪಡೆದರು.

ನ್ಯಾಯಮೂರ್ತಿ ನಿಖಿಲ್ ಕರಿಯೆಲ್ ಪ್ರಸ್ತುತ ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದರೆ, ನ್ಯಾಯಮೂರ್ತಿ ಅಬಿಷೇಕ್ ರೆಡ್ಡಿ ಅವರನ್ನು ತೆಲಂಗಾಣ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ಇದ್ದಾರೆ.

ಈ ವರ್ಗಾವನೆಯ ವಿರುದ್ಧ ವಕೀಲರು ಮುಷ್ಕರ ನಡೆಸಿದ್ದು, ವರ್ಗಾವಣೆ ಪ್ರಸ್ತಾಪವನ್ನು ಚರ್ಚಿಸಲು ಗುಜರಾತ್ ಬಾರ್‌ ಅಸೋಶಿಯೇಷನ್‌ನಿಂದ ನಿಯೋಗವನ್ನು ಭೇಟಿ ಮಾಡಲು ಸಿಜೆಐ ಒಪ್ಪಿಕೊಂಡಿದ್ದಾರೆ.

ಆಗಾಗ್ಗೆ ನಡೆಯುವ ಇಂತಹ ಮುಖಾಮುಖಿಗಳು ಆತಂಕಕ್ಕೀಡು ಮಾಡುತ್ತದೆ. ನ್ಯಾಯಾಲಯಕ್ಕೆ ಯಾವುದು ಒಳ್ಳೆಯದು ಎಂದು ಎಲ್ಲಾ ಕಡೆಯವರು ನಿರ್ಧರಿಸಬೇಕು ಎಂದು ಕಾನೂನು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ನಾನು ‘ಗೆ’ ಎಂಬ ಕಾರಣಕ್ಕೆ ನ್ಯಾಯಾಧೀಶರಾಗಿ ನೇಮಿಸುತ್ತಿಲ್ಲ: ವಕೀಲ ಸೌರಭ್‌ ಕಿರ್ಪಾಲ್

ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ನಿಖಿಲ್ ಕರಿಯೆಲ್ ಅವರ ವರ್ಗಾವಣೆಯ ಬಗ್ಗೆ ಗುಜರಾತ್ ಬಾರ್ ಪ್ರತಿನಿಧಿಗಳು ಸೋಮವಾರ ಸಿಜೆಐ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ನವೆಂಬರ್ 9 ರಂದು ಸಿಜೆಐ ಚಂದ್ರಚೂಡ್‌ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾದರು. ಅವರು ನವೆಂಬರ್ 10, 2024 ರವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...