Homeರಾಷ್ಟ್ರೀಯಕೇಂದ್ರ ಕಾನೂನು ಮಂತ್ರಿಯ ಮುಂದೆಯೆ ‘ಕೊಲಿಜಿಯಂ’ ವ್ಯವಸ್ಥೆಯನ್ನು ಸಮರ್ಥಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

ಕೇಂದ್ರ ಕಾನೂನು ಮಂತ್ರಿಯ ಮುಂದೆಯೆ ‘ಕೊಲಿಜಿಯಂ’ ವ್ಯವಸ್ಥೆಯನ್ನು ಸಮರ್ಥಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

- Advertisement -
- Advertisement -

ನ್ಯಾಯಾಧೀಶರ ವರ್ಗಾವಣೆಯ ಬಗ್ಗೆ ಧರಣಿ ನಡೆಸುತ್ತಿರುವ ಗುಜರಾತ್ ಹೈಕೋರ್ಟ್‌ನ ವಕೀಲರನ್ನು ಭೇಟಿ ಮಾಡಲು ಒಪ್ಪಿಕೊಂಡಿರುವ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂದ್ ಅವರು “ನ್ಯಾಯ ಕೇಳಿಕೊಂಡು ಬರುವವರು ಬಳಲುತ್ತಿದ್ದಾರೆ” ಎಂದು ಶನಿವಾರ ಹೇಳಿದ್ದಾರೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಆಯೋಜಿಸಿದ್ದ ಸನ್ಮಾನ ಕಾರ್ಯದಲ್ಲಿ ಮಾತನಾಡಿದ ಚಂದ್ರಚೂಡ್‌‌, ನ್ಯಾಯಾಂಗ ನೇಮಕಾತಿ ಮಾಡುವ ಕೊಲಿಜಿಯಂ ವ್ಯವಸ್ಥೆಯನ್ನು ಒಕ್ಕೂಟ ಸರ್ಕಾರದ ಕಾನೂನು ಮಂತ್ರಿ ಕಿರಣ್ ರಿಜಿಜಿ ಮುಂದೆಯೆ ಸಮರ್ಥಿಸಿಕೊಂಡಿದ್ದಾರೆ. ಕೊಲೆಜಿಯಂ “ರಾಷ್ಟ್ರೀಯ ದೃಷ್ಟಿಕೋನ”ವನ್ನು ಗಮನದಲ್ಲಿಟ್ಟುಕೊಂಡು ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಒಕ್ಕೂಟ ಸರ್ಕಾರದ ಕಾನೂನು ಸಚಿವ ಕಿರಣ್‌ ರಿಜಿಜು ಮಾತನಾಡಿ, ವರ್ಗಾವಣೆ ಪ್ರಕರಣದ ವಿಚಾರದಲ್ಲಿ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನು ಭೇಟಿ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಪ್ರತಿಭಟನಾ ವಕೀಲರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಕೊಲಿಜಿಯಂ ವ್ಯವಸ್ಥೆ ಅತ್ಯಗತ್ಯ: ನಿವೃತ್ತ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್

“ಇದೊಂದು ವೈಯಕ್ತಿಕ ಸಮಸ್ಯೆಯಾಗಿರಬಹುದು, ಆದರೆ ಸರ್ಕಾರ ಬೆಂಬಲಿಸುವ ಕೊಲಿಜಿಯಂನ ಪ್ರತಿ ನಿರ್ಧಾರಕ್ಕೂ ಇದೇ ರೀತಿ ಪುನರಾವರ್ತನೆಯಾದರೆ, ಇದು ಎಲ್ಲಿಗೆ ಹೋಗಿ ಮುಗಿಯುತ್ತದೆ? ಇಡೀ ಆಯಾಮವು ಬದಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಪ್ರಕ್ರಿಯೆಯು ಬಹಳ ಹಿಂದಿನಿಂದಲೂ ಪ್ರಶ್ನಾರ್ಹವಾಗಿದೆ. ಈ ಕೊಲೆಜಿಯಂ ವ್ಯವಸ್ಥೆಯನ್ನು ಮರುಪರಿಶೀಲಿಸಬೇಕಾಗಿದೆ ಎಂದು ಕಾನೂನು ಸಚಿವ ಕಿರೆನ್ ರಿಜಿಜು ಈ ಹಿಂದೆ ಹೇಳಿದ್ದರು.

ನ್ಯಾಯಮೂರ್ತಿ ಪ್ರಕ್ರಿಯೆಯಲ್ಲಿ ಸರ್ಕಾರದ ಪಾತ್ರವು ಕನಿಷ್ಠವಾಗಿದೆ. ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರನ್ನು ನ್ಯಾಯಾಧೀಶರಾಗಿ ಉನ್ನತೀಕರಿಸಬೇಕಾದರೆ ಇಂಟೆಲಿಜೆನ್ಸ್ ಬ್ಯೂರೋ (ಐಬಿ) ನಡೆಸಿದ ವಿಚಾರಣೆಯನ್ನು ಪಡೆಯಲು ಮಾತ್ರ ಸರ್ಕಾರ ಸೀಮಿತವಾಗಿದೆ. ಈ ಪ್ರಕ್ರಿಯೆಯಲ್ಲಿ ಸರ್ಕಾರವು ಆಕ್ಷೇಪಣೆಗಳನ್ನು ಎತ್ತಬಹುದು ಮತ್ತು ಕೊಲೆಜಿಯಂನ ಆಯ್ಕೆಗಳ ಬಗ್ಗೆ ಸ್ಪಷ್ಟೀಕರಣಗಳನ್ನು ಪಡೆಯಬಹುದು. ಆದರೆ ಕೊಲೆಜಿಯಂ ಅದೇ ಹೆಸರುಗಳನ್ನು ಪುನರುಚ್ಚರಿಸಿದರೆ, ಸಂವಿಧಾನ ನ್ಯಾಯಪೀಠದ ತೀರ್ಪುಗಳ ಅಡಿಯಲ್ಲಿ, ಅವರನ್ನು ನ್ಯಾಯಾಧೀಶರನ್ನಾಗಿ ನೇಮಿಸಲು ಸರ್ಕಾರ ಬದ್ಧವಾಗಿರುತ್ತದೆ.

ಇದನ್ನೂ ಓದಿ: ಕೊಲಿಜಿಯಂ ಶಿಫಾರಸು: ಕೇಂದ್ರ ಸರ್ಕಾರ ನಿರ್ಲಕ್ಷ್ಯ

ಕೆಲವು ಶಿಫಾರಸುಗಳ ಬಗ್ಗೆ ಅಸಮಾಧಾನಗೊಂಡು ಸರ್ಕಾರವು ನೇಮಕಾತಿಗಳನ್ನು ವಿಳಂಬಗೊಳಿಸಿದ ಉದಾಹರಣೆಗಳಿವೆ. ಇದು ಒಕ್ಕೂಟ ಸರ್ಕಾರ ಮತ್ತು ನ್ಯಾಯಾಂಗದ ನಡುವಿನ ಸಂಘರ್ಷದ ಕೇಂದ್ರವಾಗಿದ್ದು, ಸುಪ್ರೀಂಕೋರ್ಟ್‌ನಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹೆಣಗಾಡುವಂತಾಗುತ್ತದೆ.

ನ್ಯಾಯಮೂರ್ತಿ ಚಂದ್ರಚೂಡ್‌ ಅವರನ್ನು ಕಳೆದ ವಾರ ಸುಪ್ರಿಂಕೋರ್ಟ್‌ನ ಉನ್ನತ ಹುದ್ದೆಗೆ ಏರಿಸಲಾಗಿತ್ತು. ನವೆಂಬರ್ 16 ರಂದು ಅವರ ಮೊದಲ ಕೊಲೆಜಿಯಂ ಸಭೆ ನಡೆಸಿದ್ದರು. ಅದರಲ್ಲಿ ಅವರು ಮೂರು ಹೈಕೋರ್ಟ್ ನ್ಯಾಯಾಧೀಶರನ್ನು – ಒಬ್ಬರು ಮದ್ರಾಸ್, ಗುಜರಾತ್ ಮತ್ತು ತೆಲಂಗಾಣ- ವರ್ಗಾಯಿಸಲು ನಿರ್ಧರಿಸಿದ್ದರು.

ಐವರು ಸದಸ್ಯರಿರುವ ಈ ಕೊಲೆಜಿಯಂ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ. ರಾಜಾ ಅವರನ್ನು ರಾಜಸ್ಥಾನ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿತು. ಜೊತೆಗೆ ನ್ಯಾಯಮೂರ್ತಿ ನಿಖಿಲ್ ಕರಿಯೆಲ್ ಮತ್ತು ನ್ಯಾಯಮೂರ್ತಿ ಎ. ಅಭಿಷೇಕ್ ರೆಡ್ಡಿ ಅವರನ್ನು ಪಾಟ್ನಾ ಹೈಕೋರ್ಟ್‌ಗೆ ವರ್ಗಾಯಿಸಲು ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: 12 ಹೈಕೋರ್ಟ್‌ಗಳಿಗೆ 68 ನ್ಯಾಯಮೂರ್ತಿಗಳ ಹೆಸರು ಶಿಫಾರಸು ಮಾಡಿದ ಕೊಲಿಜಿಯಂ

ನ್ಯಾಯಮೂರ್ತಿ ರಾಜಾ ಅವರನ್ನು ಮಾರ್ಚ್ 31, 2009 ರಂದು ಮದ್ರಾಸ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಿಸಲಾಯಿತು. ಸೆಪ್ಟೆಂಬರ್ 22, 2022 ರಿಂದ ಅವರು ಮುಖ್ಯ ನ್ಯಾಯಮೂರ್ತಿಯಾಗಿ ಭಡ್ತಿ ಪಡೆದರು.

ನ್ಯಾಯಮೂರ್ತಿ ನಿಖಿಲ್ ಕರಿಯೆಲ್ ಪ್ರಸ್ತುತ ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದರೆ, ನ್ಯಾಯಮೂರ್ತಿ ಅಬಿಷೇಕ್ ರೆಡ್ಡಿ ಅವರನ್ನು ತೆಲಂಗಾಣ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ಇದ್ದಾರೆ.

ಈ ವರ್ಗಾವನೆಯ ವಿರುದ್ಧ ವಕೀಲರು ಮುಷ್ಕರ ನಡೆಸಿದ್ದು, ವರ್ಗಾವಣೆ ಪ್ರಸ್ತಾಪವನ್ನು ಚರ್ಚಿಸಲು ಗುಜರಾತ್ ಬಾರ್‌ ಅಸೋಶಿಯೇಷನ್‌ನಿಂದ ನಿಯೋಗವನ್ನು ಭೇಟಿ ಮಾಡಲು ಸಿಜೆಐ ಒಪ್ಪಿಕೊಂಡಿದ್ದಾರೆ.

ಆಗಾಗ್ಗೆ ನಡೆಯುವ ಇಂತಹ ಮುಖಾಮುಖಿಗಳು ಆತಂಕಕ್ಕೀಡು ಮಾಡುತ್ತದೆ. ನ್ಯಾಯಾಲಯಕ್ಕೆ ಯಾವುದು ಒಳ್ಳೆಯದು ಎಂದು ಎಲ್ಲಾ ಕಡೆಯವರು ನಿರ್ಧರಿಸಬೇಕು ಎಂದು ಕಾನೂನು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ನಾನು ‘ಗೆ’ ಎಂಬ ಕಾರಣಕ್ಕೆ ನ್ಯಾಯಾಧೀಶರಾಗಿ ನೇಮಿಸುತ್ತಿಲ್ಲ: ವಕೀಲ ಸೌರಭ್‌ ಕಿರ್ಪಾಲ್

ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ನಿಖಿಲ್ ಕರಿಯೆಲ್ ಅವರ ವರ್ಗಾವಣೆಯ ಬಗ್ಗೆ ಗುಜರಾತ್ ಬಾರ್ ಪ್ರತಿನಿಧಿಗಳು ಸೋಮವಾರ ಸಿಜೆಐ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ನವೆಂಬರ್ 9 ರಂದು ಸಿಜೆಐ ಚಂದ್ರಚೂಡ್‌ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾದರು. ಅವರು ನವೆಂಬರ್ 10, 2024 ರವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...