Homeಮುಖಪುಟಪ್ರಧಾನ ಮಂತ್ರಿಗಳಿಗೆ ಮೂರು ಪತ್ರ ಬರೆದ ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ

ಪ್ರಧಾನ ಮಂತ್ರಿಗಳಿಗೆ ಮೂರು ಪತ್ರ ಬರೆದ ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ

ಸುಪ್ರೀಂ ಕೋರ್ಟ್‍ನಲ್ಲಿ ಹೆಚ್ಚಿನ ಸಿಬ್ಬಂದಿ ನೇಮಕಾತಿಗೆ ಮತ್ತು ಹೈಕೋರ್ಟ್ ನ್ಯಾಯಾಧೀಶರ ವಯೋಮಿತಿ ಏರಿಕೆಗೆ ರಂಜನ್ ಗಗೋಯಿ ಒತ್ತಾಯ

- Advertisement -
- Advertisement -

ಮುಖ್ಯಾಂಶಗಳು

1. ಸುಪ್ರೀಂ ಕೋರ್ಟ್‍ನಲ್ಲಿ ಹೆಚ್ಚಿನ ಸಿಬ್ಬಂದಿ ನೇಮಕಾತಿಗೆ ಮತ್ತು ಹೈಕೋರ್ಟ್ ನ್ಯಾಯಾಧೀಶರ ವಯೋಮಿತಿ ಏರಿಕೆಗೆ ರಂಜನ್ ಗಗೋಯಿ ಒತ್ತಾಯ

2. 24 ಹೈಕೋರ್ಟ್‍ಗಳಲ್ಲಿ 43 ಲಕ್ಷ ಪ್ರಕರಣಗಳು ಬಾಕಿ ಉಳಿದಿವೆ.

3. ಹೈಕೋರ್ಟ್ ನ್ಯಾಯಾಧೀಶರ ವಯೋಮಿತಿಯನ್ನು 62 ವರ್ಷದಿಂದ 65 ವರ್ಷಗಳಿಗೆ ಏರಿಸಬೇಕೆಂದು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ಒತ್ತಾಯಿಸಿದ್ದಾರೆ

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‍ಗಳಲ್ಲಿ 43 ಲಕ್ಷ ಪ್ರಕರಣಗಳು ಇನ್ನು ಇತ್ಯರ್ಥವಾಗದೇ ಉಳಿದಿರುವುದರಿಂದ ಹೈಕೋರ್ಟ್ ನ್ಯಾಯಾಧೀಶರ ವಯೋಮಿತಿಯನ್ನು 62 ವರ್ಷದಿಂದ 65 ವರ್ಷಗಳಿಗೆ ಏರಿಸಬೇಕೆಂದು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ಒತ್ತಾಯಿಸಿದ್ದಾರೆ. ಹಾಗೆಯೇ ಸುಪ್ರೀಂ ಕೋರ್ಟ್‍ನಲ್ಲಿ ಈಗ ಸದ್ಯಕ್ಕೆ ಕೇವಲ 31 ನ್ಯಾಯಾಧೀಶರಿದ್ದು ಇವರ ಸಂಖ್ಯೆಯನ್ನು ಹೆಚ್ಚಿಸುವಂತೆ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಸದ್ಯಕ್ಕೆ ಸುಪ್ರೀಂ ಕೋರ್ಟ್‍ನಲ್ಲಿ 58,669 ಪ್ರಕರಣಗಳು ಇತ್ಯರ್ಥವಾಗದೇ ಬಾಕಿ ಉಳಿದಿವೆ. 26 ಪ್ರಕರಣಗಳು 25 ವರ್ಷ ಹಳೆಯವಾದರೆ 100 ಪ್ರಕರಣಗಳು 20 ವರ್ಷ ಹಳೆಯವು. 593 ಪ್ರಕರಣಗೂ 15 ವರ್ಷದ ಹಿಂದಿನವಾದರೆ 4,977 ಪ್ರಕರಣಗಳು 10 ವರ್ಷಗಳಿಗೂ ಹಿಂದಿನವದ್ದಾಗಿದ್ದು ಈಗಲೂ ಪ್ರತಿನಿತ್ಯ ಪ್ರಕರಣ ದಾಖಲಾಗುತ್ತಲೇ ಇವೆ ಎಂದಿದ್ದಾರೆ.

ಪ್ರಧಾನಿಗಳಿಗೆ ಈ ಕುರಿತು ಮೂರು ಪತ್ರಗಳನ್ನು ಬರೆದಿರುವ ಮುಖ್ಯ ನ್ಯಾಯಮುರ್ತಿಗಳು, ಆದ್ಯತೆಯ ಮೇರೆಗೆ ಈ ವಿಷಯಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿದ್ದಾರೆ. ಆಗ ಮಾತ್ರ ದಕ್ಷತೆಯಿಂದ ಕೆಲಸ ನಿರ್ವಹಿಸುವುದಲ್ಲದೇ ತ್ವರಿತ ರೀತಯಲ್ಲಿ ನ್ಯಾಯ ಒದಗಿಸಲು ಸಾಧ್ಯ ಎಂದಿದ್ದಾರೆ.

ಎರಡನೇ ಪತ್ರದಲ್ಲಿ ಹೈ ಕೋರ್ಟ್ ನ್ಯಾಯಾಧೀಶರ ವಯೋಮಿತಿ ಏರಿಕೆಗೆ ಮನವಿ ಮಾಡಿದ್ದಾರೆ. 24 ಹೈಕೋರ್ಟ್‍ಗಳಲ್ಲಿ 43 ಲಕ್ಷ ಪ್ರಕರಣಗಳು ಬಾಕಿ ಉಳಿದಿವೆ. ಇದಕ್ಕೆ ಹೈ ಕೋರ್ಟ್ ನ್ಯಾಯಾಧೀಶರ ಕೊರತೆಯೇ ಪ್ರಮುಖ ಕಾರಣವಾಗಿದೆ. ಈಗ ಪ್ರಸ್ತುತ 37% ಅಂದರೆ 399 ನ್ಯಾಯಾಧೀಶರ ಹುದ್ದೆಗಳು ತುಂಬದೇ ಖಾಲಿ ಬಿದ್ದಿವೆ ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...