Homeಕರ್ನಾಟಕಬಸವಣ್ಣನವರ ಪಠ್ಯದ ಕುರಿತು ಸಿಎಂ ಬೊಮ್ಮಾಯಿ ಹೇಳಿದ ಸುಳ್ಳುಗಳು ಮತ್ತು ಅರ್ಧ ಸತ್ಯಗಳು

ಬಸವಣ್ಣನವರ ಪಠ್ಯದ ಕುರಿತು ಸಿಎಂ ಬೊಮ್ಮಾಯಿ ಹೇಳಿದ ಸುಳ್ಳುಗಳು ಮತ್ತು ಅರ್ಧ ಸತ್ಯಗಳು

- Advertisement -
- Advertisement -

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಬಗ್ಗೆ ಶುಕ್ರವಾರದಂದು ಪತ್ರಿಕಾ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಸವಣ್ಣನವರ ಬಗ್ಗೆ ಉಲ್ಲೇಖಿಸುತ್ತಾ, “ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ” ಎಂದು ಹೇಳಿದ್ದರು.

ಆದರೆ ಮುಖ್ಯಮಂತ್ರಿಯ ಈ ಹೇಳಿಕೆ ಅರ್ಧ ಸತ್ಯವಾಗಿದ್ದು, ರೋಹಿತ್ ಚಕ್ರತೀರ್ಥ ಸಮಿತಿಯು ಹೊಸ ಪಠ್ಯದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದೆ ಎಂಬುದು ಕಂಡುಬಂದಿದೆ. ಸ್ವತಃ ಬರಗೂರು ರಾಮಚಂದ್ರಪ್ಪನವರು ಸಹ ಈ ಕುರಿತು ಸ್ಪಷ್ಟನೆ ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಹೇಳಿದ್ದೇನು? 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಹೇಳಿಕೆಯಲ್ಲಿ ಹಲವು ವಿಚಾಗಳನ್ನು ಮಾತನಾಡುತ್ತಾ, “ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರೆ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳನ್ನು ಮಾಡಿರುತ್ತಾರೆ. ಬಸವಣ್ಣನವರ ಇದೇ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ. ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು” ಎಂದು ಮುಖ್ಯಮಂತ್ರಿ ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದರು.

ಜೊತೆಗೆ ಆಕ್ಷೇಪಣೆ ಹಾಗೂ ಆರೋಪಕ್ಕೆ ಸರ್ಕಾರದ ಸ್ಪಷ್ಟೀಕರಣ ಎಂಬ ಪಟ್ಟಿಯಲ್ಲಿ, ಬಸವಣ್ಣನವರನ್ನು ಕುರಿತು ನೀಡಿರುವ ವಿಷಯಾಂಶದಲ್ಲಿ ವಿವಾದಾತ್ಮಕ ಅಂಶಗಳಿವೆ ಎನ್ನುವ ಆರೋಪಕ್ಕೆ ಉತ್ತರವಾಗಿ, “ಹಿಂದಿನ ಪಠ್ಯಪುಸ್ತಕದಲ್ಲಿದ್ದ ಬಸವೇಶ್ವರ ಪಾಠ ಹಾಗೂ ಈಗ ಅಳವಡಿಸಿರುವ ಪಾಠ ಎರಡರಲ್ಲಿಯೂ ‘ವೀರಶೈವ ಧರ್ಮ’ ಎಂಬ ಉಲ್ಲೇಖವಿದೆ. ಎರಡೂ ಪಠ್ಯಪುಸ್ತಕದಲ್ಲಿ ಬಸವಣ್ಣನವರು ‘ಲಿಂಗದೀಕ್ಷೆ ಪಡೆದರು’ ಎಂಬ ಉಲ್ಲೇಖವಿದೆ” ಎಂದು ಹೇಳಿದೆ.

ಸರ್ಕಾರ ನೀಡಿರುವ ಲಿಖಿತ ಸ್ಪಷ್ಟೀಕರಣ

ಇದನ್ನೂ ಓದಿ: ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಕುರಿತು ಸಾಮಾನ್ಯವಾದ ಅಂಶಗಳಿವೆಯೆ?

  • ಒಂಬತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದ ‘ಬಸವೇಶ್ವರರು’ ಎಂಬ ಪಾಠದಲ್ಲಿ ‘320’ ಪದಗಳಿದ್ದವು. ಆದರೆ ಇದನ್ನು ತಿದ್ದಿರುವ ಚಕ್ರತೀರ್ಥ ಸಮಿತಿ, ಪಾಠವನ್ನು ‘238’ ಪದಗಳಿಗೆ ಪಾಠವನ್ನು ಇಳಿಸಿದೆ.
  • ಸರ್ಕಾರ ಸ್ಪಷ್ಟನೆ ನೀಡಿದಂತೆ  ‘ಶೈವಗುರುಗಳಿಂದ ಲಿಂಗ ದೀಕ್ಷೆ ಪಡೆದರು’ ಎಂಬ ಪದ ಹಳೆಯ ಪಠ್ಯದಲ್ಲಿ ಇದೆಯಾದರೂ, ಅದಕ್ಕಿಂತಲೂ ಮುಂಚೆ ಇದ್ದ, “ಬಸವೇಶ್ವರರು ತಮ್ಮ ಉಪನಯನದ ನಂತರ ಯಜ್ಞೋಪವೀತವನ್ನು ಕಿತ್ತೆಸೆದು ಕೂಡಲಸಂಗಮಕ್ಕೆ ನಡೆದರು” ಎಂಬ ವಾಕ್ಯದ ‘ಯಜ್ಞೋಪವೀತವನ್ನು ಕಿತ್ತೆಸೆದು’ ಎಂಬ ಪದವನ್ನು ತೆಗೆಯಲಾಗಿದೆ.
  • ವೀರಶೈವ ಧರ್ಮವನ್ನು ಹಳೆಯ ಪಠ್ಯವು ವೀರಶೈವ ಸಿದ್ದಾಂತ ಎಂದು ಕರೆದರೆ, ಹೊಸ ಪಠ್ಯವು ವೀರಶೈವ ಮತ ಎಂದು ಕರೆದಿದೆ.
  • ಹಳೆಯ ಪಠ್ಯದಲ್ಲಿ ಇದ್ದ, “ಮಧ್ಯಕಾಲದ ಕರ್ನಾಟಕದ ಸಮಾಜವನ್ನು ಸುಧಾರಿಸಲು ಹೋರಾಡಿದ ಆದ್ಯ ಪ್ರವರ್ತಕರಲ್ಲಿ ಬಸವೇಶ್ವರರು ಒಬ್ಬರಾಗಿದ್ದಾರೆ. ವೈದಿಕ ಮೂಲ ಧರ್ಮದಲ್ಲಿ ಬೇರೂರಿದ್ದ ಅಸಂಖ್ಯ ಧಾರ್ಮಿಕ ಆಚರಣಾ ವಿಧಿವಿಧಾನಗಳನ್ನು ಬದಿಗೊತ್ತಿ ಮಾನವೀಯ ಮೌಲ್ಯ ಆಧಾರಿತ ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಶರಣರು ಪ್ರಚಾರಪಡಿಸಿದರು” ಎಂಬ ಇಡೀ ಭಾಗವನ್ನು ಹೊಸ ಪಠ್ಯದಲ್ಲಿ ಕತ್ತರಿಸಿ ತೆಗೆಯಲಾಗಿದೆ.
  • ಜೊತೆಗೆ, “ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಶರಣರು ಪ್ರಚಾರಪಡಿಸಿದರು” ಎಂಬ ವಾಕ್ಯದ ಬದಲಿಗೆ, “ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು” ಎಂಬ ವಾಕ್ಯವನ್ನು ಬಳಸಲಾಗಿದೆ.
  • ಜೊತೆಗೆ, ಸಂಸ್ಕೃತ ಮತ್ತು ಕನ್ನಡಗಳನ್ನು ಕಲಿತು ತಮ್ಮ ಉಪನಯನವಾದ ನಂತರ ಕೂಡಲ ಸಂಗಮಕ್ಕೆ ನಡೆದರು’ ಎಂದು ಹೊಸ ಪಠ್ಯದಲ್ಲಿ ಸೇರಿಸಲಾಗಿದೆ.
  • ಹಳೆಯ ಪಠ್ಯದಲ್ಲಿ ಇದ್ದ, “ತಮ್ಮ ಇಡೀ ಜೀವಮಾನವನ್ನು ಸಮಾಜ ಮತ್ತು ಧರ್ಮದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಮೀಸಲಿರಿಸಿದರು. ಸಮಾಜ ಧರ್ಮದ ಪುನಶ್ಚೇತನಕ್ಕೆ ಟೊಂಕಕಟ್ಟಿದರು” ಎಂಬ ವಾಕ್ಯವನ್ನು ಕತ್ತರಿಸಲಾಗಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಹೇಳಿಕೆಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ: ಮುಖಾಮುಖಿ ಮಾತುಕತೆಗೆ ಒತ್ತಾಯ

  • ಹಳೆಯ ಪಠ್ಯದಲ್ಲಿ ಇದ್ದ, “‘ದೇಹವೇ ದೇಗುಲ’ ಎಂದು ಸಾರಿದ ಬಸವಣ್ಣನವರು ಈ ತತ್ವವನ್ನು ಅನುಷ್ಠಾನಕ್ಕೆ  ತರಲು ಪ್ರಯತ್ನಿಸಿದರು. ಈ ಬಗೆಯ ಸಂವೇದನೆಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪಗಳಾಗಿವೆ” ಎಂಬ ವಾಕ್ಯವನ್ನು ಕತ್ತರಿಸಲಾಗಿದೆ.
  • ಹಳೆಯ ಪಠ್ಯದಲ್ಲಿ ಇದ್ದ, “ಧಾರ್ಮಿಕ ಅಂಕುಡೊಂಕುಗಳನ್ನು ಚರ್ಚಿಸುತ್ತಿದ್ದರು ಹಾಗೂ ಅವುಗಳಿಗೆ ಚಿಕಿತ್ಸಕ ಸಂದೇಶಗಳ ಮೂಲಕ ಪರಿಹಾರವನ್ನು ಸೂಚಿಸುತ್ತಿದ್ದರು” ಎಂಬ ವಾಕ್ಯವನ್ನು ಕತ್ತರಿಸಿ, “ಅನೇಕ ವಚನಗಳ ಮೂಲಕ ವಚನಕಾರರು ಅಂದಿನ ಸಮಾಜದಲ್ಲಿ ಆಚರಣೆಯಲ್ಲಿದ್ದ ಲೋಪ ದೋಷಗಳನ್ನು ಎತ್ತಿತೋರಿಸಿ ಅರಿವು ಮೂಡಿಸಲು ಪ್ರಯತ್ನಿಸಿದರು” ಎಂದಯ ಬರೆಯಲಾಗಿದೆ. ಇದರಲ್ಲಿ ಧಾರ್ಮಿಕ ಅಂಕುಡೊಂಕು ಎಂಬ ಪದನ್ನು ಕತ್ತರಿಸಲಾಗಿದೆ.

  • ಹಳೆಯ ಪಠ್ಯದಲ್ಲಿ ಇದ್ದ, ‘‘ಶರಣರು ಸರಳ ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳವಳಿಯನ್ನು ಜನಮುಖಿಯಾಗಿಸಿದರು” ಎಂಬ ಪದವನ್ನು ಕತ್ತರಿಸಲಾಗಿದೆ.
  • ರೋಹಿತ್ ಚಕ್ರತೀರ್ಥ ಸಮಿತಿಯು, “ಮುಂದಿನ ಶತಮಾನಗಳಲ್ಲಿ ತಲೆ ಎತ್ತಿದ ಮಠಗಳು ಸಾಮಾಜಿಕ ಸುಧಾರಣೆ ಮತ್ತು ಶಿಕ್ಷಣಕ್ಕೂ ಬೆಂಬಲ ನೀಡುತ್ತಾ ಬಂದಿವೆ” ಎಂಬ ಹೊಸ ಪದಗಳನ್ನು ಸೇರಿಸಲಾಗಿದೆ.
  • ಹಳೆಯ ಪಠ್ಯದಕಲ್ಲಿ ಇದ್ದ, “ಒಟ್ಟಾರೆ ಸಮಾನತೆಯ ಆಶಯವನ್ನು ಸಿದ್ಧಾಂತವಾಗಿಸಿಕೊಂಡಿದ್ದ ಬಸವೇಶ್ವರರು ಮತ್ತು ವಚನಕಾರರು ಸಮಾಜ, ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ” ಎಂಬ ಪದವನ್ನು ಚಕ್ರತೀರ್ಥ ಸಮಿತಿ ಕತ್ತರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...