ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ(ಇಂದು) 2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸಲಿದ್ದಾರೆ. 2019 ರಲ್ಲಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಂಡಿಸುತ್ತಿರುವ ಎರಡನೆ ಬಜೆಟ್ ಇದಾಗಿದೆ. ರಾಜ್ಯದಲ್ಲಿ ಆರ್ಥಿಕ ಕುಸಿತ, ಪ್ರವಾಹ, ಹೆಚ್ಚಾದ ಸಾಲ ಪ್ರಮಾಣಗಳ ನಡುವೆ ಮುಖ್ಯಮಂತ್ರಿ ಮಂಡಿಸುವ ಬಜೆಟ್ ಮೇಲೆ ಭಾರೀ ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ.
ರಾಜ್ಯವು ಈಗಾಗಲೆ ಮೂರು ಲಕ್ಷ ಕೋಟಿ ಸಾಲದಲ್ಲಿದ್ದು, ಜೊತೆಗೆ ಕೇಂದ್ರದಿಂದ ಸಿಗಬೇಕಾಗಿದ್ದ ಜಿಎಸ್ಟಿ ಪರಿಹಾರ ರಾಜ್ಯಕ್ಕೆ ಸಿಕ್ಕಿಲ್ಲ. ಈ ನಡುವೆ ಕೊರೊನಾದಿಂದಾಗಿ ಉಂಟಾದ ಆರ್ಥಿಕ ಕುಸಿತದ ಒತ್ತಡವು ರಾಜ್ಯದ ಮೇಲೆ ಇದೆ. ಹಾಗಾಗಿ ಇಂದು ಮಂಡಿಸಲಿರುವ ಬಜೆಟ್ಗಳ ಮೇಲೆ ಜನರ ದೃಷ್ಟಿ ನೆಟ್ಟಿದೆ.
ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ @BSYBJP ರವರು ನಾಳೆ ಮಧ್ಯಾಹ್ನ 12 ಗಂಟೆಗೆ 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮಂಡಿಸಲಿದ್ದಾರೆ.
CM Shri B.S.Yediyurappa will present the State Budget for the financial year 2021-22 at 12 noon on Monday, March 08th, 2021#KarnatakaVikasaPatra2021 pic.twitter.com/wm0ZkPutBj
— CM of Karnataka (@CMofKarnataka) March 7, 2021
ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ಟಿಕ್ರಿ ಗಡಿಯಲ್ಲಿ ಪ್ರಾಣಬಿಟ್ಟ ಮತ್ತೊಬ್ಬ ರೈತ!
ಹಣಕಾಸು ಖಾತೆಯನ್ನು ತಮ್ಮ ಬಳಿಯೆ ಉಳಿಸಿಕೊಂಡಿರುವ ಯಡಿಯೂರಪ್ಪ ಇಂದು ಮಧ್ಯಾಹ್ನ 12 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರಗಳಿಗಿಂಲೂ ರಾಜ್ಯದ ಸಾಲವೆ ಹಚ್ಚಿದ್ದು, ಈ ಬಾರಿ ಮಂಡಿಸಲಿರುವ ಬಜೆಟ್ ಅನ್ನು ‘ವಿಕಾಸ ಪತ್ರ’ ಎಂದು ಅವರು ಕರೆದಿದ್ದಾರೆ.
ಮುಖ್ಯಮಂತ್ರಿ @BSYBJP ರವರು ಇಂದು 2021-22ನೇ ಸಾಲಿನ ಆಯವ್ಯಯ ಮಂಡನೆಯ ಮುನ್ನಾ ದಿನ ಅಂತಿಮ ಹಂತದ ಪರಿಶೀಲನೆ ನಡೆಸಿದರು.#KarnatakaVikasaPatra2021 pic.twitter.com/cAoIsxpz3Y
— CM of Karnataka (@CMofKarnataka) March 7, 2021
ಬಜೆಟ್ ಮಧ್ಯಾಹ್ನ 12 ಗಂಟೆಗೆ ಮಂಡನೆಯಾಗಲಿದ್ದು, ಅದಕ್ಕೂ ಮುನ್ನ ಸಂಪುಟ ಸಭೆ ನಡೆಸಿ ಬಜೆಟ್ ಮಂಡನಗೆ ಅನುಮತಿ ಪಡೆಯಲಿದ್ದಾರೆ. ಬಜೆಟ್ ಮಂಡನೆಯು ಪೂರ್ಣಗೊಂಡ ಬಳಿಕ ಉಭಯ ಸದನಗಳಲ್ಲಿ ಏಪ್ರಿಲ್ 1 ರವರೆಗೂ ಬಜೆಟ್ ಕುರಿತು ಚರ್ಚೆಗಳನ್ನು ನಡೆಸಲಾಗುತ್ತದೆ.
ಇದನ್ನೂ ಓದಿ: ಬೆಳಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಕೇಳಿದ್ದೇನೆ: ಪ್ರಮೋದ್ ಮುತಾಲಿಕ್
So, what is ಭಾರೀ ನಿರೀಕ್ಷೆ?