Homeಕರ್ನಾಟಕಮುಖ್ಯಮಂತ್ರಿ ಯಡಿಯೂರಪ್ಪ ಪ್ರಶ್ನಾತೀತ ನಾಯಕ - ಸಚಿವ ಸೋಮಣ್ಣ

ಮುಖ್ಯಮಂತ್ರಿ ಯಡಿಯೂರಪ್ಪ ಪ್ರಶ್ನಾತೀತ ನಾಯಕ – ಸಚಿವ ಸೋಮಣ್ಣ

ಇದು ಪಕ್ಷದ ಹೈಕಮಾಂಡ್‌ಗೂ ಕೂಡ ಇದು ಗೊತ್ತಿದೆ. ಯತ್ನಾಳ್ ಅವರಿಗೆ ಮತ್ತೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಲಾಗಿದೆ, ಇಂತಹ ಹೇಳಿಕೆಗಳನ್ನು ನೀಡುವವರ ಬಗ್ಗೆ ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ

- Advertisement -
- Advertisement -

ಸಿಎಂ ಬದಲಾವಣೆ ಹೇಳಿಕೆ ಹಳೆಯದು. ಪುನರಾವರ್ತನೆ ಮಾಡಿದರೆ ವ್ಯಕ್ತಿ ಗಾಂಭೀರ್ಯತೆ ಕಳೆದುಕೊಳ್ಳುತ್ತಾರೆ. ಪದೇ ಪದೇ ಹೇಳುವುದು ಒಳ್ಳೆಯ ಲಕ್ಷಣವಲ್ಲ ಎಂದು ಸಚಿವ ವಿ.ಸೋಮಣ್ಣ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಟಾಂಗ್ ನೀಡಿದ್ದಾರೆ.

ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ಪ್ರಚಾರ ನಡೆಸಲು ತೆರಳುವುದಕ್ಕೂ ಮೊದಲು ಸಿದ್ದಗಂಗಾ ಮಠದಲ್ಲಿ ಸಿದ್ದಲಿಂಗ ಸ್ವಾಮೀಜಿಯನ್ನು ಭೇಟಿಯಾದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಹೇಳಿದ್ದನ್ನೇ ಯಾರೂ ಹೇಳಬಾರದು. ಯತ್ನಾಳ್ ಅವರಿಗೆ ಮತ್ತೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಬಿ.ಎಸ್.ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ. ಪಕ್ಷದ ಹೈಕಮಾಂಡ್‌ಗೂ ಕೂಡ ಇದು ಗೊತ್ತಿದೆ. ಇಂತಹ ಹೇಳಿಕೆಗಳನ್ನು ನೀಡುವವರ ಬಗ್ಗೆ ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ಯತ್ನಾಳ್ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಲಾಗಿದೆ ಎಂಬುದನ್ನು ಪರೋಕ್ಷವಾಗಿ ತಿಳಿಸಿದರು.

ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಸಿಎಂ ಕುರ್ಚಿ ಖಾಲಿ ಇಲ್ಲ. ಕುರ್ಚಿ ಖಾಲಿಮಾಡಿಸಿದರೆ ಏನಾಗುತ್ತದೆ ಎಂಬ ಸಂದೇಶ ಪಕ್ಷದ ವರಿಷ್ಠರಿಗೆ ಹೋಗಿದೆ. ಹಾಗಾಗಿ ವರಿಷ್ಠರು ಬಿ.ಎಸ್.ಯಡಿಯೂರಪ್ಪ ಬಗ್ಗೆ ಕಾಳಜಿ ವಹಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೂ ಎರಡೂವರೆ ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ಬಿಎಸ್.ವೈ ಶಕ್ತಿ ಸಾಮರ್ಥ್ಯ ಎಲ್ಲರಿಗೂ ಗೊತ್ತಿದೆ. ಹಿಂದೆ ಪ್ರವಾಹ ಬಂದಾಗ ಬೆಟ್ಟಗುಡ್ಡ ಹತ್ತಿಇಳಿದವರು ಬಿಎಸ್.ವೈ. ಎಂಥ ಕೆಟ್ಟ ಪರಿಸ್ಥಿತಿಯಲ್ಲೂ ಸಮರ್ಥವಾಗಿ ನಿಭಾಯಿಸಿದ್ದಾರೆ. ನಮ್ಮ ಸಿಎಂ ಮತ್ತು ಪಕ್ಷ ಜನರ ನಡುವೆ ಕೆಲಸ ಮಾಡುತ್ತದೆ. ಇದು ಜನರಿಗೂ ಗೊತ್ತಿದೆ ಎಂದು ಶ್ಲಾಘಿಸಿದರು.

ಶಿರಾದಲ್ಲಿ ಅನಿರೀಕ್ಷಿತವಾಗಿ ಉಪಚುನಾವಣೆ ಎದುರಾಗಿದೆ. ಸಧ್ಯದ ಸಂದಿಗ್ದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನ ನಿಯಂತ್ರಣಕ್ಕಾಗಿ ದುಡಿಯುತ್ತಿದ್ದಾರೆ. ನಮ್ಮ ಸರ್ಕಾರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಅಭಿವೃದ್ಧಿಯತ್ತ ಜನರ ಒಲವಿದೆ. ಹಾಗಾಗಿ ಆರ್.ಆರ್.ನಗರ ಮತ್ತು ಶಿರಾ ಮತ್ತು ಪದವೀಧರ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಸಾಮಾನ್ಯ ಜನರ ನೋವನ್ನು ಅರ್ಥ ಮಾಡಿಕೊಂಡು ಕೆಲಸ ಮಾಡುತ್ತಿದೆ. ಜನರ ಸಮಸ್ಯೆ ಗಳನ್ನು ಆಲಿಸಿ ಪರಿಹಾರ ಮಾಡುತ್ತಿದೆ. ಜನರೂ ನಮ್ಮ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡಿದ್ದಾರೆ. ನಮ್ಮದು ಅಭಿವೃದ್ಧಿಯ ಸರ್ಕಾರ ಎಂದು ಸರ್ಕಾರದ ನಡೆಗಳನ್ನು ಬಲವಾಗಿ ಸಮರ್ಥಿಸಿಕೊಂಡರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...