Homeಮುಖಪುಟಮುಖ್ಯ ಕಾರ್ಯದರ್ಶಿ ನೇಮಕ ವಿಚಾರ: ದೆಹಲಿ ಸರ್ಕಾರ-ಲೆಫ್ಟಿನೆಂಟ್ ಗವರ್ನರ್ ಜಗಳದಲ್ಲಿ ಸುಪ್ರೀಂ ಮಧ್ಯಪ್ರವೇಶ

ಮುಖ್ಯ ಕಾರ್ಯದರ್ಶಿ ನೇಮಕ ವಿಚಾರ: ದೆಹಲಿ ಸರ್ಕಾರ-ಲೆಫ್ಟಿನೆಂಟ್ ಗವರ್ನರ್ ಜಗಳದಲ್ಲಿ ಸುಪ್ರೀಂ ಮಧ್ಯಪ್ರವೇಶ

- Advertisement -
- Advertisement -

ಹೊಸ ಮುಖ್ಯ ಕಾರ್ಯದರ್ಶಿ ನೇಮಕಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ ನಡುವಿನ ಜಗಳದಲ್ಲಿ ಶುಕ್ರವಾರ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದೆ. ಮಂಗಳವಾರ ಕೇಂದ್ರ ಸರ್ಕಾರ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ನೀಡಲಿದ್ದು, ಆ ಬಗ್ಗೆ ಎರಡೂ ಕಡೆಯವರು ಸೌಹಾರ್ದಯುತವಾಗಿ ಚರ್ಚಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ದೆಹಲಿಯಲ್ಲಿ ಪ್ರಸ್ತುತ ಮುಖ್ಯ ಕಾರ್ಯದರ್ಶಿಯಾಗಿ ನರೇಶ್ ಕುಮಾರ್ ಇದ್ದಾರೆ, ಅವರು ಇದೇ ತಿಂಗಳು ನಿವೃತ್ತರಾಗುತ್ತಾರೆ ಹಾಗಾಗಿ ಹೊಸ ಅಧಿಕಾರಿಯನ್ನು ನೇಮಿಸಬೇಕು ಎಂದು ಆಮ್ ಆದ್ಮಿ ಪಕ್ಷ ನೇತೃತ್ವದ ಸರ್ಕಾರ ಹೇಳಿದೆ. ಆದರೆ ನರೇಶ್ ಕುಮಾರ್ ಅವರ ಅಧಿಕಾರಾವಧಿಯನ್ನು ವಿಸ್ತರಿಸುವುದಾಗಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಹೇಳಿದ್ದಾರೆ. ಇದರ ವಿರುದ್ಧ ದೆಹಲಿ ಸರ್ಕಾರ ನ್ಯಾಯಾಲಯದ ಮೊರೆ ಹೋಗಿದೆ.

ಅಧಿಕಾರಶಾಹಿಗಳ ಹುದ್ದೆಯ ಮೇಲೆ ಕೇಂದ್ರ ನಿಯಂತ್ರಣ ಸಾಧಿಸುವ ವಿವಾದಾತ್ಮಕ ಸುಗ್ರೀವಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಈ ಸವಾಲು ಎದುರಾಗಿತ್ತು. ದೆಹಲಿ ಸರ್ಕಾರವು ತನ್ನನ್ನು ಸಂಪರ್ಕಿಸದೆ ಅಂತಹ ನೇಮಕಾತಿಗಳನ್ನು ಮಾಡಬಾರದು ಎಂದು ವಾದಿಸಿತ್ತು.

ಇಂದಿನ ವಿಚಾರಣೆಯಲ್ಲಿ, ದೆಹಲಿ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ”…ಯಾವಾಗಲೂ ದೆಹಲಿ ಸರ್ಕಾರವೇ ನೇಮಕ ಮಾಡುತ್ತಿತ್ತು. ಈಗ ಸಾರ್ವತ್ರಿಕ ಸುಗ್ರೀವಾಜ್ಞೆ ಇದೆ… ನಾನು ಆಕ್ಷೇಪಿಸುತ್ತಿರುವುದು ಲೆಫ್ಟಿನೆಂಟ್ ಗವರ್ನರ್‌ನ ಏಕಪಕ್ಷೀಯ ನಿರ್ಧಾರ” ಎಂದು ಹೇಳಿದರು.

ಇದಕ್ಕೆ ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೆಹಲಿ ಸೇವೆಗಳ ಮಸೂದೆಯನ್ನು ಉಲ್ಲೇಖಿಸಿ, ಕೇಂದ್ರ ಗೃಹ ಸಚಿವಾಲಯವು ಈ ನೇಮಕಾತಿಗಳನ್ನು ”ತಿದ್ದುಪಡಿಗೆ ಮುಂಚೆಯೇ” ಮಾಡಿದೆ ಎಂದು ಹೇಳಿದರು. ಆದಾಗ್ಯೂ, ಸಿಂಘ್ವಿ ಅವರು, ಸಚಿವಾಲಯವು ಮಂತ್ರಿ ಮಂಡಳಿಯ ಸಲಹೆಯ ಆಧಾರದ ಮೇಲೆ ನೇಮಕಾತಿಗಳನ್ನು ಮಾಡುತ್ತದೆ ಎಂದು ಹೇಳಿದರು.

”ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಮತ್ತು ಸಿಎಂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಏಕೆ ಭೇಟಿಯಾಗುವುದಿಲ್ಲ? ಒಟ್ಟಿಗೆ ಏಕೆ ತೀರ್ಮಾಣಗಳನ್ನು ತಗೆದುಕೊಳ್ಳುವುದಿಲ್ಲ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಕೇಳಿತು. ಕಳೆದ ಬಾರಿ ಡಿಇಆರ್‌ಸಿ (ದೆಹಲಿ ವಿದ್ಯುತ್ ನಿಯಂತ್ರಣ ಆಯೋಗ) ಅಧ್ಯಕ್ಷರ ನೇಮಕಕ್ಕೆ ಅವರು ಎಂದಿಗೂ ಒಪ್ಪಲಿಲ್ಲ…” ಎಂದು ಪೀಠವು ಹೇಳಿತು.

ಗೌವರ್ನರ್ ಮತ್ತು ಕೇಂದ್ರವು ಹೆಸರುಗಳ ಫಲಕವನ್ನು ಏಕೆ ಪ್ರಸ್ತಾಪಿಸುವುದಿಲ್ಲ? ಅಂತಿಮ ಆಯ್ಕೆಯು ನೀವು ಮಾಡಿದ ಪ್ಯಾನೆಲ್‌ನಿಂದ ಆಗಿರುತ್ತದೆ. ನೀವು ಸಮಿತಿಯನ್ನು ಸೂಚಿಸುತ್ತೀರಿ. ನಂತರ ಅವರು (ದೆಹಲಿ ಸರ್ಕಾರ) ಒಂದು ಹೆಸರನ್ನು ತೆಗೆದುಕೊಳ್ಳುತ್ತಾರೆ” ಎಂದು ನ್ಯಾಯಮೂರ್ತಿ ಪ್ರಸ್ತಾಪಿಸಿದರು.

ಮೆಹ್ತಾ ಅವರು ಇದನ್ನು ಒಪ್ಪಿಕೊಂಡರು ಮತ್ತು ಅವರು ನಿರ್ದೇಶಿಸಿದಂತೆ ಶಾರ್ಟ್‌ಲಿಸ್ಟ್‌ನೊಂದಿಗೆ ಹಿಂತಿರುಗುವುದಾಗಿ ಹೇಳಿದರು.

ಇದನ್ನೂ ಓದಿ: ಅಕ್ರಮ ಆಸ್ತಿ ಪ್ರಕರಣ: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...