Homeಮುಖಪುಟಮುಖ್ಯ ಕಾರ್ಯದರ್ಶಿ ನೇಮಕ ವಿಚಾರ: ದೆಹಲಿ ಸರ್ಕಾರ-ಲೆಫ್ಟಿನೆಂಟ್ ಗವರ್ನರ್ ಜಗಳದಲ್ಲಿ ಸುಪ್ರೀಂ ಮಧ್ಯಪ್ರವೇಶ

ಮುಖ್ಯ ಕಾರ್ಯದರ್ಶಿ ನೇಮಕ ವಿಚಾರ: ದೆಹಲಿ ಸರ್ಕಾರ-ಲೆಫ್ಟಿನೆಂಟ್ ಗವರ್ನರ್ ಜಗಳದಲ್ಲಿ ಸುಪ್ರೀಂ ಮಧ್ಯಪ್ರವೇಶ

- Advertisement -
- Advertisement -

ಹೊಸ ಮುಖ್ಯ ಕಾರ್ಯದರ್ಶಿ ನೇಮಕಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ ನಡುವಿನ ಜಗಳದಲ್ಲಿ ಶುಕ್ರವಾರ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದೆ. ಮಂಗಳವಾರ ಕೇಂದ್ರ ಸರ್ಕಾರ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ನೀಡಲಿದ್ದು, ಆ ಬಗ್ಗೆ ಎರಡೂ ಕಡೆಯವರು ಸೌಹಾರ್ದಯುತವಾಗಿ ಚರ್ಚಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ದೆಹಲಿಯಲ್ಲಿ ಪ್ರಸ್ತುತ ಮುಖ್ಯ ಕಾರ್ಯದರ್ಶಿಯಾಗಿ ನರೇಶ್ ಕುಮಾರ್ ಇದ್ದಾರೆ, ಅವರು ಇದೇ ತಿಂಗಳು ನಿವೃತ್ತರಾಗುತ್ತಾರೆ ಹಾಗಾಗಿ ಹೊಸ ಅಧಿಕಾರಿಯನ್ನು ನೇಮಿಸಬೇಕು ಎಂದು ಆಮ್ ಆದ್ಮಿ ಪಕ್ಷ ನೇತೃತ್ವದ ಸರ್ಕಾರ ಹೇಳಿದೆ. ಆದರೆ ನರೇಶ್ ಕುಮಾರ್ ಅವರ ಅಧಿಕಾರಾವಧಿಯನ್ನು ವಿಸ್ತರಿಸುವುದಾಗಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಹೇಳಿದ್ದಾರೆ. ಇದರ ವಿರುದ್ಧ ದೆಹಲಿ ಸರ್ಕಾರ ನ್ಯಾಯಾಲಯದ ಮೊರೆ ಹೋಗಿದೆ.

ಅಧಿಕಾರಶಾಹಿಗಳ ಹುದ್ದೆಯ ಮೇಲೆ ಕೇಂದ್ರ ನಿಯಂತ್ರಣ ಸಾಧಿಸುವ ವಿವಾದಾತ್ಮಕ ಸುಗ್ರೀವಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಈ ಸವಾಲು ಎದುರಾಗಿತ್ತು. ದೆಹಲಿ ಸರ್ಕಾರವು ತನ್ನನ್ನು ಸಂಪರ್ಕಿಸದೆ ಅಂತಹ ನೇಮಕಾತಿಗಳನ್ನು ಮಾಡಬಾರದು ಎಂದು ವಾದಿಸಿತ್ತು.

ಇಂದಿನ ವಿಚಾರಣೆಯಲ್ಲಿ, ದೆಹಲಿ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ”…ಯಾವಾಗಲೂ ದೆಹಲಿ ಸರ್ಕಾರವೇ ನೇಮಕ ಮಾಡುತ್ತಿತ್ತು. ಈಗ ಸಾರ್ವತ್ರಿಕ ಸುಗ್ರೀವಾಜ್ಞೆ ಇದೆ… ನಾನು ಆಕ್ಷೇಪಿಸುತ್ತಿರುವುದು ಲೆಫ್ಟಿನೆಂಟ್ ಗವರ್ನರ್‌ನ ಏಕಪಕ್ಷೀಯ ನಿರ್ಧಾರ” ಎಂದು ಹೇಳಿದರು.

ಇದಕ್ಕೆ ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೆಹಲಿ ಸೇವೆಗಳ ಮಸೂದೆಯನ್ನು ಉಲ್ಲೇಖಿಸಿ, ಕೇಂದ್ರ ಗೃಹ ಸಚಿವಾಲಯವು ಈ ನೇಮಕಾತಿಗಳನ್ನು ”ತಿದ್ದುಪಡಿಗೆ ಮುಂಚೆಯೇ” ಮಾಡಿದೆ ಎಂದು ಹೇಳಿದರು. ಆದಾಗ್ಯೂ, ಸಿಂಘ್ವಿ ಅವರು, ಸಚಿವಾಲಯವು ಮಂತ್ರಿ ಮಂಡಳಿಯ ಸಲಹೆಯ ಆಧಾರದ ಮೇಲೆ ನೇಮಕಾತಿಗಳನ್ನು ಮಾಡುತ್ತದೆ ಎಂದು ಹೇಳಿದರು.

”ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಮತ್ತು ಸಿಎಂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಏಕೆ ಭೇಟಿಯಾಗುವುದಿಲ್ಲ? ಒಟ್ಟಿಗೆ ಏಕೆ ತೀರ್ಮಾಣಗಳನ್ನು ತಗೆದುಕೊಳ್ಳುವುದಿಲ್ಲ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಕೇಳಿತು. ಕಳೆದ ಬಾರಿ ಡಿಇಆರ್‌ಸಿ (ದೆಹಲಿ ವಿದ್ಯುತ್ ನಿಯಂತ್ರಣ ಆಯೋಗ) ಅಧ್ಯಕ್ಷರ ನೇಮಕಕ್ಕೆ ಅವರು ಎಂದಿಗೂ ಒಪ್ಪಲಿಲ್ಲ…” ಎಂದು ಪೀಠವು ಹೇಳಿತು.

ಗೌವರ್ನರ್ ಮತ್ತು ಕೇಂದ್ರವು ಹೆಸರುಗಳ ಫಲಕವನ್ನು ಏಕೆ ಪ್ರಸ್ತಾಪಿಸುವುದಿಲ್ಲ? ಅಂತಿಮ ಆಯ್ಕೆಯು ನೀವು ಮಾಡಿದ ಪ್ಯಾನೆಲ್‌ನಿಂದ ಆಗಿರುತ್ತದೆ. ನೀವು ಸಮಿತಿಯನ್ನು ಸೂಚಿಸುತ್ತೀರಿ. ನಂತರ ಅವರು (ದೆಹಲಿ ಸರ್ಕಾರ) ಒಂದು ಹೆಸರನ್ನು ತೆಗೆದುಕೊಳ್ಳುತ್ತಾರೆ” ಎಂದು ನ್ಯಾಯಮೂರ್ತಿ ಪ್ರಸ್ತಾಪಿಸಿದರು.

ಮೆಹ್ತಾ ಅವರು ಇದನ್ನು ಒಪ್ಪಿಕೊಂಡರು ಮತ್ತು ಅವರು ನಿರ್ದೇಶಿಸಿದಂತೆ ಶಾರ್ಟ್‌ಲಿಸ್ಟ್‌ನೊಂದಿಗೆ ಹಿಂತಿರುಗುವುದಾಗಿ ಹೇಳಿದರು.

ಇದನ್ನೂ ಓದಿ: ಅಕ್ರಮ ಆಸ್ತಿ ಪ್ರಕರಣ: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...