Homeಕರ್ನಾಟಕಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

- Advertisement -
- Advertisement -

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರದ ಗ್ರಾಮದಲ್ಲಿ ಖಮೇನಿ ಸಮುದಾಯದ ಶಿಯಾ ಮುಸ್ಲಿಮರೆ ಸುಮಾರು 25 ಸಾವಿರಕ್ಕೂ ಹೆಚ್ಚಿನ ಜನರಿದ್ದಾರೆ.

ಖಮೇನಿ ಹತ್ಯೆ ಸುದ್ದಿ ಖಚಿತವಾಗುತ್ತಿದ್ದಂತೆಯೇ ಗ್ರಾಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ ಮಾಡಿದರು. ಅಮೇರಿಕ ಮತ್ತು ಇಸ್ರೇಲ್‌ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಣ್ಣೀರು ಹಾಕುತ್ತಿರುವ ಅಲ್ಲಿಪುರದ ಜನ

ಖಮೇನಿ ಹತ್ಯೆಗೆ ಅಲಿಪುರ ಗ್ರಾಮದ ಪ್ರತಿಯೊಬ್ಬರು ಕಣ್ಣೀರು ಹಾಕುತ್ತಿದ್ದಾರೆ, ಪ್ರತಿ ಮನೆಯಲ್ಲೂ ಶೋಕ ಆವರಿಸಿದೆ. ನೂರಾರು ಜನರು ಇರಾನ್‌ನಲ್ಲಿ ಉದ್ಯಮ ನಡೆಸುತ್ತಿದ್ದು, ಹಲವರು ಅಲ್ಲಿ ಓದು ಮತ್ತು ಉದ್ಯೋಗ ಮಾಡುತ್ತಿದ್ದಾರೆ.

ಕಪ್ಪು ಬಟ್ಟೆ ಧರಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಜನರು, ಅಮೇರಿಕ ಹಾಗೂ ಇಸ್ರೇಲ್ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಖಮೇನಿ ಅವರದ್ದು ಹತ್ಯೆಯಲ್ಲ ಇದು ಬಲಿದಾನ; ಇದು ಅಂತ್ಯ ಅಲ್ಲ ಆರಂಭ ಎಂದು ಕೂಗಿದರು.

ಗ್ರಾಮಕ್ಕೆ ಭೇಟಿ ನೀಡಿದ್ದ ಖಮೇನಿ

1981ರಲ್ಲಿ ಭಾರತ ಪ್ರವಾಸದ ಸಮಯದಲ್ಲಿ ಖಮೇನಿ ಸ್ವತಃ ಈ ಗ್ರಾಮಕ್ಕೆ ಭೇಟಿ ನೀಡಿದ್ದರು. ಆಗ ಅವರಿನ್ನೂ ಇರಾನಿನ ಪರಮೋಚ್ಚ ನಾಯಕ ಆಗಿರಲಿಲ್ಲ. ಅವರು ಗ್ರಾಮಕ್ಕೆ ಆಗಮಿಸಿದ್ದರ ನೆನಪು ಸ್ಥಳೀಯರಲ್ಲಿ ಇನ್ನೂ ಹಸಿರಾಗಿದೆ. 

ಇರಾನಿನ ಬೆಂಬಲದೊಂದಿಗೆ ಅಲಿಪುರದಲ್ಲಿ ನಿರ್ಮಿಸಲಾದ ಆಸ್ಪತ್ರೆಯನ್ನು ಖಮೇನಿ ಉದ್ಘಾಟಿಸಿದ್ದರು. ಬಳಿಕ ಅಲ್ಲಿಯ ವಿದ್ವಾಂಸರು ಮತ್ತು ನಿವಾಸಿಗಳೊಂದಿಗೆ ಸಮಯ ಕಳೆದಿದ್ದು, ಸಮುದಾಯ ಮತ್ತು ಇರಾನ್ ನಡುವಿನ ಆಜೀವ ಬಾಂಧವ್ಯವನ್ನು ಬಲಪಡಿಸಿದ್ದರು ಎಂಬುದನ್ನು ಸ್ಥಳೀಯರು ನೆನಪಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಇಲ್ಲಿನ ಸುಮಾರು 25ಸಾವಿರಕ್ಕೂ ಅಧಿಕ ಶಿಯಾ ಮುಸ್ಲಿಂ ಪಂಗಡದವರು ಖಮೇನಿಯವರನ್ನು ತಮ್ಮ ಧರ್ಮಗುರು ಎಂದು ಭಾವಿಸುತ್ತಾರೆ.

ಅಲಿಪುರ ಪರಿಚಯ

ಅಲಿಪುರ ಒಂದು ಸಣ್ಣ ಮತ್ತು ವಿಶಿಷ್ಟ ಹಳ್ಳಿಯಾಗಿದ್ದು, ಇದು ಪ್ರವಾಸಿಗರನ್ನು ಸೆಳೆಯುತ್ತಿದೆ. ಇಶಿಯಾ ಸಂಸ್ಕೃತಿಯನ್ನು ಆಚರಿಸುತ್ತಾ ಭಾರತದಲ್ಲಿ ನೆಲೆಗೊಂಡಿರುವ ಈ ಗ್ರಾಮವು ತನ್ನ ವಿಶಿಷ್ಟ ಲಕ್ಷಣಕ್ಕಾಗಿ ಗಮನ ಸೆಳೆದಿದೆ. ಇದರ ಬಹುಪಾಲು ನಿವಾಸಿಗಳು ಶಿಯಾ ಮುಸ್ಲಿಮರು, 30,000 ಕ್ಕೂ ಹೆಚ್ಚು ಜನರಿದ್ದಾರೆ. ಇಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಜನಸಂಖ್ಯೆಯು ಅಲ್ಪಸಂಖ್ಯಾತವಾಗಿದೆ.

ಅಲಿಪುರವನ್ನು “ದಕ್ಷಿಣ ಭಾರತದ ರತ್ನಗಳ ಗ್ರಾಮ” ಎಂದು ಕರೆಯಲಾಗುತ್ತದೆ. ಈ ಗ್ರಾಮವು ಜೋಳ, ಸೂರ್ಯಕಾಂತಿ, ದ್ವಿದಳ ಧಾನ್ಯಗಳು, ತರಕಾರಿಗಳು ಮತ್ತು ಹಣ್ಣುಗಳಂತಹ ಬೆಳೆಗಳನ್ನು ಬೆಳೆಯುತ್ತಾರೆ.

ರಾಜ್ಯ 94 ರಲ್ಲಿರುವ ಅಲಿಪುರವು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 55 ಕಿ.ಮೀ ದೂರದಲ್ಲಿದೆ. ಬೆಂಗಳೂರಿನಿಂದ 70 ಕಿ.ಮೀ ದೂರದಲ್ಲಿದೆ. ಇದು ಬೆಂಗಳೂರು, ದೊಡ್ಡಬಳ್ಳಾಪುರ, ಗೌರಿಬಿದನೂರು, ಹಿಂದೂಪುರ ಮತ್ತು ತುಮಕೂರು ಮುಂತಾದ ಹತ್ತಿರದ ಪಟ್ಟಣಗಳು ​​ಮತ್ತು ನಗರಗಳಿಗೆ ರಸ್ತೆಯ ಮೂಲಕ ಉತ್ತಮ ಸಂಪರ್ಕ ಹೊಂದಿದೆ.

ಧಾರ್ಮಿಕ ವೈವಿಧ್ಯತೆ ಮತ್ತು ಸಾಮರಸ್ಯ

ಅಲಿಪುರ್ ಧಾರ್ಮಿಕ ವೈವಿಧ್ಯತೆ ಮತ್ತು ಸಾಮರಸ್ಯವನ್ನು ಆಚರಿಸುವ ಒಂದು ಹಳ್ಳಿಯಾಗಿದೆ. ಇದು ಮಸೀದಿಗಳು, ಅಶುರ್ ಖಾನಗಳು, ದೇವಾಲಯಗಳು ಮತ್ತು ಚರ್ಚ್‌ನಂತಹ ವಾಸ್ತುಶಿಲ್ಪದ ಅದ್ಭುತಗಳನ್ನು ಹೊಂದಿದೆ. ಇತ್ತೀಚಿನ ವರ್ಷಗಳಲ್ಲಿ, ಇದು ಜಿಲ್ಲೆಯ ಶೈಕ್ಷಣಿಕ ಕೇಂದ್ರವಾಗಿ ಮಾರ್ಪಟ್ಟಿದೆ, ಗ್ರಾಮದೊಳಗೆ ಹಲವಾರು ಶಾಲೆಗಳು ಮತ್ತು ಕಾಲೇಜುಗಳಿವೆ. ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಇತರ ಸಣ್ಣ ಮುಸ್ಲಿಂ ಪಂಗಡಗಳ ವೈವಿಧ್ಯಮಯ ಜನಸಂಖ್ಯೆಯನ್ನು ಹೊಂದಿದ್ದರೂ, ಗ್ರಾಮಸ್ಥರು ತಮ್ಮ ಧಾರ್ಮಿಕ ಸಂಘಗಳ ಬಗ್ಗೆ ಪರಸ್ಪರ ತಿಳುವಳಿಕೆಯೊಂದಿಗೆ ಶಾಂತಿಯುತವಾಗಿ ಬದುಕುತ್ತಾರೆ.

ಅಲಿಪುರದಲ್ಲಿ ಪೊಲೀಸ್ ಠಾಣೆ ಇಲ್ಲದಿರುವುದು ಗಮನಿಸಬೇಕಾದ ಸಂಗತಿ. ಬದಲಾಗಿ, ಸರ್ವೋಚ್ಚ ಸಂಸ್ಥೆ ಅಂಜುಮನ್ ಇ ಜಾಫ್ರಿಯಾ 1930 ರಲ್ಲಿ ಅಲಿಪುರದ ಪೋಷಕರು ಸ್ಥಾಪಿಸಿದ ಉಪ-ಕಾನೂನುಗಳ ಪ್ರಕಾರ ಸಮಸ್ಯೆಗಳನ್ನು ಪರಿಹರಿಸುತ್ತದೆ. ಇದನ್ನು ಮೌಲಾನಾ ಅಬ್ಬಾಸ್ ಹುಸೇನ್ ಬಕ್ರಿ ಸಾಹಿಬ್ ನೇತೃತ್ವ ವಹಿಸಿದ್ದರು. ಪ್ರತಿ ಮೂರು ವರ್ಷಗಳಿಗೊಮ್ಮೆ ಬದಲಾಗುವ ಈ ಸಂಸ್ಥೆ (ಅಂಜುಮನ್ ಇ ಜಾಫ್ರಿಯಾ), ಒಬ್ಬ ಅಧ್ಯಕ್ಷ ಮತ್ತು ಕಾರ್ಯದರ್ಶಿಯನ್ನು ಹೊಂದಿದ್ದು, ಅಲಿಪುರದ ವಿವಿಧ ಇಲಾಖೆಗಳನ್ನು ನಿರ್ವಹಿಸಲು ಸದಸ್ಯರನ್ನು ನಿಯೋಜಿಸಲಾಗಿದೆ. ಇಸ್ಲಾಮಿಕ್ ನಿಯಮಗಳು ಮತ್ತು ಭಾರತೀಯ ಸಂವಿಧಾನವನ್ನು ಅನುಸರಿಸುವಾಗ ಉಪ-ಕಾನೂನುಗಳನ್ನು ಶ್ರೀ ದಿವಂಗತ ಮೀರ್ ಮುಸ್ತಾಕ್ ಅಲಿ ಬರೆದಿದ್ದಾರೆ ಮತ್ತು ಅವು ಅಲಿಪುರದ ಕಾರ್ಯನಿರ್ವಹಣೆಗೆ ಮಾರ್ಗದರ್ಶಿ ತತ್ವಗಳಾಗಿ ಕಾರ್ಯನಿರ್ವಹಿಸುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...