Homeಕರ್ನಾಟಕಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

- Advertisement -
- Advertisement -

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರದ ಗ್ರಾಮದಲ್ಲಿ ಖಮೇನಿ ಸಮುದಾಯದ ಶಿಯಾ ಮುಸ್ಲಿಮರೆ ಸುಮಾರು 25 ಸಾವಿರಕ್ಕೂ ಹೆಚ್ಚಿನ ಜನರಿದ್ದಾರೆ.

ಖಮೇನಿ ಹತ್ಯೆ ಸುದ್ದಿ ಖಚಿತವಾಗುತ್ತಿದ್ದಂತೆಯೇ ಗ್ರಾಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ ಮಾಡಿದರು. ಅಮೇರಿಕ ಮತ್ತು ಇಸ್ರೇಲ್‌ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಣ್ಣೀರು ಹಾಕುತ್ತಿರುವ ಅಲ್ಲಿಪುರದ ಜನ

ಖಮೇನಿ ಹತ್ಯೆಗೆ ಅಲಿಪುರ ಗ್ರಾಮದ ಪ್ರತಿಯೊಬ್ಬರು ಕಣ್ಣೀರು ಹಾಕುತ್ತಿದ್ದಾರೆ, ಪ್ರತಿ ಮನೆಯಲ್ಲೂ ಶೋಕ ಆವರಿಸಿದೆ. ನೂರಾರು ಜನರು ಇರಾನ್‌ನಲ್ಲಿ ಉದ್ಯಮ ನಡೆಸುತ್ತಿದ್ದು, ಹಲವರು ಅಲ್ಲಿ ಓದು ಮತ್ತು ಉದ್ಯೋಗ ಮಾಡುತ್ತಿದ್ದಾರೆ.

ಕಪ್ಪು ಬಟ್ಟೆ ಧರಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಜನರು, ಅಮೇರಿಕ ಹಾಗೂ ಇಸ್ರೇಲ್ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಖಮೇನಿ ಅವರದ್ದು ಹತ್ಯೆಯಲ್ಲ ಇದು ಬಲಿದಾನ; ಇದು ಅಂತ್ಯ ಅಲ್ಲ ಆರಂಭ ಎಂದು ಕೂಗಿದರು.

ಗ್ರಾಮಕ್ಕೆ ಭೇಟಿ ನೀಡಿದ್ದ ಖಮೇನಿ

1981ರಲ್ಲಿ ಭಾರತ ಪ್ರವಾಸದ ಸಮಯದಲ್ಲಿ ಖಮೇನಿ ಸ್ವತಃ ಈ ಗ್ರಾಮಕ್ಕೆ ಭೇಟಿ ನೀಡಿದ್ದರು. ಆಗ ಅವರಿನ್ನೂ ಇರಾನಿನ ಪರಮೋಚ್ಚ ನಾಯಕ ಆಗಿರಲಿಲ್ಲ. ಅವರು ಗ್ರಾಮಕ್ಕೆ ಆಗಮಿಸಿದ್ದರ ನೆನಪು ಸ್ಥಳೀಯರಲ್ಲಿ ಇನ್ನೂ ಹಸಿರಾಗಿದೆ. 

ಇರಾನಿನ ಬೆಂಬಲದೊಂದಿಗೆ ಅಲಿಪುರದಲ್ಲಿ ನಿರ್ಮಿಸಲಾದ ಆಸ್ಪತ್ರೆಯನ್ನು ಖಮೇನಿ ಉದ್ಘಾಟಿಸಿದ್ದರು. ಬಳಿಕ ಅಲ್ಲಿಯ ವಿದ್ವಾಂಸರು ಮತ್ತು ನಿವಾಸಿಗಳೊಂದಿಗೆ ಸಮಯ ಕಳೆದಿದ್ದು, ಸಮುದಾಯ ಮತ್ತು ಇರಾನ್ ನಡುವಿನ ಆಜೀವ ಬಾಂಧವ್ಯವನ್ನು ಬಲಪಡಿಸಿದ್ದರು ಎಂಬುದನ್ನು ಸ್ಥಳೀಯರು ನೆನಪಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಇಲ್ಲಿನ ಸುಮಾರು 25ಸಾವಿರಕ್ಕೂ ಅಧಿಕ ಶಿಯಾ ಮುಸ್ಲಿಂ ಪಂಗಡದವರು ಖಮೇನಿಯವರನ್ನು ತಮ್ಮ ಧರ್ಮಗುರು ಎಂದು ಭಾವಿಸುತ್ತಾರೆ.

ಅಲಿಪುರ ಪರಿಚಯ

ಅಲಿಪುರ ಒಂದು ಸಣ್ಣ ಮತ್ತು ವಿಶಿಷ್ಟ ಹಳ್ಳಿಯಾಗಿದ್ದು, ಇದು ಪ್ರವಾಸಿಗರನ್ನು ಸೆಳೆಯುತ್ತಿದೆ. ಇಶಿಯಾ ಸಂಸ್ಕೃತಿಯನ್ನು ಆಚರಿಸುತ್ತಾ ಭಾರತದಲ್ಲಿ ನೆಲೆಗೊಂಡಿರುವ ಈ ಗ್ರಾಮವು ತನ್ನ ವಿಶಿಷ್ಟ ಲಕ್ಷಣಕ್ಕಾಗಿ ಗಮನ ಸೆಳೆದಿದೆ. ಇದರ ಬಹುಪಾಲು ನಿವಾಸಿಗಳು ಶಿಯಾ ಮುಸ್ಲಿಮರು, 30,000 ಕ್ಕೂ ಹೆಚ್ಚು ಜನರಿದ್ದಾರೆ. ಇಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಜನಸಂಖ್ಯೆಯು ಅಲ್ಪಸಂಖ್ಯಾತವಾಗಿದೆ.

ಅಲಿಪುರವನ್ನು “ದಕ್ಷಿಣ ಭಾರತದ ರತ್ನಗಳ ಗ್ರಾಮ” ಎಂದು ಕರೆಯಲಾಗುತ್ತದೆ. ಈ ಗ್ರಾಮವು ಜೋಳ, ಸೂರ್ಯಕಾಂತಿ, ದ್ವಿದಳ ಧಾನ್ಯಗಳು, ತರಕಾರಿಗಳು ಮತ್ತು ಹಣ್ಣುಗಳಂತಹ ಬೆಳೆಗಳನ್ನು ಬೆಳೆಯುತ್ತಾರೆ.

ರಾಜ್ಯ 94 ರಲ್ಲಿರುವ ಅಲಿಪುರವು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 55 ಕಿ.ಮೀ ದೂರದಲ್ಲಿದೆ. ಬೆಂಗಳೂರಿನಿಂದ 70 ಕಿ.ಮೀ ದೂರದಲ್ಲಿದೆ. ಇದು ಬೆಂಗಳೂರು, ದೊಡ್ಡಬಳ್ಳಾಪುರ, ಗೌರಿಬಿದನೂರು, ಹಿಂದೂಪುರ ಮತ್ತು ತುಮಕೂರು ಮುಂತಾದ ಹತ್ತಿರದ ಪಟ್ಟಣಗಳು ​​ಮತ್ತು ನಗರಗಳಿಗೆ ರಸ್ತೆಯ ಮೂಲಕ ಉತ್ತಮ ಸಂಪರ್ಕ ಹೊಂದಿದೆ.

ಧಾರ್ಮಿಕ ವೈವಿಧ್ಯತೆ ಮತ್ತು ಸಾಮರಸ್ಯ

ಅಲಿಪುರ್ ಧಾರ್ಮಿಕ ವೈವಿಧ್ಯತೆ ಮತ್ತು ಸಾಮರಸ್ಯವನ್ನು ಆಚರಿಸುವ ಒಂದು ಹಳ್ಳಿಯಾಗಿದೆ. ಇದು ಮಸೀದಿಗಳು, ಅಶುರ್ ಖಾನಗಳು, ದೇವಾಲಯಗಳು ಮತ್ತು ಚರ್ಚ್‌ನಂತಹ ವಾಸ್ತುಶಿಲ್ಪದ ಅದ್ಭುತಗಳನ್ನು ಹೊಂದಿದೆ. ಇತ್ತೀಚಿನ ವರ್ಷಗಳಲ್ಲಿ, ಇದು ಜಿಲ್ಲೆಯ ಶೈಕ್ಷಣಿಕ ಕೇಂದ್ರವಾಗಿ ಮಾರ್ಪಟ್ಟಿದೆ, ಗ್ರಾಮದೊಳಗೆ ಹಲವಾರು ಶಾಲೆಗಳು ಮತ್ತು ಕಾಲೇಜುಗಳಿವೆ. ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಇತರ ಸಣ್ಣ ಮುಸ್ಲಿಂ ಪಂಗಡಗಳ ವೈವಿಧ್ಯಮಯ ಜನಸಂಖ್ಯೆಯನ್ನು ಹೊಂದಿದ್ದರೂ, ಗ್ರಾಮಸ್ಥರು ತಮ್ಮ ಧಾರ್ಮಿಕ ಸಂಘಗಳ ಬಗ್ಗೆ ಪರಸ್ಪರ ತಿಳುವಳಿಕೆಯೊಂದಿಗೆ ಶಾಂತಿಯುತವಾಗಿ ಬದುಕುತ್ತಾರೆ.

ಅಲಿಪುರದಲ್ಲಿ ಪೊಲೀಸ್ ಠಾಣೆ ಇಲ್ಲದಿರುವುದು ಗಮನಿಸಬೇಕಾದ ಸಂಗತಿ. ಬದಲಾಗಿ, ಸರ್ವೋಚ್ಚ ಸಂಸ್ಥೆ ಅಂಜುಮನ್ ಇ ಜಾಫ್ರಿಯಾ 1930 ರಲ್ಲಿ ಅಲಿಪುರದ ಪೋಷಕರು ಸ್ಥಾಪಿಸಿದ ಉಪ-ಕಾನೂನುಗಳ ಪ್ರಕಾರ ಸಮಸ್ಯೆಗಳನ್ನು ಪರಿಹರಿಸುತ್ತದೆ. ಇದನ್ನು ಮೌಲಾನಾ ಅಬ್ಬಾಸ್ ಹುಸೇನ್ ಬಕ್ರಿ ಸಾಹಿಬ್ ನೇತೃತ್ವ ವಹಿಸಿದ್ದರು. ಪ್ರತಿ ಮೂರು ವರ್ಷಗಳಿಗೊಮ್ಮೆ ಬದಲಾಗುವ ಈ ಸಂಸ್ಥೆ (ಅಂಜುಮನ್ ಇ ಜಾಫ್ರಿಯಾ), ಒಬ್ಬ ಅಧ್ಯಕ್ಷ ಮತ್ತು ಕಾರ್ಯದರ್ಶಿಯನ್ನು ಹೊಂದಿದ್ದು, ಅಲಿಪುರದ ವಿವಿಧ ಇಲಾಖೆಗಳನ್ನು ನಿರ್ವಹಿಸಲು ಸದಸ್ಯರನ್ನು ನಿಯೋಜಿಸಲಾಗಿದೆ. ಇಸ್ಲಾಮಿಕ್ ನಿಯಮಗಳು ಮತ್ತು ಭಾರತೀಯ ಸಂವಿಧಾನವನ್ನು ಅನುಸರಿಸುವಾಗ ಉಪ-ಕಾನೂನುಗಳನ್ನು ಶ್ರೀ ದಿವಂಗತ ಮೀರ್ ಮುಸ್ತಾಕ್ ಅಲಿ ಬರೆದಿದ್ದಾರೆ ಮತ್ತು ಅವು ಅಲಿಪುರದ ಕಾರ್ಯನಿರ್ವಹಣೆಗೆ ಮಾರ್ಗದರ್ಶಿ ತತ್ವಗಳಾಗಿ ಕಾರ್ಯನಿರ್ವಹಿಸುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...