Homeಕರ್ನಾಟಕಚಿಕ್ಕಬಳ್ಳಾಪುರ ಸ್ಪೋಟ- ಪ್ರಧಾನಿ ಮೋದಿ ಸೇರಿದಂತೆ ಹಲವರ ಸಂತಾಪ

ಚಿಕ್ಕಬಳ್ಳಾಪುರ ಸ್ಪೋಟ- ಪ್ರಧಾನಿ ಮೋದಿ ಸೇರಿದಂತೆ ಹಲವರ ಸಂತಾಪ

ಮಂಗಳವಾರ ಚಿಕ್ಕಬಳ್ಳಾಪುರದ ಕ್ರಷರ್‌ಗೆ ಅಕ್ರಮವಾಗಿ ಸಾಗಿಸುತ್ತಿದ್ದ ಜಿಲೆಟಿನ್ ಸ್ಪೋಟಗೊಂಡು ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ

- Advertisement -
- Advertisement -

ಮಂಗಳವಾರ ಚಿಕ್ಕಬಳ್ಳಾಪುರದ ಕ್ರಷರ್‌ಗೆ ಅಕ್ರಮವಾಗಿ ಸಾಗಿಸುತ್ತಿದ್ದ ಜಿಲೆಟಿನ್ ಸ್ಪೋಟಗೊಂಡು ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌ ಘಟನೆಗೆ ಸರ್ಕಾರದ ಅಸಡ್ಡೆಯೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ, “ಕರ್ನಾಟಕದ ಚಿಕ್ಕಬಲ್ಲಾಪುರದಲ್ಲಿ ಸಂಭವಿಸಿದ ಅಪಘಾತದಿಂದಾದ ಪ್ರಾಣಹಾನಿ ನೋವು ತಂದಿದೆ. ದುಃಖಿತ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸುತ್ತಿದ್ದು, ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ, “ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭಾರಿ ಸ್ಫೋಟ- 6 ಕಾರ್ಮಿಕರು ಸಾವು; ಮೂವರು ಗಂಭೀರ

ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಕೆ. ಸುಧಾಕರ್‌, “ಜಿಲೆಟಿನ್ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಇದು ಅತ್ಯಂತ ವಿಷಾದಕರ ಘಟನೆಯಾಗಿದ್ದು, ಕಾನೂನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯ ಜೊತೆ ಘಟನಾ ಸ್ಥಳದಿಂದಲೇ ದೂರವಾಣಿ ಮೂಲಕ ಮಾತನಾಡಿದ್ದೇನೆ. ಪೊಲೀಸ್ ಅಧಿಕಾರಿಗಳು ಈಗಾಗಲೇ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ಕಲ್ಲುಗಣಿಯಲ್ಲಿನ ಸ್ಫೋಟಕ್ಕೆ ಯಡಿಯೂರಪ್ಪ, ಈಶ್ವರಪ್ಪನವರೇ ಕಾರಣ 

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು, “ಸ್ಫೋಟದಲ್ಲಿ 6 ಅಮಾಯಕ ಜೀವಗಳ ಬಲಿಗೆ ರಾಜ್ಯ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ. ಒಂದೇ ತಿಂಗಳಲ್ಲಿ ಎರಡನೇ ಬಾರಿ ಇಂತಹ ದುರ್ಘಟನೆ ನಡೆದಿದ್ದು, ಆಂತರಿಕ ಸಮಸ್ಯೆಯಲ್ಲಿ ಯಡಿಯೂರಪ್ಪ ಸರ್ಕಾರ ಮೈಮರೆತಿದೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ತಪ್ಪಿತಸ್ಥರ ವಿರುದ್ಧ ನಿಜವಾಗಿಯೂ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಸಚಿವ ಮುಗುಗೇಶ ನಿರಾಣಿ ಅವರು, “ಶಿವಮೊಗ್ಗ ಸ್ಫೋಟದ ನಂತರ ಇಂತಹ ಘಟನೆ ನಡೆದಿರುವುದು ತುಂಬಾ ದುರದೃಷ್ಟಕರ. ಸರ್ಕಾರ ಸೂಕ್ತ ತನಿಖೆ ನಡೆಸಿ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಇದರಲ್ಲಿ ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರಿಗುಸುತ್ತೇವೆ. ಎಷ್ಟೇ ಪ್ರಭಾವಿಗಳಗಾಗಿದ್ದರೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಳ್ಳು ಹೇಳಿದ ಬಾಬಾ ರಾಮ್‌ದೇವ್! – ಪತಂಜಲಿ ಕೊರೊನಿಲ್ ಕುರಿತು ಐಎಂಎ ಆಕ್ರೋಶ

ಚಾಮರಾಜ ಪೇಟೆ ಶಾಸಕ ಜಮೀರ್‌ ಅಹ್ಮರ್‌ ಅವರು, “ಜಿಲೆಟಿನ್ ಸ್ಪೋಟಗೊಂಡು 6 ಮಂದಿ ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...