Homeಕರ್ನಾಟಕಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

ಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

- Advertisement -
- Advertisement -

ರಸ್ತೆಯಲ್ಲಿ ಲಾರಿಗಳ ಓಡಾಟದ ವಿಚಾರವಾಗಿ ನಡೆದ ವಾಗ್ವಾದದ ವೇಳೆ ಗಣಿ ಮಾಲಿಕ ಹಾಡಹಗಲೆ ಕ್ಯಾಮೆರಾ ಮುಂದೆಯೆ ರೈತರೊಬ್ಬರನ್ನು ಗುಂಡಿಕ್ಕಿದ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ಬುಧವಾರ ನಡೆದಿದೆ. ಘಟನೆಯ ವಿಡಿಯೊ ಇದೀಗ ವೈರಲ್ ಆಗಿದ್ದು ವ್ಯಾಪಕ ಆಕ್ರೋಶ ಹುಟ್ಟುಹಾಕಿದೆ. ಮಾಜಿ MLC ಒಬ್ಬರ ಸಂಬಂಧಿಕರ ಮಾಲೀಕತ್ವದ ಕ್ರಷರ್ ಕಂಪನಿಗಾಗಿ ಇದನ್ನು ಮಾಡಲಾಗಿದೆ ಎಂದು ಅರೋಪಿಸಲಾಗಿದೆ. ಚಿಕ್ಕಬಳ್ಳಾಪುರ

ಗಣಿಗಾರಿಕೆ ಲಾರಿಗಳ ಓಡಾಟ ಮತ್ತು ರಸ್ತೆ ನಿರ್ಮಾಣ ವಿರೋಧಿಸಿ ಫೆಬ್ರುವರಿಯಲ್ಲಿ ಮಂಚೇನಹಳ್ಳಿಯಲ್ಲಿ ರೈತ ಸಂಘ, ಮಂಚೇನಹಳ್ಳಿ ತಾಲ್ಲೂಕು ಪರಿಸರ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟಿಸಿದ್ದರು. ಈ ವೇಳೆ ಬೆಟ್ಟದ ತಪ್ಪಲಿನಲ್ಲಿ ಮುನೇಶ್ವರ ಗುಡಿ, ತಿಮ್ಮರಾಯನಗುಡಿ ಇದೆ. ಸ್ವಚ್ಛಗಾಳಿ, ನೀರು, ಮೇವು ನೀಡುತ್ತಿರುವ ನಮ್ಮ ಊರಿನ ಬೆಟ್ಟ ಗುಡ್ಡಗಳಲ್ಲಿ ಗಣಿಗಾರಿಕೆ ಮಾಡಲು ಬಿಡುವುದಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದರು. ದಾರಿ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿ ಸಭೆಗಳು ಸಹ ನಡೆದಿದ್ದವು ಎಂದು ಪ್ರಜಾವಾಣಿ ವರದಿ ಮಾಡಿದೆ.

ಅದಾಗ್ಯೂ, ಬುಧವಾರ ಗಣಿ ಮಾಲಿಕ ಸಕಲೇಶ್ ಮತ್ತು ಆತನ ಕಡೆಯವರು ಜೆಸಿಬಿಗಳ ಮೂಲಕ ರಸ್ತೆ ನಿರ್ಮಿಸಲು ಮುಂದಾಗಿದ್ದರು. ಈ ವೇಳೆ ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಆರೋಪಿ ಸಕಲೇಶ್, ರಿವಾಲ್ವರ್ ಹಿಡಿದು ‘ಯಾರು ಬರುತ್ತಿರೊ ಬರ್ರೊ’ ಎನ್ನುತ್ತ ರೈತ ರವಿ ಮೇಲೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.

ಮಂಚೇನಹಳ್ಳಿ ತಾಲ್ಲೂಕಿನ ಬಂಡಿರಾಮನಹಳ್ಳಿ, ಕನಗಾನಕೊಪ್ಪ, ರಾಯನಕಲ್ಲು ಗ್ರಾಮಗಳ ಸಮೀಪದ ಬೆಟ್ಟಗುಡ್ಡಗಳಲ್ಲಿ ಕಲ್ಲುಗಣಿಗಾರಿಕೆ ಹಾಗೂ ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ದಾರಿ ಮಾಡುವ ವಿಚಾರವಾಗಿ ಈ ಗಲಾಟೆ ನಡೆದಿತ್ತು ಎಂದು ವರದಿಯಾಗಿದೆ. ಗುಂಡಿನ ದಾಳಿಯಿಂದಾಗಿ ರೈತ ರವಿ ಅವರ ತೊಡೆಗೆ ಗಾಯಗಾಳಾಗಿವೆ ಎಂದು ವರದಿಯಾಗಿದೆ.

ಗಾಯಾಳುವನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಚೇನಹಳ್ಳಿ ಮತ್ತು ಗೌರಿಬಿದನೂರು ಪೊಲೀಸರು ಭೇಟಿ ನೀಡಿದ್ದು ಬಿಗುವಿನ ವಾತಾವರಣವಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇಡೀ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಶ್ರೀನಿವಾಸ್ ಸಿ.ವಿ., ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾನೂನು ಸು ವ್ಯವಸ್ಥೆ ಇದೆಯೋ ಸತ್ತು ಹೋಗಿದೆಯೆ? ಎಂದು ಪ್ರಶ್ನಿಸಿದ್ದಾರೆ.

“ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನಲ್ಲಿ ಮಟ ಮಟ ಮಧ್ಯಾಹ್ನ ಹಾಡು ಆಗಲೇ ಅನ್ನದಾತನ ಮೇಲೆ ಗುಂಡಿನ ಸುರಿಮಳೆ ನಡೆಯುತ್ತಿದೆ. ಪೊಲೀಸ್ ಇಲಾಖೆಯ ಮೇಲೆ ಇದ್ದಂತಹ ನಂಬಿಕೆ ರೈತಾಪಿ ವರ್ಗಕ್ಕೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಇದಕ್ಕೆ ಕಾರಣ ಕಳೆದ ಐದಾರು ವರ್ಷಗಳಿಂದ ಇದೇ ಗ್ರಾಮದ ರೈತಾಪಿ ವರ್ಗ ಮತ್ತು ಕ್ರೇಶರ್ ಮಾಲೀಕರ ನಡುವೆ ನಡೆಯುತ್ತಿದ್ದಂತಹ ಗಲಾಟೆ ವಾಕ್ಸಮರಗಳು. ಇಂದು ಬಂದೂಕಿನ ಗುಂಡಿನ ಸದ್ದಿನವರಿಗೂ ಕಾಲಿಟ್ಟಿದೆ ಎಂದರೆ ಬೇಸರವಾಗುತ್ತದೆ ಮತ್ತು ಅಸಹ್ಯವಾಗುತ್ತದೆ” ಎಂದು ಹೇಳಿದ್ದಾರೆ.

“ಮಾಜಿ MLC ಒಬ್ಬರ ಸಂಬಂಧಿಕರ ಮಾಲೀಕತ್ವದ ಕ್ರಷರ್ ಕಂಪನಿಗೆ ಇಲ್ಲಿನ ಎಲ್ಲಾ ಇಲಾಖೆಯ ಆಡಳಿತ ವ್ಯವಸ್ಥೆಗಳು ಒಂದಾಗಿ ನೇರವಾಗಿ ಮತ್ತು ಪರೋಕ್ಷವಾಗಿ ಸಹಾಯ ಮಾಡಿದ್ದಾರೆಯೆ ಹೊರತು ಇಲ್ಲಿನ ರೈತರ ಪರ ಎಂದು ಕೆಲಸ ಮಾಡಿಲ್ಲದಿರುವುದು ಎದ್ದು ಕಾಣಿಸುತ್ತದೆ. ಏಕೆಂದರೆ ಈ ಸಮಸ್ಯೆ ಉದ್ಭವಿಸಿದ ದಿನವೇ ಇಲ್ಲಿನ ಪೊಲೀಸ್ ಇಲಾಖೆಯಾಗಲಿ ಕಂದಾಯ ಇಲಾಖೆಯಾಗಲಿ ಕ್ರಮ ಕೈಗೊಂಡಿದ್ದರೆ ಇವತ್ತಿನ ಘಟನೆ ನಡೆಯುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

“ದುಷ್ಟ ವ್ಯವಸ್ತೆಯ ಕೈಗೆ ಅಧಿಕಾರ ಕೊಟ್ಟು ಪೊಲೀಸ್ ವ್ಯವಸ್ಥೆ ಮತ್ತು ಕಂದಾಯ ಇಲಾಖೆಯನ್ನು ತಮ್ಮ ಕೈ ಗೊಂಬೆಗಳಂತೆ ಮಾಡಿಕೊಂಡಿದ್ದಾರೆ. ಹೊಲಸು ರಾಜಕೀಯ ಪಕ್ಷಗಳು ಅಕ್ರಮ ಕ್ರಷರ್ ಮಾಲೀಕರ ಎಂಜಲು ಕಾಸಿಗೆ ಅವರು ಒಡ್ಡುವಂತಹ ಆಸೆ ಆಮೀಷಗಳಿಗೆ ಜಿಲ್ಲೆಯ ಅಮಾಯಕ ರೈತಪಿ ವರ್ಗದ ಮತ್ತು ಸಾರ್ವಜನಿಕರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಜಿಲ್ಲೆಯ ವ್ಯವಸ್ಥೆಯ ಮೇಲೆ ಅಸಹ್ಯವಾಗುತ್ತದೆ” ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...