Homeಕರ್ನಾಟಕಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

ಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

- Advertisement -
- Advertisement -

ರಸ್ತೆಯಲ್ಲಿ ಲಾರಿಗಳ ಓಡಾಟದ ವಿಚಾರವಾಗಿ ನಡೆದ ವಾಗ್ವಾದದ ವೇಳೆ ಗಣಿ ಮಾಲಿಕ ಹಾಡಹಗಲೆ ಕ್ಯಾಮೆರಾ ಮುಂದೆಯೆ ರೈತರೊಬ್ಬರನ್ನು ಗುಂಡಿಕ್ಕಿದ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ಬುಧವಾರ ನಡೆದಿದೆ. ಘಟನೆಯ ವಿಡಿಯೊ ಇದೀಗ ವೈರಲ್ ಆಗಿದ್ದು ವ್ಯಾಪಕ ಆಕ್ರೋಶ ಹುಟ್ಟುಹಾಕಿದೆ. ಮಾಜಿ MLC ಒಬ್ಬರ ಸಂಬಂಧಿಕರ ಮಾಲೀಕತ್ವದ ಕ್ರಷರ್ ಕಂಪನಿಗಾಗಿ ಇದನ್ನು ಮಾಡಲಾಗಿದೆ ಎಂದು ಅರೋಪಿಸಲಾಗಿದೆ. ಚಿಕ್ಕಬಳ್ಳಾಪುರ

ಗಣಿಗಾರಿಕೆ ಲಾರಿಗಳ ಓಡಾಟ ಮತ್ತು ರಸ್ತೆ ನಿರ್ಮಾಣ ವಿರೋಧಿಸಿ ಫೆಬ್ರುವರಿಯಲ್ಲಿ ಮಂಚೇನಹಳ್ಳಿಯಲ್ಲಿ ರೈತ ಸಂಘ, ಮಂಚೇನಹಳ್ಳಿ ತಾಲ್ಲೂಕು ಪರಿಸರ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟಿಸಿದ್ದರು. ಈ ವೇಳೆ ಬೆಟ್ಟದ ತಪ್ಪಲಿನಲ್ಲಿ ಮುನೇಶ್ವರ ಗುಡಿ, ತಿಮ್ಮರಾಯನಗುಡಿ ಇದೆ. ಸ್ವಚ್ಛಗಾಳಿ, ನೀರು, ಮೇವು ನೀಡುತ್ತಿರುವ ನಮ್ಮ ಊರಿನ ಬೆಟ್ಟ ಗುಡ್ಡಗಳಲ್ಲಿ ಗಣಿಗಾರಿಕೆ ಮಾಡಲು ಬಿಡುವುದಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದರು. ದಾರಿ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿ ಸಭೆಗಳು ಸಹ ನಡೆದಿದ್ದವು ಎಂದು ಪ್ರಜಾವಾಣಿ ವರದಿ ಮಾಡಿದೆ.

ಅದಾಗ್ಯೂ, ಬುಧವಾರ ಗಣಿ ಮಾಲಿಕ ಸಕಲೇಶ್ ಮತ್ತು ಆತನ ಕಡೆಯವರು ಜೆಸಿಬಿಗಳ ಮೂಲಕ ರಸ್ತೆ ನಿರ್ಮಿಸಲು ಮುಂದಾಗಿದ್ದರು. ಈ ವೇಳೆ ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಆರೋಪಿ ಸಕಲೇಶ್, ರಿವಾಲ್ವರ್ ಹಿಡಿದು ‘ಯಾರು ಬರುತ್ತಿರೊ ಬರ್ರೊ’ ಎನ್ನುತ್ತ ರೈತ ರವಿ ಮೇಲೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.

ಮಂಚೇನಹಳ್ಳಿ ತಾಲ್ಲೂಕಿನ ಬಂಡಿರಾಮನಹಳ್ಳಿ, ಕನಗಾನಕೊಪ್ಪ, ರಾಯನಕಲ್ಲು ಗ್ರಾಮಗಳ ಸಮೀಪದ ಬೆಟ್ಟಗುಡ್ಡಗಳಲ್ಲಿ ಕಲ್ಲುಗಣಿಗಾರಿಕೆ ಹಾಗೂ ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ದಾರಿ ಮಾಡುವ ವಿಚಾರವಾಗಿ ಈ ಗಲಾಟೆ ನಡೆದಿತ್ತು ಎಂದು ವರದಿಯಾಗಿದೆ. ಗುಂಡಿನ ದಾಳಿಯಿಂದಾಗಿ ರೈತ ರವಿ ಅವರ ತೊಡೆಗೆ ಗಾಯಗಾಳಾಗಿವೆ ಎಂದು ವರದಿಯಾಗಿದೆ.

ಗಾಯಾಳುವನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಚೇನಹಳ್ಳಿ ಮತ್ತು ಗೌರಿಬಿದನೂರು ಪೊಲೀಸರು ಭೇಟಿ ನೀಡಿದ್ದು ಬಿಗುವಿನ ವಾತಾವರಣವಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇಡೀ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಶ್ರೀನಿವಾಸ್ ಸಿ.ವಿ., ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾನೂನು ಸು ವ್ಯವಸ್ಥೆ ಇದೆಯೋ ಸತ್ತು ಹೋಗಿದೆಯೆ? ಎಂದು ಪ್ರಶ್ನಿಸಿದ್ದಾರೆ.

“ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನಲ್ಲಿ ಮಟ ಮಟ ಮಧ್ಯಾಹ್ನ ಹಾಡು ಆಗಲೇ ಅನ್ನದಾತನ ಮೇಲೆ ಗುಂಡಿನ ಸುರಿಮಳೆ ನಡೆಯುತ್ತಿದೆ. ಪೊಲೀಸ್ ಇಲಾಖೆಯ ಮೇಲೆ ಇದ್ದಂತಹ ನಂಬಿಕೆ ರೈತಾಪಿ ವರ್ಗಕ್ಕೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಇದಕ್ಕೆ ಕಾರಣ ಕಳೆದ ಐದಾರು ವರ್ಷಗಳಿಂದ ಇದೇ ಗ್ರಾಮದ ರೈತಾಪಿ ವರ್ಗ ಮತ್ತು ಕ್ರೇಶರ್ ಮಾಲೀಕರ ನಡುವೆ ನಡೆಯುತ್ತಿದ್ದಂತಹ ಗಲಾಟೆ ವಾಕ್ಸಮರಗಳು. ಇಂದು ಬಂದೂಕಿನ ಗುಂಡಿನ ಸದ್ದಿನವರಿಗೂ ಕಾಲಿಟ್ಟಿದೆ ಎಂದರೆ ಬೇಸರವಾಗುತ್ತದೆ ಮತ್ತು ಅಸಹ್ಯವಾಗುತ್ತದೆ” ಎಂದು ಹೇಳಿದ್ದಾರೆ.

“ಮಾಜಿ MLC ಒಬ್ಬರ ಸಂಬಂಧಿಕರ ಮಾಲೀಕತ್ವದ ಕ್ರಷರ್ ಕಂಪನಿಗೆ ಇಲ್ಲಿನ ಎಲ್ಲಾ ಇಲಾಖೆಯ ಆಡಳಿತ ವ್ಯವಸ್ಥೆಗಳು ಒಂದಾಗಿ ನೇರವಾಗಿ ಮತ್ತು ಪರೋಕ್ಷವಾಗಿ ಸಹಾಯ ಮಾಡಿದ್ದಾರೆಯೆ ಹೊರತು ಇಲ್ಲಿನ ರೈತರ ಪರ ಎಂದು ಕೆಲಸ ಮಾಡಿಲ್ಲದಿರುವುದು ಎದ್ದು ಕಾಣಿಸುತ್ತದೆ. ಏಕೆಂದರೆ ಈ ಸಮಸ್ಯೆ ಉದ್ಭವಿಸಿದ ದಿನವೇ ಇಲ್ಲಿನ ಪೊಲೀಸ್ ಇಲಾಖೆಯಾಗಲಿ ಕಂದಾಯ ಇಲಾಖೆಯಾಗಲಿ ಕ್ರಮ ಕೈಗೊಂಡಿದ್ದರೆ ಇವತ್ತಿನ ಘಟನೆ ನಡೆಯುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

“ದುಷ್ಟ ವ್ಯವಸ್ತೆಯ ಕೈಗೆ ಅಧಿಕಾರ ಕೊಟ್ಟು ಪೊಲೀಸ್ ವ್ಯವಸ್ಥೆ ಮತ್ತು ಕಂದಾಯ ಇಲಾಖೆಯನ್ನು ತಮ್ಮ ಕೈ ಗೊಂಬೆಗಳಂತೆ ಮಾಡಿಕೊಂಡಿದ್ದಾರೆ. ಹೊಲಸು ರಾಜಕೀಯ ಪಕ್ಷಗಳು ಅಕ್ರಮ ಕ್ರಷರ್ ಮಾಲೀಕರ ಎಂಜಲು ಕಾಸಿಗೆ ಅವರು ಒಡ್ಡುವಂತಹ ಆಸೆ ಆಮೀಷಗಳಿಗೆ ಜಿಲ್ಲೆಯ ಅಮಾಯಕ ರೈತಪಿ ವರ್ಗದ ಮತ್ತು ಸಾರ್ವಜನಿಕರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಜಿಲ್ಲೆಯ ವ್ಯವಸ್ಥೆಯ ಮೇಲೆ ಅಸಹ್ಯವಾಗುತ್ತದೆ” ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...