Homeಕರ್ನಾಟಕಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

ಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

- Advertisement -
- Advertisement -

ರಸ್ತೆಯಲ್ಲಿ ಲಾರಿಗಳ ಓಡಾಟದ ವಿಚಾರವಾಗಿ ನಡೆದ ವಾಗ್ವಾದದ ವೇಳೆ ಗಣಿ ಮಾಲಿಕ ಹಾಡಹಗಲೆ ಕ್ಯಾಮೆರಾ ಮುಂದೆಯೆ ರೈತರೊಬ್ಬರನ್ನು ಗುಂಡಿಕ್ಕಿದ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ಬುಧವಾರ ನಡೆದಿದೆ. ಘಟನೆಯ ವಿಡಿಯೊ ಇದೀಗ ವೈರಲ್ ಆಗಿದ್ದು ವ್ಯಾಪಕ ಆಕ್ರೋಶ ಹುಟ್ಟುಹಾಕಿದೆ. ಮಾಜಿ MLC ಒಬ್ಬರ ಸಂಬಂಧಿಕರ ಮಾಲೀಕತ್ವದ ಕ್ರಷರ್ ಕಂಪನಿಗಾಗಿ ಇದನ್ನು ಮಾಡಲಾಗಿದೆ ಎಂದು ಅರೋಪಿಸಲಾಗಿದೆ. ಚಿಕ್ಕಬಳ್ಳಾಪುರ

ಗಣಿಗಾರಿಕೆ ಲಾರಿಗಳ ಓಡಾಟ ಮತ್ತು ರಸ್ತೆ ನಿರ್ಮಾಣ ವಿರೋಧಿಸಿ ಫೆಬ್ರುವರಿಯಲ್ಲಿ ಮಂಚೇನಹಳ್ಳಿಯಲ್ಲಿ ರೈತ ಸಂಘ, ಮಂಚೇನಹಳ್ಳಿ ತಾಲ್ಲೂಕು ಪರಿಸರ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟಿಸಿದ್ದರು. ಈ ವೇಳೆ ಬೆಟ್ಟದ ತಪ್ಪಲಿನಲ್ಲಿ ಮುನೇಶ್ವರ ಗುಡಿ, ತಿಮ್ಮರಾಯನಗುಡಿ ಇದೆ. ಸ್ವಚ್ಛಗಾಳಿ, ನೀರು, ಮೇವು ನೀಡುತ್ತಿರುವ ನಮ್ಮ ಊರಿನ ಬೆಟ್ಟ ಗುಡ್ಡಗಳಲ್ಲಿ ಗಣಿಗಾರಿಕೆ ಮಾಡಲು ಬಿಡುವುದಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದರು. ದಾರಿ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿ ಸಭೆಗಳು ಸಹ ನಡೆದಿದ್ದವು ಎಂದು ಪ್ರಜಾವಾಣಿ ವರದಿ ಮಾಡಿದೆ.

ಅದಾಗ್ಯೂ, ಬುಧವಾರ ಗಣಿ ಮಾಲಿಕ ಸಕಲೇಶ್ ಮತ್ತು ಆತನ ಕಡೆಯವರು ಜೆಸಿಬಿಗಳ ಮೂಲಕ ರಸ್ತೆ ನಿರ್ಮಿಸಲು ಮುಂದಾಗಿದ್ದರು. ಈ ವೇಳೆ ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಆರೋಪಿ ಸಕಲೇಶ್, ರಿವಾಲ್ವರ್ ಹಿಡಿದು ‘ಯಾರು ಬರುತ್ತಿರೊ ಬರ್ರೊ’ ಎನ್ನುತ್ತ ರೈತ ರವಿ ಮೇಲೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.

ಮಂಚೇನಹಳ್ಳಿ ತಾಲ್ಲೂಕಿನ ಬಂಡಿರಾಮನಹಳ್ಳಿ, ಕನಗಾನಕೊಪ್ಪ, ರಾಯನಕಲ್ಲು ಗ್ರಾಮಗಳ ಸಮೀಪದ ಬೆಟ್ಟಗುಡ್ಡಗಳಲ್ಲಿ ಕಲ್ಲುಗಣಿಗಾರಿಕೆ ಹಾಗೂ ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ದಾರಿ ಮಾಡುವ ವಿಚಾರವಾಗಿ ಈ ಗಲಾಟೆ ನಡೆದಿತ್ತು ಎಂದು ವರದಿಯಾಗಿದೆ. ಗುಂಡಿನ ದಾಳಿಯಿಂದಾಗಿ ರೈತ ರವಿ ಅವರ ತೊಡೆಗೆ ಗಾಯಗಾಳಾಗಿವೆ ಎಂದು ವರದಿಯಾಗಿದೆ.

ಗಾಯಾಳುವನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಚೇನಹಳ್ಳಿ ಮತ್ತು ಗೌರಿಬಿದನೂರು ಪೊಲೀಸರು ಭೇಟಿ ನೀಡಿದ್ದು ಬಿಗುವಿನ ವಾತಾವರಣವಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇಡೀ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಶ್ರೀನಿವಾಸ್ ಸಿ.ವಿ., ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾನೂನು ಸು ವ್ಯವಸ್ಥೆ ಇದೆಯೋ ಸತ್ತು ಹೋಗಿದೆಯೆ? ಎಂದು ಪ್ರಶ್ನಿಸಿದ್ದಾರೆ.

“ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನಲ್ಲಿ ಮಟ ಮಟ ಮಧ್ಯಾಹ್ನ ಹಾಡು ಆಗಲೇ ಅನ್ನದಾತನ ಮೇಲೆ ಗುಂಡಿನ ಸುರಿಮಳೆ ನಡೆಯುತ್ತಿದೆ. ಪೊಲೀಸ್ ಇಲಾಖೆಯ ಮೇಲೆ ಇದ್ದಂತಹ ನಂಬಿಕೆ ರೈತಾಪಿ ವರ್ಗಕ್ಕೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಇದಕ್ಕೆ ಕಾರಣ ಕಳೆದ ಐದಾರು ವರ್ಷಗಳಿಂದ ಇದೇ ಗ್ರಾಮದ ರೈತಾಪಿ ವರ್ಗ ಮತ್ತು ಕ್ರೇಶರ್ ಮಾಲೀಕರ ನಡುವೆ ನಡೆಯುತ್ತಿದ್ದಂತಹ ಗಲಾಟೆ ವಾಕ್ಸಮರಗಳು. ಇಂದು ಬಂದೂಕಿನ ಗುಂಡಿನ ಸದ್ದಿನವರಿಗೂ ಕಾಲಿಟ್ಟಿದೆ ಎಂದರೆ ಬೇಸರವಾಗುತ್ತದೆ ಮತ್ತು ಅಸಹ್ಯವಾಗುತ್ತದೆ” ಎಂದು ಹೇಳಿದ್ದಾರೆ.

“ಮಾಜಿ MLC ಒಬ್ಬರ ಸಂಬಂಧಿಕರ ಮಾಲೀಕತ್ವದ ಕ್ರಷರ್ ಕಂಪನಿಗೆ ಇಲ್ಲಿನ ಎಲ್ಲಾ ಇಲಾಖೆಯ ಆಡಳಿತ ವ್ಯವಸ್ಥೆಗಳು ಒಂದಾಗಿ ನೇರವಾಗಿ ಮತ್ತು ಪರೋಕ್ಷವಾಗಿ ಸಹಾಯ ಮಾಡಿದ್ದಾರೆಯೆ ಹೊರತು ಇಲ್ಲಿನ ರೈತರ ಪರ ಎಂದು ಕೆಲಸ ಮಾಡಿಲ್ಲದಿರುವುದು ಎದ್ದು ಕಾಣಿಸುತ್ತದೆ. ಏಕೆಂದರೆ ಈ ಸಮಸ್ಯೆ ಉದ್ಭವಿಸಿದ ದಿನವೇ ಇಲ್ಲಿನ ಪೊಲೀಸ್ ಇಲಾಖೆಯಾಗಲಿ ಕಂದಾಯ ಇಲಾಖೆಯಾಗಲಿ ಕ್ರಮ ಕೈಗೊಂಡಿದ್ದರೆ ಇವತ್ತಿನ ಘಟನೆ ನಡೆಯುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

“ದುಷ್ಟ ವ್ಯವಸ್ತೆಯ ಕೈಗೆ ಅಧಿಕಾರ ಕೊಟ್ಟು ಪೊಲೀಸ್ ವ್ಯವಸ್ಥೆ ಮತ್ತು ಕಂದಾಯ ಇಲಾಖೆಯನ್ನು ತಮ್ಮ ಕೈ ಗೊಂಬೆಗಳಂತೆ ಮಾಡಿಕೊಂಡಿದ್ದಾರೆ. ಹೊಲಸು ರಾಜಕೀಯ ಪಕ್ಷಗಳು ಅಕ್ರಮ ಕ್ರಷರ್ ಮಾಲೀಕರ ಎಂಜಲು ಕಾಸಿಗೆ ಅವರು ಒಡ್ಡುವಂತಹ ಆಸೆ ಆಮೀಷಗಳಿಗೆ ಜಿಲ್ಲೆಯ ಅಮಾಯಕ ರೈತಪಿ ವರ್ಗದ ಮತ್ತು ಸಾರ್ವಜನಿಕರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಜಿಲ್ಲೆಯ ವ್ಯವಸ್ಥೆಯ ಮೇಲೆ ಅಸಹ್ಯವಾಗುತ್ತದೆ” ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...