Homeಕರ್ನಾಟಕಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

ಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

- Advertisement -
- Advertisement -

ರಸ್ತೆಯಲ್ಲಿ ಲಾರಿಗಳ ಓಡಾಟದ ವಿಚಾರವಾಗಿ ನಡೆದ ವಾಗ್ವಾದದ ವೇಳೆ ಗಣಿ ಮಾಲಿಕ ಹಾಡಹಗಲೆ ಕ್ಯಾಮೆರಾ ಮುಂದೆಯೆ ರೈತರೊಬ್ಬರನ್ನು ಗುಂಡಿಕ್ಕಿದ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ಬುಧವಾರ ನಡೆದಿದೆ. ಘಟನೆಯ ವಿಡಿಯೊ ಇದೀಗ ವೈರಲ್ ಆಗಿದ್ದು ವ್ಯಾಪಕ ಆಕ್ರೋಶ ಹುಟ್ಟುಹಾಕಿದೆ. ಮಾಜಿ MLC ಒಬ್ಬರ ಸಂಬಂಧಿಕರ ಮಾಲೀಕತ್ವದ ಕ್ರಷರ್ ಕಂಪನಿಗಾಗಿ ಇದನ್ನು ಮಾಡಲಾಗಿದೆ ಎಂದು ಅರೋಪಿಸಲಾಗಿದೆ. ಚಿಕ್ಕಬಳ್ಳಾಪುರ

ಗಣಿಗಾರಿಕೆ ಲಾರಿಗಳ ಓಡಾಟ ಮತ್ತು ರಸ್ತೆ ನಿರ್ಮಾಣ ವಿರೋಧಿಸಿ ಫೆಬ್ರುವರಿಯಲ್ಲಿ ಮಂಚೇನಹಳ್ಳಿಯಲ್ಲಿ ರೈತ ಸಂಘ, ಮಂಚೇನಹಳ್ಳಿ ತಾಲ್ಲೂಕು ಪರಿಸರ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟಿಸಿದ್ದರು. ಈ ವೇಳೆ ಬೆಟ್ಟದ ತಪ್ಪಲಿನಲ್ಲಿ ಮುನೇಶ್ವರ ಗುಡಿ, ತಿಮ್ಮರಾಯನಗುಡಿ ಇದೆ. ಸ್ವಚ್ಛಗಾಳಿ, ನೀರು, ಮೇವು ನೀಡುತ್ತಿರುವ ನಮ್ಮ ಊರಿನ ಬೆಟ್ಟ ಗುಡ್ಡಗಳಲ್ಲಿ ಗಣಿಗಾರಿಕೆ ಮಾಡಲು ಬಿಡುವುದಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದರು. ದಾರಿ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿ ಸಭೆಗಳು ಸಹ ನಡೆದಿದ್ದವು ಎಂದು ಪ್ರಜಾವಾಣಿ ವರದಿ ಮಾಡಿದೆ.

ಅದಾಗ್ಯೂ, ಬುಧವಾರ ಗಣಿ ಮಾಲಿಕ ಸಕಲೇಶ್ ಮತ್ತು ಆತನ ಕಡೆಯವರು ಜೆಸಿಬಿಗಳ ಮೂಲಕ ರಸ್ತೆ ನಿರ್ಮಿಸಲು ಮುಂದಾಗಿದ್ದರು. ಈ ವೇಳೆ ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಆರೋಪಿ ಸಕಲೇಶ್, ರಿವಾಲ್ವರ್ ಹಿಡಿದು ‘ಯಾರು ಬರುತ್ತಿರೊ ಬರ್ರೊ’ ಎನ್ನುತ್ತ ರೈತ ರವಿ ಮೇಲೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.

ಮಂಚೇನಹಳ್ಳಿ ತಾಲ್ಲೂಕಿನ ಬಂಡಿರಾಮನಹಳ್ಳಿ, ಕನಗಾನಕೊಪ್ಪ, ರಾಯನಕಲ್ಲು ಗ್ರಾಮಗಳ ಸಮೀಪದ ಬೆಟ್ಟಗುಡ್ಡಗಳಲ್ಲಿ ಕಲ್ಲುಗಣಿಗಾರಿಕೆ ಹಾಗೂ ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ದಾರಿ ಮಾಡುವ ವಿಚಾರವಾಗಿ ಈ ಗಲಾಟೆ ನಡೆದಿತ್ತು ಎಂದು ವರದಿಯಾಗಿದೆ. ಗುಂಡಿನ ದಾಳಿಯಿಂದಾಗಿ ರೈತ ರವಿ ಅವರ ತೊಡೆಗೆ ಗಾಯಗಾಳಾಗಿವೆ ಎಂದು ವರದಿಯಾಗಿದೆ.

ಗಾಯಾಳುವನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಚೇನಹಳ್ಳಿ ಮತ್ತು ಗೌರಿಬಿದನೂರು ಪೊಲೀಸರು ಭೇಟಿ ನೀಡಿದ್ದು ಬಿಗುವಿನ ವಾತಾವರಣವಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇಡೀ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಶ್ರೀನಿವಾಸ್ ಸಿ.ವಿ., ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾನೂನು ಸು ವ್ಯವಸ್ಥೆ ಇದೆಯೋ ಸತ್ತು ಹೋಗಿದೆಯೆ? ಎಂದು ಪ್ರಶ್ನಿಸಿದ್ದಾರೆ.

“ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನಲ್ಲಿ ಮಟ ಮಟ ಮಧ್ಯಾಹ್ನ ಹಾಡು ಆಗಲೇ ಅನ್ನದಾತನ ಮೇಲೆ ಗುಂಡಿನ ಸುರಿಮಳೆ ನಡೆಯುತ್ತಿದೆ. ಪೊಲೀಸ್ ಇಲಾಖೆಯ ಮೇಲೆ ಇದ್ದಂತಹ ನಂಬಿಕೆ ರೈತಾಪಿ ವರ್ಗಕ್ಕೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಇದಕ್ಕೆ ಕಾರಣ ಕಳೆದ ಐದಾರು ವರ್ಷಗಳಿಂದ ಇದೇ ಗ್ರಾಮದ ರೈತಾಪಿ ವರ್ಗ ಮತ್ತು ಕ್ರೇಶರ್ ಮಾಲೀಕರ ನಡುವೆ ನಡೆಯುತ್ತಿದ್ದಂತಹ ಗಲಾಟೆ ವಾಕ್ಸಮರಗಳು. ಇಂದು ಬಂದೂಕಿನ ಗುಂಡಿನ ಸದ್ದಿನವರಿಗೂ ಕಾಲಿಟ್ಟಿದೆ ಎಂದರೆ ಬೇಸರವಾಗುತ್ತದೆ ಮತ್ತು ಅಸಹ್ಯವಾಗುತ್ತದೆ” ಎಂದು ಹೇಳಿದ್ದಾರೆ.

“ಮಾಜಿ MLC ಒಬ್ಬರ ಸಂಬಂಧಿಕರ ಮಾಲೀಕತ್ವದ ಕ್ರಷರ್ ಕಂಪನಿಗೆ ಇಲ್ಲಿನ ಎಲ್ಲಾ ಇಲಾಖೆಯ ಆಡಳಿತ ವ್ಯವಸ್ಥೆಗಳು ಒಂದಾಗಿ ನೇರವಾಗಿ ಮತ್ತು ಪರೋಕ್ಷವಾಗಿ ಸಹಾಯ ಮಾಡಿದ್ದಾರೆಯೆ ಹೊರತು ಇಲ್ಲಿನ ರೈತರ ಪರ ಎಂದು ಕೆಲಸ ಮಾಡಿಲ್ಲದಿರುವುದು ಎದ್ದು ಕಾಣಿಸುತ್ತದೆ. ಏಕೆಂದರೆ ಈ ಸಮಸ್ಯೆ ಉದ್ಭವಿಸಿದ ದಿನವೇ ಇಲ್ಲಿನ ಪೊಲೀಸ್ ಇಲಾಖೆಯಾಗಲಿ ಕಂದಾಯ ಇಲಾಖೆಯಾಗಲಿ ಕ್ರಮ ಕೈಗೊಂಡಿದ್ದರೆ ಇವತ್ತಿನ ಘಟನೆ ನಡೆಯುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

“ದುಷ್ಟ ವ್ಯವಸ್ತೆಯ ಕೈಗೆ ಅಧಿಕಾರ ಕೊಟ್ಟು ಪೊಲೀಸ್ ವ್ಯವಸ್ಥೆ ಮತ್ತು ಕಂದಾಯ ಇಲಾಖೆಯನ್ನು ತಮ್ಮ ಕೈ ಗೊಂಬೆಗಳಂತೆ ಮಾಡಿಕೊಂಡಿದ್ದಾರೆ. ಹೊಲಸು ರಾಜಕೀಯ ಪಕ್ಷಗಳು ಅಕ್ರಮ ಕ್ರಷರ್ ಮಾಲೀಕರ ಎಂಜಲು ಕಾಸಿಗೆ ಅವರು ಒಡ್ಡುವಂತಹ ಆಸೆ ಆಮೀಷಗಳಿಗೆ ಜಿಲ್ಲೆಯ ಅಮಾಯಕ ರೈತಪಿ ವರ್ಗದ ಮತ್ತು ಸಾರ್ವಜನಿಕರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಜಿಲ್ಲೆಯ ವ್ಯವಸ್ಥೆಯ ಮೇಲೆ ಅಸಹ್ಯವಾಗುತ್ತದೆ” ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...