Homeಕರ್ನಾಟಕಚಿಕ್ಕಬಳ್ಳಾಪುರ: ಆದಿಯೋಗಿ ಕಾಮಗಾರಿಗೆ ತಡೆ ನೀಡಿದ ರಾಜ್ಯ ಹೈಕೋರ್ಟ್‌

ಚಿಕ್ಕಬಳ್ಳಾಪುರ: ಆದಿಯೋಗಿ ಕಾಮಗಾರಿಗೆ ತಡೆ ನೀಡಿದ ರಾಜ್ಯ ಹೈಕೋರ್ಟ್‌

ಪ್ರತಿಮೆಯನ್ನು ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ ಅನಾವರಣಗೊಳಿಸಲಿದ್ದರು ಹಾಗೂ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಕೂಡಾ ಪಾಲ್ಗೊಳ್ಳಲಿದ್ದರು

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದ ಆವಲಗುರ್ಕಿ ಬಳಿ ನಿರ್ಮಾಣವಾಗುತ್ತಿರುವ ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ನಡೆಸಬಾರದು ಎಂದು ರಾಜ್ಯ ಹೈಕೋರ್ಟ್‌ ಆದೇಶಿಸಿದೆ. ಈ ಪ್ರತಿಮೆಯನ್ನು ಉಪ ರಾಷ್ಟ್ರಪತಿ ಜಗದೀಪ್ ಧನಕರ್‌‌ ಅವರು ಜನವರಿ 15 ರಂದು ಉದ್ಘಾಟಿಸಲಿದ್ದರು. ಪ್ರತಿಮೆ ನಿರ್ಮಾಣವಾಗುತ್ತಿರುವ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರವು ಇಶಾ ಯೋಗ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಜಮೀನು ಮಂಜೂರು ಮಾಡಿದ್ದು, ಇದು ರೈತರ ಬದುಕಿಗೆ ಮತ್ತು ಪರಿಸರಕ್ಕೆ ಹಾನಿ ಮಾಡುತ್ತದೆ ಎಂದು ಆರೋಪಿಸಿ ಜಿಲ್ಲೆಯ ಐವರು ರೈತರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಂದಿಬೆಟ್ಟಕ್ಕೆ ಐತಿಹಾಸಿಕ ಮಹತ್ವವಿದ್ದು, ಇಶಾ ಯೋಗ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಕೆರೆ, ಕುಂಟೆ, ಕಂಟಿಗಳು ಹಾಗೂ ಗೋಮಾಳ ವ್ಯಾಪ್ತಿಯ ಜಮೀನನ್ನು ಮಂಜೂರು ಮಾಡಿದೆ. ಇದರ ಸುತ್ತಮುತ್ತಲಿನ ಜಮೀನನ್ನು ಪರಭಾರೆ ಮಾಡಿರುವ ಕಾರಣ ರೈತರ ಬದುಕಿಗೆ ಹಾಗೂ ಪರಿಸರಕ್ಕೆ ಭರಿಸಲಾಗದ ಹಾನಿಯಾಗಲಿದೆ. ಪರಿಸರದ ಸೂಕ್ಷ್ಮ ವಲಯಕ್ಕೆ ಒಳಪಡುವ ಪ್ರದೇಶವನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಕಾನೂನು ಬಾಹಿರವಾಗಿದ್ದು, ಇಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಆದೇಶಿಸಬೇಕು” ಎಂದು ರೈತರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ರೈತರ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಪೀಠ, ಒಕ್ಕೂಟ ಸರ್ಕಾರದ ಪರಿಸರ ಸಚಿವಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇಶಾ ಯೋಗ ಕೇಂದ್ರ ಸೇರಿದಂತೆ ಒಟ್ಟು ಹದಿನಾರು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ವಿಚಾರಣೆಯನ್ನು ಮುಂದೂಡಿದೆ.

ಇಶಾ ಫೌಂಡೇಶನ್‌ ನಿರ್ಮಿಸಿರುವ 112 ಅಡಿ ಎತ್ತರದ ಪ್ರತಿಮೆಯನ್ನು ಜನವರಿ 15 ರಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಅನಾವರಣಗೊಳಿಸಲಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಪಾಲ್ಗೊಳ್ಳಲಿದ್ದರು. ಈ ಪ್ರತಿಮೆಯು ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಯೋಗ ಕೇಂದ್ರದ ನಿಖರವಾದ ಪ್ರತಿರೂಪವಾಗಿದೆ ಎಂದು ಫೌಂಡೇಶನ್ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...