Homeಕರ್ನಾಟಕಚಿಕ್ಕಬಳ್ಳಾಪುರ: ವೇದ ಗಣಿತ ತರಬೇತಿಗೆ ತಾತ್ಕಾಲಿಕ ತಡೆ

ಚಿಕ್ಕಬಳ್ಳಾಪುರ: ವೇದ ಗಣಿತ ತರಬೇತಿಗೆ ತಾತ್ಕಾಲಿಕ ತಡೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಪ್ರತಿ ಗ್ರಾ.ಪಂ ವ್ಯಾಪ್ತಿಯ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದ ಗಣಿತ ಕಲಿಸುವ ಯೋಜನೆಯನ್ನು ತಾತ್ಕಾಲಿಕ ತಡೆಹಿಡಿಯುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಘುನಾಥರೆಡ್ಡಿಯವರು ಸೂಚಿಸಿದ್ದಾರೆ.

ಈ ಮೊದಲು ಪ್ರತಿ ಗ್ರಾಮ ಪಂಚಾಯ್ತಿವಾರು ಗಣಿತ ಶಿಕ್ಷಕರಿಗೆ ವೇದ ಗಣಿತ ಪಾಠ ಮಾಡಲು ಸೆಪ್ಟಂಬರ್ 15ರಂದು ತರಬೇತಿ ನೀಡಲಾಗಿತ್ತು. ಆದರೆ ಇಲಾಖೆಯ ಮೇಲಾಧಿಕಾಇಗಳ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ವೇದ ಗಣಿತ ತರಗತಿಗಳನ್ನು ತಡೆಹಿಡಿಯಲು ಸೂಚಿಸಲಾಗಿದೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 5 ರಿಂದ 8ನೇ ತರಗತಿವರೆಗಿನ 25 ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಹಿತ ವೇದ ಗಣಿತ ತರಬೇತಿ ನೀಡುವ ಜವಾಬ್ದಾರಿಯನ್ನು ಹಿರಿಯೂರಿನ ಎ.ವಿ.ಎಂ ಅಕಾಡೆಮಿಗೆ ವಹಿಸಲಾಗಿದೆ. ಆ ಸಂಸ್ಥೆಯು ಸರ್ಕಾರಿ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದು, ಅವರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ. ಎ.ವಿ.ಎಂ ಸಂಸ್ಥೆಗೆ ರಾಜ್ಯದ ಪ್ರತಿ ಗ್ರಾಮ ಪಂಚಾಯ್ತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದ್ದು ಅದಕ್ಕಾಗಿ ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.

ಇನ್ನು ಶಿಕ್ಷಕರಿಗೆ ತರಬೇತಿ, ಕಲಿಕಾ ಕಿಟ್ ಮತ್ತು ಸಮವಸ್ತ್ರ ನೀಡುವ ಸರ್ಕಾರೇತರ ಸಂಸ್ಥೆಗೆ ಪ್ರತಿ ಗ್ರಾಮ ಪಂಚಾಯ್ತಿಗಳು ಸಹ ತಲಾ ಒಂದೊಂದು ಲಕ್ಷ ಹಣ ನೀಡುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಇನ್ನೊಂದೆಡೆ ಈ ವೇದಗಣಿತ ಕಲಿಕೆಯಿಂದ ಮಕ್ಕಳು ನಿಜವಾದ ಗಣಿತ ಕಲಿಯದಿರಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. “ವೇದಗಣಿತ ಕಲಿಕೆಯಿಂದ ಏನೂ ಉಪಯೋಗವಿಲ್ಲ. ಅದರಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಹಂತದ ವಿದ್ಯಾರ್ಥಿಗಳಿಗೆ ಶಾರ್ಟ್‌ಕಟ್ ವಿಧಾನದಲ್ಲಿ ಗುಣಾಕಾರ ಮತ್ತು ಭಾಗಕಾರವನ್ನು ಹೇಳಿಕೊಡಲಾಗುತ್ತದೆ. ಆದರೆ ಅದರಿಂದ ಗಣಿತಕ್ಕೆ ಬೇಕಾದ ತಾರ್ಕಿಕ ಚಿಂತನೆಗಳು ಅಭಿವೃದ್ಧಿಯಾಗುವುದಿಲ್ಲ” ಎಂದು ಬೆಂಗಳೂರಿನ ಭಾರತೀಯ ವಿದ್ಯಾಭವನದ ಗಾಂಧಿ ಸೆಂಟರ್ ಅಫ್ ಸೈನ್ಸ್ ಅಂಡ್ ಹ್ಯೂಮನ್ ವ್ಯಾಲ್ಯೂಸ್ ವಿಭಾಗದ ಗೌರವ ನಿರ್ದೇಶಕರೂ ಹಾಗೂ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯಲ್ಲಿ ಗೌರವ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಎಸ್.ಬಾಲಚಂದ್ರ ರಾವ್ ರವರು ಅಭಿಪ್ರಾಯಪಟ್ಟಿದ್ದಾರೆ.

ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ ಮುಂಬೈನ ಗಣಿತಶಾಸ್ತ್ರದ ಪ್ರಾಧ್ಯಾಪಕರಾದ ಎಸ್.ಜಿ.ದಾನಿಯವರು ವೇದಗಣಿತ ಎಂದು ಕರೆಯುವುದನ್ನೆ ವಿರೋಧಿಸುತ್ತಾರೆ. ಅದು ವೇದ ಕಾಲದ್ದು ಅಲ್ಲ ಮತ್ತು ಗಣಿತವೂ ಅಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ. “ವೇದಗಣಿತ ಎಂಬ ಪುಸ್ತಕದಲ್ಲಿ ಬಳಸಲಾದ ವಿಧಾನಗಳು ಪ್ರಾಚೀನ ಕಾಲದ ಅಂಕಗಣಿತದ ತಂತ್ರಗಳೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಪುಸ್ತಕದಲ್ಲಿನ ಅಂಕಗಣಿತದ ತಂತ್ರಗಳಲ್ಲಿ ಬಳಸಲಾದ ಸಂಕೇತದಿಂದ ಸ್ಪಷ್ಟವಾಗುತ್ತದೆ. ಪ್ರಪಂಚದ ಯಾವುದೇ ಶಾಲೆಗಳಲ್ಲಿಯೂ ಈ ಗಣಿತವನ್ನು ಕಲಿಸುತ್ತಿಲ್ಲ” ಎಂಬುದು ಅವರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ವೇದಗಣಿತ ಎಂಬುದೇ ಇಲ್ಲ: ಈ ಕುರಿತು ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...