Homeಕರ್ನಾಟಕಚಿಕ್ಕಬಳ್ಳಾಪುರ: ವೇದ ಗಣಿತ ತರಬೇತಿಗೆ ತಾತ್ಕಾಲಿಕ ತಡೆ

ಚಿಕ್ಕಬಳ್ಳಾಪುರ: ವೇದ ಗಣಿತ ತರಬೇತಿಗೆ ತಾತ್ಕಾಲಿಕ ತಡೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಪ್ರತಿ ಗ್ರಾ.ಪಂ ವ್ಯಾಪ್ತಿಯ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದ ಗಣಿತ ಕಲಿಸುವ ಯೋಜನೆಯನ್ನು ತಾತ್ಕಾಲಿಕ ತಡೆಹಿಡಿಯುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಘುನಾಥರೆಡ್ಡಿಯವರು ಸೂಚಿಸಿದ್ದಾರೆ.

ಈ ಮೊದಲು ಪ್ರತಿ ಗ್ರಾಮ ಪಂಚಾಯ್ತಿವಾರು ಗಣಿತ ಶಿಕ್ಷಕರಿಗೆ ವೇದ ಗಣಿತ ಪಾಠ ಮಾಡಲು ಸೆಪ್ಟಂಬರ್ 15ರಂದು ತರಬೇತಿ ನೀಡಲಾಗಿತ್ತು. ಆದರೆ ಇಲಾಖೆಯ ಮೇಲಾಧಿಕಾಇಗಳ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ವೇದ ಗಣಿತ ತರಗತಿಗಳನ್ನು ತಡೆಹಿಡಿಯಲು ಸೂಚಿಸಲಾಗಿದೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 5 ರಿಂದ 8ನೇ ತರಗತಿವರೆಗಿನ 25 ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಹಿತ ವೇದ ಗಣಿತ ತರಬೇತಿ ನೀಡುವ ಜವಾಬ್ದಾರಿಯನ್ನು ಹಿರಿಯೂರಿನ ಎ.ವಿ.ಎಂ ಅಕಾಡೆಮಿಗೆ ವಹಿಸಲಾಗಿದೆ. ಆ ಸಂಸ್ಥೆಯು ಸರ್ಕಾರಿ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದು, ಅವರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ. ಎ.ವಿ.ಎಂ ಸಂಸ್ಥೆಗೆ ರಾಜ್ಯದ ಪ್ರತಿ ಗ್ರಾಮ ಪಂಚಾಯ್ತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದ್ದು ಅದಕ್ಕಾಗಿ ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.

ಇನ್ನು ಶಿಕ್ಷಕರಿಗೆ ತರಬೇತಿ, ಕಲಿಕಾ ಕಿಟ್ ಮತ್ತು ಸಮವಸ್ತ್ರ ನೀಡುವ ಸರ್ಕಾರೇತರ ಸಂಸ್ಥೆಗೆ ಪ್ರತಿ ಗ್ರಾಮ ಪಂಚಾಯ್ತಿಗಳು ಸಹ ತಲಾ ಒಂದೊಂದು ಲಕ್ಷ ಹಣ ನೀಡುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಇನ್ನೊಂದೆಡೆ ಈ ವೇದಗಣಿತ ಕಲಿಕೆಯಿಂದ ಮಕ್ಕಳು ನಿಜವಾದ ಗಣಿತ ಕಲಿಯದಿರಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. “ವೇದಗಣಿತ ಕಲಿಕೆಯಿಂದ ಏನೂ ಉಪಯೋಗವಿಲ್ಲ. ಅದರಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಹಂತದ ವಿದ್ಯಾರ್ಥಿಗಳಿಗೆ ಶಾರ್ಟ್‌ಕಟ್ ವಿಧಾನದಲ್ಲಿ ಗುಣಾಕಾರ ಮತ್ತು ಭಾಗಕಾರವನ್ನು ಹೇಳಿಕೊಡಲಾಗುತ್ತದೆ. ಆದರೆ ಅದರಿಂದ ಗಣಿತಕ್ಕೆ ಬೇಕಾದ ತಾರ್ಕಿಕ ಚಿಂತನೆಗಳು ಅಭಿವೃದ್ಧಿಯಾಗುವುದಿಲ್ಲ” ಎಂದು ಬೆಂಗಳೂರಿನ ಭಾರತೀಯ ವಿದ್ಯಾಭವನದ ಗಾಂಧಿ ಸೆಂಟರ್ ಅಫ್ ಸೈನ್ಸ್ ಅಂಡ್ ಹ್ಯೂಮನ್ ವ್ಯಾಲ್ಯೂಸ್ ವಿಭಾಗದ ಗೌರವ ನಿರ್ದೇಶಕರೂ ಹಾಗೂ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯಲ್ಲಿ ಗೌರವ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಎಸ್.ಬಾಲಚಂದ್ರ ರಾವ್ ರವರು ಅಭಿಪ್ರಾಯಪಟ್ಟಿದ್ದಾರೆ.

ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ ಮುಂಬೈನ ಗಣಿತಶಾಸ್ತ್ರದ ಪ್ರಾಧ್ಯಾಪಕರಾದ ಎಸ್.ಜಿ.ದಾನಿಯವರು ವೇದಗಣಿತ ಎಂದು ಕರೆಯುವುದನ್ನೆ ವಿರೋಧಿಸುತ್ತಾರೆ. ಅದು ವೇದ ಕಾಲದ್ದು ಅಲ್ಲ ಮತ್ತು ಗಣಿತವೂ ಅಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ. “ವೇದಗಣಿತ ಎಂಬ ಪುಸ್ತಕದಲ್ಲಿ ಬಳಸಲಾದ ವಿಧಾನಗಳು ಪ್ರಾಚೀನ ಕಾಲದ ಅಂಕಗಣಿತದ ತಂತ್ರಗಳೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಪುಸ್ತಕದಲ್ಲಿನ ಅಂಕಗಣಿತದ ತಂತ್ರಗಳಲ್ಲಿ ಬಳಸಲಾದ ಸಂಕೇತದಿಂದ ಸ್ಪಷ್ಟವಾಗುತ್ತದೆ. ಪ್ರಪಂಚದ ಯಾವುದೇ ಶಾಲೆಗಳಲ್ಲಿಯೂ ಈ ಗಣಿತವನ್ನು ಕಲಿಸುತ್ತಿಲ್ಲ” ಎಂಬುದು ಅವರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ವೇದಗಣಿತ ಎಂಬುದೇ ಇಲ್ಲ: ಈ ಕುರಿತು ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...