Homeಕರ್ನಾಟಕಚಿಕ್ಕಬಳ್ಳಾಪುರ: ವೇದ ಗಣಿತ ತರಬೇತಿಗೆ ತಾತ್ಕಾಲಿಕ ತಡೆ

ಚಿಕ್ಕಬಳ್ಳಾಪುರ: ವೇದ ಗಣಿತ ತರಬೇತಿಗೆ ತಾತ್ಕಾಲಿಕ ತಡೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಪ್ರತಿ ಗ್ರಾ.ಪಂ ವ್ಯಾಪ್ತಿಯ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದ ಗಣಿತ ಕಲಿಸುವ ಯೋಜನೆಯನ್ನು ತಾತ್ಕಾಲಿಕ ತಡೆಹಿಡಿಯುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಘುನಾಥರೆಡ್ಡಿಯವರು ಸೂಚಿಸಿದ್ದಾರೆ.

ಈ ಮೊದಲು ಪ್ರತಿ ಗ್ರಾಮ ಪಂಚಾಯ್ತಿವಾರು ಗಣಿತ ಶಿಕ್ಷಕರಿಗೆ ವೇದ ಗಣಿತ ಪಾಠ ಮಾಡಲು ಸೆಪ್ಟಂಬರ್ 15ರಂದು ತರಬೇತಿ ನೀಡಲಾಗಿತ್ತು. ಆದರೆ ಇಲಾಖೆಯ ಮೇಲಾಧಿಕಾಇಗಳ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ವೇದ ಗಣಿತ ತರಗತಿಗಳನ್ನು ತಡೆಹಿಡಿಯಲು ಸೂಚಿಸಲಾಗಿದೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 5 ರಿಂದ 8ನೇ ತರಗತಿವರೆಗಿನ 25 ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಹಿತ ವೇದ ಗಣಿತ ತರಬೇತಿ ನೀಡುವ ಜವಾಬ್ದಾರಿಯನ್ನು ಹಿರಿಯೂರಿನ ಎ.ವಿ.ಎಂ ಅಕಾಡೆಮಿಗೆ ವಹಿಸಲಾಗಿದೆ. ಆ ಸಂಸ್ಥೆಯು ಸರ್ಕಾರಿ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದು, ಅವರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ. ಎ.ವಿ.ಎಂ ಸಂಸ್ಥೆಗೆ ರಾಜ್ಯದ ಪ್ರತಿ ಗ್ರಾಮ ಪಂಚಾಯ್ತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದ್ದು ಅದಕ್ಕಾಗಿ ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.

ಇನ್ನು ಶಿಕ್ಷಕರಿಗೆ ತರಬೇತಿ, ಕಲಿಕಾ ಕಿಟ್ ಮತ್ತು ಸಮವಸ್ತ್ರ ನೀಡುವ ಸರ್ಕಾರೇತರ ಸಂಸ್ಥೆಗೆ ಪ್ರತಿ ಗ್ರಾಮ ಪಂಚಾಯ್ತಿಗಳು ಸಹ ತಲಾ ಒಂದೊಂದು ಲಕ್ಷ ಹಣ ನೀಡುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಇನ್ನೊಂದೆಡೆ ಈ ವೇದಗಣಿತ ಕಲಿಕೆಯಿಂದ ಮಕ್ಕಳು ನಿಜವಾದ ಗಣಿತ ಕಲಿಯದಿರಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. “ವೇದಗಣಿತ ಕಲಿಕೆಯಿಂದ ಏನೂ ಉಪಯೋಗವಿಲ್ಲ. ಅದರಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಹಂತದ ವಿದ್ಯಾರ್ಥಿಗಳಿಗೆ ಶಾರ್ಟ್‌ಕಟ್ ವಿಧಾನದಲ್ಲಿ ಗುಣಾಕಾರ ಮತ್ತು ಭಾಗಕಾರವನ್ನು ಹೇಳಿಕೊಡಲಾಗುತ್ತದೆ. ಆದರೆ ಅದರಿಂದ ಗಣಿತಕ್ಕೆ ಬೇಕಾದ ತಾರ್ಕಿಕ ಚಿಂತನೆಗಳು ಅಭಿವೃದ್ಧಿಯಾಗುವುದಿಲ್ಲ” ಎಂದು ಬೆಂಗಳೂರಿನ ಭಾರತೀಯ ವಿದ್ಯಾಭವನದ ಗಾಂಧಿ ಸೆಂಟರ್ ಅಫ್ ಸೈನ್ಸ್ ಅಂಡ್ ಹ್ಯೂಮನ್ ವ್ಯಾಲ್ಯೂಸ್ ವಿಭಾಗದ ಗೌರವ ನಿರ್ದೇಶಕರೂ ಹಾಗೂ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯಲ್ಲಿ ಗೌರವ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಎಸ್.ಬಾಲಚಂದ್ರ ರಾವ್ ರವರು ಅಭಿಪ್ರಾಯಪಟ್ಟಿದ್ದಾರೆ.

ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ ಮುಂಬೈನ ಗಣಿತಶಾಸ್ತ್ರದ ಪ್ರಾಧ್ಯಾಪಕರಾದ ಎಸ್.ಜಿ.ದಾನಿಯವರು ವೇದಗಣಿತ ಎಂದು ಕರೆಯುವುದನ್ನೆ ವಿರೋಧಿಸುತ್ತಾರೆ. ಅದು ವೇದ ಕಾಲದ್ದು ಅಲ್ಲ ಮತ್ತು ಗಣಿತವೂ ಅಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ. “ವೇದಗಣಿತ ಎಂಬ ಪುಸ್ತಕದಲ್ಲಿ ಬಳಸಲಾದ ವಿಧಾನಗಳು ಪ್ರಾಚೀನ ಕಾಲದ ಅಂಕಗಣಿತದ ತಂತ್ರಗಳೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಪುಸ್ತಕದಲ್ಲಿನ ಅಂಕಗಣಿತದ ತಂತ್ರಗಳಲ್ಲಿ ಬಳಸಲಾದ ಸಂಕೇತದಿಂದ ಸ್ಪಷ್ಟವಾಗುತ್ತದೆ. ಪ್ರಪಂಚದ ಯಾವುದೇ ಶಾಲೆಗಳಲ್ಲಿಯೂ ಈ ಗಣಿತವನ್ನು ಕಲಿಸುತ್ತಿಲ್ಲ” ಎಂಬುದು ಅವರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ವೇದಗಣಿತ ಎಂಬುದೇ ಇಲ್ಲ: ಈ ಕುರಿತು ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...