Homeಕರ್ನಾಟಕಚಿಕ್ಕಬಳ್ಳಾಪುರ: ’ಜನಪದವಾಗಲಿ ಸಂವಿಧಾನ’ ವಿನೂತನ ಅಭಿಯಾನಕ್ಕೆ ನಾಳೆ ಚಾಲನೆ

ಚಿಕ್ಕಬಳ್ಳಾಪುರ: ’ಜನಪದವಾಗಲಿ ಸಂವಿಧಾನ’ ವಿನೂತನ ಅಭಿಯಾನಕ್ಕೆ ನಾಳೆ ಚಾಲನೆ

ಅಭಿಯಾನದಲ್ಲಿ ಸಂವಿಧಾನ ಪೂರ್ವ ಹಾಗೂ ಸಂವಿಧಾನ ಜಾರಿಯಾದ ನಂತರದ ಭಾರತ ದೇಶದ ಚಿತ್ರಣಗಳನ್ನೊಳಗೊಂಡ ಭಿತ್ತಿ ಚಿತ್ರ ಪ್ರದರ್ಶನ, ಕಾರ್ಯಾಗಾರಗಳು ನಡೆಯಲಿವೆ

- Advertisement -
- Advertisement -

’ನವೆಂಬರ್ 26 ರ ಸಂವಿಧಾನ ದಿನಾಚರಣೆ’ಯನ್ನು ’ಜನಪದವಾಗಲಿ ಸಂವಿಧಾನ’ ಎಂಬ ವಿನೂತನ ಅಭಿಯಾನದ ಮೂಲಕ, ಭಾರತ ಸಂವಿಧಾನದ ಆಶಯ, ತತ್ವ ಮತ್ತು ಸಿದ್ದಾಂತಗಳ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಆಚರಿಸಲು ’ಜನಪದವಾಗಲಿ ಸಂವಿಧಾನ ವೇದಿಕೆ’ ಕಾರ್ಯಕ್ರಮ ರೂಪಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ವೇದಿಕೆಯು, ಸಂವಿಧಾನ ದಿನಾಚರಣೆಯನ್ನು ನವೆಂಬರ್‌ 26-2020 ರಿಂದ 2021 ನವೆಂಬರ್‌ 26 ರವರೆಗೆ ಒಂದು ವರ್ಷದ ಅಭಿಯಾನ ಮಾಡಲಿದ್ದು, ಅಭಿಯಾನದಲ್ಲಿ ಭಾರತ ಸಂವಿಧಾನದ ಆಶಯ, ತತ್ವ ಮತ್ತು ಸಿದ್ದಾಂತಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಪ್ರತಿಯೊಬ್ಬ ನಾಗರಿಕ, ಮಹಿಳೆ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮ ಕೈಗೊಳ್ಳುತ್ತೇವೆ ಎಂದಿದೆ.

ಇದನ್ನೂ ಓದಿ: ಉತ್ತರ ಸಂವಿಧಾನದಲ್ಲಿದೆ, ಮೀಸಲಾತಿ ವಿರೋಧಿ ಸಂಘಪರಿವಾರದ ಕಚೇರಿಗಳಲ್ಲಿ ಅಲ್ಲ: ಅನಂತನಾಯಕ್ ಎನ್

ಅಭಿಯಾನವು 26 ನವೆಂಬರ್‌ 2020(ನಾಳೆ) ರಂದು ಜಿಲ್ಲೆಯ ವಿದುರಾಶ್ವತ್ಥದ ಸ್ವತಂತ್ರ್ಯ ಸ್ಮಾರಕ ವೀರಸೌಧದಲ್ಲಿ ಸಾಂಕೇತಿಕವಾಗಿ ಉದ್ಘಾಟನೆಗೊಳ್ಳಲಿದ್ದು, ಎಲ್ಲಾ ತಾಲ್ಲೂಕುಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ 60 ದಿನಗಳ ಕಾಲ ಅಭಿಯಾನ ಜರುಗಲಿದೆ.

“ಅಭಿಯಾನದಲ್ಲಿ ಸಂವಿಧಾನ ಪೂರ್ವ ಹಾಗೂ ಸಂವಿಧಾನ ಜಾರಿಯಾದ ನಂತರದ ಭಾರತ ದೇಶದ ಚಿತ್ರಣಗಳನ್ನೊಳಗೊಂಡ ಭಿತ್ತಿ ಚಿತ್ರ ಪ್ರದರ್ಶನ ಸೇರಿದಂತೆ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಕಾರ್ಯಾಗಾರಗಳು ನಡೆಯಲಿವೆ. ರೈತ ಕಾರ್ಮಿಕರು ಮತ್ತು ಮಹಿಳೆಯರಲ್ಲಿ ಅರಿವು ಮೂಡಲು ಸಂವಿಧಾನದ ಸಿದ್ದಾಂತ ಮತ್ತು ಆಶಯಗಳನ್ನೊಳಗೊಂಡ ಕಥಾ ವಸ್ತುವಿನ ಬೀದಿ ನಾಟಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದ್ದು, ಇದೇ ಸಮಯದಲ್ಲಿ ಸಂವಿಧಾನ ರಚನಾ ಸಭೆಯ ವಿಷಯಗಳ ಕುರಿತು ಕಿರುಹೊತ್ತಿಗೆಗಳನ್ನು ವಿತರಿಸಲಾಗುತ್ತದೆ” ಎಂದು ಪ್ರಕಟಣೆ ತಿಳಿಸಿದೆ.

ಅಭಿಯಾನದಲ್ಲಿ ಜಿಲ್ಲೆಯ ಹಿರಿಯ ಚಿಂತಕರು, ಸಾಹಿತಿಗಳು, ಕಲಾವಿದರು, ಸಮಾನ ಮನಸ್ಕರು, ರೈತಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು ಪಾಲ್ಗೊಳ್ಳಲಿದ್ದಾರೆಂದು ಪ್ರಕಟನೆಯು, “ಜಿಲ್ಲೆಯ ಎಲ್ಲಾ 6 ತಾಲ್ಲೂಕಿನಲ್ಲಿಯೂ ತಾಲ್ಲೂಕು ಮಟ್ಟದ ಜನಪದವಾಗಲಿ ಸಂವಿಧಾನ ಅಭಿಯಾನ ನಡೆಯಲಿದೆ” ಎಂದು ಹೇಳಿದೆ.

ಇದನ್ನೂ ಓದಿ: ಕೀಲಾರ ಟೆಂಟ್ ಹೌಸ್-1: ʼದ ಕಾನ್ಸ್ಟಿಟ್ಯೂಶನ್ʼ – ಸಂವಿಧಾನ, ಸಮುದಾಯ ಪ್ರಜ್ಞೆಯ ಸಮನ್ವಯ ಸಾರುವ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...