Homeಕರ್ನಾಟಕಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ..

ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ..

ಕೂಡಲೇ ಹಣ ಬಿಡುಗಡೆ ಮಾಡಲು ಒಬ್ಬ ಮಾಜಿ ಅಧ್ಯಕ್ಷನಾಗಿ ಆಗ್ರಹಿಸುತ್ತೇನೆ. ಈ ರೀತಿಯ ರಾಜಕೀಯ ಹಸ್ತಕ್ಷೇಪ ಯಾರಿಗೂ ಸಲ್ಲದು - ಚಂಪಾ.

- Advertisement -
- Advertisement -

ಜನವರಿ 10-11ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಕಲ್ಕುಳಿ ವಿಠಲ ಹೆಗ್ಗಡೆಯವರನ್ನು ಬದಲಿಸಿದರೆ ಬೆಂಗಳೂರಿನ ಕ.ಸಾ.ಪ ಕಚೇರಿ ಎದುರು ಧರಣಿ ನಡೆಸುತ್ತೇನೆ ಎಂದು ಹಿರಿಯ ಸಾಹಿತಿಗಳಾದ ಜಗದೀಶ್‌ ಕೊಪ್ಪ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪತ್ರವನ್ನು ಬರೆದಿರುವ ಅವರು ಇದಕ್ಕೆ ಆಸ್ಪದ ಕೊಡುವುದಿಲ್ಲ ಎಂದು ನಂಬಿದ್ದೇನೆ. ಆದರೆ ಒಂದು ವೇಳೆ ಹಾಗೇನಾದರೂ ಆದರೆ ಧರಣಿ ನಿಶ್ಚಿತ. ನನ್ನೊಡನೆ ಸಮಾನ ಮನಸ್ಕರು ಜೊತೆಗೂಡಿ ಎಂದು ಮನವಿ ಮಾಡಿದ್ದಾರೆ. ಅವರು ಬರೆದ ಪತ್ರ ಕೆಳಗಿನಂತಿದೆ.

ಕನ್ನಡದ ಬಂಧು ಬಾಂಧವರಲ್ಲಿ ವಿನಂತಿ.

ಆತ್ಮೀಯರೇ, ಇದೇ ಜನವರಿ ೧೦ ಮತ್ತು ೧೧ ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನನ್ನ ಮೂರು ದಶಕಗಳ ಮಿತ್ರ ಹಾಗೂ ಸಾಮಾಜಿಕ ಚಳುವಳಿಯ ಹೋರಾಟಗಾರ ಕಲ್ಕುಳಿ ಹೆಗ್ಗಡೆ ಆಯ್ಕೆಯಾಗಿದ್ದಾರೆ. ಆದರೆ, ಅಲ್ಲಿನ ಸಂಘ ಪರಿವಾರದ ವಿ.ಹೆಚ್.ಪಿ ಮತ್ತು ಶ್ರೀ ರಾಮಸೇನೆಯ ಕಪಿ ಪುಂಗವರು ತಮ್ಮ ಬುಡಕ್ಕೆ ಮೆಣಸಿನಕಾಯಿ ಇಟ್ಟುಕೊಂಡು ಅಧ್ಯಕ್ಷರನ್ನು ಬದಲಿಸುವಂತೆ ಹೋರಾಟ ನಡೆಸುತ್ತಿದ್ದಾರೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಈವರೆಗೆ ಮೌನವಾಗಿದೆ. ಸಮ್ಮೇಳನದ ಹಣವನ್ನು ಈವರೆಗೆ ಬಿಡುಗಡೆ ಮಾಡಿಲ್ಲ. ಜಿಲ್ಲಾಧ್ಯಕ್ಷ ಮತ್ತು ಶೃಂಗೇರಿ ತಾಲೂಕಿನ ಅಧ್ಯಕ್ಷ ಇಬ್ಬರೂ ಸರ್ಕಾರಿ ನೌಕರರಾಗಿರುವ ಕಾರಣ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ.

ಕನ್ನಡ ಸಾಹಿತ್ಯ ಪರಿಷತ್ತು ಒಂದು ಸ್ವಾಯತ್ತ ಸಂಸ್ಥೆ. ಅದರ ಮೇಲೆ ಕನ್ನಡಿಗರಿಗೆ ಮಾತ್ರ ಹಕ್ಕಿದೆಯೇ ಹೊರತು, ಎದೆ ಸೀಳಿದರೆ ಮೂರಕ್ಷರವೂ ಇಲ್ಲದ ದೊಣ್ಣೆ ನಾಯಕರಿಗೆ ಯಾವ ಹಕ್ಕಿಲ್ಲ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಅವಿರೋಧವಾಗಿ ಆಯ್ಕೆಯಾದ ಸಮ್ಮೇಳನದ ಅಧ್ಯಕ್ಷರನ್ನು ಬದಲಾಯಿಸಿದ ಘಟನೆಗಳು ಜರುಗಿಲ್ಲ. ಒಂದು ವೇಳೆ ಅಂತಹ ಬದಲಾವಣೆಯಾದರೆ, ನಾವೆಲ್ಲಾ ಸಾಮೂಹಿಕವಾಗಿ ಪ್ರತಿಭಟಿಸುವುದು ನಮ್ಮ ಕರ್ತವ್ಯವಾಗಿದೆ. ಏಕೆಂದರೆ, ಮತೀಯ ಶಕ್ತಿಗಳಿಗೆ ನಾವು ಮಣಿದರೆ, ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಘ ಪರಿವಾರದ ಶಾಖಾ ಮಠವಾಗುವುದರಲ್ಲಿ ಸಂಶಯವಿಲ್ಲ.

ಕನ್ನಡವನ್ನು ಮಾಧ್ಯಮ ಭಾಷೆಯಾಗಿ ಉಳಿಸುವ ಕೆಲಸವನ್ನು ಹೊರತು ಪಡಿಸಿ, ಈವೆಂಟ್ ಮೇನೇಜ್ ಮೆಂಟ್ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಯ ಸ್ವರೂಪವನ್ನು ಬದಲಾಯಿಸಿಕೊಳ್ಳಲು ಒತ್ತಾಯ ಮಾಡುವುದರ ಜೊತೆಗೆ ನಾವೆಲ್ಲಾ ಕಲ್ಕುಳಿ ವಿಠಲ ಹೆಗ್ಗಡೆಯವರ ಪರ ನಿಲ್ಲೋಣ.

ನನಗೆ ಕಳೆದ ಹದಿನೈದು ವರ್ಷಗಳಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆ ಸಂಪರ್ಕವಿಲ್ಲ. ಈಗಿನ ಅಧ್ಯಕ್ಷ ಮನು ಬಳಿಗಾರ್ ಜೊತೆ ಸಂಪರ್ಕ ಇರುವ ನನ್ನ ಅನೇಕ ಮಿತ್ರರಿದ್ದಾರೆ. ಅವರೆಲ್ಲರೂ ಈ ವಿಷಯ ಕುರಿತಾಗಿ ಅವರ ಜೊತೆ ಮಾತನಾಡಬೇಕಾಗಿ ನನ್ನ ವಿನಂತಿ.

ಸರ್ಕಾರ ಅಥವಾ ಇತರೆ ಬಾಹ್ಯ ಒತ್ತಡಕ್ಕೆ ಮಣಿದು ಹೆಗ್ಗಡೆಯವರನ್ನು ಬದಲಿಸಿದರೆ, ನಾನು ಸಮಾನ ಮನಸ್ಕ ಮಿತ್ರರ ಜೊತೆಗೂಡಿ ಕೇಂದ್ರ ಸಾಹಿತ್ಯ ಪರಿಷತ್ತಿನ ಕಚೇರಿಯ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾನೆ. ನಿಮ್ಮೆಲ್ಲರ ಬೆಂಬಲವನ್ನು ಕೋರುತ್ತೇನೆ.
– ಜಗದೀಶ್ ಕೊಪ್ಪ

ಜಗದೀಶ್ ಕೊಪ್ಪ

ಈ ಪತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬೆಂಬಲದ ಮಹಾಪೂರವೇ ಹರಿದುಬಂದಿದೆ. ದೆಹಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಹೋರಾಟಗಾರರಾದ ಡಾ.ವಾಸು ಎಚ್‌.ವಿ, ಚಿತ್ರನಿರ್ದೇಶಕರಾದ ಕೇಸರಿ ಹರವೂ ಸೇರಿದಂತೆ ಹಲವಾರು ಹೋರಾಟಕ್ಕೆ ಜೊತೆಗೂಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಸಾಪದ ಮಾಜಿ ರಾಜ್ಯಾಧ್ಯಕ್ಷರು ಮತ್ತು ಹಿರಿಯ ಸಾಹಿತಿ, ಹೋರಾಟಗಾರರಾದ ಚಂಪಾರವರನ್ನು ಮಾತಾಡಿಸಿತು. ಅವರು “ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಅದು ಕೇಂದ್ರ ಘಟಕದ ಅಡಿಯಲ್ಲಿ ಕೆಲಸ ಮಾಡುತ್ತದೆ. ಅದು ತಮ್ಮ ಕಾರ್ಯಕಾರಿ ಸಮಿತಿಯಲ್ಲಿ ಸರ್ವಾನುಮತದಿಂದ ಒಬ್ಬ ಅಧ್ಯಕ್ಷರನ್ನು ಆಯ್ಕೆ ಮಾಡಿರುವುದು ಕ್ರಮಬದ್ಧವಾದ ನಡವಳಿಕೆಯಾಗಿದೆ. ಆದ್ದರಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನವರು ಹಣ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಲಾಗುವುದಿಲ್ಲ, ಕೂಡಲೇ ಹಣ ಬಿಡುಗಡೆ ಮಾಡಲು ಒಬ್ಬ ಮಾಜಿ ಅಧ್ಯಕ್ಷನಾಗಿ ಆಗ್ರಹಿಸುತ್ತೇನೆ. ಈ ರೀತಿಯ ರಾಜಕೀಯ ಹಸ್ತಕ್ಷೇಪ ಯಾರಿಗೂ ಸಲ್ಲದು” ಎಂದು ತಿಳಿಸಿದ್ದಾರೆ.

ಚಂಪಾ

ಇನ್ನು ಈ ಕುರಿತು ಪ್ರತಿಕ್ರಿಯೆ ಪಡೆಯಲು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾದ ಮನು ಬಳಿಗಾರ್‌ರವರನ್ನು ಸಂಪರ್ಕಿಸಲು ಪ್ರಯತ್ನಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ..

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ – ಸಿರಿಮನೆ ನಾಗರಾಜ್‌

ಕಲ್ಕುಳಿ ವಿಠಲ ಹೆಗ್ಡೆ ಅವರ ಮಂಗನ ಬ್ಯಾಟೆ ಕನ್ನಡದ ವಿಶಿಷ್ಟ ಕೃತಿ. ದಶಕಕ್ಕೆ ಮುಂಚೆಯೇ ಶಿವಮೊಗ್ಗದಲ್ಲಿ ಜರುಗಿದ ಅಖಿಲಭಾರತ ಸಮ್ಮೇಳನದಲ್ಲಿ‌ ಮಾತನಾಡಿದ್ದಾರೆ ಹೆಗ್ಡೆ. ಅವರ ಮೇಲೆ ಪೂರ್ವಾಗ್ರಹಪೀಡಿತ ಪ್ರಕರಣಗಳು ಹೂಡಲ್ಪಟ್ಟಿವೆ ಎಂಬುದು ಎಲ್ಲರೂ ಅರಿತ ಸಂಗತಿಯೇ. ಕೆಲ ಪಟ್ಟಭದ್ರರಿಗೆ ಮೆಚ್ಚಾಗಲಿಲ್ಲವೆಂದು ಅವರ ನಿಯೋಜನೆಯನ್ನು ತಪ್ಪಿಸುವ ಯತ್ನ ಮಾಡಿದರೆ ಅದೊಂದು ಕೆಟ್ಟ ಪರಂಪರೆಯಾಗುವ ಸಂಭವವಿದೆ. ಇದನ್ನು ತೀವ್ರವಾಗಿ ವಿರೋಧಿಸಬೇಕಿದೆ ಎಂದು ರೋಹಿತ್‌ ಅಗಸರಹಳ್ಳಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...