Homeಕರ್ನಾಟಕಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ..

ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ..

ಕೂಡಲೇ ಹಣ ಬಿಡುಗಡೆ ಮಾಡಲು ಒಬ್ಬ ಮಾಜಿ ಅಧ್ಯಕ್ಷನಾಗಿ ಆಗ್ರಹಿಸುತ್ತೇನೆ. ಈ ರೀತಿಯ ರಾಜಕೀಯ ಹಸ್ತಕ್ಷೇಪ ಯಾರಿಗೂ ಸಲ್ಲದು - ಚಂಪಾ.

- Advertisement -
- Advertisement -

ಜನವರಿ 10-11ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಕಲ್ಕುಳಿ ವಿಠಲ ಹೆಗ್ಗಡೆಯವರನ್ನು ಬದಲಿಸಿದರೆ ಬೆಂಗಳೂರಿನ ಕ.ಸಾ.ಪ ಕಚೇರಿ ಎದುರು ಧರಣಿ ನಡೆಸುತ್ತೇನೆ ಎಂದು ಹಿರಿಯ ಸಾಹಿತಿಗಳಾದ ಜಗದೀಶ್‌ ಕೊಪ್ಪ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪತ್ರವನ್ನು ಬರೆದಿರುವ ಅವರು ಇದಕ್ಕೆ ಆಸ್ಪದ ಕೊಡುವುದಿಲ್ಲ ಎಂದು ನಂಬಿದ್ದೇನೆ. ಆದರೆ ಒಂದು ವೇಳೆ ಹಾಗೇನಾದರೂ ಆದರೆ ಧರಣಿ ನಿಶ್ಚಿತ. ನನ್ನೊಡನೆ ಸಮಾನ ಮನಸ್ಕರು ಜೊತೆಗೂಡಿ ಎಂದು ಮನವಿ ಮಾಡಿದ್ದಾರೆ. ಅವರು ಬರೆದ ಪತ್ರ ಕೆಳಗಿನಂತಿದೆ.

ಕನ್ನಡದ ಬಂಧು ಬಾಂಧವರಲ್ಲಿ ವಿನಂತಿ.

ಆತ್ಮೀಯರೇ, ಇದೇ ಜನವರಿ ೧೦ ಮತ್ತು ೧೧ ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನನ್ನ ಮೂರು ದಶಕಗಳ ಮಿತ್ರ ಹಾಗೂ ಸಾಮಾಜಿಕ ಚಳುವಳಿಯ ಹೋರಾಟಗಾರ ಕಲ್ಕುಳಿ ಹೆಗ್ಗಡೆ ಆಯ್ಕೆಯಾಗಿದ್ದಾರೆ. ಆದರೆ, ಅಲ್ಲಿನ ಸಂಘ ಪರಿವಾರದ ವಿ.ಹೆಚ್.ಪಿ ಮತ್ತು ಶ್ರೀ ರಾಮಸೇನೆಯ ಕಪಿ ಪುಂಗವರು ತಮ್ಮ ಬುಡಕ್ಕೆ ಮೆಣಸಿನಕಾಯಿ ಇಟ್ಟುಕೊಂಡು ಅಧ್ಯಕ್ಷರನ್ನು ಬದಲಿಸುವಂತೆ ಹೋರಾಟ ನಡೆಸುತ್ತಿದ್ದಾರೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಈವರೆಗೆ ಮೌನವಾಗಿದೆ. ಸಮ್ಮೇಳನದ ಹಣವನ್ನು ಈವರೆಗೆ ಬಿಡುಗಡೆ ಮಾಡಿಲ್ಲ. ಜಿಲ್ಲಾಧ್ಯಕ್ಷ ಮತ್ತು ಶೃಂಗೇರಿ ತಾಲೂಕಿನ ಅಧ್ಯಕ್ಷ ಇಬ್ಬರೂ ಸರ್ಕಾರಿ ನೌಕರರಾಗಿರುವ ಕಾರಣ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ.

ಕನ್ನಡ ಸಾಹಿತ್ಯ ಪರಿಷತ್ತು ಒಂದು ಸ್ವಾಯತ್ತ ಸಂಸ್ಥೆ. ಅದರ ಮೇಲೆ ಕನ್ನಡಿಗರಿಗೆ ಮಾತ್ರ ಹಕ್ಕಿದೆಯೇ ಹೊರತು, ಎದೆ ಸೀಳಿದರೆ ಮೂರಕ್ಷರವೂ ಇಲ್ಲದ ದೊಣ್ಣೆ ನಾಯಕರಿಗೆ ಯಾವ ಹಕ್ಕಿಲ್ಲ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಅವಿರೋಧವಾಗಿ ಆಯ್ಕೆಯಾದ ಸಮ್ಮೇಳನದ ಅಧ್ಯಕ್ಷರನ್ನು ಬದಲಾಯಿಸಿದ ಘಟನೆಗಳು ಜರುಗಿಲ್ಲ. ಒಂದು ವೇಳೆ ಅಂತಹ ಬದಲಾವಣೆಯಾದರೆ, ನಾವೆಲ್ಲಾ ಸಾಮೂಹಿಕವಾಗಿ ಪ್ರತಿಭಟಿಸುವುದು ನಮ್ಮ ಕರ್ತವ್ಯವಾಗಿದೆ. ಏಕೆಂದರೆ, ಮತೀಯ ಶಕ್ತಿಗಳಿಗೆ ನಾವು ಮಣಿದರೆ, ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಘ ಪರಿವಾರದ ಶಾಖಾ ಮಠವಾಗುವುದರಲ್ಲಿ ಸಂಶಯವಿಲ್ಲ.

ಕನ್ನಡವನ್ನು ಮಾಧ್ಯಮ ಭಾಷೆಯಾಗಿ ಉಳಿಸುವ ಕೆಲಸವನ್ನು ಹೊರತು ಪಡಿಸಿ, ಈವೆಂಟ್ ಮೇನೇಜ್ ಮೆಂಟ್ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಯ ಸ್ವರೂಪವನ್ನು ಬದಲಾಯಿಸಿಕೊಳ್ಳಲು ಒತ್ತಾಯ ಮಾಡುವುದರ ಜೊತೆಗೆ ನಾವೆಲ್ಲಾ ಕಲ್ಕುಳಿ ವಿಠಲ ಹೆಗ್ಗಡೆಯವರ ಪರ ನಿಲ್ಲೋಣ.

ನನಗೆ ಕಳೆದ ಹದಿನೈದು ವರ್ಷಗಳಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆ ಸಂಪರ್ಕವಿಲ್ಲ. ಈಗಿನ ಅಧ್ಯಕ್ಷ ಮನು ಬಳಿಗಾರ್ ಜೊತೆ ಸಂಪರ್ಕ ಇರುವ ನನ್ನ ಅನೇಕ ಮಿತ್ರರಿದ್ದಾರೆ. ಅವರೆಲ್ಲರೂ ಈ ವಿಷಯ ಕುರಿತಾಗಿ ಅವರ ಜೊತೆ ಮಾತನಾಡಬೇಕಾಗಿ ನನ್ನ ವಿನಂತಿ.

ಸರ್ಕಾರ ಅಥವಾ ಇತರೆ ಬಾಹ್ಯ ಒತ್ತಡಕ್ಕೆ ಮಣಿದು ಹೆಗ್ಗಡೆಯವರನ್ನು ಬದಲಿಸಿದರೆ, ನಾನು ಸಮಾನ ಮನಸ್ಕ ಮಿತ್ರರ ಜೊತೆಗೂಡಿ ಕೇಂದ್ರ ಸಾಹಿತ್ಯ ಪರಿಷತ್ತಿನ ಕಚೇರಿಯ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾನೆ. ನಿಮ್ಮೆಲ್ಲರ ಬೆಂಬಲವನ್ನು ಕೋರುತ್ತೇನೆ.
– ಜಗದೀಶ್ ಕೊಪ್ಪ

ಜಗದೀಶ್ ಕೊಪ್ಪ

ಈ ಪತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬೆಂಬಲದ ಮಹಾಪೂರವೇ ಹರಿದುಬಂದಿದೆ. ದೆಹಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಹೋರಾಟಗಾರರಾದ ಡಾ.ವಾಸು ಎಚ್‌.ವಿ, ಚಿತ್ರನಿರ್ದೇಶಕರಾದ ಕೇಸರಿ ಹರವೂ ಸೇರಿದಂತೆ ಹಲವಾರು ಹೋರಾಟಕ್ಕೆ ಜೊತೆಗೂಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಸಾಪದ ಮಾಜಿ ರಾಜ್ಯಾಧ್ಯಕ್ಷರು ಮತ್ತು ಹಿರಿಯ ಸಾಹಿತಿ, ಹೋರಾಟಗಾರರಾದ ಚಂಪಾರವರನ್ನು ಮಾತಾಡಿಸಿತು. ಅವರು “ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಅದು ಕೇಂದ್ರ ಘಟಕದ ಅಡಿಯಲ್ಲಿ ಕೆಲಸ ಮಾಡುತ್ತದೆ. ಅದು ತಮ್ಮ ಕಾರ್ಯಕಾರಿ ಸಮಿತಿಯಲ್ಲಿ ಸರ್ವಾನುಮತದಿಂದ ಒಬ್ಬ ಅಧ್ಯಕ್ಷರನ್ನು ಆಯ್ಕೆ ಮಾಡಿರುವುದು ಕ್ರಮಬದ್ಧವಾದ ನಡವಳಿಕೆಯಾಗಿದೆ. ಆದ್ದರಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನವರು ಹಣ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಲಾಗುವುದಿಲ್ಲ, ಕೂಡಲೇ ಹಣ ಬಿಡುಗಡೆ ಮಾಡಲು ಒಬ್ಬ ಮಾಜಿ ಅಧ್ಯಕ್ಷನಾಗಿ ಆಗ್ರಹಿಸುತ್ತೇನೆ. ಈ ರೀತಿಯ ರಾಜಕೀಯ ಹಸ್ತಕ್ಷೇಪ ಯಾರಿಗೂ ಸಲ್ಲದು” ಎಂದು ತಿಳಿಸಿದ್ದಾರೆ.

ಚಂಪಾ

ಇನ್ನು ಈ ಕುರಿತು ಪ್ರತಿಕ್ರಿಯೆ ಪಡೆಯಲು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾದ ಮನು ಬಳಿಗಾರ್‌ರವರನ್ನು ಸಂಪರ್ಕಿಸಲು ಪ್ರಯತ್ನಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ..

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ – ಸಿರಿಮನೆ ನಾಗರಾಜ್‌

ಕಲ್ಕುಳಿ ವಿಠಲ ಹೆಗ್ಡೆ ಅವರ ಮಂಗನ ಬ್ಯಾಟೆ ಕನ್ನಡದ ವಿಶಿಷ್ಟ ಕೃತಿ. ದಶಕಕ್ಕೆ ಮುಂಚೆಯೇ ಶಿವಮೊಗ್ಗದಲ್ಲಿ ಜರುಗಿದ ಅಖಿಲಭಾರತ ಸಮ್ಮೇಳನದಲ್ಲಿ‌ ಮಾತನಾಡಿದ್ದಾರೆ ಹೆಗ್ಡೆ. ಅವರ ಮೇಲೆ ಪೂರ್ವಾಗ್ರಹಪೀಡಿತ ಪ್ರಕರಣಗಳು ಹೂಡಲ್ಪಟ್ಟಿವೆ ಎಂಬುದು ಎಲ್ಲರೂ ಅರಿತ ಸಂಗತಿಯೇ. ಕೆಲ ಪಟ್ಟಭದ್ರರಿಗೆ ಮೆಚ್ಚಾಗಲಿಲ್ಲವೆಂದು ಅವರ ನಿಯೋಜನೆಯನ್ನು ತಪ್ಪಿಸುವ ಯತ್ನ ಮಾಡಿದರೆ ಅದೊಂದು ಕೆಟ್ಟ ಪರಂಪರೆಯಾಗುವ ಸಂಭವವಿದೆ. ಇದನ್ನು ತೀವ್ರವಾಗಿ ವಿರೋಧಿಸಬೇಕಿದೆ ಎಂದು ರೋಹಿತ್‌ ಅಗಸರಹಳ್ಳಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...