Homeಕರ್ನಾಟಕಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ..

ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ..

ಕೂಡಲೇ ಹಣ ಬಿಡುಗಡೆ ಮಾಡಲು ಒಬ್ಬ ಮಾಜಿ ಅಧ್ಯಕ್ಷನಾಗಿ ಆಗ್ರಹಿಸುತ್ತೇನೆ. ಈ ರೀತಿಯ ರಾಜಕೀಯ ಹಸ್ತಕ್ಷೇಪ ಯಾರಿಗೂ ಸಲ್ಲದು - ಚಂಪಾ.

- Advertisement -
- Advertisement -

ಜನವರಿ 10-11ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಕಲ್ಕುಳಿ ವಿಠಲ ಹೆಗ್ಗಡೆಯವರನ್ನು ಬದಲಿಸಿದರೆ ಬೆಂಗಳೂರಿನ ಕ.ಸಾ.ಪ ಕಚೇರಿ ಎದುರು ಧರಣಿ ನಡೆಸುತ್ತೇನೆ ಎಂದು ಹಿರಿಯ ಸಾಹಿತಿಗಳಾದ ಜಗದೀಶ್‌ ಕೊಪ್ಪ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪತ್ರವನ್ನು ಬರೆದಿರುವ ಅವರು ಇದಕ್ಕೆ ಆಸ್ಪದ ಕೊಡುವುದಿಲ್ಲ ಎಂದು ನಂಬಿದ್ದೇನೆ. ಆದರೆ ಒಂದು ವೇಳೆ ಹಾಗೇನಾದರೂ ಆದರೆ ಧರಣಿ ನಿಶ್ಚಿತ. ನನ್ನೊಡನೆ ಸಮಾನ ಮನಸ್ಕರು ಜೊತೆಗೂಡಿ ಎಂದು ಮನವಿ ಮಾಡಿದ್ದಾರೆ. ಅವರು ಬರೆದ ಪತ್ರ ಕೆಳಗಿನಂತಿದೆ.

ಕನ್ನಡದ ಬಂಧು ಬಾಂಧವರಲ್ಲಿ ವಿನಂತಿ.

ಆತ್ಮೀಯರೇ, ಇದೇ ಜನವರಿ ೧೦ ಮತ್ತು ೧೧ ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನನ್ನ ಮೂರು ದಶಕಗಳ ಮಿತ್ರ ಹಾಗೂ ಸಾಮಾಜಿಕ ಚಳುವಳಿಯ ಹೋರಾಟಗಾರ ಕಲ್ಕುಳಿ ಹೆಗ್ಗಡೆ ಆಯ್ಕೆಯಾಗಿದ್ದಾರೆ. ಆದರೆ, ಅಲ್ಲಿನ ಸಂಘ ಪರಿವಾರದ ವಿ.ಹೆಚ್.ಪಿ ಮತ್ತು ಶ್ರೀ ರಾಮಸೇನೆಯ ಕಪಿ ಪುಂಗವರು ತಮ್ಮ ಬುಡಕ್ಕೆ ಮೆಣಸಿನಕಾಯಿ ಇಟ್ಟುಕೊಂಡು ಅಧ್ಯಕ್ಷರನ್ನು ಬದಲಿಸುವಂತೆ ಹೋರಾಟ ನಡೆಸುತ್ತಿದ್ದಾರೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಈವರೆಗೆ ಮೌನವಾಗಿದೆ. ಸಮ್ಮೇಳನದ ಹಣವನ್ನು ಈವರೆಗೆ ಬಿಡುಗಡೆ ಮಾಡಿಲ್ಲ. ಜಿಲ್ಲಾಧ್ಯಕ್ಷ ಮತ್ತು ಶೃಂಗೇರಿ ತಾಲೂಕಿನ ಅಧ್ಯಕ್ಷ ಇಬ್ಬರೂ ಸರ್ಕಾರಿ ನೌಕರರಾಗಿರುವ ಕಾರಣ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ.

ಕನ್ನಡ ಸಾಹಿತ್ಯ ಪರಿಷತ್ತು ಒಂದು ಸ್ವಾಯತ್ತ ಸಂಸ್ಥೆ. ಅದರ ಮೇಲೆ ಕನ್ನಡಿಗರಿಗೆ ಮಾತ್ರ ಹಕ್ಕಿದೆಯೇ ಹೊರತು, ಎದೆ ಸೀಳಿದರೆ ಮೂರಕ್ಷರವೂ ಇಲ್ಲದ ದೊಣ್ಣೆ ನಾಯಕರಿಗೆ ಯಾವ ಹಕ್ಕಿಲ್ಲ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಅವಿರೋಧವಾಗಿ ಆಯ್ಕೆಯಾದ ಸಮ್ಮೇಳನದ ಅಧ್ಯಕ್ಷರನ್ನು ಬದಲಾಯಿಸಿದ ಘಟನೆಗಳು ಜರುಗಿಲ್ಲ. ಒಂದು ವೇಳೆ ಅಂತಹ ಬದಲಾವಣೆಯಾದರೆ, ನಾವೆಲ್ಲಾ ಸಾಮೂಹಿಕವಾಗಿ ಪ್ರತಿಭಟಿಸುವುದು ನಮ್ಮ ಕರ್ತವ್ಯವಾಗಿದೆ. ಏಕೆಂದರೆ, ಮತೀಯ ಶಕ್ತಿಗಳಿಗೆ ನಾವು ಮಣಿದರೆ, ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಘ ಪರಿವಾರದ ಶಾಖಾ ಮಠವಾಗುವುದರಲ್ಲಿ ಸಂಶಯವಿಲ್ಲ.

ಕನ್ನಡವನ್ನು ಮಾಧ್ಯಮ ಭಾಷೆಯಾಗಿ ಉಳಿಸುವ ಕೆಲಸವನ್ನು ಹೊರತು ಪಡಿಸಿ, ಈವೆಂಟ್ ಮೇನೇಜ್ ಮೆಂಟ್ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಯ ಸ್ವರೂಪವನ್ನು ಬದಲಾಯಿಸಿಕೊಳ್ಳಲು ಒತ್ತಾಯ ಮಾಡುವುದರ ಜೊತೆಗೆ ನಾವೆಲ್ಲಾ ಕಲ್ಕುಳಿ ವಿಠಲ ಹೆಗ್ಗಡೆಯವರ ಪರ ನಿಲ್ಲೋಣ.

ನನಗೆ ಕಳೆದ ಹದಿನೈದು ವರ್ಷಗಳಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆ ಸಂಪರ್ಕವಿಲ್ಲ. ಈಗಿನ ಅಧ್ಯಕ್ಷ ಮನು ಬಳಿಗಾರ್ ಜೊತೆ ಸಂಪರ್ಕ ಇರುವ ನನ್ನ ಅನೇಕ ಮಿತ್ರರಿದ್ದಾರೆ. ಅವರೆಲ್ಲರೂ ಈ ವಿಷಯ ಕುರಿತಾಗಿ ಅವರ ಜೊತೆ ಮಾತನಾಡಬೇಕಾಗಿ ನನ್ನ ವಿನಂತಿ.

ಸರ್ಕಾರ ಅಥವಾ ಇತರೆ ಬಾಹ್ಯ ಒತ್ತಡಕ್ಕೆ ಮಣಿದು ಹೆಗ್ಗಡೆಯವರನ್ನು ಬದಲಿಸಿದರೆ, ನಾನು ಸಮಾನ ಮನಸ್ಕ ಮಿತ್ರರ ಜೊತೆಗೂಡಿ ಕೇಂದ್ರ ಸಾಹಿತ್ಯ ಪರಿಷತ್ತಿನ ಕಚೇರಿಯ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾನೆ. ನಿಮ್ಮೆಲ್ಲರ ಬೆಂಬಲವನ್ನು ಕೋರುತ್ತೇನೆ.
– ಜಗದೀಶ್ ಕೊಪ್ಪ

ಜಗದೀಶ್ ಕೊಪ್ಪ

ಈ ಪತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬೆಂಬಲದ ಮಹಾಪೂರವೇ ಹರಿದುಬಂದಿದೆ. ದೆಹಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಹೋರಾಟಗಾರರಾದ ಡಾ.ವಾಸು ಎಚ್‌.ವಿ, ಚಿತ್ರನಿರ್ದೇಶಕರಾದ ಕೇಸರಿ ಹರವೂ ಸೇರಿದಂತೆ ಹಲವಾರು ಹೋರಾಟಕ್ಕೆ ಜೊತೆಗೂಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಸಾಪದ ಮಾಜಿ ರಾಜ್ಯಾಧ್ಯಕ್ಷರು ಮತ್ತು ಹಿರಿಯ ಸಾಹಿತಿ, ಹೋರಾಟಗಾರರಾದ ಚಂಪಾರವರನ್ನು ಮಾತಾಡಿಸಿತು. ಅವರು “ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಅದು ಕೇಂದ್ರ ಘಟಕದ ಅಡಿಯಲ್ಲಿ ಕೆಲಸ ಮಾಡುತ್ತದೆ. ಅದು ತಮ್ಮ ಕಾರ್ಯಕಾರಿ ಸಮಿತಿಯಲ್ಲಿ ಸರ್ವಾನುಮತದಿಂದ ಒಬ್ಬ ಅಧ್ಯಕ್ಷರನ್ನು ಆಯ್ಕೆ ಮಾಡಿರುವುದು ಕ್ರಮಬದ್ಧವಾದ ನಡವಳಿಕೆಯಾಗಿದೆ. ಆದ್ದರಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನವರು ಹಣ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಲಾಗುವುದಿಲ್ಲ, ಕೂಡಲೇ ಹಣ ಬಿಡುಗಡೆ ಮಾಡಲು ಒಬ್ಬ ಮಾಜಿ ಅಧ್ಯಕ್ಷನಾಗಿ ಆಗ್ರಹಿಸುತ್ತೇನೆ. ಈ ರೀತಿಯ ರಾಜಕೀಯ ಹಸ್ತಕ್ಷೇಪ ಯಾರಿಗೂ ಸಲ್ಲದು” ಎಂದು ತಿಳಿಸಿದ್ದಾರೆ.

ಚಂಪಾ

ಇನ್ನು ಈ ಕುರಿತು ಪ್ರತಿಕ್ರಿಯೆ ಪಡೆಯಲು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾದ ಮನು ಬಳಿಗಾರ್‌ರವರನ್ನು ಸಂಪರ್ಕಿಸಲು ಪ್ರಯತ್ನಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ..

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ – ಸಿರಿಮನೆ ನಾಗರಾಜ್‌

ಕಲ್ಕುಳಿ ವಿಠಲ ಹೆಗ್ಡೆ ಅವರ ಮಂಗನ ಬ್ಯಾಟೆ ಕನ್ನಡದ ವಿಶಿಷ್ಟ ಕೃತಿ. ದಶಕಕ್ಕೆ ಮುಂಚೆಯೇ ಶಿವಮೊಗ್ಗದಲ್ಲಿ ಜರುಗಿದ ಅಖಿಲಭಾರತ ಸಮ್ಮೇಳನದಲ್ಲಿ‌ ಮಾತನಾಡಿದ್ದಾರೆ ಹೆಗ್ಡೆ. ಅವರ ಮೇಲೆ ಪೂರ್ವಾಗ್ರಹಪೀಡಿತ ಪ್ರಕರಣಗಳು ಹೂಡಲ್ಪಟ್ಟಿವೆ ಎಂಬುದು ಎಲ್ಲರೂ ಅರಿತ ಸಂಗತಿಯೇ. ಕೆಲ ಪಟ್ಟಭದ್ರರಿಗೆ ಮೆಚ್ಚಾಗಲಿಲ್ಲವೆಂದು ಅವರ ನಿಯೋಜನೆಯನ್ನು ತಪ್ಪಿಸುವ ಯತ್ನ ಮಾಡಿದರೆ ಅದೊಂದು ಕೆಟ್ಟ ಪರಂಪರೆಯಾಗುವ ಸಂಭವವಿದೆ. ಇದನ್ನು ತೀವ್ರವಾಗಿ ವಿರೋಧಿಸಬೇಕಿದೆ ಎಂದು ರೋಹಿತ್‌ ಅಗಸರಹಳ್ಳಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...