Homeಕರ್ನಾಟಕಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ..

ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ..

ಕೂಡಲೇ ಹಣ ಬಿಡುಗಡೆ ಮಾಡಲು ಒಬ್ಬ ಮಾಜಿ ಅಧ್ಯಕ್ಷನಾಗಿ ಆಗ್ರಹಿಸುತ್ತೇನೆ. ಈ ರೀತಿಯ ರಾಜಕೀಯ ಹಸ್ತಕ್ಷೇಪ ಯಾರಿಗೂ ಸಲ್ಲದು - ಚಂಪಾ.

- Advertisement -
- Advertisement -

ಜನವರಿ 10-11ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಕಲ್ಕುಳಿ ವಿಠಲ ಹೆಗ್ಗಡೆಯವರನ್ನು ಬದಲಿಸಿದರೆ ಬೆಂಗಳೂರಿನ ಕ.ಸಾ.ಪ ಕಚೇರಿ ಎದುರು ಧರಣಿ ನಡೆಸುತ್ತೇನೆ ಎಂದು ಹಿರಿಯ ಸಾಹಿತಿಗಳಾದ ಜಗದೀಶ್‌ ಕೊಪ್ಪ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪತ್ರವನ್ನು ಬರೆದಿರುವ ಅವರು ಇದಕ್ಕೆ ಆಸ್ಪದ ಕೊಡುವುದಿಲ್ಲ ಎಂದು ನಂಬಿದ್ದೇನೆ. ಆದರೆ ಒಂದು ವೇಳೆ ಹಾಗೇನಾದರೂ ಆದರೆ ಧರಣಿ ನಿಶ್ಚಿತ. ನನ್ನೊಡನೆ ಸಮಾನ ಮನಸ್ಕರು ಜೊತೆಗೂಡಿ ಎಂದು ಮನವಿ ಮಾಡಿದ್ದಾರೆ. ಅವರು ಬರೆದ ಪತ್ರ ಕೆಳಗಿನಂತಿದೆ.

ಕನ್ನಡದ ಬಂಧು ಬಾಂಧವರಲ್ಲಿ ವಿನಂತಿ.

ಆತ್ಮೀಯರೇ, ಇದೇ ಜನವರಿ ೧೦ ಮತ್ತು ೧೧ ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನನ್ನ ಮೂರು ದಶಕಗಳ ಮಿತ್ರ ಹಾಗೂ ಸಾಮಾಜಿಕ ಚಳುವಳಿಯ ಹೋರಾಟಗಾರ ಕಲ್ಕುಳಿ ಹೆಗ್ಗಡೆ ಆಯ್ಕೆಯಾಗಿದ್ದಾರೆ. ಆದರೆ, ಅಲ್ಲಿನ ಸಂಘ ಪರಿವಾರದ ವಿ.ಹೆಚ್.ಪಿ ಮತ್ತು ಶ್ರೀ ರಾಮಸೇನೆಯ ಕಪಿ ಪುಂಗವರು ತಮ್ಮ ಬುಡಕ್ಕೆ ಮೆಣಸಿನಕಾಯಿ ಇಟ್ಟುಕೊಂಡು ಅಧ್ಯಕ್ಷರನ್ನು ಬದಲಿಸುವಂತೆ ಹೋರಾಟ ನಡೆಸುತ್ತಿದ್ದಾರೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಈವರೆಗೆ ಮೌನವಾಗಿದೆ. ಸಮ್ಮೇಳನದ ಹಣವನ್ನು ಈವರೆಗೆ ಬಿಡುಗಡೆ ಮಾಡಿಲ್ಲ. ಜಿಲ್ಲಾಧ್ಯಕ್ಷ ಮತ್ತು ಶೃಂಗೇರಿ ತಾಲೂಕಿನ ಅಧ್ಯಕ್ಷ ಇಬ್ಬರೂ ಸರ್ಕಾರಿ ನೌಕರರಾಗಿರುವ ಕಾರಣ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ.

ಕನ್ನಡ ಸಾಹಿತ್ಯ ಪರಿಷತ್ತು ಒಂದು ಸ್ವಾಯತ್ತ ಸಂಸ್ಥೆ. ಅದರ ಮೇಲೆ ಕನ್ನಡಿಗರಿಗೆ ಮಾತ್ರ ಹಕ್ಕಿದೆಯೇ ಹೊರತು, ಎದೆ ಸೀಳಿದರೆ ಮೂರಕ್ಷರವೂ ಇಲ್ಲದ ದೊಣ್ಣೆ ನಾಯಕರಿಗೆ ಯಾವ ಹಕ್ಕಿಲ್ಲ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಅವಿರೋಧವಾಗಿ ಆಯ್ಕೆಯಾದ ಸಮ್ಮೇಳನದ ಅಧ್ಯಕ್ಷರನ್ನು ಬದಲಾಯಿಸಿದ ಘಟನೆಗಳು ಜರುಗಿಲ್ಲ. ಒಂದು ವೇಳೆ ಅಂತಹ ಬದಲಾವಣೆಯಾದರೆ, ನಾವೆಲ್ಲಾ ಸಾಮೂಹಿಕವಾಗಿ ಪ್ರತಿಭಟಿಸುವುದು ನಮ್ಮ ಕರ್ತವ್ಯವಾಗಿದೆ. ಏಕೆಂದರೆ, ಮತೀಯ ಶಕ್ತಿಗಳಿಗೆ ನಾವು ಮಣಿದರೆ, ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಘ ಪರಿವಾರದ ಶಾಖಾ ಮಠವಾಗುವುದರಲ್ಲಿ ಸಂಶಯವಿಲ್ಲ.

ಕನ್ನಡವನ್ನು ಮಾಧ್ಯಮ ಭಾಷೆಯಾಗಿ ಉಳಿಸುವ ಕೆಲಸವನ್ನು ಹೊರತು ಪಡಿಸಿ, ಈವೆಂಟ್ ಮೇನೇಜ್ ಮೆಂಟ್ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಯ ಸ್ವರೂಪವನ್ನು ಬದಲಾಯಿಸಿಕೊಳ್ಳಲು ಒತ್ತಾಯ ಮಾಡುವುದರ ಜೊತೆಗೆ ನಾವೆಲ್ಲಾ ಕಲ್ಕುಳಿ ವಿಠಲ ಹೆಗ್ಗಡೆಯವರ ಪರ ನಿಲ್ಲೋಣ.

ನನಗೆ ಕಳೆದ ಹದಿನೈದು ವರ್ಷಗಳಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆ ಸಂಪರ್ಕವಿಲ್ಲ. ಈಗಿನ ಅಧ್ಯಕ್ಷ ಮನು ಬಳಿಗಾರ್ ಜೊತೆ ಸಂಪರ್ಕ ಇರುವ ನನ್ನ ಅನೇಕ ಮಿತ್ರರಿದ್ದಾರೆ. ಅವರೆಲ್ಲರೂ ಈ ವಿಷಯ ಕುರಿತಾಗಿ ಅವರ ಜೊತೆ ಮಾತನಾಡಬೇಕಾಗಿ ನನ್ನ ವಿನಂತಿ.

ಸರ್ಕಾರ ಅಥವಾ ಇತರೆ ಬಾಹ್ಯ ಒತ್ತಡಕ್ಕೆ ಮಣಿದು ಹೆಗ್ಗಡೆಯವರನ್ನು ಬದಲಿಸಿದರೆ, ನಾನು ಸಮಾನ ಮನಸ್ಕ ಮಿತ್ರರ ಜೊತೆಗೂಡಿ ಕೇಂದ್ರ ಸಾಹಿತ್ಯ ಪರಿಷತ್ತಿನ ಕಚೇರಿಯ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾನೆ. ನಿಮ್ಮೆಲ್ಲರ ಬೆಂಬಲವನ್ನು ಕೋರುತ್ತೇನೆ.
– ಜಗದೀಶ್ ಕೊಪ್ಪ

ಜಗದೀಶ್ ಕೊಪ್ಪ

ಈ ಪತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬೆಂಬಲದ ಮಹಾಪೂರವೇ ಹರಿದುಬಂದಿದೆ. ದೆಹಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಹೋರಾಟಗಾರರಾದ ಡಾ.ವಾಸು ಎಚ್‌.ವಿ, ಚಿತ್ರನಿರ್ದೇಶಕರಾದ ಕೇಸರಿ ಹರವೂ ಸೇರಿದಂತೆ ಹಲವಾರು ಹೋರಾಟಕ್ಕೆ ಜೊತೆಗೂಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಸಾಪದ ಮಾಜಿ ರಾಜ್ಯಾಧ್ಯಕ್ಷರು ಮತ್ತು ಹಿರಿಯ ಸಾಹಿತಿ, ಹೋರಾಟಗಾರರಾದ ಚಂಪಾರವರನ್ನು ಮಾತಾಡಿಸಿತು. ಅವರು “ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಅದು ಕೇಂದ್ರ ಘಟಕದ ಅಡಿಯಲ್ಲಿ ಕೆಲಸ ಮಾಡುತ್ತದೆ. ಅದು ತಮ್ಮ ಕಾರ್ಯಕಾರಿ ಸಮಿತಿಯಲ್ಲಿ ಸರ್ವಾನುಮತದಿಂದ ಒಬ್ಬ ಅಧ್ಯಕ್ಷರನ್ನು ಆಯ್ಕೆ ಮಾಡಿರುವುದು ಕ್ರಮಬದ್ಧವಾದ ನಡವಳಿಕೆಯಾಗಿದೆ. ಆದ್ದರಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನವರು ಹಣ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಲಾಗುವುದಿಲ್ಲ, ಕೂಡಲೇ ಹಣ ಬಿಡುಗಡೆ ಮಾಡಲು ಒಬ್ಬ ಮಾಜಿ ಅಧ್ಯಕ್ಷನಾಗಿ ಆಗ್ರಹಿಸುತ್ತೇನೆ. ಈ ರೀತಿಯ ರಾಜಕೀಯ ಹಸ್ತಕ್ಷೇಪ ಯಾರಿಗೂ ಸಲ್ಲದು” ಎಂದು ತಿಳಿಸಿದ್ದಾರೆ.

ಚಂಪಾ

ಇನ್ನು ಈ ಕುರಿತು ಪ್ರತಿಕ್ರಿಯೆ ಪಡೆಯಲು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾದ ಮನು ಬಳಿಗಾರ್‌ರವರನ್ನು ಸಂಪರ್ಕಿಸಲು ಪ್ರಯತ್ನಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ..

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ – ಸಿರಿಮನೆ ನಾಗರಾಜ್‌

ಕಲ್ಕುಳಿ ವಿಠಲ ಹೆಗ್ಡೆ ಅವರ ಮಂಗನ ಬ್ಯಾಟೆ ಕನ್ನಡದ ವಿಶಿಷ್ಟ ಕೃತಿ. ದಶಕಕ್ಕೆ ಮುಂಚೆಯೇ ಶಿವಮೊಗ್ಗದಲ್ಲಿ ಜರುಗಿದ ಅಖಿಲಭಾರತ ಸಮ್ಮೇಳನದಲ್ಲಿ‌ ಮಾತನಾಡಿದ್ದಾರೆ ಹೆಗ್ಡೆ. ಅವರ ಮೇಲೆ ಪೂರ್ವಾಗ್ರಹಪೀಡಿತ ಪ್ರಕರಣಗಳು ಹೂಡಲ್ಪಟ್ಟಿವೆ ಎಂಬುದು ಎಲ್ಲರೂ ಅರಿತ ಸಂಗತಿಯೇ. ಕೆಲ ಪಟ್ಟಭದ್ರರಿಗೆ ಮೆಚ್ಚಾಗಲಿಲ್ಲವೆಂದು ಅವರ ನಿಯೋಜನೆಯನ್ನು ತಪ್ಪಿಸುವ ಯತ್ನ ಮಾಡಿದರೆ ಅದೊಂದು ಕೆಟ್ಟ ಪರಂಪರೆಯಾಗುವ ಸಂಭವವಿದೆ. ಇದನ್ನು ತೀವ್ರವಾಗಿ ವಿರೋಧಿಸಬೇಕಿದೆ ಎಂದು ರೋಹಿತ್‌ ಅಗಸರಹಳ್ಳಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...