Homeಕರ್ನಾಟಕಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ..

ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ..

ಕೂಡಲೇ ಹಣ ಬಿಡುಗಡೆ ಮಾಡಲು ಒಬ್ಬ ಮಾಜಿ ಅಧ್ಯಕ್ಷನಾಗಿ ಆಗ್ರಹಿಸುತ್ತೇನೆ. ಈ ರೀತಿಯ ರಾಜಕೀಯ ಹಸ್ತಕ್ಷೇಪ ಯಾರಿಗೂ ಸಲ್ಲದು - ಚಂಪಾ.

- Advertisement -
- Advertisement -

ಜನವರಿ 10-11ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಕಲ್ಕುಳಿ ವಿಠಲ ಹೆಗ್ಗಡೆಯವರನ್ನು ಬದಲಿಸಿದರೆ ಬೆಂಗಳೂರಿನ ಕ.ಸಾ.ಪ ಕಚೇರಿ ಎದುರು ಧರಣಿ ನಡೆಸುತ್ತೇನೆ ಎಂದು ಹಿರಿಯ ಸಾಹಿತಿಗಳಾದ ಜಗದೀಶ್‌ ಕೊಪ್ಪ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪತ್ರವನ್ನು ಬರೆದಿರುವ ಅವರು ಇದಕ್ಕೆ ಆಸ್ಪದ ಕೊಡುವುದಿಲ್ಲ ಎಂದು ನಂಬಿದ್ದೇನೆ. ಆದರೆ ಒಂದು ವೇಳೆ ಹಾಗೇನಾದರೂ ಆದರೆ ಧರಣಿ ನಿಶ್ಚಿತ. ನನ್ನೊಡನೆ ಸಮಾನ ಮನಸ್ಕರು ಜೊತೆಗೂಡಿ ಎಂದು ಮನವಿ ಮಾಡಿದ್ದಾರೆ. ಅವರು ಬರೆದ ಪತ್ರ ಕೆಳಗಿನಂತಿದೆ.

ಕನ್ನಡದ ಬಂಧು ಬಾಂಧವರಲ್ಲಿ ವಿನಂತಿ.

ಆತ್ಮೀಯರೇ, ಇದೇ ಜನವರಿ ೧೦ ಮತ್ತು ೧೧ ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನನ್ನ ಮೂರು ದಶಕಗಳ ಮಿತ್ರ ಹಾಗೂ ಸಾಮಾಜಿಕ ಚಳುವಳಿಯ ಹೋರಾಟಗಾರ ಕಲ್ಕುಳಿ ಹೆಗ್ಗಡೆ ಆಯ್ಕೆಯಾಗಿದ್ದಾರೆ. ಆದರೆ, ಅಲ್ಲಿನ ಸಂಘ ಪರಿವಾರದ ವಿ.ಹೆಚ್.ಪಿ ಮತ್ತು ಶ್ರೀ ರಾಮಸೇನೆಯ ಕಪಿ ಪುಂಗವರು ತಮ್ಮ ಬುಡಕ್ಕೆ ಮೆಣಸಿನಕಾಯಿ ಇಟ್ಟುಕೊಂಡು ಅಧ್ಯಕ್ಷರನ್ನು ಬದಲಿಸುವಂತೆ ಹೋರಾಟ ನಡೆಸುತ್ತಿದ್ದಾರೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಈವರೆಗೆ ಮೌನವಾಗಿದೆ. ಸಮ್ಮೇಳನದ ಹಣವನ್ನು ಈವರೆಗೆ ಬಿಡುಗಡೆ ಮಾಡಿಲ್ಲ. ಜಿಲ್ಲಾಧ್ಯಕ್ಷ ಮತ್ತು ಶೃಂಗೇರಿ ತಾಲೂಕಿನ ಅಧ್ಯಕ್ಷ ಇಬ್ಬರೂ ಸರ್ಕಾರಿ ನೌಕರರಾಗಿರುವ ಕಾರಣ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ.

ಕನ್ನಡ ಸಾಹಿತ್ಯ ಪರಿಷತ್ತು ಒಂದು ಸ್ವಾಯತ್ತ ಸಂಸ್ಥೆ. ಅದರ ಮೇಲೆ ಕನ್ನಡಿಗರಿಗೆ ಮಾತ್ರ ಹಕ್ಕಿದೆಯೇ ಹೊರತು, ಎದೆ ಸೀಳಿದರೆ ಮೂರಕ್ಷರವೂ ಇಲ್ಲದ ದೊಣ್ಣೆ ನಾಯಕರಿಗೆ ಯಾವ ಹಕ್ಕಿಲ್ಲ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಅವಿರೋಧವಾಗಿ ಆಯ್ಕೆಯಾದ ಸಮ್ಮೇಳನದ ಅಧ್ಯಕ್ಷರನ್ನು ಬದಲಾಯಿಸಿದ ಘಟನೆಗಳು ಜರುಗಿಲ್ಲ. ಒಂದು ವೇಳೆ ಅಂತಹ ಬದಲಾವಣೆಯಾದರೆ, ನಾವೆಲ್ಲಾ ಸಾಮೂಹಿಕವಾಗಿ ಪ್ರತಿಭಟಿಸುವುದು ನಮ್ಮ ಕರ್ತವ್ಯವಾಗಿದೆ. ಏಕೆಂದರೆ, ಮತೀಯ ಶಕ್ತಿಗಳಿಗೆ ನಾವು ಮಣಿದರೆ, ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಘ ಪರಿವಾರದ ಶಾಖಾ ಮಠವಾಗುವುದರಲ್ಲಿ ಸಂಶಯವಿಲ್ಲ.

ಕನ್ನಡವನ್ನು ಮಾಧ್ಯಮ ಭಾಷೆಯಾಗಿ ಉಳಿಸುವ ಕೆಲಸವನ್ನು ಹೊರತು ಪಡಿಸಿ, ಈವೆಂಟ್ ಮೇನೇಜ್ ಮೆಂಟ್ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಯ ಸ್ವರೂಪವನ್ನು ಬದಲಾಯಿಸಿಕೊಳ್ಳಲು ಒತ್ತಾಯ ಮಾಡುವುದರ ಜೊತೆಗೆ ನಾವೆಲ್ಲಾ ಕಲ್ಕುಳಿ ವಿಠಲ ಹೆಗ್ಗಡೆಯವರ ಪರ ನಿಲ್ಲೋಣ.

ನನಗೆ ಕಳೆದ ಹದಿನೈದು ವರ್ಷಗಳಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆ ಸಂಪರ್ಕವಿಲ್ಲ. ಈಗಿನ ಅಧ್ಯಕ್ಷ ಮನು ಬಳಿಗಾರ್ ಜೊತೆ ಸಂಪರ್ಕ ಇರುವ ನನ್ನ ಅನೇಕ ಮಿತ್ರರಿದ್ದಾರೆ. ಅವರೆಲ್ಲರೂ ಈ ವಿಷಯ ಕುರಿತಾಗಿ ಅವರ ಜೊತೆ ಮಾತನಾಡಬೇಕಾಗಿ ನನ್ನ ವಿನಂತಿ.

ಸರ್ಕಾರ ಅಥವಾ ಇತರೆ ಬಾಹ್ಯ ಒತ್ತಡಕ್ಕೆ ಮಣಿದು ಹೆಗ್ಗಡೆಯವರನ್ನು ಬದಲಿಸಿದರೆ, ನಾನು ಸಮಾನ ಮನಸ್ಕ ಮಿತ್ರರ ಜೊತೆಗೂಡಿ ಕೇಂದ್ರ ಸಾಹಿತ್ಯ ಪರಿಷತ್ತಿನ ಕಚೇರಿಯ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾನೆ. ನಿಮ್ಮೆಲ್ಲರ ಬೆಂಬಲವನ್ನು ಕೋರುತ್ತೇನೆ.
– ಜಗದೀಶ್ ಕೊಪ್ಪ

ಜಗದೀಶ್ ಕೊಪ್ಪ

ಈ ಪತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬೆಂಬಲದ ಮಹಾಪೂರವೇ ಹರಿದುಬಂದಿದೆ. ದೆಹಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಹೋರಾಟಗಾರರಾದ ಡಾ.ವಾಸು ಎಚ್‌.ವಿ, ಚಿತ್ರನಿರ್ದೇಶಕರಾದ ಕೇಸರಿ ಹರವೂ ಸೇರಿದಂತೆ ಹಲವಾರು ಹೋರಾಟಕ್ಕೆ ಜೊತೆಗೂಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಸಾಪದ ಮಾಜಿ ರಾಜ್ಯಾಧ್ಯಕ್ಷರು ಮತ್ತು ಹಿರಿಯ ಸಾಹಿತಿ, ಹೋರಾಟಗಾರರಾದ ಚಂಪಾರವರನ್ನು ಮಾತಾಡಿಸಿತು. ಅವರು “ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಅದು ಕೇಂದ್ರ ಘಟಕದ ಅಡಿಯಲ್ಲಿ ಕೆಲಸ ಮಾಡುತ್ತದೆ. ಅದು ತಮ್ಮ ಕಾರ್ಯಕಾರಿ ಸಮಿತಿಯಲ್ಲಿ ಸರ್ವಾನುಮತದಿಂದ ಒಬ್ಬ ಅಧ್ಯಕ್ಷರನ್ನು ಆಯ್ಕೆ ಮಾಡಿರುವುದು ಕ್ರಮಬದ್ಧವಾದ ನಡವಳಿಕೆಯಾಗಿದೆ. ಆದ್ದರಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನವರು ಹಣ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಲಾಗುವುದಿಲ್ಲ, ಕೂಡಲೇ ಹಣ ಬಿಡುಗಡೆ ಮಾಡಲು ಒಬ್ಬ ಮಾಜಿ ಅಧ್ಯಕ್ಷನಾಗಿ ಆಗ್ರಹಿಸುತ್ತೇನೆ. ಈ ರೀತಿಯ ರಾಜಕೀಯ ಹಸ್ತಕ್ಷೇಪ ಯಾರಿಗೂ ಸಲ್ಲದು” ಎಂದು ತಿಳಿಸಿದ್ದಾರೆ.

ಚಂಪಾ

ಇನ್ನು ಈ ಕುರಿತು ಪ್ರತಿಕ್ರಿಯೆ ಪಡೆಯಲು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾದ ಮನು ಬಳಿಗಾರ್‌ರವರನ್ನು ಸಂಪರ್ಕಿಸಲು ಪ್ರಯತ್ನಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ..

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ – ಸಿರಿಮನೆ ನಾಗರಾಜ್‌

ಕಲ್ಕುಳಿ ವಿಠಲ ಹೆಗ್ಡೆ ಅವರ ಮಂಗನ ಬ್ಯಾಟೆ ಕನ್ನಡದ ವಿಶಿಷ್ಟ ಕೃತಿ. ದಶಕಕ್ಕೆ ಮುಂಚೆಯೇ ಶಿವಮೊಗ್ಗದಲ್ಲಿ ಜರುಗಿದ ಅಖಿಲಭಾರತ ಸಮ್ಮೇಳನದಲ್ಲಿ‌ ಮಾತನಾಡಿದ್ದಾರೆ ಹೆಗ್ಡೆ. ಅವರ ಮೇಲೆ ಪೂರ್ವಾಗ್ರಹಪೀಡಿತ ಪ್ರಕರಣಗಳು ಹೂಡಲ್ಪಟ್ಟಿವೆ ಎಂಬುದು ಎಲ್ಲರೂ ಅರಿತ ಸಂಗತಿಯೇ. ಕೆಲ ಪಟ್ಟಭದ್ರರಿಗೆ ಮೆಚ್ಚಾಗಲಿಲ್ಲವೆಂದು ಅವರ ನಿಯೋಜನೆಯನ್ನು ತಪ್ಪಿಸುವ ಯತ್ನ ಮಾಡಿದರೆ ಅದೊಂದು ಕೆಟ್ಟ ಪರಂಪರೆಯಾಗುವ ಸಂಭವವಿದೆ. ಇದನ್ನು ತೀವ್ರವಾಗಿ ವಿರೋಧಿಸಬೇಕಿದೆ ಎಂದು ರೋಹಿತ್‌ ಅಗಸರಹಳ್ಳಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...