Homeದಲಿತ್ ಫೈಲ್ಸ್ಚಿಕ್ಕಮಗಳೂರು: ದಲಿತನ ಮೇಲೆ ಹಲ್ಲೆ; ಶೂಟ್ ಮಾಡಿ ಕೊಲ್ಲುವುದಾಗಿಯೂ ಎಸ್ಟೇಟ್‌ ಮಾಲೀಕನಿಂದ ಬೆದರಿಕೆ

ಚಿಕ್ಕಮಗಳೂರು: ದಲಿತನ ಮೇಲೆ ಹಲ್ಲೆ; ಶೂಟ್ ಮಾಡಿ ಕೊಲ್ಲುವುದಾಗಿಯೂ ಎಸ್ಟೇಟ್‌ ಮಾಲೀಕನಿಂದ ಬೆದರಿಕೆ

- Advertisement -
- Advertisement -

ಚಿಕ್ಕಮಗಳೂರು: ದಲಿತ ಮಹಿಳಾ ಕೂಲಿ ಕಾರ್ಮಿಕರನ್ನು ಕೂಡಿಹಾಕಿ ಚಿತ್ರಹಿಂಸೆ ನೀಡಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಇಂಥದ್ದೇ ಮನಕಲಕುವ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ.

ಕೆಲಸಕ್ಕೆ ಬಾರಲಿಲ್ಲವೆಂದು ಸಿಟ್ಟಾದ ಎಸ್ಟೇಟ್ ಮಾಲೀಕನೊಬ್ಬ ದಲಿತ ಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವುದಲ್ಲದೇ, ಕೋವಿಯಿಂದ ಶೂಟ್ ಮಾಡಿ ಕೊಲ್ಲುವುದಾಗಿಯೂ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರಿಕೊಳ್ಳಲೆ ಗ್ರಾಮದಲ್ಲಿ ನಡೆದಿದೆ.

ದಲಿತ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ಎಸ್ಟೇಟ್ ಮಾಲೀಕ ಕಾಂತರಾಜು ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಲ್ಲಪ್ಪ ಅವರಿಗೆ ಗಾಯಗಳಾಗಿವೆ. ಕಿವಿ ಹಾಗೂ ಎದೆಯ ಭಾಗಕ್ಕೆ ಥಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

“ಯಲ್ಲಪ್ಪ ಸುಮಾರು 10 ವರ್ಷಗಳಿಂದ ಕಾಂತರಾಜು ಅವರಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾಂತರಾಜು ಅವರು 4 ದಿನ ಕೆಲಸಕ್ಕೆ ಬಾರದ ಕಾರಣ ಕಾಂತರಾಜು ಹಲ್ಲೆ ನಡೆಸಿದ್ದಾರೆ” ಎಂದು ದೂರಲಾಗಿದೆ.

ಕಾಂತರಾಜು ಅವರ ಪತ್ನಿ ಹೇಮಲತಾ ಮಾತನಾಡಿ, “ನನ್ನ ಗಂಡ ಕಳೆದ ಹತ್ತು ವರ್ಷಗಳಿಂದ ಕಾಂತರಾಜು ಅವರ ಮನೆಯಲ್ಲಿ ಜೀತ ಮಾಡುತ್ತಿದ್ದಾರೆ. ತೋಟದಲ್ಲಿ ಹಲ್ಲೆ ನಡೆಸಲಾಗಿದೆ. ನಮಗೆ ನ್ಯಾಯ ಬೇಕಿದೆ” ಎಂದು ಮನವಿ ಮಾಡಿದ್ದಾರೆ.

“ಕಾಂತರಾಜು ಜೀವ ಬೆದರಿಕೆ ಹಾಕಿದ್ದಾರೆ. ಎರಡು ಲಕ್ಷ ಖರ್ಚಾದರೂ ಪರವಾಗಿಲ್ಲ ಹೊಡೆದು ಸಾಯಿಸುತ್ತೇನೆ ಎಂದು ನನ್ನ ಗಂಡನಿಗೆ ಹೇಳಿದ್ದಾರೆ” ಎಂದು ಹೇಮಲತಾ ಕಣ್ಣೀರು ಹಾಕಿದ್ದಾರೆ.

“ನನ್ನ ಗಂಡನ ಜೀವಕ್ಕೆ ಏನಾದರೂ ಹೆಚ್ಚು ಕಮ್ಮಿಯಾದರೆ ಕಾಂತರಾಜು ಅವರೇ ಕಾರಣ. ಕೋವಿ ತಂದು ಶೂಟ್ ಮಾಡುವುದಾಗಿ ಹೇಳಿದ್ದಾರೆ. ಇದೇ ಮೊದಲಸಲವೇನೂ ಅಲ್ಲ. ಸಾಕಷ್ಟು ಬಾರಿ ಹಲ್ಲೆ ಮಾಡಿದ್ದಾರೆ. ನನ್ನ ಗಂಡ ನನ್ನ ಬಳಿ ಇದೆಲ್ಲವನ್ನೂ ಹೇಳಿಕೊಳ್ಳುತ್ತಿರಲಿಲ್ಲ” ಎಂದು ನೊಂದು ನುಡಿದಿದ್ದಾರೆ.

“ಪೋನ್‌ ಮಾಡಿದಾಗಲೆಲ್ಲ ಎಸ್ಟೇಟ್‌‌ ಮಾಲೀಕ ಕಾಂತರಾಜು ಕೆಟ್ಟ ಮಾತುಗಳಲ್ಲೇ ಬೈಯುತ್ತಾರೆ. ಪೋನ್‌ ರಿಸೀವ್ ಮಾಡದಿದ್ದರೂ, ಮಾಡಿದರೂ ಬೈಯುತ್ತಾರೆ. ಕೆಲಸಕ್ಕೆ ಹೋದರೆ ಕೆಟ್ಟ ದೃಷ್ಟಿಯಿಂದ ನೋಡುತ್ತಾರೆ. ನನ್ನ ಗಂಡ ಈಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಎದೆ, ಕೆನ್ನೆಗೆ ಹೊಡೆದಿದ್ದಾರೆ. ಕಿವಿಯಿಂದ ರಕ್ತ ಬಂದಿದೆ” ಎಂದು ವಿವರಿಸಿದ್ದಾರೆ.

ದಲಿತ ಮುಖಂಡರು ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕಾನೂನಿನ ವೈಫಲ್ಯ ಎದ್ದು ಕಾಣುತ್ತಿದೆ. ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಮೇಲೆ ಎಸ್‌ಸಿ, ಎಸ್‌ಟಿ, ಓಬಿಸಿ, ಮುಸ್ಲಿಮರು ಬದುಕದೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ವಿಷಾದಿಸಿದ್ದಾರೆ.

ಇಪ್ಪತ್ತು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಬಾಳೇಹೊನ್ನೂರು ತಾಲ್ಲೂಕಿನಲ್ಲಿ ಇಂಥದ್ದೇ ಹೇಯಕೃತ್ಯ ನಡೆದಿತ್ತು. ದಲಿತ ಸಂಘಟನೆಗಳು ಬಾಳೇಹೊನ್ನೂರು ಚಲೋ ಹೋರಾಟವನ್ನೂ ಹಮ್ಮಿಕೊಂಡಿದ್ದರು.

ಚಿಕ್ಕಮಗಳೂರು ತಾಲ್ಲೂಕು ಠಾಣೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಹುಣಸೆಹಳ್ಳಿಪುರದಲ್ಲಿ ಘಟನೆ ನಡೆದಿತ್ತು. ಎಸ್ಟೇಟ್‌ ಮಾಲೀಕನಾದ ಜಗದೀಶಗೌಡ ಹಾಗೂ ತಿಲಕ್ ಎಂಬವರು ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದರು. ಬಾಳೇಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿರಿ: ರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ಆಲ್ದೂರಿನ ಗಾಳಿಗಂಡಿಯಿಂದ ಬಂದು ಇಲ್ಲಿನ ಲೈನ್‌ಮನೆಯಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕ ಮಹಿಳೆ ಅರ್ಪಿತಾ ಪೊಲೀಸರಿಗೆ ದೂರು ನೀಡಿದ್ದರು.

“ಸುಮಾರು 03 ತಿಂಗಳುಗಳಿಂದ ಹುಣಸೆಹಳ್ಳಿಪುರದಲ್ಲಿ ಜಗದೀಶಗೌಡ ಅವರ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್‌ಮನೆಯಲ್ಲಿ ವಾಸವಾಗಿದ್ದೇವೆ. ಸುಮಾರು 15 ದಿನಗಳ ಹಿಂದೆ ನಮ್ಮ ಗಂಡನ ಸಂಬಂಧಿಯಾದ ಸತೀಶ, ಮಂಜು ಅವರಿಗೂ ಹಾಗೂ ಅಲ್ಲಿಯೇ ಪಕ್ಕದ ಮನೆಯವರಿಗೂ ಮಕ್ಕಳ ವಿಚಾರದಲ್ಲಿ ಗಲಾಟೆಯಾಗಿತ್ತು. ಆ ಸಮಯದಲ್ಲಿ ಎಸ್ಟೇಟ್ ಮಾಲೀಕರಾದ ಜಗದೀಶಗೌಡರು ಮಂಜು ಅವರಿಗೆ ಬೈಯ್ದು ಹೊಡೆದಿದ್ದರು. ಹೀಗಾಗಿ ಮಂಜು ಮತ್ತು ನಮ್ಮ ಕಡೆಯವರು ಬೇರೆಡೆ ಹೋಗಲು ನಿರ್ಧರಿಸಿದೆವು. ನಾವು ಇನ್ನು ಮುಂದೆ ಇಲ್ಲಿ ಕೆಲಸ ಮಾಡುವುದಿಲ್ಲ, ಬೇರೆ ಕಡೆಗೆ ಕೆಲಸಕ್ಕೆ ಹೋಗುವುದಾಗಿ ಹೇಳಿದ್ದೆವು. ಆನಂತರದಲ್ಲಿ ಜಗದೀಶ ಸಿಟ್ಟಾಗಿದ್ದರು. ನಮ್ಮ ಮೇಲೆ ಹಲ್ಲೆ ನಡೆಸಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಹಲ್ಲೆಗೊಳಗಾದ ಅರ್ಪಿತಾ ಅವರಿಗೆ ಗರ್ಭಪಾತವೂ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...