Homeದಲಿತ್ ಫೈಲ್ಸ್ಚಿಕ್ಕಮಗಳೂರು: ದಲಿತನ ಮೇಲೆ ಹಲ್ಲೆ; ಶೂಟ್ ಮಾಡಿ ಕೊಲ್ಲುವುದಾಗಿಯೂ ಎಸ್ಟೇಟ್‌ ಮಾಲೀಕನಿಂದ ಬೆದರಿಕೆ

ಚಿಕ್ಕಮಗಳೂರು: ದಲಿತನ ಮೇಲೆ ಹಲ್ಲೆ; ಶೂಟ್ ಮಾಡಿ ಕೊಲ್ಲುವುದಾಗಿಯೂ ಎಸ್ಟೇಟ್‌ ಮಾಲೀಕನಿಂದ ಬೆದರಿಕೆ

- Advertisement -
- Advertisement -

ಚಿಕ್ಕಮಗಳೂರು: ದಲಿತ ಮಹಿಳಾ ಕೂಲಿ ಕಾರ್ಮಿಕರನ್ನು ಕೂಡಿಹಾಕಿ ಚಿತ್ರಹಿಂಸೆ ನೀಡಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಇಂಥದ್ದೇ ಮನಕಲಕುವ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ.

ಕೆಲಸಕ್ಕೆ ಬಾರಲಿಲ್ಲವೆಂದು ಸಿಟ್ಟಾದ ಎಸ್ಟೇಟ್ ಮಾಲೀಕನೊಬ್ಬ ದಲಿತ ಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವುದಲ್ಲದೇ, ಕೋವಿಯಿಂದ ಶೂಟ್ ಮಾಡಿ ಕೊಲ್ಲುವುದಾಗಿಯೂ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರಿಕೊಳ್ಳಲೆ ಗ್ರಾಮದಲ್ಲಿ ನಡೆದಿದೆ.

ದಲಿತ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ಎಸ್ಟೇಟ್ ಮಾಲೀಕ ಕಾಂತರಾಜು ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಲ್ಲಪ್ಪ ಅವರಿಗೆ ಗಾಯಗಳಾಗಿವೆ. ಕಿವಿ ಹಾಗೂ ಎದೆಯ ಭಾಗಕ್ಕೆ ಥಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

“ಯಲ್ಲಪ್ಪ ಸುಮಾರು 10 ವರ್ಷಗಳಿಂದ ಕಾಂತರಾಜು ಅವರಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾಂತರಾಜು ಅವರು 4 ದಿನ ಕೆಲಸಕ್ಕೆ ಬಾರದ ಕಾರಣ ಕಾಂತರಾಜು ಹಲ್ಲೆ ನಡೆಸಿದ್ದಾರೆ” ಎಂದು ದೂರಲಾಗಿದೆ.

ಕಾಂತರಾಜು ಅವರ ಪತ್ನಿ ಹೇಮಲತಾ ಮಾತನಾಡಿ, “ನನ್ನ ಗಂಡ ಕಳೆದ ಹತ್ತು ವರ್ಷಗಳಿಂದ ಕಾಂತರಾಜು ಅವರ ಮನೆಯಲ್ಲಿ ಜೀತ ಮಾಡುತ್ತಿದ್ದಾರೆ. ತೋಟದಲ್ಲಿ ಹಲ್ಲೆ ನಡೆಸಲಾಗಿದೆ. ನಮಗೆ ನ್ಯಾಯ ಬೇಕಿದೆ” ಎಂದು ಮನವಿ ಮಾಡಿದ್ದಾರೆ.

“ಕಾಂತರಾಜು ಜೀವ ಬೆದರಿಕೆ ಹಾಕಿದ್ದಾರೆ. ಎರಡು ಲಕ್ಷ ಖರ್ಚಾದರೂ ಪರವಾಗಿಲ್ಲ ಹೊಡೆದು ಸಾಯಿಸುತ್ತೇನೆ ಎಂದು ನನ್ನ ಗಂಡನಿಗೆ ಹೇಳಿದ್ದಾರೆ” ಎಂದು ಹೇಮಲತಾ ಕಣ್ಣೀರು ಹಾಕಿದ್ದಾರೆ.

“ನನ್ನ ಗಂಡನ ಜೀವಕ್ಕೆ ಏನಾದರೂ ಹೆಚ್ಚು ಕಮ್ಮಿಯಾದರೆ ಕಾಂತರಾಜು ಅವರೇ ಕಾರಣ. ಕೋವಿ ತಂದು ಶೂಟ್ ಮಾಡುವುದಾಗಿ ಹೇಳಿದ್ದಾರೆ. ಇದೇ ಮೊದಲಸಲವೇನೂ ಅಲ್ಲ. ಸಾಕಷ್ಟು ಬಾರಿ ಹಲ್ಲೆ ಮಾಡಿದ್ದಾರೆ. ನನ್ನ ಗಂಡ ನನ್ನ ಬಳಿ ಇದೆಲ್ಲವನ್ನೂ ಹೇಳಿಕೊಳ್ಳುತ್ತಿರಲಿಲ್ಲ” ಎಂದು ನೊಂದು ನುಡಿದಿದ್ದಾರೆ.

“ಪೋನ್‌ ಮಾಡಿದಾಗಲೆಲ್ಲ ಎಸ್ಟೇಟ್‌‌ ಮಾಲೀಕ ಕಾಂತರಾಜು ಕೆಟ್ಟ ಮಾತುಗಳಲ್ಲೇ ಬೈಯುತ್ತಾರೆ. ಪೋನ್‌ ರಿಸೀವ್ ಮಾಡದಿದ್ದರೂ, ಮಾಡಿದರೂ ಬೈಯುತ್ತಾರೆ. ಕೆಲಸಕ್ಕೆ ಹೋದರೆ ಕೆಟ್ಟ ದೃಷ್ಟಿಯಿಂದ ನೋಡುತ್ತಾರೆ. ನನ್ನ ಗಂಡ ಈಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಎದೆ, ಕೆನ್ನೆಗೆ ಹೊಡೆದಿದ್ದಾರೆ. ಕಿವಿಯಿಂದ ರಕ್ತ ಬಂದಿದೆ” ಎಂದು ವಿವರಿಸಿದ್ದಾರೆ.

ದಲಿತ ಮುಖಂಡರು ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕಾನೂನಿನ ವೈಫಲ್ಯ ಎದ್ದು ಕಾಣುತ್ತಿದೆ. ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಮೇಲೆ ಎಸ್‌ಸಿ, ಎಸ್‌ಟಿ, ಓಬಿಸಿ, ಮುಸ್ಲಿಮರು ಬದುಕದೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ವಿಷಾದಿಸಿದ್ದಾರೆ.

ಇಪ್ಪತ್ತು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಬಾಳೇಹೊನ್ನೂರು ತಾಲ್ಲೂಕಿನಲ್ಲಿ ಇಂಥದ್ದೇ ಹೇಯಕೃತ್ಯ ನಡೆದಿತ್ತು. ದಲಿತ ಸಂಘಟನೆಗಳು ಬಾಳೇಹೊನ್ನೂರು ಚಲೋ ಹೋರಾಟವನ್ನೂ ಹಮ್ಮಿಕೊಂಡಿದ್ದರು.

ಚಿಕ್ಕಮಗಳೂರು ತಾಲ್ಲೂಕು ಠಾಣೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಹುಣಸೆಹಳ್ಳಿಪುರದಲ್ಲಿ ಘಟನೆ ನಡೆದಿತ್ತು. ಎಸ್ಟೇಟ್‌ ಮಾಲೀಕನಾದ ಜಗದೀಶಗೌಡ ಹಾಗೂ ತಿಲಕ್ ಎಂಬವರು ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದರು. ಬಾಳೇಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿರಿ: ರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ಆಲ್ದೂರಿನ ಗಾಳಿಗಂಡಿಯಿಂದ ಬಂದು ಇಲ್ಲಿನ ಲೈನ್‌ಮನೆಯಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕ ಮಹಿಳೆ ಅರ್ಪಿತಾ ಪೊಲೀಸರಿಗೆ ದೂರು ನೀಡಿದ್ದರು.

“ಸುಮಾರು 03 ತಿಂಗಳುಗಳಿಂದ ಹುಣಸೆಹಳ್ಳಿಪುರದಲ್ಲಿ ಜಗದೀಶಗೌಡ ಅವರ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್‌ಮನೆಯಲ್ಲಿ ವಾಸವಾಗಿದ್ದೇವೆ. ಸುಮಾರು 15 ದಿನಗಳ ಹಿಂದೆ ನಮ್ಮ ಗಂಡನ ಸಂಬಂಧಿಯಾದ ಸತೀಶ, ಮಂಜು ಅವರಿಗೂ ಹಾಗೂ ಅಲ್ಲಿಯೇ ಪಕ್ಕದ ಮನೆಯವರಿಗೂ ಮಕ್ಕಳ ವಿಚಾರದಲ್ಲಿ ಗಲಾಟೆಯಾಗಿತ್ತು. ಆ ಸಮಯದಲ್ಲಿ ಎಸ್ಟೇಟ್ ಮಾಲೀಕರಾದ ಜಗದೀಶಗೌಡರು ಮಂಜು ಅವರಿಗೆ ಬೈಯ್ದು ಹೊಡೆದಿದ್ದರು. ಹೀಗಾಗಿ ಮಂಜು ಮತ್ತು ನಮ್ಮ ಕಡೆಯವರು ಬೇರೆಡೆ ಹೋಗಲು ನಿರ್ಧರಿಸಿದೆವು. ನಾವು ಇನ್ನು ಮುಂದೆ ಇಲ್ಲಿ ಕೆಲಸ ಮಾಡುವುದಿಲ್ಲ, ಬೇರೆ ಕಡೆಗೆ ಕೆಲಸಕ್ಕೆ ಹೋಗುವುದಾಗಿ ಹೇಳಿದ್ದೆವು. ಆನಂತರದಲ್ಲಿ ಜಗದೀಶ ಸಿಟ್ಟಾಗಿದ್ದರು. ನಮ್ಮ ಮೇಲೆ ಹಲ್ಲೆ ನಡೆಸಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಹಲ್ಲೆಗೊಳಗಾದ ಅರ್ಪಿತಾ ಅವರಿಗೆ ಗರ್ಭಪಾತವೂ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...