Homeದಲಿತ್ ಫೈಲ್ಸ್ಚಿಕ್ಕಮಗಳೂರು: ದಲಿತನ ಮೇಲೆ ಹಲ್ಲೆ; ಶೂಟ್ ಮಾಡಿ ಕೊಲ್ಲುವುದಾಗಿಯೂ ಎಸ್ಟೇಟ್‌ ಮಾಲೀಕನಿಂದ ಬೆದರಿಕೆ

ಚಿಕ್ಕಮಗಳೂರು: ದಲಿತನ ಮೇಲೆ ಹಲ್ಲೆ; ಶೂಟ್ ಮಾಡಿ ಕೊಲ್ಲುವುದಾಗಿಯೂ ಎಸ್ಟೇಟ್‌ ಮಾಲೀಕನಿಂದ ಬೆದರಿಕೆ

- Advertisement -
- Advertisement -

ಚಿಕ್ಕಮಗಳೂರು: ದಲಿತ ಮಹಿಳಾ ಕೂಲಿ ಕಾರ್ಮಿಕರನ್ನು ಕೂಡಿಹಾಕಿ ಚಿತ್ರಹಿಂಸೆ ನೀಡಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಇಂಥದ್ದೇ ಮನಕಲಕುವ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ.

ಕೆಲಸಕ್ಕೆ ಬಾರಲಿಲ್ಲವೆಂದು ಸಿಟ್ಟಾದ ಎಸ್ಟೇಟ್ ಮಾಲೀಕನೊಬ್ಬ ದಲಿತ ಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವುದಲ್ಲದೇ, ಕೋವಿಯಿಂದ ಶೂಟ್ ಮಾಡಿ ಕೊಲ್ಲುವುದಾಗಿಯೂ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರಿಕೊಳ್ಳಲೆ ಗ್ರಾಮದಲ್ಲಿ ನಡೆದಿದೆ.

ದಲಿತ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ಎಸ್ಟೇಟ್ ಮಾಲೀಕ ಕಾಂತರಾಜು ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಲ್ಲಪ್ಪ ಅವರಿಗೆ ಗಾಯಗಳಾಗಿವೆ. ಕಿವಿ ಹಾಗೂ ಎದೆಯ ಭಾಗಕ್ಕೆ ಥಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

“ಯಲ್ಲಪ್ಪ ಸುಮಾರು 10 ವರ್ಷಗಳಿಂದ ಕಾಂತರಾಜು ಅವರಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾಂತರಾಜು ಅವರು 4 ದಿನ ಕೆಲಸಕ್ಕೆ ಬಾರದ ಕಾರಣ ಕಾಂತರಾಜು ಹಲ್ಲೆ ನಡೆಸಿದ್ದಾರೆ” ಎಂದು ದೂರಲಾಗಿದೆ.

ಕಾಂತರಾಜು ಅವರ ಪತ್ನಿ ಹೇಮಲತಾ ಮಾತನಾಡಿ, “ನನ್ನ ಗಂಡ ಕಳೆದ ಹತ್ತು ವರ್ಷಗಳಿಂದ ಕಾಂತರಾಜು ಅವರ ಮನೆಯಲ್ಲಿ ಜೀತ ಮಾಡುತ್ತಿದ್ದಾರೆ. ತೋಟದಲ್ಲಿ ಹಲ್ಲೆ ನಡೆಸಲಾಗಿದೆ. ನಮಗೆ ನ್ಯಾಯ ಬೇಕಿದೆ” ಎಂದು ಮನವಿ ಮಾಡಿದ್ದಾರೆ.

“ಕಾಂತರಾಜು ಜೀವ ಬೆದರಿಕೆ ಹಾಕಿದ್ದಾರೆ. ಎರಡು ಲಕ್ಷ ಖರ್ಚಾದರೂ ಪರವಾಗಿಲ್ಲ ಹೊಡೆದು ಸಾಯಿಸುತ್ತೇನೆ ಎಂದು ನನ್ನ ಗಂಡನಿಗೆ ಹೇಳಿದ್ದಾರೆ” ಎಂದು ಹೇಮಲತಾ ಕಣ್ಣೀರು ಹಾಕಿದ್ದಾರೆ.

“ನನ್ನ ಗಂಡನ ಜೀವಕ್ಕೆ ಏನಾದರೂ ಹೆಚ್ಚು ಕಮ್ಮಿಯಾದರೆ ಕಾಂತರಾಜು ಅವರೇ ಕಾರಣ. ಕೋವಿ ತಂದು ಶೂಟ್ ಮಾಡುವುದಾಗಿ ಹೇಳಿದ್ದಾರೆ. ಇದೇ ಮೊದಲಸಲವೇನೂ ಅಲ್ಲ. ಸಾಕಷ್ಟು ಬಾರಿ ಹಲ್ಲೆ ಮಾಡಿದ್ದಾರೆ. ನನ್ನ ಗಂಡ ನನ್ನ ಬಳಿ ಇದೆಲ್ಲವನ್ನೂ ಹೇಳಿಕೊಳ್ಳುತ್ತಿರಲಿಲ್ಲ” ಎಂದು ನೊಂದು ನುಡಿದಿದ್ದಾರೆ.

“ಪೋನ್‌ ಮಾಡಿದಾಗಲೆಲ್ಲ ಎಸ್ಟೇಟ್‌‌ ಮಾಲೀಕ ಕಾಂತರಾಜು ಕೆಟ್ಟ ಮಾತುಗಳಲ್ಲೇ ಬೈಯುತ್ತಾರೆ. ಪೋನ್‌ ರಿಸೀವ್ ಮಾಡದಿದ್ದರೂ, ಮಾಡಿದರೂ ಬೈಯುತ್ತಾರೆ. ಕೆಲಸಕ್ಕೆ ಹೋದರೆ ಕೆಟ್ಟ ದೃಷ್ಟಿಯಿಂದ ನೋಡುತ್ತಾರೆ. ನನ್ನ ಗಂಡ ಈಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಎದೆ, ಕೆನ್ನೆಗೆ ಹೊಡೆದಿದ್ದಾರೆ. ಕಿವಿಯಿಂದ ರಕ್ತ ಬಂದಿದೆ” ಎಂದು ವಿವರಿಸಿದ್ದಾರೆ.

ದಲಿತ ಮುಖಂಡರು ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕಾನೂನಿನ ವೈಫಲ್ಯ ಎದ್ದು ಕಾಣುತ್ತಿದೆ. ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಮೇಲೆ ಎಸ್‌ಸಿ, ಎಸ್‌ಟಿ, ಓಬಿಸಿ, ಮುಸ್ಲಿಮರು ಬದುಕದೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ವಿಷಾದಿಸಿದ್ದಾರೆ.

ಇಪ್ಪತ್ತು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಬಾಳೇಹೊನ್ನೂರು ತಾಲ್ಲೂಕಿನಲ್ಲಿ ಇಂಥದ್ದೇ ಹೇಯಕೃತ್ಯ ನಡೆದಿತ್ತು. ದಲಿತ ಸಂಘಟನೆಗಳು ಬಾಳೇಹೊನ್ನೂರು ಚಲೋ ಹೋರಾಟವನ್ನೂ ಹಮ್ಮಿಕೊಂಡಿದ್ದರು.

ಚಿಕ್ಕಮಗಳೂರು ತಾಲ್ಲೂಕು ಠಾಣೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಹುಣಸೆಹಳ್ಳಿಪುರದಲ್ಲಿ ಘಟನೆ ನಡೆದಿತ್ತು. ಎಸ್ಟೇಟ್‌ ಮಾಲೀಕನಾದ ಜಗದೀಶಗೌಡ ಹಾಗೂ ತಿಲಕ್ ಎಂಬವರು ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದರು. ಬಾಳೇಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿರಿ: ರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ಆಲ್ದೂರಿನ ಗಾಳಿಗಂಡಿಯಿಂದ ಬಂದು ಇಲ್ಲಿನ ಲೈನ್‌ಮನೆಯಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕ ಮಹಿಳೆ ಅರ್ಪಿತಾ ಪೊಲೀಸರಿಗೆ ದೂರು ನೀಡಿದ್ದರು.

“ಸುಮಾರು 03 ತಿಂಗಳುಗಳಿಂದ ಹುಣಸೆಹಳ್ಳಿಪುರದಲ್ಲಿ ಜಗದೀಶಗೌಡ ಅವರ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್‌ಮನೆಯಲ್ಲಿ ವಾಸವಾಗಿದ್ದೇವೆ. ಸುಮಾರು 15 ದಿನಗಳ ಹಿಂದೆ ನಮ್ಮ ಗಂಡನ ಸಂಬಂಧಿಯಾದ ಸತೀಶ, ಮಂಜು ಅವರಿಗೂ ಹಾಗೂ ಅಲ್ಲಿಯೇ ಪಕ್ಕದ ಮನೆಯವರಿಗೂ ಮಕ್ಕಳ ವಿಚಾರದಲ್ಲಿ ಗಲಾಟೆಯಾಗಿತ್ತು. ಆ ಸಮಯದಲ್ಲಿ ಎಸ್ಟೇಟ್ ಮಾಲೀಕರಾದ ಜಗದೀಶಗೌಡರು ಮಂಜು ಅವರಿಗೆ ಬೈಯ್ದು ಹೊಡೆದಿದ್ದರು. ಹೀಗಾಗಿ ಮಂಜು ಮತ್ತು ನಮ್ಮ ಕಡೆಯವರು ಬೇರೆಡೆ ಹೋಗಲು ನಿರ್ಧರಿಸಿದೆವು. ನಾವು ಇನ್ನು ಮುಂದೆ ಇಲ್ಲಿ ಕೆಲಸ ಮಾಡುವುದಿಲ್ಲ, ಬೇರೆ ಕಡೆಗೆ ಕೆಲಸಕ್ಕೆ ಹೋಗುವುದಾಗಿ ಹೇಳಿದ್ದೆವು. ಆನಂತರದಲ್ಲಿ ಜಗದೀಶ ಸಿಟ್ಟಾಗಿದ್ದರು. ನಮ್ಮ ಮೇಲೆ ಹಲ್ಲೆ ನಡೆಸಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಹಲ್ಲೆಗೊಳಗಾದ ಅರ್ಪಿತಾ ಅವರಿಗೆ ಗರ್ಭಪಾತವೂ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....