Homeದಲಿತ್ ಫೈಲ್ಸ್ಚಿಕ್ಕಮಗಳೂರು: ದಲಿತನ ಮೇಲೆ ಹಲ್ಲೆ; ಶೂಟ್ ಮಾಡಿ ಕೊಲ್ಲುವುದಾಗಿಯೂ ಎಸ್ಟೇಟ್‌ ಮಾಲೀಕನಿಂದ ಬೆದರಿಕೆ

ಚಿಕ್ಕಮಗಳೂರು: ದಲಿತನ ಮೇಲೆ ಹಲ್ಲೆ; ಶೂಟ್ ಮಾಡಿ ಕೊಲ್ಲುವುದಾಗಿಯೂ ಎಸ್ಟೇಟ್‌ ಮಾಲೀಕನಿಂದ ಬೆದರಿಕೆ

- Advertisement -
- Advertisement -

ಚಿಕ್ಕಮಗಳೂರು: ದಲಿತ ಮಹಿಳಾ ಕೂಲಿ ಕಾರ್ಮಿಕರನ್ನು ಕೂಡಿಹಾಕಿ ಚಿತ್ರಹಿಂಸೆ ನೀಡಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಇಂಥದ್ದೇ ಮನಕಲಕುವ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ.

ಕೆಲಸಕ್ಕೆ ಬಾರಲಿಲ್ಲವೆಂದು ಸಿಟ್ಟಾದ ಎಸ್ಟೇಟ್ ಮಾಲೀಕನೊಬ್ಬ ದಲಿತ ಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವುದಲ್ಲದೇ, ಕೋವಿಯಿಂದ ಶೂಟ್ ಮಾಡಿ ಕೊಲ್ಲುವುದಾಗಿಯೂ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರಿಕೊಳ್ಳಲೆ ಗ್ರಾಮದಲ್ಲಿ ನಡೆದಿದೆ.

ದಲಿತ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ಎಸ್ಟೇಟ್ ಮಾಲೀಕ ಕಾಂತರಾಜು ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಲ್ಲಪ್ಪ ಅವರಿಗೆ ಗಾಯಗಳಾಗಿವೆ. ಕಿವಿ ಹಾಗೂ ಎದೆಯ ಭಾಗಕ್ಕೆ ಥಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

“ಯಲ್ಲಪ್ಪ ಸುಮಾರು 10 ವರ್ಷಗಳಿಂದ ಕಾಂತರಾಜು ಅವರಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾಂತರಾಜು ಅವರು 4 ದಿನ ಕೆಲಸಕ್ಕೆ ಬಾರದ ಕಾರಣ ಕಾಂತರಾಜು ಹಲ್ಲೆ ನಡೆಸಿದ್ದಾರೆ” ಎಂದು ದೂರಲಾಗಿದೆ.

ಕಾಂತರಾಜು ಅವರ ಪತ್ನಿ ಹೇಮಲತಾ ಮಾತನಾಡಿ, “ನನ್ನ ಗಂಡ ಕಳೆದ ಹತ್ತು ವರ್ಷಗಳಿಂದ ಕಾಂತರಾಜು ಅವರ ಮನೆಯಲ್ಲಿ ಜೀತ ಮಾಡುತ್ತಿದ್ದಾರೆ. ತೋಟದಲ್ಲಿ ಹಲ್ಲೆ ನಡೆಸಲಾಗಿದೆ. ನಮಗೆ ನ್ಯಾಯ ಬೇಕಿದೆ” ಎಂದು ಮನವಿ ಮಾಡಿದ್ದಾರೆ.

“ಕಾಂತರಾಜು ಜೀವ ಬೆದರಿಕೆ ಹಾಕಿದ್ದಾರೆ. ಎರಡು ಲಕ್ಷ ಖರ್ಚಾದರೂ ಪರವಾಗಿಲ್ಲ ಹೊಡೆದು ಸಾಯಿಸುತ್ತೇನೆ ಎಂದು ನನ್ನ ಗಂಡನಿಗೆ ಹೇಳಿದ್ದಾರೆ” ಎಂದು ಹೇಮಲತಾ ಕಣ್ಣೀರು ಹಾಕಿದ್ದಾರೆ.

“ನನ್ನ ಗಂಡನ ಜೀವಕ್ಕೆ ಏನಾದರೂ ಹೆಚ್ಚು ಕಮ್ಮಿಯಾದರೆ ಕಾಂತರಾಜು ಅವರೇ ಕಾರಣ. ಕೋವಿ ತಂದು ಶೂಟ್ ಮಾಡುವುದಾಗಿ ಹೇಳಿದ್ದಾರೆ. ಇದೇ ಮೊದಲಸಲವೇನೂ ಅಲ್ಲ. ಸಾಕಷ್ಟು ಬಾರಿ ಹಲ್ಲೆ ಮಾಡಿದ್ದಾರೆ. ನನ್ನ ಗಂಡ ನನ್ನ ಬಳಿ ಇದೆಲ್ಲವನ್ನೂ ಹೇಳಿಕೊಳ್ಳುತ್ತಿರಲಿಲ್ಲ” ಎಂದು ನೊಂದು ನುಡಿದಿದ್ದಾರೆ.

“ಪೋನ್‌ ಮಾಡಿದಾಗಲೆಲ್ಲ ಎಸ್ಟೇಟ್‌‌ ಮಾಲೀಕ ಕಾಂತರಾಜು ಕೆಟ್ಟ ಮಾತುಗಳಲ್ಲೇ ಬೈಯುತ್ತಾರೆ. ಪೋನ್‌ ರಿಸೀವ್ ಮಾಡದಿದ್ದರೂ, ಮಾಡಿದರೂ ಬೈಯುತ್ತಾರೆ. ಕೆಲಸಕ್ಕೆ ಹೋದರೆ ಕೆಟ್ಟ ದೃಷ್ಟಿಯಿಂದ ನೋಡುತ್ತಾರೆ. ನನ್ನ ಗಂಡ ಈಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಎದೆ, ಕೆನ್ನೆಗೆ ಹೊಡೆದಿದ್ದಾರೆ. ಕಿವಿಯಿಂದ ರಕ್ತ ಬಂದಿದೆ” ಎಂದು ವಿವರಿಸಿದ್ದಾರೆ.

ದಲಿತ ಮುಖಂಡರು ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕಾನೂನಿನ ವೈಫಲ್ಯ ಎದ್ದು ಕಾಣುತ್ತಿದೆ. ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಮೇಲೆ ಎಸ್‌ಸಿ, ಎಸ್‌ಟಿ, ಓಬಿಸಿ, ಮುಸ್ಲಿಮರು ಬದುಕದೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ವಿಷಾದಿಸಿದ್ದಾರೆ.

ಇಪ್ಪತ್ತು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಬಾಳೇಹೊನ್ನೂರು ತಾಲ್ಲೂಕಿನಲ್ಲಿ ಇಂಥದ್ದೇ ಹೇಯಕೃತ್ಯ ನಡೆದಿತ್ತು. ದಲಿತ ಸಂಘಟನೆಗಳು ಬಾಳೇಹೊನ್ನೂರು ಚಲೋ ಹೋರಾಟವನ್ನೂ ಹಮ್ಮಿಕೊಂಡಿದ್ದರು.

ಚಿಕ್ಕಮಗಳೂರು ತಾಲ್ಲೂಕು ಠಾಣೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಹುಣಸೆಹಳ್ಳಿಪುರದಲ್ಲಿ ಘಟನೆ ನಡೆದಿತ್ತು. ಎಸ್ಟೇಟ್‌ ಮಾಲೀಕನಾದ ಜಗದೀಶಗೌಡ ಹಾಗೂ ತಿಲಕ್ ಎಂಬವರು ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದರು. ಬಾಳೇಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿರಿ: ರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ಆಲ್ದೂರಿನ ಗಾಳಿಗಂಡಿಯಿಂದ ಬಂದು ಇಲ್ಲಿನ ಲೈನ್‌ಮನೆಯಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕ ಮಹಿಳೆ ಅರ್ಪಿತಾ ಪೊಲೀಸರಿಗೆ ದೂರು ನೀಡಿದ್ದರು.

“ಸುಮಾರು 03 ತಿಂಗಳುಗಳಿಂದ ಹುಣಸೆಹಳ್ಳಿಪುರದಲ್ಲಿ ಜಗದೀಶಗೌಡ ಅವರ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್‌ಮನೆಯಲ್ಲಿ ವಾಸವಾಗಿದ್ದೇವೆ. ಸುಮಾರು 15 ದಿನಗಳ ಹಿಂದೆ ನಮ್ಮ ಗಂಡನ ಸಂಬಂಧಿಯಾದ ಸತೀಶ, ಮಂಜು ಅವರಿಗೂ ಹಾಗೂ ಅಲ್ಲಿಯೇ ಪಕ್ಕದ ಮನೆಯವರಿಗೂ ಮಕ್ಕಳ ವಿಚಾರದಲ್ಲಿ ಗಲಾಟೆಯಾಗಿತ್ತು. ಆ ಸಮಯದಲ್ಲಿ ಎಸ್ಟೇಟ್ ಮಾಲೀಕರಾದ ಜಗದೀಶಗೌಡರು ಮಂಜು ಅವರಿಗೆ ಬೈಯ್ದು ಹೊಡೆದಿದ್ದರು. ಹೀಗಾಗಿ ಮಂಜು ಮತ್ತು ನಮ್ಮ ಕಡೆಯವರು ಬೇರೆಡೆ ಹೋಗಲು ನಿರ್ಧರಿಸಿದೆವು. ನಾವು ಇನ್ನು ಮುಂದೆ ಇಲ್ಲಿ ಕೆಲಸ ಮಾಡುವುದಿಲ್ಲ, ಬೇರೆ ಕಡೆಗೆ ಕೆಲಸಕ್ಕೆ ಹೋಗುವುದಾಗಿ ಹೇಳಿದ್ದೆವು. ಆನಂತರದಲ್ಲಿ ಜಗದೀಶ ಸಿಟ್ಟಾಗಿದ್ದರು. ನಮ್ಮ ಮೇಲೆ ಹಲ್ಲೆ ನಡೆಸಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಹಲ್ಲೆಗೊಳಗಾದ ಅರ್ಪಿತಾ ಅವರಿಗೆ ಗರ್ಭಪಾತವೂ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....