Homeದಲಿತ್ ಫೈಲ್ಸ್ಚಿಕ್ಕಮಗಳೂರು: ದಲಿತನ ಮೇಲೆ ಹಲ್ಲೆ; ಶೂಟ್ ಮಾಡಿ ಕೊಲ್ಲುವುದಾಗಿಯೂ ಎಸ್ಟೇಟ್‌ ಮಾಲೀಕನಿಂದ ಬೆದರಿಕೆ

ಚಿಕ್ಕಮಗಳೂರು: ದಲಿತನ ಮೇಲೆ ಹಲ್ಲೆ; ಶೂಟ್ ಮಾಡಿ ಕೊಲ್ಲುವುದಾಗಿಯೂ ಎಸ್ಟೇಟ್‌ ಮಾಲೀಕನಿಂದ ಬೆದರಿಕೆ

- Advertisement -
- Advertisement -

ಚಿಕ್ಕಮಗಳೂರು: ದಲಿತ ಮಹಿಳಾ ಕೂಲಿ ಕಾರ್ಮಿಕರನ್ನು ಕೂಡಿಹಾಕಿ ಚಿತ್ರಹಿಂಸೆ ನೀಡಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಇಂಥದ್ದೇ ಮನಕಲಕುವ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ.

ಕೆಲಸಕ್ಕೆ ಬಾರಲಿಲ್ಲವೆಂದು ಸಿಟ್ಟಾದ ಎಸ್ಟೇಟ್ ಮಾಲೀಕನೊಬ್ಬ ದಲಿತ ಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವುದಲ್ಲದೇ, ಕೋವಿಯಿಂದ ಶೂಟ್ ಮಾಡಿ ಕೊಲ್ಲುವುದಾಗಿಯೂ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರಿಕೊಳ್ಳಲೆ ಗ್ರಾಮದಲ್ಲಿ ನಡೆದಿದೆ.

ದಲಿತ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ಎಸ್ಟೇಟ್ ಮಾಲೀಕ ಕಾಂತರಾಜು ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಲ್ಲಪ್ಪ ಅವರಿಗೆ ಗಾಯಗಳಾಗಿವೆ. ಕಿವಿ ಹಾಗೂ ಎದೆಯ ಭಾಗಕ್ಕೆ ಥಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

“ಯಲ್ಲಪ್ಪ ಸುಮಾರು 10 ವರ್ಷಗಳಿಂದ ಕಾಂತರಾಜು ಅವರಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾಂತರಾಜು ಅವರು 4 ದಿನ ಕೆಲಸಕ್ಕೆ ಬಾರದ ಕಾರಣ ಕಾಂತರಾಜು ಹಲ್ಲೆ ನಡೆಸಿದ್ದಾರೆ” ಎಂದು ದೂರಲಾಗಿದೆ.

ಕಾಂತರಾಜು ಅವರ ಪತ್ನಿ ಹೇಮಲತಾ ಮಾತನಾಡಿ, “ನನ್ನ ಗಂಡ ಕಳೆದ ಹತ್ತು ವರ್ಷಗಳಿಂದ ಕಾಂತರಾಜು ಅವರ ಮನೆಯಲ್ಲಿ ಜೀತ ಮಾಡುತ್ತಿದ್ದಾರೆ. ತೋಟದಲ್ಲಿ ಹಲ್ಲೆ ನಡೆಸಲಾಗಿದೆ. ನಮಗೆ ನ್ಯಾಯ ಬೇಕಿದೆ” ಎಂದು ಮನವಿ ಮಾಡಿದ್ದಾರೆ.

“ಕಾಂತರಾಜು ಜೀವ ಬೆದರಿಕೆ ಹಾಕಿದ್ದಾರೆ. ಎರಡು ಲಕ್ಷ ಖರ್ಚಾದರೂ ಪರವಾಗಿಲ್ಲ ಹೊಡೆದು ಸಾಯಿಸುತ್ತೇನೆ ಎಂದು ನನ್ನ ಗಂಡನಿಗೆ ಹೇಳಿದ್ದಾರೆ” ಎಂದು ಹೇಮಲತಾ ಕಣ್ಣೀರು ಹಾಕಿದ್ದಾರೆ.

“ನನ್ನ ಗಂಡನ ಜೀವಕ್ಕೆ ಏನಾದರೂ ಹೆಚ್ಚು ಕಮ್ಮಿಯಾದರೆ ಕಾಂತರಾಜು ಅವರೇ ಕಾರಣ. ಕೋವಿ ತಂದು ಶೂಟ್ ಮಾಡುವುದಾಗಿ ಹೇಳಿದ್ದಾರೆ. ಇದೇ ಮೊದಲಸಲವೇನೂ ಅಲ್ಲ. ಸಾಕಷ್ಟು ಬಾರಿ ಹಲ್ಲೆ ಮಾಡಿದ್ದಾರೆ. ನನ್ನ ಗಂಡ ನನ್ನ ಬಳಿ ಇದೆಲ್ಲವನ್ನೂ ಹೇಳಿಕೊಳ್ಳುತ್ತಿರಲಿಲ್ಲ” ಎಂದು ನೊಂದು ನುಡಿದಿದ್ದಾರೆ.

“ಪೋನ್‌ ಮಾಡಿದಾಗಲೆಲ್ಲ ಎಸ್ಟೇಟ್‌‌ ಮಾಲೀಕ ಕಾಂತರಾಜು ಕೆಟ್ಟ ಮಾತುಗಳಲ್ಲೇ ಬೈಯುತ್ತಾರೆ. ಪೋನ್‌ ರಿಸೀವ್ ಮಾಡದಿದ್ದರೂ, ಮಾಡಿದರೂ ಬೈಯುತ್ತಾರೆ. ಕೆಲಸಕ್ಕೆ ಹೋದರೆ ಕೆಟ್ಟ ದೃಷ್ಟಿಯಿಂದ ನೋಡುತ್ತಾರೆ. ನನ್ನ ಗಂಡ ಈಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಎದೆ, ಕೆನ್ನೆಗೆ ಹೊಡೆದಿದ್ದಾರೆ. ಕಿವಿಯಿಂದ ರಕ್ತ ಬಂದಿದೆ” ಎಂದು ವಿವರಿಸಿದ್ದಾರೆ.

ದಲಿತ ಮುಖಂಡರು ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕಾನೂನಿನ ವೈಫಲ್ಯ ಎದ್ದು ಕಾಣುತ್ತಿದೆ. ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಮೇಲೆ ಎಸ್‌ಸಿ, ಎಸ್‌ಟಿ, ಓಬಿಸಿ, ಮುಸ್ಲಿಮರು ಬದುಕದೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ವಿಷಾದಿಸಿದ್ದಾರೆ.

ಇಪ್ಪತ್ತು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಬಾಳೇಹೊನ್ನೂರು ತಾಲ್ಲೂಕಿನಲ್ಲಿ ಇಂಥದ್ದೇ ಹೇಯಕೃತ್ಯ ನಡೆದಿತ್ತು. ದಲಿತ ಸಂಘಟನೆಗಳು ಬಾಳೇಹೊನ್ನೂರು ಚಲೋ ಹೋರಾಟವನ್ನೂ ಹಮ್ಮಿಕೊಂಡಿದ್ದರು.

ಚಿಕ್ಕಮಗಳೂರು ತಾಲ್ಲೂಕು ಠಾಣೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಹುಣಸೆಹಳ್ಳಿಪುರದಲ್ಲಿ ಘಟನೆ ನಡೆದಿತ್ತು. ಎಸ್ಟೇಟ್‌ ಮಾಲೀಕನಾದ ಜಗದೀಶಗೌಡ ಹಾಗೂ ತಿಲಕ್ ಎಂಬವರು ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದರು. ಬಾಳೇಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿರಿ: ರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ಆಲ್ದೂರಿನ ಗಾಳಿಗಂಡಿಯಿಂದ ಬಂದು ಇಲ್ಲಿನ ಲೈನ್‌ಮನೆಯಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕ ಮಹಿಳೆ ಅರ್ಪಿತಾ ಪೊಲೀಸರಿಗೆ ದೂರು ನೀಡಿದ್ದರು.

“ಸುಮಾರು 03 ತಿಂಗಳುಗಳಿಂದ ಹುಣಸೆಹಳ್ಳಿಪುರದಲ್ಲಿ ಜಗದೀಶಗೌಡ ಅವರ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್‌ಮನೆಯಲ್ಲಿ ವಾಸವಾಗಿದ್ದೇವೆ. ಸುಮಾರು 15 ದಿನಗಳ ಹಿಂದೆ ನಮ್ಮ ಗಂಡನ ಸಂಬಂಧಿಯಾದ ಸತೀಶ, ಮಂಜು ಅವರಿಗೂ ಹಾಗೂ ಅಲ್ಲಿಯೇ ಪಕ್ಕದ ಮನೆಯವರಿಗೂ ಮಕ್ಕಳ ವಿಚಾರದಲ್ಲಿ ಗಲಾಟೆಯಾಗಿತ್ತು. ಆ ಸಮಯದಲ್ಲಿ ಎಸ್ಟೇಟ್ ಮಾಲೀಕರಾದ ಜಗದೀಶಗೌಡರು ಮಂಜು ಅವರಿಗೆ ಬೈಯ್ದು ಹೊಡೆದಿದ್ದರು. ಹೀಗಾಗಿ ಮಂಜು ಮತ್ತು ನಮ್ಮ ಕಡೆಯವರು ಬೇರೆಡೆ ಹೋಗಲು ನಿರ್ಧರಿಸಿದೆವು. ನಾವು ಇನ್ನು ಮುಂದೆ ಇಲ್ಲಿ ಕೆಲಸ ಮಾಡುವುದಿಲ್ಲ, ಬೇರೆ ಕಡೆಗೆ ಕೆಲಸಕ್ಕೆ ಹೋಗುವುದಾಗಿ ಹೇಳಿದ್ದೆವು. ಆನಂತರದಲ್ಲಿ ಜಗದೀಶ ಸಿಟ್ಟಾಗಿದ್ದರು. ನಮ್ಮ ಮೇಲೆ ಹಲ್ಲೆ ನಡೆಸಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಹಲ್ಲೆಗೊಳಗಾದ ಅರ್ಪಿತಾ ಅವರಿಗೆ ಗರ್ಭಪಾತವೂ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...