Homeದಲಿತ್ ಫೈಲ್ಸ್ಚಿಕ್ಕಮಗಳೂರು: ದಲಿತನ ಮೇಲೆ ಹಲ್ಲೆ; ಶೂಟ್ ಮಾಡಿ ಕೊಲ್ಲುವುದಾಗಿಯೂ ಎಸ್ಟೇಟ್‌ ಮಾಲೀಕನಿಂದ ಬೆದರಿಕೆ

ಚಿಕ್ಕಮಗಳೂರು: ದಲಿತನ ಮೇಲೆ ಹಲ್ಲೆ; ಶೂಟ್ ಮಾಡಿ ಕೊಲ್ಲುವುದಾಗಿಯೂ ಎಸ್ಟೇಟ್‌ ಮಾಲೀಕನಿಂದ ಬೆದರಿಕೆ

- Advertisement -
- Advertisement -

ಚಿಕ್ಕಮಗಳೂರು: ದಲಿತ ಮಹಿಳಾ ಕೂಲಿ ಕಾರ್ಮಿಕರನ್ನು ಕೂಡಿಹಾಕಿ ಚಿತ್ರಹಿಂಸೆ ನೀಡಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಇಂಥದ್ದೇ ಮನಕಲಕುವ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ.

ಕೆಲಸಕ್ಕೆ ಬಾರಲಿಲ್ಲವೆಂದು ಸಿಟ್ಟಾದ ಎಸ್ಟೇಟ್ ಮಾಲೀಕನೊಬ್ಬ ದಲಿತ ಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವುದಲ್ಲದೇ, ಕೋವಿಯಿಂದ ಶೂಟ್ ಮಾಡಿ ಕೊಲ್ಲುವುದಾಗಿಯೂ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರಿಕೊಳ್ಳಲೆ ಗ್ರಾಮದಲ್ಲಿ ನಡೆದಿದೆ.

ದಲಿತ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ಎಸ್ಟೇಟ್ ಮಾಲೀಕ ಕಾಂತರಾಜು ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಲ್ಲಪ್ಪ ಅವರಿಗೆ ಗಾಯಗಳಾಗಿವೆ. ಕಿವಿ ಹಾಗೂ ಎದೆಯ ಭಾಗಕ್ಕೆ ಥಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

“ಯಲ್ಲಪ್ಪ ಸುಮಾರು 10 ವರ್ಷಗಳಿಂದ ಕಾಂತರಾಜು ಅವರಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾಂತರಾಜು ಅವರು 4 ದಿನ ಕೆಲಸಕ್ಕೆ ಬಾರದ ಕಾರಣ ಕಾಂತರಾಜು ಹಲ್ಲೆ ನಡೆಸಿದ್ದಾರೆ” ಎಂದು ದೂರಲಾಗಿದೆ.

ಕಾಂತರಾಜು ಅವರ ಪತ್ನಿ ಹೇಮಲತಾ ಮಾತನಾಡಿ, “ನನ್ನ ಗಂಡ ಕಳೆದ ಹತ್ತು ವರ್ಷಗಳಿಂದ ಕಾಂತರಾಜು ಅವರ ಮನೆಯಲ್ಲಿ ಜೀತ ಮಾಡುತ್ತಿದ್ದಾರೆ. ತೋಟದಲ್ಲಿ ಹಲ್ಲೆ ನಡೆಸಲಾಗಿದೆ. ನಮಗೆ ನ್ಯಾಯ ಬೇಕಿದೆ” ಎಂದು ಮನವಿ ಮಾಡಿದ್ದಾರೆ.

“ಕಾಂತರಾಜು ಜೀವ ಬೆದರಿಕೆ ಹಾಕಿದ್ದಾರೆ. ಎರಡು ಲಕ್ಷ ಖರ್ಚಾದರೂ ಪರವಾಗಿಲ್ಲ ಹೊಡೆದು ಸಾಯಿಸುತ್ತೇನೆ ಎಂದು ನನ್ನ ಗಂಡನಿಗೆ ಹೇಳಿದ್ದಾರೆ” ಎಂದು ಹೇಮಲತಾ ಕಣ್ಣೀರು ಹಾಕಿದ್ದಾರೆ.

“ನನ್ನ ಗಂಡನ ಜೀವಕ್ಕೆ ಏನಾದರೂ ಹೆಚ್ಚು ಕಮ್ಮಿಯಾದರೆ ಕಾಂತರಾಜು ಅವರೇ ಕಾರಣ. ಕೋವಿ ತಂದು ಶೂಟ್ ಮಾಡುವುದಾಗಿ ಹೇಳಿದ್ದಾರೆ. ಇದೇ ಮೊದಲಸಲವೇನೂ ಅಲ್ಲ. ಸಾಕಷ್ಟು ಬಾರಿ ಹಲ್ಲೆ ಮಾಡಿದ್ದಾರೆ. ನನ್ನ ಗಂಡ ನನ್ನ ಬಳಿ ಇದೆಲ್ಲವನ್ನೂ ಹೇಳಿಕೊಳ್ಳುತ್ತಿರಲಿಲ್ಲ” ಎಂದು ನೊಂದು ನುಡಿದಿದ್ದಾರೆ.

“ಪೋನ್‌ ಮಾಡಿದಾಗಲೆಲ್ಲ ಎಸ್ಟೇಟ್‌‌ ಮಾಲೀಕ ಕಾಂತರಾಜು ಕೆಟ್ಟ ಮಾತುಗಳಲ್ಲೇ ಬೈಯುತ್ತಾರೆ. ಪೋನ್‌ ರಿಸೀವ್ ಮಾಡದಿದ್ದರೂ, ಮಾಡಿದರೂ ಬೈಯುತ್ತಾರೆ. ಕೆಲಸಕ್ಕೆ ಹೋದರೆ ಕೆಟ್ಟ ದೃಷ್ಟಿಯಿಂದ ನೋಡುತ್ತಾರೆ. ನನ್ನ ಗಂಡ ಈಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಎದೆ, ಕೆನ್ನೆಗೆ ಹೊಡೆದಿದ್ದಾರೆ. ಕಿವಿಯಿಂದ ರಕ್ತ ಬಂದಿದೆ” ಎಂದು ವಿವರಿಸಿದ್ದಾರೆ.

ದಲಿತ ಮುಖಂಡರು ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕಾನೂನಿನ ವೈಫಲ್ಯ ಎದ್ದು ಕಾಣುತ್ತಿದೆ. ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಮೇಲೆ ಎಸ್‌ಸಿ, ಎಸ್‌ಟಿ, ಓಬಿಸಿ, ಮುಸ್ಲಿಮರು ಬದುಕದೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ವಿಷಾದಿಸಿದ್ದಾರೆ.

ಇಪ್ಪತ್ತು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಬಾಳೇಹೊನ್ನೂರು ತಾಲ್ಲೂಕಿನಲ್ಲಿ ಇಂಥದ್ದೇ ಹೇಯಕೃತ್ಯ ನಡೆದಿತ್ತು. ದಲಿತ ಸಂಘಟನೆಗಳು ಬಾಳೇಹೊನ್ನೂರು ಚಲೋ ಹೋರಾಟವನ್ನೂ ಹಮ್ಮಿಕೊಂಡಿದ್ದರು.

ಚಿಕ್ಕಮಗಳೂರು ತಾಲ್ಲೂಕು ಠಾಣೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಹುಣಸೆಹಳ್ಳಿಪುರದಲ್ಲಿ ಘಟನೆ ನಡೆದಿತ್ತು. ಎಸ್ಟೇಟ್‌ ಮಾಲೀಕನಾದ ಜಗದೀಶಗೌಡ ಹಾಗೂ ತಿಲಕ್ ಎಂಬವರು ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದರು. ಬಾಳೇಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿರಿ: ರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ಆಲ್ದೂರಿನ ಗಾಳಿಗಂಡಿಯಿಂದ ಬಂದು ಇಲ್ಲಿನ ಲೈನ್‌ಮನೆಯಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕ ಮಹಿಳೆ ಅರ್ಪಿತಾ ಪೊಲೀಸರಿಗೆ ದೂರು ನೀಡಿದ್ದರು.

“ಸುಮಾರು 03 ತಿಂಗಳುಗಳಿಂದ ಹುಣಸೆಹಳ್ಳಿಪುರದಲ್ಲಿ ಜಗದೀಶಗೌಡ ಅವರ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್‌ಮನೆಯಲ್ಲಿ ವಾಸವಾಗಿದ್ದೇವೆ. ಸುಮಾರು 15 ದಿನಗಳ ಹಿಂದೆ ನಮ್ಮ ಗಂಡನ ಸಂಬಂಧಿಯಾದ ಸತೀಶ, ಮಂಜು ಅವರಿಗೂ ಹಾಗೂ ಅಲ್ಲಿಯೇ ಪಕ್ಕದ ಮನೆಯವರಿಗೂ ಮಕ್ಕಳ ವಿಚಾರದಲ್ಲಿ ಗಲಾಟೆಯಾಗಿತ್ತು. ಆ ಸಮಯದಲ್ಲಿ ಎಸ್ಟೇಟ್ ಮಾಲೀಕರಾದ ಜಗದೀಶಗೌಡರು ಮಂಜು ಅವರಿಗೆ ಬೈಯ್ದು ಹೊಡೆದಿದ್ದರು. ಹೀಗಾಗಿ ಮಂಜು ಮತ್ತು ನಮ್ಮ ಕಡೆಯವರು ಬೇರೆಡೆ ಹೋಗಲು ನಿರ್ಧರಿಸಿದೆವು. ನಾವು ಇನ್ನು ಮುಂದೆ ಇಲ್ಲಿ ಕೆಲಸ ಮಾಡುವುದಿಲ್ಲ, ಬೇರೆ ಕಡೆಗೆ ಕೆಲಸಕ್ಕೆ ಹೋಗುವುದಾಗಿ ಹೇಳಿದ್ದೆವು. ಆನಂತರದಲ್ಲಿ ಜಗದೀಶ ಸಿಟ್ಟಾಗಿದ್ದರು. ನಮ್ಮ ಮೇಲೆ ಹಲ್ಲೆ ನಡೆಸಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಹಲ್ಲೆಗೊಳಗಾದ ಅರ್ಪಿತಾ ಅವರಿಗೆ ಗರ್ಭಪಾತವೂ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....