Homeಕರ್ನಾಟಕಚಿಕ್ಕಮಗಳೂರಿನ ತರೀಕೆರೆಯಲ್ಲಿ ವೈದ್ಯರ ಮೇಲೆ ಹಲ್ಲೆ, ನಾಲ್ವರ ಬಂಧನ

ಚಿಕ್ಕಮಗಳೂರಿನ ತರೀಕೆರೆಯಲ್ಲಿ ವೈದ್ಯರ ಮೇಲೆ ಹಲ್ಲೆ, ನಾಲ್ವರ ಬಂಧನ

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಈ ವಾರದ ಆರಂಭದಲ್ಲಿ 50 ವರ್ಷದ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದ ಆರು ವರ್ಷದ ಮಗುವಿನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತರೀಕೆರೆ ಪಟ್ಟಣದಲ್ಲಿ ಸೋಮವಾರ ಡಾ.ದೀಪಕ್ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್. ​​ಅಕ್ಷಯ್  ತಿಳಿಸಿದ್ದಾರೆ.

“ಅಪರಾಧ ನಡೆದ 18 ಗಂಟೆಗಳಲ್ಲಿ ಒಂದೇ ತಾಲೂಕಿನ ನಾಲ್ಕು ಜನರನ್ನು ಬಂಧಿಸಲಾಗಿದೆ. ಹಲ್ಲೆಗೊಳಗಾದ ಡಾ. ದೀಪಕ್, ಭುವನ್ ಎಂಬ 6 ವರ್ಷದ ಮಗುವಿಗೆ ಡೆಂಗ್ಯೂಗೆ ಚಿಕಿತ್ಸೆ ನೀಡುತ್ತಿದ್ದರು. ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಯಿಗಿತ್ತು. ಶಿವಮೊಗ್ಗದ ಆಸ್ಪತ್ರೆಯಲ್ಲಿ ಬಾಲಕ ಭುವನ್ ಮೃತಪಟ್ಟಿದ್ದರು. ಇದರಿಂದ ಕೋಪಗೊಂಡಿದ್ದ ಬಾಲಕನ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ. ಮತ್ತು ನಾಲ್ವರು ಆರೋಪಿಗಳಲ್ಲಿ ಒಬ್ಬರು ಮಗುವಿನ ಸಂಬಂಧಿ, ಉಳಿದವರು ಆತನ ಸ್ನೇಹಿತರು “ಎಂದು ಅಕ್ಷಯ್ ತಿಳಿಸಿದ್ದಾರೆ. ಸದ್ಯಕ್ಕೆ ಗಾಯಾಳು ವೈದ್ಯ ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ

ವೈದ್ಯರ ಮೇಲೆ ನಡೆಯುವ ಇಂತಹ ದಾಳಿಗಳನ್ನು ಎದುರಿಸಲು ಕಾನೂನು ಘಟಕವನ್ನು ಸ್ಥಾಪಿಸುವಂತೆ ಒತ್ತಾಯಿಸಿ ಕರ್ನಾಟಕದ ವೈದ್ಯರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

“ಕರ್ನಾಟಕದಾದ್ಯಂತದ ವೈದ್ಯರು ಸಾಧ್ಯವಾದಷ್ಟು ಉತ್ತಮ ಆರೋಗ್ಯ ಸೌಲಭ್ಯವನ್ನು ನೀಡುವಲ್ಲಿ ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದಾರೆ. ಆದರೂ, ಕಳೆದ 8 ರಿಂದ 10 ತಿಂಗಳುಗಳಲ್ಲಿ ಆರೋಗ್ಯ ಕಾರ್ಯಕರ್ತರ ಮೇಲೆ 12 ಕ್ಕೂ ಹೆಚ್ಚು ಹಲ್ಲೆ ನಡೆದಿರುವ ಘಟನೆಗಳು ವರದಿಯಾಗಿವೆ. ಆದರೆ ಗಮನಕ್ಕೆ ಬರದ, ಎಫ್‌ಐಆರ್‌ ದಾಖಲಾಗದ ಮತ್ತು ಮೌಖಿಕ ನಿಂದನೆ, ಬೆದರಿಕೆಗಳು ಮತ್ತು ಕರ್ತವ್ಯಕ್ಕೆ ಅಡ್ಡಿಯುಂಟುಮಾಡುವ ಘಟನೆಗಳು ನೂರಾರು ಆಗಿರಬಹುದು” ಎಂದು ಪತ್ರದಲ್ಲಿ ಹೇಳಲಾಗಿದೆ.

ಇದೇ ರೀತಿಯ ಘಟನೆ ಅಸ್ಸಾಂನಲ್ಲಿಯೂ ನಡೆದಿದ್ದು, ಗುವಾಹಟಿಯಿಂದ 140 ಕಿಲೋಮೀಟರ್ ದೂರದಲ್ಲಿರುವ ಅಸ್ಸಾಂನ ಹೊಜೈನಲ್ಲಿರುವ ಕೊರೊನಾ ಆರೈಕೆ ಕೇಂದ್ರವೊಂದರಲ್ಲಿ ವೈದ್ಯರೊಬ್ಬರ ಮೇಲೆ ಮಾರಣಾಂತಿಕೆ ಹಲ್ಲೆ ನಡೆದಿದೆ. ಈ ಪ್ರಕರಣದಲ್ಲಿ ಇಪ್ಪತ್ನಾಲ್ಕು ಜನರನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...