Homeಕರ್ನಾಟಕಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ...

ಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ…

ಕನ್ನಡಪ್ರೇಮಿಗಳು ದೇಣಿಗೆ ನೀಡಿ ಸಮ್ಮೇಳನ ನಡೆಯಲು ಅನುವು ಮಾಡಿಕೊಟ್ಟಿದ್ದಾರೆ. ಜಿಲ್ಲಾ ಸಮ್ಮೇಳನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು, ಕನ್ನಡ ಪ್ರೇಮಿಗಳು ಭಾಗವಹಿಸಿದ್ದಾರೆ.

- Advertisement -
- Advertisement -

ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಮಗಳೂರು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಾಂಗವಾಗಿ ನಡೆಯುತ್ತಿದ್ದು, ಸಂಘ ಪರಿವಾರದ ಬೆದರಿಕೆಗೆ ಸೊಪ್ಪು ಹಾಕದೇ ಯಶಸ್ವಿಯಾಗಿ ಸಮ್ಮೇಳನ ಮಾಡಿಯೇ ತೀರುವುದಾಗಿ ಜಿಲ್ಲ ಕನ್ನಡ ಸಾಹಿತ್ಯ ಪರಿಷತ್‌ ಪಣ ತೊಟ್ಟಿದೆ.

ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಹೋರಾಟಗಾರ ಮತ್ತು ಸಾಹಿತಿ ಕಲ್ಕುಳಿ ವಿಠಲ ಹೆಗಡೆಯವರ ಆಯ್ಕೆಯನ್ನು ವಿರೋಧಿಸಿ ಸಚಿವ ಸಿ.ಟಿ ರವಿ ನೇತೃತ್ವದಲ್ಲಿ ಸಂಘಪರಿವಾರ ಕ್ಯಾತೆ ತೆಗೆದಿತ್ತು. ಮೆರವಣಿಗೆ ಮಾಡಲು ಬಿಡುವುದಿಲ್ಲ, ಶೃಂಗೇರಿ ಬಂದ್‌ ಮಾಡುತ್ತೇವೆ ಎಂದು ಬೆದರಿಕೆ ಹಾಕಿತ್ತು. ಅಲ್ಲದೇ ಸಂಘಪರಿವಾರದ ಆದೇಶಕ್ಕೆ ಮಣಿದಿದ್ದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ ಸಮ್ಮೇಳನಕ್ಕೆ ಹಣ ಬಿಡುಗಡೆ ಮಾಡಿರಲಿಲ್ಲ. ಜಿಲ್ಲಾಡಳಿತ ಅನುಮತಿಯನ್ನೇ ನಿರಾಕರಿಸಿತ್ತು. ಪೊಲೀಸರು ಬ್ಯಾನರ್‌ ಬಂಟಿಂಗ್ಸ್‌ಗಳನ್ನು ಕಿತ್ತು ಹಾಕಿ ಮೆರವಣಿಗೆಗೆ ನಿಷೇಧ ಹೇರಿದ್ದರು. ಉಪನಿರ್ದೇಶಕರು ಶಿಕ್ಷಕರು ಮತ್ತು ಉಪನ್ಯಾಸಕರಿಗೆ ನೀಡಿದ್ದ ಓಓಡಿಯನ್ನು ರದ್ದುಗೊಳಿಸಿದ್ದರು.

ಇಷ್ಟೆಲ್ಲಾ ಅಡ್ಡಿ ಆಂತಕಗಳಿದ್ದರೂ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕುಂದೂರು ಶ್ರೀನಿವಾಸ್‌ರವರು ಒಂಚೂರು ಜಗ್ಗಿರಲಿಲ್ಲ. ಸಮ್ಮೇಳಾನಾಧ್ಯಕ್ಷರ ಹೆಸರು ಸರ್ವರ ಸಮ್ಮತಿಯೊಂದಿಗೆ ಕಾರ್ಯಕಾರಿ ಸಮಿತಿಯಲ್ಲಿ ಅವಿರೋಧವಾಗಿ ಅಂಗೀಕಾರಗೊಂಡಿದೆ. ಅಲ್ಲದೇ ಶೃಂಗೇರಿಯಲ್ಲಿ ಸಮ್ಮೇಳನ ನಡೆಯುತ್ತಿದ್ದು ಅದಕ್ಕೆ ಕಲ್ಕುಳಿ ವಿಠಲ ಹೆಗಡೆಯವರು ಸಂಪೂರ್ಣ ಅರ್ಹ ವ್ಯಕ್ತಿಗಳಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಸ್ವಾಯುತ್ತ ಸಂಸ್ಥೆಯಾಗಿದ್ದು ಅದು ಬದ್ಧತೆಯನ್ನು ಪ್ರದರ್ಶಿಸಲಿದೆ ಎಂದು ಘೋಷಿಸಿದ್ದರು.

ಅಡ್ಡಿ ಆತಂಕಗಳನ್ನು ಧಿಕ್ಕರಿಸಿ ಸಮ್ಮೇಳನ ನಡೆಸುತ್ತೇವೆ. ಪರಿಷತ್ತು ಹಣ ನೀಡದಿದ್ದರೆ ಏನಂತೆ, ನಮ್ಮ ಕೈಯಿಂದ, ಜನರಿಂದ ಹಣ ಸಂಗ್ರಹಿಸಿ ಕಾರ್ಯಕ್ರಮ ನಡೆಸುತ್ತಿವೆ. ಸಾಹಿತ್ಯದಲ್ಲಿ ವಿಚಾರ ಬೇಧ ಸಲ್ಲದು. ನಮ್ಮ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ, ಇದಕ್ಕೆ ನಾವು ಬಗ್ಗುವುದಿಲ್ಲ ಎಂದು ಅವರು ಸಮ್ಮೇಳನ ನಡೆಸಿಯೇ ತೀರಿದ್ದಾರೆ.

ಅದರಂತೆ ರಾಜ್ಯದ್ಯಂತ ಸಮಾನ ಮನಸ್ಕರು, ಕನ್ನಡಪ್ರೇಮಿಗಳು ದೇಣಿಗೆ ನೀಡಿ ಸಮ್ಮೇಳನ ನಡೆಯಲು ಅನುವು ಮಾಡಿಕೊಟ್ಟಿದ್ದಾರೆ. ಜಿಲ್ಲಾ ಸಮ್ಮೇಳನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು, ಕನ್ನಡ ಪ್ರೇಮಿಗಳು ಭಾಗವಹಿಸಿದ್ದಾರೆ.

ಇಂದು ಬೆಳಿಗ್ಗೆ ಮೆರವಣಿಗೆಗೆ ಪೊಲೀಸರು ಅಸಹಕಾರ ತೋರಿದ್ದರಿಂದ ಗಲಾಟೆಗೆ ಆಸ್ಪದ ನೀಡಬಾರದೆಂದು ಕಾರಿನಲ್ಲಿಯೇ ಚಿಕ್ಕಮಗಳೂರು ಸುತ್ತಾ ಅಧ್ಯಕ್ಷರ ಮೆರವಣಿಗೆ ನಡೆಸಿ ಶಾರದ ಮಠಕ್ಕೆ ಕರೆತರಲಾಯಿತು. ಅಭಿಮಾನಿಗಳನ್ನು ಅಧ್ಯಕ್ಷರನ್ನು ಹೊತ್ತು ಮೆರವಣಿಗೆ ಮೂಲಕ ವೇದಿಕೆಗೆ ಕರೆತಂದರು. ನಾಡಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು.

ಬರಗೂರು ರಾಮಚಂದ್ರಪ್ಪ, ಚಂದ್ರಶೇಖರ ಪಾಟೀಲ, ಪ್ರಸನ್ನ ಹೆಗ್ಗೋಡು, ಕಡಿದಾಳು ಶಾಮಣ್ಣ, ಕೆ.ಎಲ್‌ ಅಶೋಕ್‌, ದೇವರಾಜ್‌ ಕೊಪ್ಪ ಸೇರಿದಂತೆ ನಾಡಿನ ಹಲವಾರು ಸಾಹಿತಿ ಚಿಂತಕರು ಸಿ.ಟಿ ರವಿಯ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿ ಜಿಲ್ಲಾ ಕಸಾಪದ ನಡೆಗೆ ಬೆಂಬಲ ನೀಡಿದ್ದರು.

ರಾಜ್ಯದ ಗಮನ ಸೆಳೆದಿದ್ದ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಇಂದು ಯಶಸ್ವಿಯಾಗಿ ಆರಂಭವಾಗಿದ್ದು, ಯಶಸ್ವಿಯಾಗಿ ನಡೆಯುವ ಸೂಚನೆ ನೀಡಿದೆ. ಕನ್ನಡ ಪ್ರೇಮಿಗಳ ವಿರುದ್ಧ ನಿರ್ಧಾರ ತೆಗೆದುಕೊಂಡು ಸಮ್ಮೇಳನಕ್ಕೆ ಅಡ್ಡಿವುಂಟುಮಾಡಲು ಪ್ರಯತ್ನಿಸಿದ್ದ ಸಿ.ಟಿ ರವಿ ಪರಿವಾರಕ್ಕೆ ಮುಖಭಂಗವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...