Homeಕರ್ನಾಟಕಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ...

ಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ…

ಕನ್ನಡಪ್ರೇಮಿಗಳು ದೇಣಿಗೆ ನೀಡಿ ಸಮ್ಮೇಳನ ನಡೆಯಲು ಅನುವು ಮಾಡಿಕೊಟ್ಟಿದ್ದಾರೆ. ಜಿಲ್ಲಾ ಸಮ್ಮೇಳನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು, ಕನ್ನಡ ಪ್ರೇಮಿಗಳು ಭಾಗವಹಿಸಿದ್ದಾರೆ.

- Advertisement -
- Advertisement -

ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಮಗಳೂರು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಾಂಗವಾಗಿ ನಡೆಯುತ್ತಿದ್ದು, ಸಂಘ ಪರಿವಾರದ ಬೆದರಿಕೆಗೆ ಸೊಪ್ಪು ಹಾಕದೇ ಯಶಸ್ವಿಯಾಗಿ ಸಮ್ಮೇಳನ ಮಾಡಿಯೇ ತೀರುವುದಾಗಿ ಜಿಲ್ಲ ಕನ್ನಡ ಸಾಹಿತ್ಯ ಪರಿಷತ್‌ ಪಣ ತೊಟ್ಟಿದೆ.

ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಹೋರಾಟಗಾರ ಮತ್ತು ಸಾಹಿತಿ ಕಲ್ಕುಳಿ ವಿಠಲ ಹೆಗಡೆಯವರ ಆಯ್ಕೆಯನ್ನು ವಿರೋಧಿಸಿ ಸಚಿವ ಸಿ.ಟಿ ರವಿ ನೇತೃತ್ವದಲ್ಲಿ ಸಂಘಪರಿವಾರ ಕ್ಯಾತೆ ತೆಗೆದಿತ್ತು. ಮೆರವಣಿಗೆ ಮಾಡಲು ಬಿಡುವುದಿಲ್ಲ, ಶೃಂಗೇರಿ ಬಂದ್‌ ಮಾಡುತ್ತೇವೆ ಎಂದು ಬೆದರಿಕೆ ಹಾಕಿತ್ತು. ಅಲ್ಲದೇ ಸಂಘಪರಿವಾರದ ಆದೇಶಕ್ಕೆ ಮಣಿದಿದ್ದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ ಸಮ್ಮೇಳನಕ್ಕೆ ಹಣ ಬಿಡುಗಡೆ ಮಾಡಿರಲಿಲ್ಲ. ಜಿಲ್ಲಾಡಳಿತ ಅನುಮತಿಯನ್ನೇ ನಿರಾಕರಿಸಿತ್ತು. ಪೊಲೀಸರು ಬ್ಯಾನರ್‌ ಬಂಟಿಂಗ್ಸ್‌ಗಳನ್ನು ಕಿತ್ತು ಹಾಕಿ ಮೆರವಣಿಗೆಗೆ ನಿಷೇಧ ಹೇರಿದ್ದರು. ಉಪನಿರ್ದೇಶಕರು ಶಿಕ್ಷಕರು ಮತ್ತು ಉಪನ್ಯಾಸಕರಿಗೆ ನೀಡಿದ್ದ ಓಓಡಿಯನ್ನು ರದ್ದುಗೊಳಿಸಿದ್ದರು.

ಇಷ್ಟೆಲ್ಲಾ ಅಡ್ಡಿ ಆಂತಕಗಳಿದ್ದರೂ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕುಂದೂರು ಶ್ರೀನಿವಾಸ್‌ರವರು ಒಂಚೂರು ಜಗ್ಗಿರಲಿಲ್ಲ. ಸಮ್ಮೇಳಾನಾಧ್ಯಕ್ಷರ ಹೆಸರು ಸರ್ವರ ಸಮ್ಮತಿಯೊಂದಿಗೆ ಕಾರ್ಯಕಾರಿ ಸಮಿತಿಯಲ್ಲಿ ಅವಿರೋಧವಾಗಿ ಅಂಗೀಕಾರಗೊಂಡಿದೆ. ಅಲ್ಲದೇ ಶೃಂಗೇರಿಯಲ್ಲಿ ಸಮ್ಮೇಳನ ನಡೆಯುತ್ತಿದ್ದು ಅದಕ್ಕೆ ಕಲ್ಕುಳಿ ವಿಠಲ ಹೆಗಡೆಯವರು ಸಂಪೂರ್ಣ ಅರ್ಹ ವ್ಯಕ್ತಿಗಳಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಸ್ವಾಯುತ್ತ ಸಂಸ್ಥೆಯಾಗಿದ್ದು ಅದು ಬದ್ಧತೆಯನ್ನು ಪ್ರದರ್ಶಿಸಲಿದೆ ಎಂದು ಘೋಷಿಸಿದ್ದರು.

ಅಡ್ಡಿ ಆತಂಕಗಳನ್ನು ಧಿಕ್ಕರಿಸಿ ಸಮ್ಮೇಳನ ನಡೆಸುತ್ತೇವೆ. ಪರಿಷತ್ತು ಹಣ ನೀಡದಿದ್ದರೆ ಏನಂತೆ, ನಮ್ಮ ಕೈಯಿಂದ, ಜನರಿಂದ ಹಣ ಸಂಗ್ರಹಿಸಿ ಕಾರ್ಯಕ್ರಮ ನಡೆಸುತ್ತಿವೆ. ಸಾಹಿತ್ಯದಲ್ಲಿ ವಿಚಾರ ಬೇಧ ಸಲ್ಲದು. ನಮ್ಮ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ, ಇದಕ್ಕೆ ನಾವು ಬಗ್ಗುವುದಿಲ್ಲ ಎಂದು ಅವರು ಸಮ್ಮೇಳನ ನಡೆಸಿಯೇ ತೀರಿದ್ದಾರೆ.

ಅದರಂತೆ ರಾಜ್ಯದ್ಯಂತ ಸಮಾನ ಮನಸ್ಕರು, ಕನ್ನಡಪ್ರೇಮಿಗಳು ದೇಣಿಗೆ ನೀಡಿ ಸಮ್ಮೇಳನ ನಡೆಯಲು ಅನುವು ಮಾಡಿಕೊಟ್ಟಿದ್ದಾರೆ. ಜಿಲ್ಲಾ ಸಮ್ಮೇಳನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು, ಕನ್ನಡ ಪ್ರೇಮಿಗಳು ಭಾಗವಹಿಸಿದ್ದಾರೆ.

ಇಂದು ಬೆಳಿಗ್ಗೆ ಮೆರವಣಿಗೆಗೆ ಪೊಲೀಸರು ಅಸಹಕಾರ ತೋರಿದ್ದರಿಂದ ಗಲಾಟೆಗೆ ಆಸ್ಪದ ನೀಡಬಾರದೆಂದು ಕಾರಿನಲ್ಲಿಯೇ ಚಿಕ್ಕಮಗಳೂರು ಸುತ್ತಾ ಅಧ್ಯಕ್ಷರ ಮೆರವಣಿಗೆ ನಡೆಸಿ ಶಾರದ ಮಠಕ್ಕೆ ಕರೆತರಲಾಯಿತು. ಅಭಿಮಾನಿಗಳನ್ನು ಅಧ್ಯಕ್ಷರನ್ನು ಹೊತ್ತು ಮೆರವಣಿಗೆ ಮೂಲಕ ವೇದಿಕೆಗೆ ಕರೆತಂದರು. ನಾಡಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು.

ಬರಗೂರು ರಾಮಚಂದ್ರಪ್ಪ, ಚಂದ್ರಶೇಖರ ಪಾಟೀಲ, ಪ್ರಸನ್ನ ಹೆಗ್ಗೋಡು, ಕಡಿದಾಳು ಶಾಮಣ್ಣ, ಕೆ.ಎಲ್‌ ಅಶೋಕ್‌, ದೇವರಾಜ್‌ ಕೊಪ್ಪ ಸೇರಿದಂತೆ ನಾಡಿನ ಹಲವಾರು ಸಾಹಿತಿ ಚಿಂತಕರು ಸಿ.ಟಿ ರವಿಯ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿ ಜಿಲ್ಲಾ ಕಸಾಪದ ನಡೆಗೆ ಬೆಂಬಲ ನೀಡಿದ್ದರು.

ರಾಜ್ಯದ ಗಮನ ಸೆಳೆದಿದ್ದ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಇಂದು ಯಶಸ್ವಿಯಾಗಿ ಆರಂಭವಾಗಿದ್ದು, ಯಶಸ್ವಿಯಾಗಿ ನಡೆಯುವ ಸೂಚನೆ ನೀಡಿದೆ. ಕನ್ನಡ ಪ್ರೇಮಿಗಳ ವಿರುದ್ಧ ನಿರ್ಧಾರ ತೆಗೆದುಕೊಂಡು ಸಮ್ಮೇಳನಕ್ಕೆ ಅಡ್ಡಿವುಂಟುಮಾಡಲು ಪ್ರಯತ್ನಿಸಿದ್ದ ಸಿ.ಟಿ ರವಿ ಪರಿವಾರಕ್ಕೆ ಮುಖಭಂಗವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...