Homeಕರ್ನಾಟಕಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ...

ಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ…

ಕನ್ನಡಪ್ರೇಮಿಗಳು ದೇಣಿಗೆ ನೀಡಿ ಸಮ್ಮೇಳನ ನಡೆಯಲು ಅನುವು ಮಾಡಿಕೊಟ್ಟಿದ್ದಾರೆ. ಜಿಲ್ಲಾ ಸಮ್ಮೇಳನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು, ಕನ್ನಡ ಪ್ರೇಮಿಗಳು ಭಾಗವಹಿಸಿದ್ದಾರೆ.

- Advertisement -
- Advertisement -

ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಮಗಳೂರು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಾಂಗವಾಗಿ ನಡೆಯುತ್ತಿದ್ದು, ಸಂಘ ಪರಿವಾರದ ಬೆದರಿಕೆಗೆ ಸೊಪ್ಪು ಹಾಕದೇ ಯಶಸ್ವಿಯಾಗಿ ಸಮ್ಮೇಳನ ಮಾಡಿಯೇ ತೀರುವುದಾಗಿ ಜಿಲ್ಲ ಕನ್ನಡ ಸಾಹಿತ್ಯ ಪರಿಷತ್‌ ಪಣ ತೊಟ್ಟಿದೆ.

ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಹೋರಾಟಗಾರ ಮತ್ತು ಸಾಹಿತಿ ಕಲ್ಕುಳಿ ವಿಠಲ ಹೆಗಡೆಯವರ ಆಯ್ಕೆಯನ್ನು ವಿರೋಧಿಸಿ ಸಚಿವ ಸಿ.ಟಿ ರವಿ ನೇತೃತ್ವದಲ್ಲಿ ಸಂಘಪರಿವಾರ ಕ್ಯಾತೆ ತೆಗೆದಿತ್ತು. ಮೆರವಣಿಗೆ ಮಾಡಲು ಬಿಡುವುದಿಲ್ಲ, ಶೃಂಗೇರಿ ಬಂದ್‌ ಮಾಡುತ್ತೇವೆ ಎಂದು ಬೆದರಿಕೆ ಹಾಕಿತ್ತು. ಅಲ್ಲದೇ ಸಂಘಪರಿವಾರದ ಆದೇಶಕ್ಕೆ ಮಣಿದಿದ್ದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ ಸಮ್ಮೇಳನಕ್ಕೆ ಹಣ ಬಿಡುಗಡೆ ಮಾಡಿರಲಿಲ್ಲ. ಜಿಲ್ಲಾಡಳಿತ ಅನುಮತಿಯನ್ನೇ ನಿರಾಕರಿಸಿತ್ತು. ಪೊಲೀಸರು ಬ್ಯಾನರ್‌ ಬಂಟಿಂಗ್ಸ್‌ಗಳನ್ನು ಕಿತ್ತು ಹಾಕಿ ಮೆರವಣಿಗೆಗೆ ನಿಷೇಧ ಹೇರಿದ್ದರು. ಉಪನಿರ್ದೇಶಕರು ಶಿಕ್ಷಕರು ಮತ್ತು ಉಪನ್ಯಾಸಕರಿಗೆ ನೀಡಿದ್ದ ಓಓಡಿಯನ್ನು ರದ್ದುಗೊಳಿಸಿದ್ದರು.

ಇಷ್ಟೆಲ್ಲಾ ಅಡ್ಡಿ ಆಂತಕಗಳಿದ್ದರೂ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕುಂದೂರು ಶ್ರೀನಿವಾಸ್‌ರವರು ಒಂಚೂರು ಜಗ್ಗಿರಲಿಲ್ಲ. ಸಮ್ಮೇಳಾನಾಧ್ಯಕ್ಷರ ಹೆಸರು ಸರ್ವರ ಸಮ್ಮತಿಯೊಂದಿಗೆ ಕಾರ್ಯಕಾರಿ ಸಮಿತಿಯಲ್ಲಿ ಅವಿರೋಧವಾಗಿ ಅಂಗೀಕಾರಗೊಂಡಿದೆ. ಅಲ್ಲದೇ ಶೃಂಗೇರಿಯಲ್ಲಿ ಸಮ್ಮೇಳನ ನಡೆಯುತ್ತಿದ್ದು ಅದಕ್ಕೆ ಕಲ್ಕುಳಿ ವಿಠಲ ಹೆಗಡೆಯವರು ಸಂಪೂರ್ಣ ಅರ್ಹ ವ್ಯಕ್ತಿಗಳಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಸ್ವಾಯುತ್ತ ಸಂಸ್ಥೆಯಾಗಿದ್ದು ಅದು ಬದ್ಧತೆಯನ್ನು ಪ್ರದರ್ಶಿಸಲಿದೆ ಎಂದು ಘೋಷಿಸಿದ್ದರು.

ಅಡ್ಡಿ ಆತಂಕಗಳನ್ನು ಧಿಕ್ಕರಿಸಿ ಸಮ್ಮೇಳನ ನಡೆಸುತ್ತೇವೆ. ಪರಿಷತ್ತು ಹಣ ನೀಡದಿದ್ದರೆ ಏನಂತೆ, ನಮ್ಮ ಕೈಯಿಂದ, ಜನರಿಂದ ಹಣ ಸಂಗ್ರಹಿಸಿ ಕಾರ್ಯಕ್ರಮ ನಡೆಸುತ್ತಿವೆ. ಸಾಹಿತ್ಯದಲ್ಲಿ ವಿಚಾರ ಬೇಧ ಸಲ್ಲದು. ನಮ್ಮ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ, ಇದಕ್ಕೆ ನಾವು ಬಗ್ಗುವುದಿಲ್ಲ ಎಂದು ಅವರು ಸಮ್ಮೇಳನ ನಡೆಸಿಯೇ ತೀರಿದ್ದಾರೆ.

ಅದರಂತೆ ರಾಜ್ಯದ್ಯಂತ ಸಮಾನ ಮನಸ್ಕರು, ಕನ್ನಡಪ್ರೇಮಿಗಳು ದೇಣಿಗೆ ನೀಡಿ ಸಮ್ಮೇಳನ ನಡೆಯಲು ಅನುವು ಮಾಡಿಕೊಟ್ಟಿದ್ದಾರೆ. ಜಿಲ್ಲಾ ಸಮ್ಮೇಳನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು, ಕನ್ನಡ ಪ್ರೇಮಿಗಳು ಭಾಗವಹಿಸಿದ್ದಾರೆ.

ಇಂದು ಬೆಳಿಗ್ಗೆ ಮೆರವಣಿಗೆಗೆ ಪೊಲೀಸರು ಅಸಹಕಾರ ತೋರಿದ್ದರಿಂದ ಗಲಾಟೆಗೆ ಆಸ್ಪದ ನೀಡಬಾರದೆಂದು ಕಾರಿನಲ್ಲಿಯೇ ಚಿಕ್ಕಮಗಳೂರು ಸುತ್ತಾ ಅಧ್ಯಕ್ಷರ ಮೆರವಣಿಗೆ ನಡೆಸಿ ಶಾರದ ಮಠಕ್ಕೆ ಕರೆತರಲಾಯಿತು. ಅಭಿಮಾನಿಗಳನ್ನು ಅಧ್ಯಕ್ಷರನ್ನು ಹೊತ್ತು ಮೆರವಣಿಗೆ ಮೂಲಕ ವೇದಿಕೆಗೆ ಕರೆತಂದರು. ನಾಡಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು.

ಬರಗೂರು ರಾಮಚಂದ್ರಪ್ಪ, ಚಂದ್ರಶೇಖರ ಪಾಟೀಲ, ಪ್ರಸನ್ನ ಹೆಗ್ಗೋಡು, ಕಡಿದಾಳು ಶಾಮಣ್ಣ, ಕೆ.ಎಲ್‌ ಅಶೋಕ್‌, ದೇವರಾಜ್‌ ಕೊಪ್ಪ ಸೇರಿದಂತೆ ನಾಡಿನ ಹಲವಾರು ಸಾಹಿತಿ ಚಿಂತಕರು ಸಿ.ಟಿ ರವಿಯ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿ ಜಿಲ್ಲಾ ಕಸಾಪದ ನಡೆಗೆ ಬೆಂಬಲ ನೀಡಿದ್ದರು.

ರಾಜ್ಯದ ಗಮನ ಸೆಳೆದಿದ್ದ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಇಂದು ಯಶಸ್ವಿಯಾಗಿ ಆರಂಭವಾಗಿದ್ದು, ಯಶಸ್ವಿಯಾಗಿ ನಡೆಯುವ ಸೂಚನೆ ನೀಡಿದೆ. ಕನ್ನಡ ಪ್ರೇಮಿಗಳ ವಿರುದ್ಧ ನಿರ್ಧಾರ ತೆಗೆದುಕೊಂಡು ಸಮ್ಮೇಳನಕ್ಕೆ ಅಡ್ಡಿವುಂಟುಮಾಡಲು ಪ್ರಯತ್ನಿಸಿದ್ದ ಸಿ.ಟಿ ರವಿ ಪರಿವಾರಕ್ಕೆ ಮುಖಭಂಗವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...