Homeಕರ್ನಾಟಕಚಿಕ್ಕಮಗಳೂರು| ನಕ್ಸಲ್ ನಾಯಕ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ 

ಚಿಕ್ಕಮಗಳೂರು| ನಕ್ಸಲ್ ನಾಯಕ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ 

- Advertisement -
- Advertisement -

ಆರು ಜನ ನಕ್ಸಲರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಮುಖ್ಯವಾಹಿನಿ ತಲುಪಿ ಕಾನೂನು ಪ್ರಕಿಯೆಗೆ ಒಳಪಟ್ಟಿದ್ದಾರೆ. ಕರ್ನಾಟಕದ ಕೊನೆಯ ನಕ್ಸಲ್ ತಂಡದ ಏಕೈಕ ಹೋರಾಟಗಾರ ಕೋಟೆಹೊಂಡ ರವೀಂದ್ರ ಗುಂಪಿನಿಂದ ದೂರಾಗಿದ್ದರು; ಇಂದು (ಫೆ.1) ಅವರೂ ಕೂಡ ಮುಖ್ಯವಾಹಿನಿಗೆ ಬರಲಿದ್ದಾರೆ.

ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಇಂದು ಬೆಳಗ್ಗೆ 12 ಗಂಟೆಗೆ ಚಿಕ್ಕಮಗಳೂರಿನ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮುಖ್ಯವಾಹಿನಿಗೆ ಬರಲಿದ್ದಾರೆ.

6 ಜನ ನಕ್ಸಲರು ಮುಖ್ಯವಾಹಿನಿಗೆ ಬಂದಿದ್ದರೂ ರವೀಂದ್ರ ಕಾಡಿನಲ್ಲೇ ಉಳಿದಿದ್ದರು. ಇವರು ನಕ್ಸಲ್ ಪುನರ್ವಸತಿ ಸಮಿತಿ ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಮುಖಂಡರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದೀಗ ಎರಡೂ ಸಮಿತಿಗಳ ಮಾತುಕತೆ ನಂತರ ರವೀಂದ್ರ ಅಂತಿಮವಾಗಿ ಮುಖ್ಯವಾಹಿನಿಗೆ ಮರಳಲು ಒಪ್ಪಿಕೊಂಡಿದ್ದಾರೆ. ಕಳೆದ 18 ವರ್ಷಗಳಿಂದ ಭೂಗತವಾಗಿದ್ದ ರವೀಂದ್ರ ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಮುಂಡಗಾರು ಲತಾ ತಂಡದಲ್ಲಿ ಸಕ್ರಿಯವಾಗಿದ್ದರು.

ಕಳೆದ ವರ್ಷ, ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್‌ಕೌಂಟರ್‌ ಬಳಿಕ ಉಳಿದ ಹೋರಾಟಗಾರರ ಜೀವ ಉಳಿಸಬೇಕು ಎಂದು ಪ್ರಗತಿಪರ ಚಿಂತಕರು ಆಗ್ರಹಿಸಿದ್ದರು. ದಲಿತರು, ಆದಿವಾಸಿಗಳು ಹಾಗೂ ಧ್ವನಿ ಇಲ್ಲದವರ ಪರವಾಗಿ ಹೋರಾಡುತ್ತಿರುವವರನ್ನು ಮುಖ್ಯವಾಹಿನಿಗೆ ಕರೆತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕಿದ್ದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನವರಿ ಎಂಟರಂದು ನಡೆದ ಕಾರ್ಯಕ್ರಮದಲ್ಲಿ ನಕ್ಸಲ್ ನಾಯಕರಾದ ಮುಂಡಗಾರು ಲತಾ (ಮುಂಡಗಾರು ಶೃಂಗೇರಿ), ವನಜಾಕ್ಷಿ (ಬಾಳೆಹೊಳೆ ಕಳಸ), ಸುಂದರಿ (ಕುತ್ಲೂರು ದಕ್ಷಿಣ ಕನ್ನಡ), ಮಾರಪ್ಪ ಅರೋಲಿ (ಕರ್ನಾಟಕ), ವಸಂತ ಟಿ (ತಮಿಳುನಾಡು), ಎನ್. ಜೀಶಾ (ಕೇರಳ) ಮುಖ್ಯವಾಹಿನಿಗೆ ಮರಳಿದ್ದರು. ಇದೀಗ ಕೊನೆಯ ಸದಸ್ಯ ರವೀಂದ್ರ ಕೂಡ ಮುಖ್ಯವಾಹಿನಿಗೆ ಬರಲಿದ್ದಾರೆ.

ಮುಖ್ಯವಾಹಿನಗೆ ಬರುವಂತೆ ಮನವಿ ಮಾಡಿದ್ದ ರವೀಂದ್ರ ಕುಟುಂಬ

ಆರು ಜನ ನಕ್ಸಲರು ಜೊತೆ ರವೀಂದ್ರ ಮಾತ್ರ ಮುಖ್ಯವಾಹಿನಿಗೆ ಬಾರದೇ ಇದ್ದಿದ್ದು ರವೀಂದ್ರ ಅವರ ಕುಟುಂಬಕ್ಕೆ ಬೇಸರ ಮೂಡಿಸಿತ್ತು. ಅವರ ಕುಟುಂಬ ಈಗಲೂ ಶೃಂಗೇರಿಯ ಕಾಡಂಚಿನ ಗ್ರಾಮದಲ್ಲಿ ಬದುಕು ಸಾಗಿಸುತ್ತಿದೆ. ಕಾಡಿನ ನಡುವೆ ಇರುವ ಕೋಟೆಹೊಂಡ ಗ್ರಾಮ ಸಂಪೂರ್ಣ ನೆಲ ಸಮವಾಗಿದ್ದು ಇಲ್ಲಿ ರವೀಂದ್ರನ ಮನೆ ಇದೆ. ರವೀಂದ್ರ ಮುಖ್ಯವಾಹಿನಿಗೆ ಬಂದರೆ ಸಂತೋಷದಿಂದ ಸ್ವೀಕರಿಸುತ್ತೇವೆ ಎಂದು ಕುಟುಂಬದವರು ಮಾಧ್ಯಮಗಳಿಗೆ ಹಿಂದೆ ತಿಳಿಸಿದ್ದರು.

ಇದನ್ನೂ ಓದಿ; ಕರ್ನಾಟಕ ಸರ್ಕಾರದ ಐತಿಹಾಸಿಕ ನಡೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ನಕ್ಸಲ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...