Homeಕರ್ನಾಟಕಚಿಕ್ಕಮಗಳೂರು| ನಕ್ಸಲ್ ನಾಯಕ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ 

ಚಿಕ್ಕಮಗಳೂರು| ನಕ್ಸಲ್ ನಾಯಕ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ 

- Advertisement -
- Advertisement -

ಆರು ಜನ ನಕ್ಸಲರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಮುಖ್ಯವಾಹಿನಿ ತಲುಪಿ ಕಾನೂನು ಪ್ರಕಿಯೆಗೆ ಒಳಪಟ್ಟಿದ್ದಾರೆ. ಕರ್ನಾಟಕದ ಕೊನೆಯ ನಕ್ಸಲ್ ತಂಡದ ಏಕೈಕ ಹೋರಾಟಗಾರ ಕೋಟೆಹೊಂಡ ರವೀಂದ್ರ ಗುಂಪಿನಿಂದ ದೂರಾಗಿದ್ದರು; ಇಂದು (ಫೆ.1) ಅವರೂ ಕೂಡ ಮುಖ್ಯವಾಹಿನಿಗೆ ಬರಲಿದ್ದಾರೆ.

ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಇಂದು ಬೆಳಗ್ಗೆ 12 ಗಂಟೆಗೆ ಚಿಕ್ಕಮಗಳೂರಿನ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮುಖ್ಯವಾಹಿನಿಗೆ ಬರಲಿದ್ದಾರೆ.

6 ಜನ ನಕ್ಸಲರು ಮುಖ್ಯವಾಹಿನಿಗೆ ಬಂದಿದ್ದರೂ ರವೀಂದ್ರ ಕಾಡಿನಲ್ಲೇ ಉಳಿದಿದ್ದರು. ಇವರು ನಕ್ಸಲ್ ಪುನರ್ವಸತಿ ಸಮಿತಿ ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಮುಖಂಡರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದೀಗ ಎರಡೂ ಸಮಿತಿಗಳ ಮಾತುಕತೆ ನಂತರ ರವೀಂದ್ರ ಅಂತಿಮವಾಗಿ ಮುಖ್ಯವಾಹಿನಿಗೆ ಮರಳಲು ಒಪ್ಪಿಕೊಂಡಿದ್ದಾರೆ. ಕಳೆದ 18 ವರ್ಷಗಳಿಂದ ಭೂಗತವಾಗಿದ್ದ ರವೀಂದ್ರ ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಮುಂಡಗಾರು ಲತಾ ತಂಡದಲ್ಲಿ ಸಕ್ರಿಯವಾಗಿದ್ದರು.

ಕಳೆದ ವರ್ಷ, ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್‌ಕೌಂಟರ್‌ ಬಳಿಕ ಉಳಿದ ಹೋರಾಟಗಾರರ ಜೀವ ಉಳಿಸಬೇಕು ಎಂದು ಪ್ರಗತಿಪರ ಚಿಂತಕರು ಆಗ್ರಹಿಸಿದ್ದರು. ದಲಿತರು, ಆದಿವಾಸಿಗಳು ಹಾಗೂ ಧ್ವನಿ ಇಲ್ಲದವರ ಪರವಾಗಿ ಹೋರಾಡುತ್ತಿರುವವರನ್ನು ಮುಖ್ಯವಾಹಿನಿಗೆ ಕರೆತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕಿದ್ದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನವರಿ ಎಂಟರಂದು ನಡೆದ ಕಾರ್ಯಕ್ರಮದಲ್ಲಿ ನಕ್ಸಲ್ ನಾಯಕರಾದ ಮುಂಡಗಾರು ಲತಾ (ಮುಂಡಗಾರು ಶೃಂಗೇರಿ), ವನಜಾಕ್ಷಿ (ಬಾಳೆಹೊಳೆ ಕಳಸ), ಸುಂದರಿ (ಕುತ್ಲೂರು ದಕ್ಷಿಣ ಕನ್ನಡ), ಮಾರಪ್ಪ ಅರೋಲಿ (ಕರ್ನಾಟಕ), ವಸಂತ ಟಿ (ತಮಿಳುನಾಡು), ಎನ್. ಜೀಶಾ (ಕೇರಳ) ಮುಖ್ಯವಾಹಿನಿಗೆ ಮರಳಿದ್ದರು. ಇದೀಗ ಕೊನೆಯ ಸದಸ್ಯ ರವೀಂದ್ರ ಕೂಡ ಮುಖ್ಯವಾಹಿನಿಗೆ ಬರಲಿದ್ದಾರೆ.

ಮುಖ್ಯವಾಹಿನಗೆ ಬರುವಂತೆ ಮನವಿ ಮಾಡಿದ್ದ ರವೀಂದ್ರ ಕುಟುಂಬ

ಆರು ಜನ ನಕ್ಸಲರು ಜೊತೆ ರವೀಂದ್ರ ಮಾತ್ರ ಮುಖ್ಯವಾಹಿನಿಗೆ ಬಾರದೇ ಇದ್ದಿದ್ದು ರವೀಂದ್ರ ಅವರ ಕುಟುಂಬಕ್ಕೆ ಬೇಸರ ಮೂಡಿಸಿತ್ತು. ಅವರ ಕುಟುಂಬ ಈಗಲೂ ಶೃಂಗೇರಿಯ ಕಾಡಂಚಿನ ಗ್ರಾಮದಲ್ಲಿ ಬದುಕು ಸಾಗಿಸುತ್ತಿದೆ. ಕಾಡಿನ ನಡುವೆ ಇರುವ ಕೋಟೆಹೊಂಡ ಗ್ರಾಮ ಸಂಪೂರ್ಣ ನೆಲ ಸಮವಾಗಿದ್ದು ಇಲ್ಲಿ ರವೀಂದ್ರನ ಮನೆ ಇದೆ. ರವೀಂದ್ರ ಮುಖ್ಯವಾಹಿನಿಗೆ ಬಂದರೆ ಸಂತೋಷದಿಂದ ಸ್ವೀಕರಿಸುತ್ತೇವೆ ಎಂದು ಕುಟುಂಬದವರು ಮಾಧ್ಯಮಗಳಿಗೆ ಹಿಂದೆ ತಿಳಿಸಿದ್ದರು.

ಇದನ್ನೂ ಓದಿ; ಕರ್ನಾಟಕ ಸರ್ಕಾರದ ಐತಿಹಾಸಿಕ ನಡೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ನಕ್ಸಲ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...