Homeಕರ್ನಾಟಕಚಿಕ್ಕಮಗಳೂರು| ನಕ್ಸಲ್ ನಾಯಕ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ 

ಚಿಕ್ಕಮಗಳೂರು| ನಕ್ಸಲ್ ನಾಯಕ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ 

- Advertisement -
- Advertisement -

ಆರು ಜನ ನಕ್ಸಲರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಮುಖ್ಯವಾಹಿನಿ ತಲುಪಿ ಕಾನೂನು ಪ್ರಕಿಯೆಗೆ ಒಳಪಟ್ಟಿದ್ದಾರೆ. ಕರ್ನಾಟಕದ ಕೊನೆಯ ನಕ್ಸಲ್ ತಂಡದ ಏಕೈಕ ಹೋರಾಟಗಾರ ಕೋಟೆಹೊಂಡ ರವೀಂದ್ರ ಗುಂಪಿನಿಂದ ದೂರಾಗಿದ್ದರು; ಇಂದು (ಫೆ.1) ಅವರೂ ಕೂಡ ಮುಖ್ಯವಾಹಿನಿಗೆ ಬರಲಿದ್ದಾರೆ.

ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಇಂದು ಬೆಳಗ್ಗೆ 12 ಗಂಟೆಗೆ ಚಿಕ್ಕಮಗಳೂರಿನ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮುಖ್ಯವಾಹಿನಿಗೆ ಬರಲಿದ್ದಾರೆ.

6 ಜನ ನಕ್ಸಲರು ಮುಖ್ಯವಾಹಿನಿಗೆ ಬಂದಿದ್ದರೂ ರವೀಂದ್ರ ಕಾಡಿನಲ್ಲೇ ಉಳಿದಿದ್ದರು. ಇವರು ನಕ್ಸಲ್ ಪುನರ್ವಸತಿ ಸಮಿತಿ ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಮುಖಂಡರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದೀಗ ಎರಡೂ ಸಮಿತಿಗಳ ಮಾತುಕತೆ ನಂತರ ರವೀಂದ್ರ ಅಂತಿಮವಾಗಿ ಮುಖ್ಯವಾಹಿನಿಗೆ ಮರಳಲು ಒಪ್ಪಿಕೊಂಡಿದ್ದಾರೆ. ಕಳೆದ 18 ವರ್ಷಗಳಿಂದ ಭೂಗತವಾಗಿದ್ದ ರವೀಂದ್ರ ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಮುಂಡಗಾರು ಲತಾ ತಂಡದಲ್ಲಿ ಸಕ್ರಿಯವಾಗಿದ್ದರು.

ಕಳೆದ ವರ್ಷ, ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್‌ಕೌಂಟರ್‌ ಬಳಿಕ ಉಳಿದ ಹೋರಾಟಗಾರರ ಜೀವ ಉಳಿಸಬೇಕು ಎಂದು ಪ್ರಗತಿಪರ ಚಿಂತಕರು ಆಗ್ರಹಿಸಿದ್ದರು. ದಲಿತರು, ಆದಿವಾಸಿಗಳು ಹಾಗೂ ಧ್ವನಿ ಇಲ್ಲದವರ ಪರವಾಗಿ ಹೋರಾಡುತ್ತಿರುವವರನ್ನು ಮುಖ್ಯವಾಹಿನಿಗೆ ಕರೆತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕಿದ್ದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನವರಿ ಎಂಟರಂದು ನಡೆದ ಕಾರ್ಯಕ್ರಮದಲ್ಲಿ ನಕ್ಸಲ್ ನಾಯಕರಾದ ಮುಂಡಗಾರು ಲತಾ (ಮುಂಡಗಾರು ಶೃಂಗೇರಿ), ವನಜಾಕ್ಷಿ (ಬಾಳೆಹೊಳೆ ಕಳಸ), ಸುಂದರಿ (ಕುತ್ಲೂರು ದಕ್ಷಿಣ ಕನ್ನಡ), ಮಾರಪ್ಪ ಅರೋಲಿ (ಕರ್ನಾಟಕ), ವಸಂತ ಟಿ (ತಮಿಳುನಾಡು), ಎನ್. ಜೀಶಾ (ಕೇರಳ) ಮುಖ್ಯವಾಹಿನಿಗೆ ಮರಳಿದ್ದರು. ಇದೀಗ ಕೊನೆಯ ಸದಸ್ಯ ರವೀಂದ್ರ ಕೂಡ ಮುಖ್ಯವಾಹಿನಿಗೆ ಬರಲಿದ್ದಾರೆ.

ಮುಖ್ಯವಾಹಿನಗೆ ಬರುವಂತೆ ಮನವಿ ಮಾಡಿದ್ದ ರವೀಂದ್ರ ಕುಟುಂಬ

ಆರು ಜನ ನಕ್ಸಲರು ಜೊತೆ ರವೀಂದ್ರ ಮಾತ್ರ ಮುಖ್ಯವಾಹಿನಿಗೆ ಬಾರದೇ ಇದ್ದಿದ್ದು ರವೀಂದ್ರ ಅವರ ಕುಟುಂಬಕ್ಕೆ ಬೇಸರ ಮೂಡಿಸಿತ್ತು. ಅವರ ಕುಟುಂಬ ಈಗಲೂ ಶೃಂಗೇರಿಯ ಕಾಡಂಚಿನ ಗ್ರಾಮದಲ್ಲಿ ಬದುಕು ಸಾಗಿಸುತ್ತಿದೆ. ಕಾಡಿನ ನಡುವೆ ಇರುವ ಕೋಟೆಹೊಂಡ ಗ್ರಾಮ ಸಂಪೂರ್ಣ ನೆಲ ಸಮವಾಗಿದ್ದು ಇಲ್ಲಿ ರವೀಂದ್ರನ ಮನೆ ಇದೆ. ರವೀಂದ್ರ ಮುಖ್ಯವಾಹಿನಿಗೆ ಬಂದರೆ ಸಂತೋಷದಿಂದ ಸ್ವೀಕರಿಸುತ್ತೇವೆ ಎಂದು ಕುಟುಂಬದವರು ಮಾಧ್ಯಮಗಳಿಗೆ ಹಿಂದೆ ತಿಳಿಸಿದ್ದರು.

ಇದನ್ನೂ ಓದಿ; ಕರ್ನಾಟಕ ಸರ್ಕಾರದ ಐತಿಹಾಸಿಕ ನಡೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ನಕ್ಸಲ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...