Homeಕರ್ನಾಟಕಚಿಕ್ಕಮಗಳೂರು | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ತಾಯಿ ಸೇರಿ ನಾಲ್ವರು ದೋಷಿ ಎಂದ ಕೋರ್ಟ್‌

ಚಿಕ್ಕಮಗಳೂರು | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ತಾಯಿ ಸೇರಿ ನಾಲ್ವರು ದೋಷಿ ಎಂದ ಕೋರ್ಟ್‌

ಪ್ರಕರಣದ 53 ಆರೋಪಿಗಳ ಪೈಕಿ 49 ಜನರು ಖುಲಾಸೆ

- Advertisement -
- Advertisement -

ರಾಜ್ಯಾದ್ಯಂತ ಸುದ್ದಿಯಾಗಿದ್ದ, 2021ರಲ್ಲಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆದಿದ್ದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತೀರ್ಪು ಹೊರಬಿದ್ದಿದೆ.

ಪ್ರಕರಣದಲ್ಲಿ ಬಂಧಿತರಾಗಿದ್ದ 53 ಆರೋಪಿಗಳ ಪೈಕಿ, ಬಾಲಕಿಯ ತಾಯಿ ಸೇರಿದಂತೆ ನಾಲ್ವರನ್ನು ಸ್ಥಳೀಯ ನ್ಯಾಯಾಲಯ ದೋಷಿಗಳು ಎಂದು ಘೋಷಿಸಿದ್ದು, 49 ಜನರನ್ನು ಆರೋಪ ಮುಕ್ತಗೊಳಿಸಿದೆ.

ಶೃಂಗೇರಿ ಸಮೀಪದ ಹಳ್ಳಿಯೊಂದರಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಒಂದರ್ಥದಲ್ಲಿ ತಾಯಿಯೇ ಮಗಳನ್ನು ವೇಶ್ಯಾವಟಿಕೆಗೆ ತಳ್ಳಿದ್ದರು. ಈ ಸಂಬಂಧ ಒಟ್ಟು 35 ಪ್ರಕರಣ ದಾಖಲಾಗಿತ್ತು ಮತ್ತು 53 ಜನರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿತ್ತು. ಅಂದಿನ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಅವರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆದಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕಮಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ವಿಶೇಷ) ನಾಲ್ವರನ್ನು ತಪ್ಪಿತಸ್ಥರೆಂದು ಘೋಷಿಸಿದೆ. ಇವರಿಗೆ ಮಾರ್ಚ್ 11ರಂದು ಶಿಕ್ಷೆ ಪ್ರಕಟಗೊಳ್ಳಲಿದೆ. ಸಾಕ್ಷ್ಯಗಳ ಕೊರತೆಯಿಂದ 49 ಜನರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ ಎಂದು ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ :

ಜನವರಿ 30, 2021ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಶೃಂಗೇರಿ ತಾಲೂಕಿನ ಗೋಚವಳ್ಳಿ ಸಮೀಪದ ಮನೆಯೊಂದರಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಮಣ್ಯ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್ 2020ರಿಂದ ಬಾಲಕಿ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಮಾಡಿಟ್ಟುಕೊಳ್ಳಲಾಗಿತ್ತು. ಆ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ನಿರಂತರ ಅತ್ಯಾಚಾರ ನಡೆಸಿದ್ದರು ಎನ್ನಲಾಗಿತ್ತು.

ಪೊಲೀಸರು ಪ್ರಕರಣ ತನಿಖೆ ಕೈಗೊಂಡಾಗ ತಾಯಿಯೇ ಪ್ರಮುಖ ಆರೋಪಿ ಎಂಬುವುದು ಬಯಲಾಗಿತ್ತು. ಈ ನಡುವೆ ಶೃಂಗೇರಿಯ ಅಂದಿನ ವೃತ್ತ ನಿರೀಕ್ಷಕರು ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದರು ಎಂದು ಆರೋಪಿಸಿ ಪ್ರತಿಭಟನೆ ನಡೆದಿತ್ತಲ್ಲದೆ ಅಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ಅಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಶೃತಿ ಪ್ರಕರಣ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: ತುಮಕೂರು: ಸಿದ್ಧಗಂಗಾ ಮಠದ ಜಾತ್ರೆಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...